Homeಮುಖಪುಟಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒಕ್ಕೂಟ ಭರ್ಜರಿ ವಿಜಯ ಸಾಧಿಸಿದೆ. ಇದೀಗ ರಾಜ್ಯದಲ್ಲಿ ಎಡಪಂಥೀಯವ ಸರ್ಕಾರ ಸತತವಾಗಿ ಎರಡನೆ ಬಾರಿಗೆ ಅಧಿಕಾರಕ್ಕೆ ಹಿಡಿಯುತ್ತಿದೆ. ಪಿಣರಾಯಿ ವಿಜಯನ್ ಅವರ ಎರಡನೇ ಅವಧಿಯ ಸರ್ಕಾರವು ದೇವಸ್ವಂ ಇಲಾಖೆ (ಮುಜರಾಯಿ ಇಲಾಖೆ)ಗೆ ಚೆಲಕ್ಕರ ಕ್ಷೇತ್ರದ ಶಾಸಕರಾಗಿರುವ ದಲಿತ ನಾಯಕ ಕೆ. ರಾಧಾಕೃಷ್ಣನ್ ಅವರನ್ನು ಸಚಿವರನ್ನಾಗಿ ನೇಮಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ.

1996 ರಲ್ಲಿ ಇ.ಕೆ.ನಯನಾರ್ ಅವರ ಸಂಪುಟದಲ್ಲಿ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಪರಿಶಿಷ್ಟ ಜಾತಿಗೆ ಸೇರಿರುವ ಕೆ. ರಾಧಾಕೃಷ್ಣನ್ ಅವರು ಪ್ರಸ್ತುತ ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿದ್ದು, ದಲಿತ ಶೋಷನ್ ಮುಕ್ತಿ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

ಇದನ್ನೂಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

2001, 2006 ಮತ್ತು 2011 ರಲ್ಲಿ ಚೆಲಕ್ಕರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಕೆ. ರಾಧಾಕೃಷ್ಣ 2001 ರಲ್ಲಿ ಮುಖ್ಯ ವಿಪ್ ಮತ್ತು 2006 ರಲ್ಲಿ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

2016 ರ ಚುನಾವಣೆಯಲ್ಲಿ ಅವರು ಸ್ಪರ್ಧಿಸಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಪಕ್ಷವು ಅವರನ್ನು ಚೆಲಕ್ಕರ ಕ್ಷೇತ್ರದಿಂದ ಮತ್ತೇ ಕಣಕ್ಕಿಳಿಸಿತ್ತು. ಪ್ರಸ್ತುತ ಸಚಿವ ಸಂಪುಟದಲ್ಲಿ ಅವರಿಗೆ ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ.

21 ಸದಸ್ಯರಿರುವ ಕೇರಳ ಸಚಿವ ಸಂಪುಟವು ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ. ಬೇಪುರ್‌‌ ಕ್ಷೇತ್ರದಿಂದ ಮೊದಲ ಆಯ್ಕೆಯಾಗಿರುವ ಡಿವೈಎಫ್‌ಐ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಿ ಆಯ್ಕೆಯಾಗಿದ್ದು, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಅವರು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ. ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು. ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.

ಇದನ್ನೂಓದಿ: ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಆರೋಗ್ಯ ಸಚಿವರಾಗಿ ಶೈಲಜಾ ಅವರೇ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆ, ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಉಳಿದಂತೆ ಸಚಿವರ ಪಟ್ಟಿ ಕೆಳಗಿನಂತಿದೆ.

  1. ಪಿಣರಾಯಿ ವಿಜಯನ್ – ಸಾರ್ವಜನಿಕ ಆಡಳಿತ, ಗೃಹ, ವಿಜಿಲೆನ್ಸ್‌, ಐಟಿ, ಪರಿಸರ
  2. ಕೆ.ಎನ್. ಬಾಲಗೋಪಾಲ್ – ಹಣಕಾಸು
  3. ವೀಣಾ ಜಾರ್ಜ್ – ಆರೋಗ್ಯ
  4. ವಿ ಶಿವಂಕುಟ್ಟಿ – ಶಿಕ್ಷಣ, ಕಾರ್ಮಿಕ
  5. ಪಿ ರಾಜೀವ್ – ಕೈಗಾರಿಕೆ
  6. ಕೆ ರಾಧಾಕೃಷ್ಣನ್ – ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ
  7. ಆರ್ ಬಿಂದು – ಉನ್ನತ ಶಿಕ್ಷಣ
  8. ಆಂಟನಿ ರಾಜು – ಸಾರಿಗೆ
  9. ಎಂ.ವಿ.ಗೋವಿಂದನ್ – ಸ್ಥಳೀಯ ಸ್ಥಂಸ್ಥಗಳು, ಅಬಕಾರಿ
  10. ಪಿಎ ಮೊಹಮ್ಮದ್ ರಿಯಾಸ್ – ಪಿಡಬ್ಲ್ಯೂಡಿ, ಪ್ರವಾಸೋದ್ಯಮ
  11. ವಿ.ಎನ್.ವಾಸವನ್ – ಸಹಕಾರ, ನೋಂದಣಿ
  12. ಕೆ. ಕೃಷ್ಣನ್‌ಕುಟ್ಟಿ – ವಿದ್ಯುತ್
  13. ಅಹಮದ್ ದೇವರ್‌‌ಕೋವಿಲ್ – ಬಂದರು
  14. ಸಾಜಿ ಚೆರಿಯನ್ – ಮೀನುಗಾರಿಕೆ, ಸಂಸ್ಕೃತಿ
  15. ವಿ. ಅಬ್ದುರಹಿಮನ್ – ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಎನ್‌ಆರ್‌ಐ
  16. ಜೆ. ಚಿಂಚು ರಾಣಿ – ಪಶುಸಂಗೋಪನೆ, ಡೈರಿ
  17. ಎ.ಕೆ. ಸಸೀಂದ್ರನ್- ಅರಣ್ಯ
  18. ಪಿ. ಪ್ರಸಾದ್- ಕೃಷಿ
  19. ರೋಶಿ ಅಗಸ್ಟೀನ್ – ಜಲ ಸಂಪನ್ಮೂಲಗಳು
  20. ಕೆ. ರಾಜನ್ – ಕಂದಾಯ
  21. ಜಿ. ಆರ್. ಅನಿಲ್- ನಾಗರಿಕ ಸರಬರಾಜು

ಇದನ್ನೂಓದಿ: ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...