Homeಮುಖಪುಟಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒಕ್ಕೂಟ ಭರ್ಜರಿ ವಿಜಯ ಸಾಧಿಸಿದೆ. ಇದೀಗ ರಾಜ್ಯದಲ್ಲಿ ಎಡಪಂಥೀಯವ ಸರ್ಕಾರ ಸತತವಾಗಿ ಎರಡನೆ ಬಾರಿಗೆ ಅಧಿಕಾರಕ್ಕೆ ಹಿಡಿಯುತ್ತಿದೆ. ಪಿಣರಾಯಿ ವಿಜಯನ್ ಅವರ ಎರಡನೇ ಅವಧಿಯ ಸರ್ಕಾರವು ದೇವಸ್ವಂ ಇಲಾಖೆ (ಮುಜರಾಯಿ ಇಲಾಖೆ)ಗೆ ಚೆಲಕ್ಕರ ಕ್ಷೇತ್ರದ ಶಾಸಕರಾಗಿರುವ ದಲಿತ ನಾಯಕ ಕೆ. ರಾಧಾಕೃಷ್ಣನ್ ಅವರನ್ನು ಸಚಿವರನ್ನಾಗಿ ನೇಮಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ.

1996 ರಲ್ಲಿ ಇ.ಕೆ.ನಯನಾರ್ ಅವರ ಸಂಪುಟದಲ್ಲಿ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಪರಿಶಿಷ್ಟ ಜಾತಿಗೆ ಸೇರಿರುವ ಕೆ. ರಾಧಾಕೃಷ್ಣನ್ ಅವರು ಪ್ರಸ್ತುತ ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿದ್ದು, ದಲಿತ ಶೋಷನ್ ಮುಕ್ತಿ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

ಇದನ್ನೂಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

2001, 2006 ಮತ್ತು 2011 ರಲ್ಲಿ ಚೆಲಕ್ಕರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಕೆ. ರಾಧಾಕೃಷ್ಣ 2001 ರಲ್ಲಿ ಮುಖ್ಯ ವಿಪ್ ಮತ್ತು 2006 ರಲ್ಲಿ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

2016 ರ ಚುನಾವಣೆಯಲ್ಲಿ ಅವರು ಸ್ಪರ್ಧಿಸಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಪಕ್ಷವು ಅವರನ್ನು ಚೆಲಕ್ಕರ ಕ್ಷೇತ್ರದಿಂದ ಮತ್ತೇ ಕಣಕ್ಕಿಳಿಸಿತ್ತು. ಪ್ರಸ್ತುತ ಸಚಿವ ಸಂಪುಟದಲ್ಲಿ ಅವರಿಗೆ ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ.

21 ಸದಸ್ಯರಿರುವ ಕೇರಳ ಸಚಿವ ಸಂಪುಟವು ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ. ಬೇಪುರ್‌‌ ಕ್ಷೇತ್ರದಿಂದ ಮೊದಲ ಆಯ್ಕೆಯಾಗಿರುವ ಡಿವೈಎಫ್‌ಐ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಿ ಆಯ್ಕೆಯಾಗಿದ್ದು, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಅವರು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ. ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು. ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.

ಇದನ್ನೂಓದಿ: ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಆರೋಗ್ಯ ಸಚಿವರಾಗಿ ಶೈಲಜಾ ಅವರೇ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆ, ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಉಳಿದಂತೆ ಸಚಿವರ ಪಟ್ಟಿ ಕೆಳಗಿನಂತಿದೆ.

  1. ಪಿಣರಾಯಿ ವಿಜಯನ್ – ಸಾರ್ವಜನಿಕ ಆಡಳಿತ, ಗೃಹ, ವಿಜಿಲೆನ್ಸ್‌, ಐಟಿ, ಪರಿಸರ
  2. ಕೆ.ಎನ್. ಬಾಲಗೋಪಾಲ್ – ಹಣಕಾಸು
  3. ವೀಣಾ ಜಾರ್ಜ್ – ಆರೋಗ್ಯ
  4. ವಿ ಶಿವಂಕುಟ್ಟಿ – ಶಿಕ್ಷಣ, ಕಾರ್ಮಿಕ
  5. ಪಿ ರಾಜೀವ್ – ಕೈಗಾರಿಕೆ
  6. ಕೆ ರಾಧಾಕೃಷ್ಣನ್ – ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ
  7. ಆರ್ ಬಿಂದು – ಉನ್ನತ ಶಿಕ್ಷಣ
  8. ಆಂಟನಿ ರಾಜು – ಸಾರಿಗೆ
  9. ಎಂ.ವಿ.ಗೋವಿಂದನ್ – ಸ್ಥಳೀಯ ಸ್ಥಂಸ್ಥಗಳು, ಅಬಕಾರಿ
  10. ಪಿಎ ಮೊಹಮ್ಮದ್ ರಿಯಾಸ್ – ಪಿಡಬ್ಲ್ಯೂಡಿ, ಪ್ರವಾಸೋದ್ಯಮ
  11. ವಿ.ಎನ್.ವಾಸವನ್ – ಸಹಕಾರ, ನೋಂದಣಿ
  12. ಕೆ. ಕೃಷ್ಣನ್‌ಕುಟ್ಟಿ – ವಿದ್ಯುತ್
  13. ಅಹಮದ್ ದೇವರ್‌‌ಕೋವಿಲ್ – ಬಂದರು
  14. ಸಾಜಿ ಚೆರಿಯನ್ – ಮೀನುಗಾರಿಕೆ, ಸಂಸ್ಕೃತಿ
  15. ವಿ. ಅಬ್ದುರಹಿಮನ್ – ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಎನ್‌ಆರ್‌ಐ
  16. ಜೆ. ಚಿಂಚು ರಾಣಿ – ಪಶುಸಂಗೋಪನೆ, ಡೈರಿ
  17. ಎ.ಕೆ. ಸಸೀಂದ್ರನ್- ಅರಣ್ಯ
  18. ಪಿ. ಪ್ರಸಾದ್- ಕೃಷಿ
  19. ರೋಶಿ ಅಗಸ್ಟೀನ್ – ಜಲ ಸಂಪನ್ಮೂಲಗಳು
  20. ಕೆ. ರಾಜನ್ – ಕಂದಾಯ
  21. ಜಿ. ಆರ್. ಅನಿಲ್- ನಾಗರಿಕ ಸರಬರಾಜು

ಇದನ್ನೂಓದಿ: ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೋಕಸಭೆ ಚುನಾವಣೆ: ಎಕ್ಸಿಟ್ ಪೋಲ್ ಪ್ರಸಾರ ಮಾಡದಂತೆ ನಿಷೇಧ ವಿಧಿಸಿದ ಚುನಾವಣಾ ಆಯೋಗ

0
ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಗಳ ಹಿನ್ನೆಲೆ ಏಪ್ರಿಲ್ 19ರಂದು ಬೆಳಿಗ್ಗೆ 7ರಿಂದ ಜೂನ್ 1ರ ಸಂಜೆ 6.30ರವರೆಗೆ ಸಮೀಕ್ಷೆಗಳನ್ನು ನಡೆಸುವುದು ಮತ್ತು ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಪ್ರಕಟಿಸುವುದನ್ನು ನಿಷೇಧಿಸಿ...