Homeಮುಖಪುಟಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

ಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

- Advertisement -
- Advertisement -

ಈ ವರ್ಷ ಕೇರಳದಲ್ಲಿ ರಾಜ್ಯ ಟೆಲಿವಿಷನ್ ಪ್ರಶಸ್ತಿಗೆ ಯಾವುದೇ ಟಿವಿ ಸೀರಿಯಲ್ ಯೋಗ್ಯವಾಗಿಲ್ಲ ಎಂದು ಹೇಳಲಾಗಿದೆ. “ಕಲಾತ್ಮಕ ಮತ್ತು ತಾಂತ್ರಿಕ ಅರ್ಹತೆಯಿರುವ ಯಾವುದೇ ಧಾರವಾಹಿ ತೀರ್ಪುಗಾರರಿಗೆ ಕಂಡು ಬರದ ಕಾರಣ, ಈ ವಿಭಾಗದಲ್ಲಿ ಪ್ರಶಸ್ತಿಯನ್ನು ನೀಡದಿರಲು ನಿರ್ಧರಿಸಲಾಗಿದೆ” ಎಂದು ತೀರ್ಪುಗಾರರು ತಿಳಿಸಿದ್ದಾರೆ.

ಧಾರಾವಾಹಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ನೆಗೆಟಿವ್ ಆಗಿ ಚಿತ್ರಿಸುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕಾಗಿ, ‘ಎರಡನೇ ಅತ್ಯುತ್ತಮ ಟೆಲಿ ಸೀರಿಯಲ್’ ಪ್ರಶಸ್ತಿಯೂ ಈ ಬಾರಿ ಇಲ್ಲ. ಜೊತೆಗೆ ಅತ್ಯುತ್ತಮ ನಿರ್ದೇಶಕರ (ಟೆಲಿ ಸೀರಿಯಲ್ / ಟೆಲಿ ಫಿಲ್ಮ್) ಪ್ರಶಸ್ತಿಯನ್ನು ನೀಡದಿರಲು ತೀರ್ಪುಗಾರರು ನಿರ್ಧರಿಸಿದ್ದಾರೆ.

“ಯಾವುದೇ ಅದ್ಭುತ ಅಥವಾ ಜವಾಬ್ದಾರಿಯುತ ನಿರ್ದೇಶಕರು ಕಂಡುಬಂದಿಲ್ಲ” ಎಂದಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳು ಮತ್ತು ಹಾಸ್ಯ ಕಾರ್ಯಕ್ರಮಗಳನ್ನು ಕುಟುಂಬ ಸಮೇತರಾಗಿ ಜನ ವೀಕ್ಷಿಸುತ್ತಿರುವುದರಿಂದ, ಅವುಗಳ ವಿಷಯದಲ್ಲಿ ಹೆಚ್ಚು ಜವಾಬ್ದಾರಿಯುತವಾಗಿರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಮಲಯಾಳಂ ದೂರದರ್ಶನ ಧಾರಾವಾಹಿಗಳು ತಮ್ಮ ಕುಟುಂಬ ನಾಟಕಗಳ ಚಿತ್ರಣ, ಮನೆಗಳಲ್ಲಿ ಮಹಿಳೆಯರ ತ್ಯಾಗವನ್ನು ವೈಭವೀಕರಿಸುವ ಕಥೆಗಳು, ಕೌಟುಂಬಿಕ ದೌರ್ಜನ್ಯ ಮತ್ತು ಒಂದೇ ಮನೆಯಲ್ಲಿ ವಾಸಿಸುವ ಮಹಿಳೆಯರ ನಡುವಿನ ದ್ವೇಷದಂತಹ ವಿಷಯಗಳ ಕುರಿತು ಸಾಕಷ್ಟು ಟೀಕೆಗೆ ಒಳಗಾಗಿವೆ.

ಮೇ ಕೊನೆಯಲ್ಲಿ, ಹೊಸ ಸರ್ಕಾರವು ಅಧಿಕಾರ ವಹಿಸಿಕೊಂಡ ನಂತರ ಮತ್ತು ಸಜಿ ಚೆರಿಯನ್ ಸಂಸ್ಕೃತಿ ಸಚಿವರಾಗಿ ನೇಮಕಗೊಂಡ ನಂತರ, ಅವರು ದೂರದರ್ಶನ ಧಾರಾವಾಹಿಗಳ ಬಗ್ಗೆ ಕೆಲವು ಕಟುವಾದ ಟೀಕೆಗಳನ್ನು ಮಾಡಿದ್ದಾರೆ.

ಟಿವಿ ಕಾರ್ಯಕ್ರಮವೊಂದರ ಪ್ರಶ್ನೆಗೆ ಉತ್ತರಿಸಿದ ಸಚಿವ ಸಜಿ, ಸರ್ಕಾರವು “ಅವೈಜ್ಞಾನಿಕ ಮತ್ತು ಮೂಢನಂಬಿಕೆಯ ವಿಷಯವನ್ನು ಪ್ರಸಾರ ಮಾಡುವುದರಿಂದ” ಟೆಲಿವಿಷನ್ ಸೀರಿಯಲ್‌ಗಳ ಸೆನ್ಸಾರ್‌ಶಿಪ್ ಮತ್ತು ಸೆನ್ಸಾರ್ ಬೋರ್ಡ್ ರಚನೆ ಬಗ್ಗೆ ಯೋಚನೆ ಮಾಡುತ್ತಿದೆ ಎಂದು ಹೇಳಿದ್ದರು.

ಇದು ಕೇವಲ ಮಲಯಾಳಂ ಧಾರಾವಾಹಿಗಳ ಕಥೆಯಲ್ಲ ಹೆಚ್ಚಿನ ಭಾಷೆಗಳಲ್ಲಿ ಧಾರಾವಾಹಿಗಳು ಇಂತಹ ಕಥೆಯನ್ನೆ ಹೊಂದಿವೆ. ಮಹಿಳೆಯರು, ಅವರ ಸಂಬಂಧಗಳು, ಮಹಿಳೆಯರ ತ್ಯಾಗವನ್ನು ವೈಭವೀಕರಿಸುವುದು, ಅತ್ತೆ ಸೋಸೆ ಜಗಳ, ಅಕ್ಕ-ತಂಗಿ ಜಗಳ, ಒಬ್ಬ ಗಂಡಸಿಗಾಗಿ ಹೊಡೆದಾಡುವ ಮಹಿಳೆಯರು…..ಇಂತಹ ಕಥೆಗಳೇ ಧಾರವಾಹಿಗಳಾಗುತ್ತಿವೆ. ಧಾರವಾಹಿಗಳು ಬದಲಾಗಬೇಕಾದ ಅನಿರ್ವಾಯತೆ ಸೃಷ್ಠಿಯಾಗುವ ನಿಟ್ಟಿನಲ್ಲಿ ಕೇರಳ ಸರ್ಕಾರ ಮತ್ತು ತೀರ್ಪುಗಾರರ ಈ ನಿರ್ಧಾರವನ್ನು ಸ್ವಾಗತಿಸಬೇಕಾಗಿದೆ.


ಇದನ್ನೂ ಓದಿ: ‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...