Homeಮುಖಪುಟಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒಕ್ಕೂಟ ಭರ್ಜರಿ ವಿಜಯ ಸಾಧಿಸಿದೆ. ಇದೀಗ ರಾಜ್ಯದಲ್ಲಿ ಎಡಪಂಥೀಯವ ಸರ್ಕಾರ ಸತತವಾಗಿ ಎರಡನೆ ಬಾರಿಗೆ ಅಧಿಕಾರಕ್ಕೆ ಹಿಡಿಯುತ್ತಿದೆ. ಪಿಣರಾಯಿ ವಿಜಯನ್ ಅವರ ಎರಡನೇ ಅವಧಿಯ ಸರ್ಕಾರವು ದೇವಸ್ವಂ ಇಲಾಖೆ (ಮುಜರಾಯಿ ಇಲಾಖೆ)ಗೆ ಚೆಲಕ್ಕರ ಕ್ಷೇತ್ರದ ಶಾಸಕರಾಗಿರುವ ದಲಿತ ನಾಯಕ ಕೆ. ರಾಧಾಕೃಷ್ಣನ್ ಅವರನ್ನು ಸಚಿವರನ್ನಾಗಿ ನೇಮಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ.

1996 ರಲ್ಲಿ ಇ.ಕೆ.ನಯನಾರ್ ಅವರ ಸಂಪುಟದಲ್ಲಿ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಪರಿಶಿಷ್ಟ ಜಾತಿಗೆ ಸೇರಿರುವ ಕೆ. ರಾಧಾಕೃಷ್ಣನ್ ಅವರು ಪ್ರಸ್ತುತ ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿದ್ದು, ದಲಿತ ಶೋಷನ್ ಮುಕ್ತಿ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

ಇದನ್ನೂಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

2001, 2006 ಮತ್ತು 2011 ರಲ್ಲಿ ಚೆಲಕ್ಕರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಕೆ. ರಾಧಾಕೃಷ್ಣ 2001 ರಲ್ಲಿ ಮುಖ್ಯ ವಿಪ್ ಮತ್ತು 2006 ರಲ್ಲಿ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

2016 ರ ಚುನಾವಣೆಯಲ್ಲಿ ಅವರು ಸ್ಪರ್ಧಿಸಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಪಕ್ಷವು ಅವರನ್ನು ಚೆಲಕ್ಕರ ಕ್ಷೇತ್ರದಿಂದ ಮತ್ತೇ ಕಣಕ್ಕಿಳಿಸಿತ್ತು. ಪ್ರಸ್ತುತ ಸಚಿವ ಸಂಪುಟದಲ್ಲಿ ಅವರಿಗೆ ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ.

21 ಸದಸ್ಯರಿರುವ ಕೇರಳ ಸಚಿವ ಸಂಪುಟವು ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ. ಬೇಪುರ್‌‌ ಕ್ಷೇತ್ರದಿಂದ ಮೊದಲ ಆಯ್ಕೆಯಾಗಿರುವ ಡಿವೈಎಫ್‌ಐ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಿ ಆಯ್ಕೆಯಾಗಿದ್ದು, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಅವರು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ. ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು. ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.

ಇದನ್ನೂಓದಿ: ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಆರೋಗ್ಯ ಸಚಿವರಾಗಿ ಶೈಲಜಾ ಅವರೇ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆ, ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಉಳಿದಂತೆ ಸಚಿವರ ಪಟ್ಟಿ ಕೆಳಗಿನಂತಿದೆ.

  1. ಪಿಣರಾಯಿ ವಿಜಯನ್ – ಸಾರ್ವಜನಿಕ ಆಡಳಿತ, ಗೃಹ, ವಿಜಿಲೆನ್ಸ್‌, ಐಟಿ, ಪರಿಸರ
  2. ಕೆ.ಎನ್. ಬಾಲಗೋಪಾಲ್ – ಹಣಕಾಸು
  3. ವೀಣಾ ಜಾರ್ಜ್ – ಆರೋಗ್ಯ
  4. ವಿ ಶಿವಂಕುಟ್ಟಿ – ಶಿಕ್ಷಣ, ಕಾರ್ಮಿಕ
  5. ಪಿ ರಾಜೀವ್ – ಕೈಗಾರಿಕೆ
  6. ಕೆ ರಾಧಾಕೃಷ್ಣನ್ – ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ
  7. ಆರ್ ಬಿಂದು – ಉನ್ನತ ಶಿಕ್ಷಣ
  8. ಆಂಟನಿ ರಾಜು – ಸಾರಿಗೆ
  9. ಎಂ.ವಿ.ಗೋವಿಂದನ್ – ಸ್ಥಳೀಯ ಸ್ಥಂಸ್ಥಗಳು, ಅಬಕಾರಿ
  10. ಪಿಎ ಮೊಹಮ್ಮದ್ ರಿಯಾಸ್ – ಪಿಡಬ್ಲ್ಯೂಡಿ, ಪ್ರವಾಸೋದ್ಯಮ
  11. ವಿ.ಎನ್.ವಾಸವನ್ – ಸಹಕಾರ, ನೋಂದಣಿ
  12. ಕೆ. ಕೃಷ್ಣನ್‌ಕುಟ್ಟಿ – ವಿದ್ಯುತ್
  13. ಅಹಮದ್ ದೇವರ್‌‌ಕೋವಿಲ್ – ಬಂದರು
  14. ಸಾಜಿ ಚೆರಿಯನ್ – ಮೀನುಗಾರಿಕೆ, ಸಂಸ್ಕೃತಿ
  15. ವಿ. ಅಬ್ದುರಹಿಮನ್ – ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಎನ್‌ಆರ್‌ಐ
  16. ಜೆ. ಚಿಂಚು ರಾಣಿ – ಪಶುಸಂಗೋಪನೆ, ಡೈರಿ
  17. ಎ.ಕೆ. ಸಸೀಂದ್ರನ್- ಅರಣ್ಯ
  18. ಪಿ. ಪ್ರಸಾದ್- ಕೃಷಿ
  19. ರೋಶಿ ಅಗಸ್ಟೀನ್ – ಜಲ ಸಂಪನ್ಮೂಲಗಳು
  20. ಕೆ. ರಾಜನ್ – ಕಂದಾಯ
  21. ಜಿ. ಆರ್. ಅನಿಲ್- ನಾಗರಿಕ ಸರಬರಾಜು

ಇದನ್ನೂಓದಿ: ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...