Homeಮುಖಪುಟಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

ಕೇರಳ ಐತಿಹಾಸಿಕ ನಿರ್ಧಾರ: ದೇವಸ್ವಂ( ಮುಜರಾಯಿ ಇಲಾಖೆ) ಸಚಿವರಾಗಿ ದಲಿತ ಸಮುದಾಯದ ಶಾಸಕ ಆಯ್ಕೆ

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಒಕ್ಕೂಟ ಭರ್ಜರಿ ವಿಜಯ ಸಾಧಿಸಿದೆ. ಇದೀಗ ರಾಜ್ಯದಲ್ಲಿ ಎಡಪಂಥೀಯವ ಸರ್ಕಾರ ಸತತವಾಗಿ ಎರಡನೆ ಬಾರಿಗೆ ಅಧಿಕಾರಕ್ಕೆ ಹಿಡಿಯುತ್ತಿದೆ. ಪಿಣರಾಯಿ ವಿಜಯನ್ ಅವರ ಎರಡನೇ ಅವಧಿಯ ಸರ್ಕಾರವು ದೇವಸ್ವಂ ಇಲಾಖೆ (ಮುಜರಾಯಿ ಇಲಾಖೆ)ಗೆ ಚೆಲಕ್ಕರ ಕ್ಷೇತ್ರದ ಶಾಸಕರಾಗಿರುವ ದಲಿತ ನಾಯಕ ಕೆ. ರಾಧಾಕೃಷ್ಣನ್ ಅವರನ್ನು ಸಚಿವರನ್ನಾಗಿ ನೇಮಿಸುವ ಮೂಲಕ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ.

1996 ರಲ್ಲಿ ಇ.ಕೆ.ನಯನಾರ್ ಅವರ ಸಂಪುಟದಲ್ಲಿ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಪರಿಶಿಷ್ಟ ಜಾತಿಗೆ ಸೇರಿರುವ ಕೆ. ರಾಧಾಕೃಷ್ಣನ್ ಅವರು ಪ್ರಸ್ತುತ ಸಿಪಿಎಂ ಕೇಂದ್ರ ಸಮಿತಿ ಸದಸ್ಯರಾಗಿದ್ದು, ದಲಿತ ಶೋಷನ್ ಮುಕ್ತಿ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ.

ಇದನ್ನೂಓದಿ: ಕಳೆದ ಬಾರಿಗಿಂತ ಕೊರೊನಾ ಆರ್ಥಿಕ ಪ್ಯಾಕೇಜ್ ಪರಿಹಾರ ಮೊತ್ತ ಕಡಿತಗೊಳಿಸಿದ ರಾಜ್ಯ ಸರ್ಕಾರ

2001, 2006 ಮತ್ತು 2011 ರಲ್ಲಿ ಚೆಲಕ್ಕರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಕೆ. ರಾಧಾಕೃಷ್ಣ 2001 ರಲ್ಲಿ ಮುಖ್ಯ ವಿಪ್ ಮತ್ತು 2006 ರಲ್ಲಿ ವಿಧಾನಸಭಾ ಸ್ಪೀಕರ್ ಆಗಿ ಸೇವೆ ಸಲ್ಲಿಸಿದ್ದರು.

2016 ರ ಚುನಾವಣೆಯಲ್ಲಿ ಅವರು ಸ್ಪರ್ಧಿಸಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಪಕ್ಷವು ಅವರನ್ನು ಚೆಲಕ್ಕರ ಕ್ಷೇತ್ರದಿಂದ ಮತ್ತೇ ಕಣಕ್ಕಿಳಿಸಿತ್ತು. ಪ್ರಸ್ತುತ ಸಚಿವ ಸಂಪುಟದಲ್ಲಿ ಅವರಿಗೆ ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ ಖಾತೆಗಳನ್ನು ನೀಡಲಾಗಿದೆ.

21 ಸದಸ್ಯರಿರುವ ಕೇರಳ ಸಚಿವ ಸಂಪುಟವು ಮೇ 20 ರ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದೆ. ಬೇಪುರ್‌‌ ಕ್ಷೇತ್ರದಿಂದ ಮೊದಲ ಆಯ್ಕೆಯಾಗಿರುವ ಡಿವೈಎಫ್‌ಐ ರಾಷ್ಟ್ರಾಧ್ಯಕ್ಷ ಪಿ.ಎ. ಮೊಹಮ್ಮದ್ ರಿಯಾಜ್ ಲೋಕೋಪಯೋಗಿ ಇಲಾಖೆ ಸಚಿವರಾಗಿ ಆಯ್ಕೆಯಾಗಿದ್ದು, ಕೆ.ಎನ್. ಬಾಲಗೋಪಾಲ್ ಅವರು ಹೊಸ ಹಣಕಾಸು ಸಚಿವರಾಗಲಿದ್ದಾರೆ.

ಮತ್ತೊಬ್ಬ ಮಹಿಳಾ ಶಾಸಕಿ ಆರ್. ಬಿಂದು ಅವರು ಕೇರಳದ ಹೊಸ ಉನ್ನತ ಶಿಕ್ಷಣ ಸಚಿವರಾಗಲಿದ್ದಾರೆ. ಸ್ಥಳೀಯ ಸಂಸ್ಥೆ ಮತ್ತು ಪಂಚಾಯತ್ ಚುನಾವಣೆಗಳಲ್ಲಿ ಕೇರಳದ ಎಡ ಪಕ್ಷಗಳು ಹೊಸಬರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡಿದ್ದವು. ಹಲವಾರು ಕಡೆ ಮಹಿಳೆಯರಿಗೇ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಸ್ಥಾನ ಅಥವಾ ಮೇಯರ್ ಸ್ಥಾನ ನೀಡಿದ್ದವು.

ಇದನ್ನೂಓದಿ: ಕೇರಳ ಸಂಪುಟದಿಂದ ಶೈಲಜಾ ಟೀಚರ್ ಕೈಬಿಟ್ಟಿದ್ದು ಏಕೆ? ಅವರೇ ಸಿಎಂ ಆಗಬೇಕಿತ್ತಲ್ಲವೆ?: ಜಾಲತಾಣದಲ್ಲಿ ಭಾರೀ ಚರ್ಚೆ

ಆರೋಗ್ಯ ಸಚಿವರಾಗಿ ಶೈಲಜಾ ಅವರೇ ಮುಂದುವರೆಯಬೇಕಿತ್ತು ಎಂಬ ವಾದಗಳ ನಡುವೆ, ಅರಣ್ಮುಲ ಕ್ಷೇತ್ರದ ಶಾಸಕಿ ವೀಣಾ ಜಾರ್ಜ್ ಅವರನ್ನು ಆರೋಗ್ಯ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಉಳಿದಂತೆ ಸಚಿವರ ಪಟ್ಟಿ ಕೆಳಗಿನಂತಿದೆ.

  1. ಪಿಣರಾಯಿ ವಿಜಯನ್ – ಸಾರ್ವಜನಿಕ ಆಡಳಿತ, ಗೃಹ, ವಿಜಿಲೆನ್ಸ್‌, ಐಟಿ, ಪರಿಸರ
  2. ಕೆ.ಎನ್. ಬಾಲಗೋಪಾಲ್ – ಹಣಕಾಸು
  3. ವೀಣಾ ಜಾರ್ಜ್ – ಆರೋಗ್ಯ
  4. ವಿ ಶಿವಂಕುಟ್ಟಿ – ಶಿಕ್ಷಣ, ಕಾರ್ಮಿಕ
  5. ಪಿ ರಾಜೀವ್ – ಕೈಗಾರಿಕೆ
  6. ಕೆ ರಾಧಾಕೃಷ್ಣನ್ – ದೇವಸ್ವಂ, ಸಂಸದೀಯ ವ್ಯವಹಾರಗಳು, ಎಸ್‌ಸಿ / ಎಸ್‌ಟಿ ಅಭಿವೃದ್ಧಿ
  7. ಆರ್ ಬಿಂದು – ಉನ್ನತ ಶಿಕ್ಷಣ
  8. ಆಂಟನಿ ರಾಜು – ಸಾರಿಗೆ
  9. ಎಂ.ವಿ.ಗೋವಿಂದನ್ – ಸ್ಥಳೀಯ ಸ್ಥಂಸ್ಥಗಳು, ಅಬಕಾರಿ
  10. ಪಿಎ ಮೊಹಮ್ಮದ್ ರಿಯಾಸ್ – ಪಿಡಬ್ಲ್ಯೂಡಿ, ಪ್ರವಾಸೋದ್ಯಮ
  11. ವಿ.ಎನ್.ವಾಸವನ್ – ಸಹಕಾರ, ನೋಂದಣಿ
  12. ಕೆ. ಕೃಷ್ಣನ್‌ಕುಟ್ಟಿ – ವಿದ್ಯುತ್
  13. ಅಹಮದ್ ದೇವರ್‌‌ಕೋವಿಲ್ – ಬಂದರು
  14. ಸಾಜಿ ಚೆರಿಯನ್ – ಮೀನುಗಾರಿಕೆ, ಸಂಸ್ಕೃತಿ
  15. ವಿ. ಅಬ್ದುರಹಿಮನ್ – ಅಲ್ಪಸಂಖ್ಯಾತ ವ್ಯವಹಾರಗಳು ಮತ್ತು ಎನ್‌ಆರ್‌ಐ
  16. ಜೆ. ಚಿಂಚು ರಾಣಿ – ಪಶುಸಂಗೋಪನೆ, ಡೈರಿ
  17. ಎ.ಕೆ. ಸಸೀಂದ್ರನ್- ಅರಣ್ಯ
  18. ಪಿ. ಪ್ರಸಾದ್- ಕೃಷಿ
  19. ರೋಶಿ ಅಗಸ್ಟೀನ್ – ಜಲ ಸಂಪನ್ಮೂಲಗಳು
  20. ಕೆ. ರಾಜನ್ – ಕಂದಾಯ
  21. ಜಿ. ಆರ್. ಅನಿಲ್- ನಾಗರಿಕ ಸರಬರಾಜು

ಇದನ್ನೂಓದಿ: ಕೇರಳದ ‘ಆರೋಗ್ಯ’ ಮತ್ತೆ ಮಹಿಳೆಯ ಕೈಗೇ!: ಟೀಚರ್ ಜಾಗಕ್ಕೆ ಬಂದರು ಪತ್ರಕರ್ತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...