Homeಮುಖಪುಟವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

ವಾಟ್ಸಾಪ್‌ ಗ್ರೂಪ್‌ನಲ್ಲಿ ಸದಸ್ಯರು ಮಾಡುವ ಪೋಸ್ಟ್‌ಗಳಿಗೆ ಗ್ರೂಪ್ ರಚನೆಕಾರ ಹೊಣೆಯಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ವಾಟ್ಸಾಪ್ ಗ್ರೂಪ್‌ಗಳಲ್ಲಿ ಅದರ ಯಾವುದೇ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಗಳಿಗೆ ಗ್ರೂಪ್ ರಚನೆಕಾರರನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಸ್ಪಷ್ಟನೆ ನೀಡಿದೆ.

ವಾಟ್ಸಾಪ್ ಗ್ರೂಪ್‌ ಒಂದರಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ಗುಂಪಿನ ಅಡ್ಮಿನ್ ಒಬ್ಬರು ಪೋಸ್ಟ್ ಮಾಡಿದ್ದರು. ಈ ಪ್ರಕರಣದಲ್ಲಿ ವಾಟ್ಸಾಪ್ ಗ್ರೂಪ್‌ನ ರಚನೆಕಾರರ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸುವ ಸಂದರ್ಭದಲ್ಲಿ ಹೈಕೋರ್ಟ್ ಈ ತೀರ್ಪು ನೀಡಿದೆ.

ಬಾಂಬೆ ಮತ್ತು ದೆಹಲಿ ಹೈಕೋರ್ಟ್‌ಗಳು ಈಗಾಗಳೇ ಈ ಬಗ್ಗೆ “ಇತರ ಸದಸ್ಯರಿಗಿಂತ ವಾಟ್ಸಾಪ್ ಗುಂಪಿನ ಅಡ್ಮಿನ್‌ಗೆ ಇರುವ ಏಕೈಕ ಸವಲತ್ತು ಎಂದರೆ ಅವರು ಗುಂಪಿಗೆ ಯಾವುದೇ ಸದಸ್ಯರನ್ನು ಸೇರಿಸಬಹುದು ಅಥವಾ ಗುಂಪಿನಿಂದ ತೆಗೆಯಬಹುದು” ಎಂದು ಉಲ್ಲೇಖಿಸಿರುವುದನ್ನು ನ್ಯಾಯಾಲಯ ಒತ್ತಿ ಹೇಳಿದೆ.

“ಗುಂಪಿನ ಸದಸ್ಯರು ಅದರಲ್ಲಿ ಏನು ಪೋಸ್ಟ್ ಮಾಡುತ್ತಿದ್ದಾರೆ ಎಂಬುದರ ಮೇಲೆ ಅವರು ಭೌತಿಕವಾಗಿ ಅಥವಾ ಯಾವುದೇ ನಿಯಂತ್ರಣವನ್ನು ಹೊಂದಿಲ್ಲ. ಅವರು ಗುಂಪಿನಲ್ಲಿ ಬರುವ ಸಂದೇಶಗಳನ್ನು ಮಾಡರೇಟ್ ಮಾಡಲು ಅಥವಾ ಸೆನ್ಸಾರ್ ಮಾಡಲು ಸಾಧ್ಯವಿಲ್ಲ. ಹೀಗಾಗಿ, ವಾಟ್ಸಾಪ್ ಗುಂಪಿನ ರಚನೆಕಾರರು ಗುಂಪಿನ ಸದಸ್ಯರು ಪೋಸ್ಟ್ ಮಾಡಿದ ಯಾವುದೇ ಆಕ್ಷೇಪಾರ್ಹ ವಿಷಯಕ್ಕೆ ಜವಾಬ್ದಾರರಾಗಿರುವುದಿಲ್ಲ” ಎಂದು ಕೇರಳ ಹೈಕೋರ್ಟ್ ಹೇಳಿದೆ.

ಇದನ್ನೂ ಓದಿ: ತಮಿಳುನಾಡು ಸ್ಥಳೀಯ ಚುನಾವಣೆ: ಗೋಡ್ಸೆ ಸಮರ್ಥಕಿ, ಬಿಜೆಪಿ ಅಭ್ಯರ್ಥಿ ಚೆನ್ನೈ ಪಾಲಿಕೆಗೆ ಆಯ್ಕೆ

ವಿಚಾರಣೆ ನಡೆದ ಪ್ರಕರಣದಲ್ಲಿ, ಅರ್ಜಿದಾರರು ಫ್ರೆಂಡ್ಸ್ ಎಂಬ ವಾಟ್ಸಾಪ್ ಗ್ರೂಪ್ ರಚಿಸಿದ್ದರು. ಅವರು ತಮ್ಮೊಂದಿಗೆ ಇತರ ಇಬ್ಬರು ವ್ಯಕ್ತಿಗಳನ್ನು ಸಹ ಅಡ್ಮಿನ್‌ಗಳಾಗಿ ಮಾಡಿಕೊಂಡಿದ್ದಾರೆ. ಅವರಲ್ಲಿ ಒಬ್ಬರು ಮಕ್ಕಳು ಅಶ್ಲೀಲ ಕೃತ್ಯದಲ್ಲಿ ತೊಡಗಿರುವ ಪೋರ್ನ್ ವೀಡಿಯೊವನ್ನು ಗುಂಪಿನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಿಂದ ಪೊಲೀಸರು ಆ ವ್ಯಕ್ತಿಯ ವಿರುದ್ಧ POCSO ಮತ್ತು ಮಾಹಿತಿ ತಂತ್ರಜ್ಞಾನ ಕಾಯಿದೆ ಅಡಿಯಲ್ಲಿ ದೂರು ದಾಖಲಿಸಿ, ಆರೋಪಿ ನಂ.1 ಎಂದಿದ್ದರು.

ವಾಟ್ಸಾಪ್ ಗ್ರೂಪ್ ರಚನೆ ಮಾಡಿದ್ದ ಅರ್ಜಿದಾರರನ್ನು ಆರೋಪಿ ನಂ. 2 ಎಂದು ಹೆಸರಿಸಲಾಗಿತ್ತು. ಅರ್ಜಿದಾರರು, ತಮ್ಮ ವಿರುದ್ಧದ ಆರೋಪಗಳನ್ನು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದರು. ತಾವು ಯಾವುದೇ ಅಪರಾಧ ಮಾಡಿಲ್ಲ ಎಂದು ಪ್ರತಿಪಾದಿಸಿದ್ದರು.

ಹೈಕೋರ್ಟ್ ಅರ್ಜಿದಾರರ ವಾದವನ್ನು ಒಪ್ಪಿಕೊಂಡಿತ್ತು. “ಅರ್ಜಿದಾರರು ಯಾವುದೇ ಎಲೆಕ್ಟ್ರಾನಿಕ್ ರೂಪದಲ್ಲಿ ಆಪಾದಿತ ಅಶ್ಲೀಲ ವಸ್ತುಗಳನ್ನು ಪ್ರಕಟಿಸಿದ್ದಾರೆ, ಪ್ರಸಾರ ಮಾಡಿದ್ದಾರೆ ಎಂದು ಸೂಚಿಸಲು ಯಾವುದೇ ದಾಖಲೆಗಳಿಲ್ಲ. ಇದರಿಂದ ಆನ್‌ಲೈನ್‌ನಲ್ಲಿ ಮಕ್ಕಳನ್ನು ದುರುಪಯೋಗಪಡಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದೆ ಎಂಬುದಕ್ಕೆ ಸಾಕ್ಷಿಯಿಲ್ಲ. ಜೊತೆಗೆ ಅರ್ಜಿದಾರರು ತನ್ನ ಲೈಂಗಿಕ ತೃಪ್ತಿಗಾಗಿ ಯಾವುದೇ ರೀತಿಯ ಮಾಧ್ಯಮಗಳಲ್ಲಿ ಮಕ್ಕಳನ್ನು ಬಳಸಿಕೊಂಡಿದ್ದಾನೆ ಅಥವಾ ವಾಣಿಜ್ಯ ಉದ್ದೇಶಕ್ಕಾಗಿ ಮಕ್ಕಳ ಅಶ್ಲೀಲ ವಸ್ತುಗಳನ್ನು ಸಂಗ್ರಹಿಸಿದ ಯಾವುದೇ ಪ್ರಕರಣವನ್ನು ಪ್ರಾಸಿಕ್ಯೂಷನ್ ಹೊಂದಿಲ್ಲ. ಹೀಗಾಗಿ ಗ್ರೂಪ್‌ನ ಸದಸ್ಯರು ಮಾಡಿದ ಪೋಸ್ಟ್‌ಗೆ ಗ್ರೂಪ್‌ನ ರಚನಾಕಾರರನ್ನು ಹೊಣೆಗಾರರನ್ನಾಗಿ ಮಾಡುವ ಯಾವುದೇ ಕಾನೂನು ಇಲ್ಲ” ಎಂದು ನ್ಯಾಯಾಲಯ ಹೇಳಿದೆ.


ಇದನ್ನೂ ಓದಿ: ಐಡಿ ಫ್ರೆಶ್ ಫುಡ್ ವಿರುದ್ಧ ಕೋಮುವಾದಿ ವಾಟ್ಸಾಪ್ ಫಾರ್ವಡ್: ಫೇಕ್ ಪ್ರೊಪಗಂಡಾ ಎಂದ ಕಂಪನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...