Homeಮುಖಪುಟಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

ಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

- Advertisement -
- Advertisement -

ಈ ವರ್ಷ ಕೇರಳದಲ್ಲಿ ರಾಜ್ಯ ಟೆಲಿವಿಷನ್ ಪ್ರಶಸ್ತಿಗೆ ಯಾವುದೇ ಟಿವಿ ಸೀರಿಯಲ್ ಯೋಗ್ಯವಾಗಿಲ್ಲ ಎಂದು ಹೇಳಲಾಗಿದೆ. “ಕಲಾತ್ಮಕ ಮತ್ತು ತಾಂತ್ರಿಕ ಅರ್ಹತೆಯಿರುವ ಯಾವುದೇ ಧಾರವಾಹಿ ತೀರ್ಪುಗಾರರಿಗೆ ಕಂಡು ಬರದ ಕಾರಣ, ಈ ವಿಭಾಗದಲ್ಲಿ ಪ್ರಶಸ್ತಿಯನ್ನು ನೀಡದಿರಲು ನಿರ್ಧರಿಸಲಾಗಿದೆ” ಎಂದು ತೀರ್ಪುಗಾರರು ತಿಳಿಸಿದ್ದಾರೆ.

ಧಾರಾವಾಹಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ನೆಗೆಟಿವ್ ಆಗಿ ಚಿತ್ರಿಸುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕಾಗಿ, ‘ಎರಡನೇ ಅತ್ಯುತ್ತಮ ಟೆಲಿ ಸೀರಿಯಲ್’ ಪ್ರಶಸ್ತಿಯೂ ಈ ಬಾರಿ ಇಲ್ಲ. ಜೊತೆಗೆ ಅತ್ಯುತ್ತಮ ನಿರ್ದೇಶಕರ (ಟೆಲಿ ಸೀರಿಯಲ್ / ಟೆಲಿ ಫಿಲ್ಮ್) ಪ್ರಶಸ್ತಿಯನ್ನು ನೀಡದಿರಲು ತೀರ್ಪುಗಾರರು ನಿರ್ಧರಿಸಿದ್ದಾರೆ.

“ಯಾವುದೇ ಅದ್ಭುತ ಅಥವಾ ಜವಾಬ್ದಾರಿಯುತ ನಿರ್ದೇಶಕರು ಕಂಡುಬಂದಿಲ್ಲ” ಎಂದಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳು ಮತ್ತು ಹಾಸ್ಯ ಕಾರ್ಯಕ್ರಮಗಳನ್ನು ಕುಟುಂಬ ಸಮೇತರಾಗಿ ಜನ ವೀಕ್ಷಿಸುತ್ತಿರುವುದರಿಂದ, ಅವುಗಳ ವಿಷಯದಲ್ಲಿ ಹೆಚ್ಚು ಜವಾಬ್ದಾರಿಯುತವಾಗಿರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಮಲಯಾಳಂ ದೂರದರ್ಶನ ಧಾರಾವಾಹಿಗಳು ತಮ್ಮ ಕುಟುಂಬ ನಾಟಕಗಳ ಚಿತ್ರಣ, ಮನೆಗಳಲ್ಲಿ ಮಹಿಳೆಯರ ತ್ಯಾಗವನ್ನು ವೈಭವೀಕರಿಸುವ ಕಥೆಗಳು, ಕೌಟುಂಬಿಕ ದೌರ್ಜನ್ಯ ಮತ್ತು ಒಂದೇ ಮನೆಯಲ್ಲಿ ವಾಸಿಸುವ ಮಹಿಳೆಯರ ನಡುವಿನ ದ್ವೇಷದಂತಹ ವಿಷಯಗಳ ಕುರಿತು ಸಾಕಷ್ಟು ಟೀಕೆಗೆ ಒಳಗಾಗಿವೆ.

ಮೇ ಕೊನೆಯಲ್ಲಿ, ಹೊಸ ಸರ್ಕಾರವು ಅಧಿಕಾರ ವಹಿಸಿಕೊಂಡ ನಂತರ ಮತ್ತು ಸಜಿ ಚೆರಿಯನ್ ಸಂಸ್ಕೃತಿ ಸಚಿವರಾಗಿ ನೇಮಕಗೊಂಡ ನಂತರ, ಅವರು ದೂರದರ್ಶನ ಧಾರಾವಾಹಿಗಳ ಬಗ್ಗೆ ಕೆಲವು ಕಟುವಾದ ಟೀಕೆಗಳನ್ನು ಮಾಡಿದ್ದಾರೆ.

ಟಿವಿ ಕಾರ್ಯಕ್ರಮವೊಂದರ ಪ್ರಶ್ನೆಗೆ ಉತ್ತರಿಸಿದ ಸಚಿವ ಸಜಿ, ಸರ್ಕಾರವು “ಅವೈಜ್ಞಾನಿಕ ಮತ್ತು ಮೂಢನಂಬಿಕೆಯ ವಿಷಯವನ್ನು ಪ್ರಸಾರ ಮಾಡುವುದರಿಂದ” ಟೆಲಿವಿಷನ್ ಸೀರಿಯಲ್‌ಗಳ ಸೆನ್ಸಾರ್‌ಶಿಪ್ ಮತ್ತು ಸೆನ್ಸಾರ್ ಬೋರ್ಡ್ ರಚನೆ ಬಗ್ಗೆ ಯೋಚನೆ ಮಾಡುತ್ತಿದೆ ಎಂದು ಹೇಳಿದ್ದರು.

ಇದು ಕೇವಲ ಮಲಯಾಳಂ ಧಾರಾವಾಹಿಗಳ ಕಥೆಯಲ್ಲ ಹೆಚ್ಚಿನ ಭಾಷೆಗಳಲ್ಲಿ ಧಾರಾವಾಹಿಗಳು ಇಂತಹ ಕಥೆಯನ್ನೆ ಹೊಂದಿವೆ. ಮಹಿಳೆಯರು, ಅವರ ಸಂಬಂಧಗಳು, ಮಹಿಳೆಯರ ತ್ಯಾಗವನ್ನು ವೈಭವೀಕರಿಸುವುದು, ಅತ್ತೆ ಸೋಸೆ ಜಗಳ, ಅಕ್ಕ-ತಂಗಿ ಜಗಳ, ಒಬ್ಬ ಗಂಡಸಿಗಾಗಿ ಹೊಡೆದಾಡುವ ಮಹಿಳೆಯರು…..ಇಂತಹ ಕಥೆಗಳೇ ಧಾರವಾಹಿಗಳಾಗುತ್ತಿವೆ. ಧಾರವಾಹಿಗಳು ಬದಲಾಗಬೇಕಾದ ಅನಿರ್ವಾಯತೆ ಸೃಷ್ಠಿಯಾಗುವ ನಿಟ್ಟಿನಲ್ಲಿ ಕೇರಳ ಸರ್ಕಾರ ಮತ್ತು ತೀರ್ಪುಗಾರರ ಈ ನಿರ್ಧಾರವನ್ನು ಸ್ವಾಗತಿಸಬೇಕಾಗಿದೆ.


ಇದನ್ನೂ ಓದಿ: ‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...