Homeಮುಖಪುಟಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

ಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

- Advertisement -
- Advertisement -

ಈ ವರ್ಷ ಕೇರಳದಲ್ಲಿ ರಾಜ್ಯ ಟೆಲಿವಿಷನ್ ಪ್ರಶಸ್ತಿಗೆ ಯಾವುದೇ ಟಿವಿ ಸೀರಿಯಲ್ ಯೋಗ್ಯವಾಗಿಲ್ಲ ಎಂದು ಹೇಳಲಾಗಿದೆ. “ಕಲಾತ್ಮಕ ಮತ್ತು ತಾಂತ್ರಿಕ ಅರ್ಹತೆಯಿರುವ ಯಾವುದೇ ಧಾರವಾಹಿ ತೀರ್ಪುಗಾರರಿಗೆ ಕಂಡು ಬರದ ಕಾರಣ, ಈ ವಿಭಾಗದಲ್ಲಿ ಪ್ರಶಸ್ತಿಯನ್ನು ನೀಡದಿರಲು ನಿರ್ಧರಿಸಲಾಗಿದೆ” ಎಂದು ತೀರ್ಪುಗಾರರು ತಿಳಿಸಿದ್ದಾರೆ.

ಧಾರಾವಾಹಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ನೆಗೆಟಿವ್ ಆಗಿ ಚಿತ್ರಿಸುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕಾಗಿ, ‘ಎರಡನೇ ಅತ್ಯುತ್ತಮ ಟೆಲಿ ಸೀರಿಯಲ್’ ಪ್ರಶಸ್ತಿಯೂ ಈ ಬಾರಿ ಇಲ್ಲ. ಜೊತೆಗೆ ಅತ್ಯುತ್ತಮ ನಿರ್ದೇಶಕರ (ಟೆಲಿ ಸೀರಿಯಲ್ / ಟೆಲಿ ಫಿಲ್ಮ್) ಪ್ರಶಸ್ತಿಯನ್ನು ನೀಡದಿರಲು ತೀರ್ಪುಗಾರರು ನಿರ್ಧರಿಸಿದ್ದಾರೆ.

“ಯಾವುದೇ ಅದ್ಭುತ ಅಥವಾ ಜವಾಬ್ದಾರಿಯುತ ನಿರ್ದೇಶಕರು ಕಂಡುಬಂದಿಲ್ಲ” ಎಂದಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳು ಮತ್ತು ಹಾಸ್ಯ ಕಾರ್ಯಕ್ರಮಗಳನ್ನು ಕುಟುಂಬ ಸಮೇತರಾಗಿ ಜನ ವೀಕ್ಷಿಸುತ್ತಿರುವುದರಿಂದ, ಅವುಗಳ ವಿಷಯದಲ್ಲಿ ಹೆಚ್ಚು ಜವಾಬ್ದಾರಿಯುತವಾಗಿರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಮಲಯಾಳಂ ದೂರದರ್ಶನ ಧಾರಾವಾಹಿಗಳು ತಮ್ಮ ಕುಟುಂಬ ನಾಟಕಗಳ ಚಿತ್ರಣ, ಮನೆಗಳಲ್ಲಿ ಮಹಿಳೆಯರ ತ್ಯಾಗವನ್ನು ವೈಭವೀಕರಿಸುವ ಕಥೆಗಳು, ಕೌಟುಂಬಿಕ ದೌರ್ಜನ್ಯ ಮತ್ತು ಒಂದೇ ಮನೆಯಲ್ಲಿ ವಾಸಿಸುವ ಮಹಿಳೆಯರ ನಡುವಿನ ದ್ವೇಷದಂತಹ ವಿಷಯಗಳ ಕುರಿತು ಸಾಕಷ್ಟು ಟೀಕೆಗೆ ಒಳಗಾಗಿವೆ.

ಮೇ ಕೊನೆಯಲ್ಲಿ, ಹೊಸ ಸರ್ಕಾರವು ಅಧಿಕಾರ ವಹಿಸಿಕೊಂಡ ನಂತರ ಮತ್ತು ಸಜಿ ಚೆರಿಯನ್ ಸಂಸ್ಕೃತಿ ಸಚಿವರಾಗಿ ನೇಮಕಗೊಂಡ ನಂತರ, ಅವರು ದೂರದರ್ಶನ ಧಾರಾವಾಹಿಗಳ ಬಗ್ಗೆ ಕೆಲವು ಕಟುವಾದ ಟೀಕೆಗಳನ್ನು ಮಾಡಿದ್ದಾರೆ.

ಟಿವಿ ಕಾರ್ಯಕ್ರಮವೊಂದರ ಪ್ರಶ್ನೆಗೆ ಉತ್ತರಿಸಿದ ಸಚಿವ ಸಜಿ, ಸರ್ಕಾರವು “ಅವೈಜ್ಞಾನಿಕ ಮತ್ತು ಮೂಢನಂಬಿಕೆಯ ವಿಷಯವನ್ನು ಪ್ರಸಾರ ಮಾಡುವುದರಿಂದ” ಟೆಲಿವಿಷನ್ ಸೀರಿಯಲ್‌ಗಳ ಸೆನ್ಸಾರ್‌ಶಿಪ್ ಮತ್ತು ಸೆನ್ಸಾರ್ ಬೋರ್ಡ್ ರಚನೆ ಬಗ್ಗೆ ಯೋಚನೆ ಮಾಡುತ್ತಿದೆ ಎಂದು ಹೇಳಿದ್ದರು.

ಇದು ಕೇವಲ ಮಲಯಾಳಂ ಧಾರಾವಾಹಿಗಳ ಕಥೆಯಲ್ಲ ಹೆಚ್ಚಿನ ಭಾಷೆಗಳಲ್ಲಿ ಧಾರಾವಾಹಿಗಳು ಇಂತಹ ಕಥೆಯನ್ನೆ ಹೊಂದಿವೆ. ಮಹಿಳೆಯರು, ಅವರ ಸಂಬಂಧಗಳು, ಮಹಿಳೆಯರ ತ್ಯಾಗವನ್ನು ವೈಭವೀಕರಿಸುವುದು, ಅತ್ತೆ ಸೋಸೆ ಜಗಳ, ಅಕ್ಕ-ತಂಗಿ ಜಗಳ, ಒಬ್ಬ ಗಂಡಸಿಗಾಗಿ ಹೊಡೆದಾಡುವ ಮಹಿಳೆಯರು…..ಇಂತಹ ಕಥೆಗಳೇ ಧಾರವಾಹಿಗಳಾಗುತ್ತಿವೆ. ಧಾರವಾಹಿಗಳು ಬದಲಾಗಬೇಕಾದ ಅನಿರ್ವಾಯತೆ ಸೃಷ್ಠಿಯಾಗುವ ನಿಟ್ಟಿನಲ್ಲಿ ಕೇರಳ ಸರ್ಕಾರ ಮತ್ತು ತೀರ್ಪುಗಾರರ ಈ ನಿರ್ಧಾರವನ್ನು ಸ್ವಾಗತಿಸಬೇಕಾಗಿದೆ.


ಇದನ್ನೂ ಓದಿ: ‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...