Homeಮುಖಪುಟಕೇರಳ ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಕೇಳಿದ ಇಬ್ಬರು ವಿದ್ಯಾರ್ಥಿಗಳು

ಕೇರಳ ಹಿಜಾಬ್ ವಿವಾದ: ವರ್ಗಾವಣೆ ಪ್ರಮಾಣಪತ್ರ ಕೇಳಿದ ಇಬ್ಬರು ವಿದ್ಯಾರ್ಥಿಗಳು

- Advertisement -
- Advertisement -

ಕೇರಳದ ಕೊಚ್ಚಿಯಲ್ಲಿರುವ ಚರ್ಚ್ ನಡೆಸುವ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಲು ನಿರಾಕರಿಸಿದ ಕೆಲವು ದಿನಗಳ ನಂತರ, ಅದೇ ಸಂಸ್ಥೆಯ ಇಬ್ಬರು ಹುಡುಗಿಯರು ಶಾಲೆ ಬಿಟ್ಟಿದ್ದಾರೆ. ಆಡಳಿತ ಮಂಡಳಿಯು ಇತರೆ ಧರ್ಮಗಳ ಬಗ್ಗೆ ಪಕ್ಷಪಾತ ಹೊಂದಿದೆ ಎಂದು ಮಕ್ಕಳ ತಾಯಿ ಆರೋಪಿಸಿದ್ದಾರೆ.

ಇಬ್ಬರು ಹುಡುಗಿಯರ ತಾಯಿ ಜೆಸ್ನಾ ಪ್ರಕಾರ, ಅವರು ಬೇರೆ ಶಾಲೆಗೆ ಸೇರಲು ವರ್ಗಾವಣೆ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ಶಾಲಾ ಆವರಣದಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಸೇಂಟ್ ರೀಟಾ ಶಾಲಾ ಆಡಳಿತ ಮಂಡಳಿ ಮತ್ತು ಪೋಷಕ-ಶಿಕ್ಷಕರ ಸಂಘ (ಪಿಟಿಎ) ಅಧ್ಯಕ್ಷರು ತೆಗೆದುಕೊಂಡ ನಿಲುವು ನಮ್ಮನ್ನು ಭಯಭೀತರನ್ನಾಗಿಸಿದೆ ಎಂದು ಜೆಸ್ನಾ ಪ್ರತಿಪಾದಿಸಿದರು.

“ಹಿಜಾಬ್ ಧರಿಸುವ ಪುಟ್ಟ ಹುಡುಗಿಯ ಕುರಿತ ಹೇಳಿಕೆಯು ಇತರರಲ್ಲಿ ಭಯವನ್ನು ಉಂಟುಮಾಡುತ್ತದೆ ಎಂಬುದು ನನ್ನ ನಂಬಿಕೆ, ಅದು ನಮ್ಮ ಸಂಸ್ಕೃತಿಗೆ ಅವಮಾನ. ಅವರು ತಮ್ಮದೇ ಆದ ವಿದ್ಯಾರ್ಥಿಗಳ ಕಡೆಗೆ ಈ ರೀತಿ ವರ್ತಿಸಿದ್ದಾರೆ. ಏಕೆಂದರೆ, ಅವರು ಇತರರ ಧಾರ್ಮಿಕ ನಂಬಿಕೆಗಳು ಮತ್ತು ಪದ್ಧತಿಗಳ ಬಗ್ಗೆ ಆಳದಲ್ಲಿ ದ್ವೇಷ ಹೊಂದಿದ್ದಾರೆ. ಶಿಕ್ಷಕರು ಮತ್ತು ಶಾಲಾ ಅಧಿಕಾರಿಗಳ ನಡುವೆ ಅಂತಹ ಮನಸ್ಥಿತಿಯೊಂದಿಗೆ ಬೆಳೆಯುವುದು ನನ್ನ ಮಕ್ಕಳ ಭವಿಷ್ಯಕ್ಕೆ ಒಳ್ಳೆಯದಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

“ಆ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಸನ್ಯಾಸಿನಿಯೊಬ್ಬರು ನನಗೆ ಕರೆ ಮಾಡಿದರು. ಶಾಲೆಯು ಎಲ್ಲಾ ಧರ್ಮಗಳನ್ನು ಒಳಗೊಳ್ಳುವ ದೃಷ್ಟಿಕೋನವನ್ನು ಹೊಂದಿದೆ ಮತ್ತು ನನ್ನ ಮಕ್ಕಳಿಗೆ ಅಲ್ಲಿ ಯಾವುದೇ ತೊಂದರೆಗಳು ಉಂಟಾಗುವುದಿಲ್ಲ, ನಾನು ಅವರನ್ನು ಸುರಕ್ಷಿತವಾಗಿ ಕಳುಹಿಸಬಲ್ಲೆ ಎಂದು ಅವರು ನನಗೆ ಭರವಸೆ ನೀಡಿದರು. ನನ್ನ ಮಕ್ಕಳು ಅಂತಹ ಒಳ್ಳೆಯ ಸ್ವಭಾವದ ಶಿಕ್ಷಕರೊಂದಿಗೆ ಬೆಳೆಯಬೇಕೆಂದು ನಾನು ಬಯಸುತ್ತೇನೆ” ಎಂದು ಅವರು ಬೇರೆ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸುವುದಾಗಿ ಹೇಳಿದರು.

ಕಳೆದ ವಾರ, ಲ್ಯಾಟಿನ್ ಕ್ಯಾಥೋಲಿಕ್ ಚರ್ಚ್ ನಡೆಸುತ್ತಿರುವ ಶಾಲೆಯು ಹಿಜಾಬ್ ಧರಿಸಲು ವಿದ್ಯಾರ್ಥಿಯೊಬ್ಬಳ ಬೇಡಿಕೆಯಿಂದ ಉದ್ವಿಗ್ನತೆ ಭುಗಿಲೆದ್ದ ನಂತರ ಎರಡು ದಿನಗಳ ಕಾಲ ಶಾಲೆ ಮುಚ್ಚುವುದಾಗಿ ಘೋಷಿಸಿತು. ಪಿಟಿಎ ಸಭೆಯ ನಂತರ, ಪರಿಸ್ಥಿತಿಯನ್ನು ಶಮನಗೊಳಿಸುವ ಅಗತ್ಯವನ್ನು ಉಲ್ಲೇಖಿಸಿ ಶಾಲೆಯು ಎರಡು ದಿನಗಳ ರಜೆಯನ್ನು ಘೋಷಿಸಿತು.

ಅಕ್ಟೋಬರ್ 12 ರಂದು ಹುಡುಗಿಯ ಪೋಷಕರಿಗೆ ಬರೆದ ಪತ್ರದಲ್ಲಿ, ಪ್ರಾಂಶುಪಾಲರಾದ ಸೀನಿಯರ್ ಹೆಲೀನಾ ಆಲ್ಬಿ ಅವರು ‘ಪರಿಸ್ಥಿತಿಯಿಂದ ಉಂಟಾದ ಮಾನಸಿಕ ಒತ್ತಡವನ್ನು ಗಮನದಲ್ಲಿಟ್ಟುಕೊಂಡು, ಹಲವಾರು ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ರಜೆ ತೆಗೆದುಕೊಂಡಿರುವುದರಿಂದ’ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ವಿವಾದ ಭುಗಿಲೆದ್ದಂತೆ, ಎರ್ನಾಕುಲಂನ ಕಾಂಗ್ರೆಸ್ ಸಂಸದೆ ಹಿಬಿ ಈಡನ್ ಅವರು ಬಾಲಕಿಯ ಪೋಷಕರನ್ನು ಭೇಟಿಯಾದರು, ಅವರು ಸಂಸ್ಥೆಯ ವಸ್ತ್ರ ಸಂಹಿತೆಯನ್ನು ಪಾಲಿಸಲು ಒಪ್ಪಿಕೊಂಡರು.

ಆದರೆ, ಎರ್ನಾಕುಲಂ ಶಿಕ್ಷಣ ಉಪ ನಿರ್ದೇಶಕರು ಶಾಲಾ ಅಧಿಕಾರಿಗಳ ಕಡೆಯಿಂದ ಲೋಪವಾಗಿದೆ ಎಂಬುದನ್ನು ಕಂಡುಕೊಂಡಿದ್ದಾರೆ ಎಂದು ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ಹೇಳಿದ್ದಾರೆ.

ಶಿಕ್ಷಣ ಉಪ ನಿರ್ದೇಶಕರ ತನಿಖಾ ವರದಿಯನ್ನು ಉಲ್ಲೇಖಿಸಿ, ಹಿಜಾಬ್ ಧರಿಸಿದ್ದಕ್ಕಾಗಿ ವಿದ್ಯಾರ್ಥಿಯನ್ನು ತರಗತಿಯಿಂದ ಹೊರಹಾಕಿರುವುದು ಗಂಭೀರ ದುಷ್ಕೃತ್ಯ, ಶಿಕ್ಷಣ ಹಕ್ಕು ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.

ಶಾಲಾ ಆಡಳಿತವು ವಿದ್ಯಾರ್ಥಿಗೆ ಹಿಜಾಬ್ ಧರಿಸಿ ಅಧ್ಯಯನ ಮುಂದುವರಿಸಲು ಅನುಮತಿ ನೀಡಬೇಕಾಗಿತ್ತು ಎಂದು ಅವರು ಹೇಳಿದರು.

ಹಿಜಾಬ್ ಧರಿಸಿದ ಬಾಲಕಿಗೆ ಓದು ಮುಂದುವರಿಸಲು ಅವಕಾಶ ನೀಡುವಂತೆ ಕೇರಳ ಸಚಿವರ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...