Homeಮುಖಪುಟಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒಕ್ಕೂಟ ಭರ್ಜರಿ ವಿಜಯ ಸಾಧಿಸಿದೆ. ಇದೀಗ ರಾಜ್ಯದಲ್ಲಿ ಎಡಪಂಥೀಯವ ಸರ್ಕಾರ ಸತತವಾಗಿ ಎರಡನೆ ಬಾರಿಗೆ ಅಧಿಕಾರಕ್ಕೆ ಹಿಡಿಯುತ್ತಿದೆ. ಪಿಣರಾಯಿ ವಿಜಯನ್ ಅವರ ಎರಡನೇ ಅವಧಿಯ ಸರ್ಕಾರವು ದೇವಸ್ವಂ ಇಲಾಖೆ (ಮುಜರಾಯಿ ಇಲಾಖೆ)ಗೆ ಚೆಲಕ್ಕರ ಕ್ಷೇತ್ರದ ಶಾಸಕರಾಗಿರುವ ದಲಿತ ನಾಯಕ ಕೆ. ರಾಧಾಕೃಷ್ಣನ್ ಅವರನ್ನು ಸಚಿವರನ್ನಾಗಿ ನೇಮಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ.

1996 ರಲ್ಲಿ ಇ.ಕೆ.ನಯನಾರ್ ಅವರ ಸಂಪುಟದಲ್ಲಿ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಪರಿಶಿಷ್ಟ ಜಾತಿಗೆ ಸೇರಿರುವ ಕೆ. ರಾಧಾಕೃಷ್ಣನ್ ಅವರು ಪ್ರಸ್ತುತ ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿದ್ದು, ದಲಿತ ಶೋಷನ್ ಮುಕ್ತಿ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

ಇದನ್ನೂಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

2001, 2006 ಮತ್ತು 2011 ರಲ್ಲಿ ಚೆಲಕ್ಕರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಕೆ. ರಾಧಾಕೃಷ್ಣ 2001 ರಲ್ಲಿ ಮುಖ್ಯ ವಿಪ್ ಮತ್ತು 2006 ರಲ್ಲಿ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

2016 ರ ಚುನಾವಣೆಯಲ್ಲಿ ಅವರು ಸ್ಪರ್ಧಿಸಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಪಕ್ಷವು ಅವರನ್ನು ಚೆಲಕ್ಕರ ಕ್ಷೇತ್ರದಿಂದ ಮತ್ತೇ ಕಣಕ್ಕಿಳಿಸಿತ್ತು. ಪ್ರಸ್ತುತ ಸಚಿವ ಸಂಪುಟದಲ್ಲಿ ಅವರಿಗೆ ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ.

21 ಸದಸ್ಯರಿರುವ ಕೇರಳ ಸಚಿವ ಸಂಪುಟವು ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ. ಬೇಪುರ್‌‌ ಕ್ಷೇತ್ರದಿಂದ ಮೊದಲ ಆಯ್ಕೆಯಾಗಿರುವ ಡಿವೈಎಫ್‌ಐ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಿ ಆಯ್ಕೆಯಾಗಿದ್ದು, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಅವರು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ. ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು. ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.

ಇದನ್ನೂಓದಿ: ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಆರೋಗ್ಯ ಸಚಿವರಾಗಿ ಶೈಲಜಾ ಅವರೇ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆ, ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಉಳಿದಂತೆ ಸಚಿವರ ಪಟ್ಟಿ ಕೆಳಗಿನಂತಿದೆ.

  1. ಪಿಣರಾಯಿ ವಿಜಯನ್ – ಸಾರ್ವಜನಿಕ ಆಡಳಿತ, ಗೃಹ, ವಿಜಿಲೆನ್ಸ್‌, ಐಟಿ, ಪರಿಸರ
  2. ಕೆ.ಎನ್. ಬಾಲಗೋಪಾಲ್ – ಹಣಕಾಸು
  3. ವೀಣಾ ಜಾರ್ಜ್ – ಆರೋಗ್ಯ
  4. ವಿ ಶಿವಂಕುಟ್ಟಿ – ಶಿಕ್ಷಣ, ಕಾರ್ಮಿಕ
  5. ಪಿ ರಾಜೀವ್ – ಕೈಗಾರಿಕೆ
  6. ಕೆ ರಾಧಾಕೃಷ್ಣನ್ – ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ
  7. ಆರ್ ಬಿಂದು – ಉನ್ನತ ಶಿಕ್ಷಣ
  8. ಆಂಟನಿ ರಾಜು – ಸಾರಿಗೆ
  9. ಎಂ.ವಿ.ಗೋವಿಂದನ್ – ಸ್ಥಳೀಯ ಸ್ಥಂಸ್ಥಗಳು, ಅಬಕಾರಿ
  10. ಪಿಎ ಮೊಹಮ್ಮದ್ ರಿಯಾಸ್ – ಪಿಡಬ್ಲ್ಯೂಡಿ, ಪ್ರವಾಸೋದ್ಯಮ
  11. ವಿ.ಎನ್.ವಾಸವನ್ – ಸಹಕಾರ, ನೋಂದಣಿ
  12. ಕೆ. ಕೃಷ್ಣನ್‌ಕುಟ್ಟಿ – ವಿದ್ಯುತ್
  13. ಅಹಮದ್ ದೇವರ್‌‌ಕೋವಿಲ್ – ಬಂದರು
  14. ಸಾಜಿ ಚೆರಿಯನ್ – ಮೀನುಗಾರಿಕೆ, ಸಂಸ್ಕೃತಿ
  15. ವಿ. ಅಬ್ದುರಹಿಮನ್ – ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಎನ್‌ಆರ್‌ಐ
  16. ಜೆ. ಚಿಂಚು ರಾಣಿ – ಪಶುಸಂಗೋಪನೆ, ಡೈರಿ
  17. ಎ.ಕೆ. ಸಸೀಂದ್ರನ್- ಅರಣ್ಯ
  18. ಪಿ. ಪ್ರಸಾದ್- ಕೃಷಿ
  19. ರೋಶಿ ಅಗಸ್ಟೀನ್ – ಜಲ ಸಂಪನ್ಮೂಲಗಳು
  20. ಕೆ. ರಾಜನ್ – ಕಂದಾಯ
  21. ಜಿ. ಆರ್. ಅನಿಲ್- ನಾಗರಿಕ ಸರಬರಾಜು

ಇದನ್ನೂಓದಿ: ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...