Homeಮುಖಪುಟಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

ಕೇರಳ ರಾಜ್ಯ ಪ್ರಶಸ್ತಿ ಪಡೆಯಲು ಒಂದು ಧಾರಾವಾಹಿಯೂ ಯೋಗ್ಯವಾಗಿಲ್ಲ ಎಂದ ತೀರ್ಪುಗಾರರು!

- Advertisement -
- Advertisement -

ಈ ವರ್ಷ ಕೇರಳದಲ್ಲಿ ರಾಜ್ಯ ಟೆಲಿವಿಷನ್ ಪ್ರಶಸ್ತಿಗೆ ಯಾವುದೇ ಟಿವಿ ಸೀರಿಯಲ್ ಯೋಗ್ಯವಾಗಿಲ್ಲ ಎಂದು ಹೇಳಲಾಗಿದೆ. “ಕಲಾತ್ಮಕ ಮತ್ತು ತಾಂತ್ರಿಕ ಅರ್ಹತೆಯಿರುವ ಯಾವುದೇ ಧಾರವಾಹಿ ತೀರ್ಪುಗಾರರಿಗೆ ಕಂಡು ಬರದ ಕಾರಣ, ಈ ವಿಭಾಗದಲ್ಲಿ ಪ್ರಶಸ್ತಿಯನ್ನು ನೀಡದಿರಲು ನಿರ್ಧರಿಸಲಾಗಿದೆ” ಎಂದು ತೀರ್ಪುಗಾರರು ತಿಳಿಸಿದ್ದಾರೆ.

ಧಾರಾವಾಹಿಗಳಲ್ಲಿ ಮಹಿಳೆಯರು ಮತ್ತು ಮಕ್ಕಳನ್ನು ನೆಗೆಟಿವ್ ಆಗಿ ಚಿತ್ರಿಸುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದೇ ಕಾರಣಕ್ಕಾಗಿ, ‘ಎರಡನೇ ಅತ್ಯುತ್ತಮ ಟೆಲಿ ಸೀರಿಯಲ್’ ಪ್ರಶಸ್ತಿಯೂ ಈ ಬಾರಿ ಇಲ್ಲ. ಜೊತೆಗೆ ಅತ್ಯುತ್ತಮ ನಿರ್ದೇಶಕರ (ಟೆಲಿ ಸೀರಿಯಲ್ / ಟೆಲಿ ಫಿಲ್ಮ್) ಪ್ರಶಸ್ತಿಯನ್ನು ನೀಡದಿರಲು ತೀರ್ಪುಗಾರರು ನಿರ್ಧರಿಸಿದ್ದಾರೆ.

“ಯಾವುದೇ ಅದ್ಭುತ ಅಥವಾ ಜವಾಬ್ದಾರಿಯುತ ನಿರ್ದೇಶಕರು ಕಂಡುಬಂದಿಲ್ಲ” ಎಂದಿದ್ದಾರೆ. ಟಿವಿಯಲ್ಲಿ ಪ್ರಸಾರವಾಗುವ ಧಾರಾವಾಹಿಗಳು ಮತ್ತು ಹಾಸ್ಯ ಕಾರ್ಯಕ್ರಮಗಳನ್ನು ಕುಟುಂಬ ಸಮೇತರಾಗಿ ಜನ ವೀಕ್ಷಿಸುತ್ತಿರುವುದರಿಂದ, ಅವುಗಳ ವಿಷಯದಲ್ಲಿ ಹೆಚ್ಚು ಜವಾಬ್ದಾರಿಯುತವಾಗಿರಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

ಮಲಯಾಳಂ ದೂರದರ್ಶನ ಧಾರಾವಾಹಿಗಳು ತಮ್ಮ ಕುಟುಂಬ ನಾಟಕಗಳ ಚಿತ್ರಣ, ಮನೆಗಳಲ್ಲಿ ಮಹಿಳೆಯರ ತ್ಯಾಗವನ್ನು ವೈಭವೀಕರಿಸುವ ಕಥೆಗಳು, ಕೌಟುಂಬಿಕ ದೌರ್ಜನ್ಯ ಮತ್ತು ಒಂದೇ ಮನೆಯಲ್ಲಿ ವಾಸಿಸುವ ಮಹಿಳೆಯರ ನಡುವಿನ ದ್ವೇಷದಂತಹ ವಿಷಯಗಳ ಕುರಿತು ಸಾಕಷ್ಟು ಟೀಕೆಗೆ ಒಳಗಾಗಿವೆ.

ಮೇ ಕೊನೆಯಲ್ಲಿ, ಹೊಸ ಸರ್ಕಾರವು ಅಧಿಕಾರ ವಹಿಸಿಕೊಂಡ ನಂತರ ಮತ್ತು ಸಜಿ ಚೆರಿಯನ್ ಸಂಸ್ಕೃತಿ ಸಚಿವರಾಗಿ ನೇಮಕಗೊಂಡ ನಂತರ, ಅವರು ದೂರದರ್ಶನ ಧಾರಾವಾಹಿಗಳ ಬಗ್ಗೆ ಕೆಲವು ಕಟುವಾದ ಟೀಕೆಗಳನ್ನು ಮಾಡಿದ್ದಾರೆ.

ಟಿವಿ ಕಾರ್ಯಕ್ರಮವೊಂದರ ಪ್ರಶ್ನೆಗೆ ಉತ್ತರಿಸಿದ ಸಚಿವ ಸಜಿ, ಸರ್ಕಾರವು “ಅವೈಜ್ಞಾನಿಕ ಮತ್ತು ಮೂಢನಂಬಿಕೆಯ ವಿಷಯವನ್ನು ಪ್ರಸಾರ ಮಾಡುವುದರಿಂದ” ಟೆಲಿವಿಷನ್ ಸೀರಿಯಲ್‌ಗಳ ಸೆನ್ಸಾರ್‌ಶಿಪ್ ಮತ್ತು ಸೆನ್ಸಾರ್ ಬೋರ್ಡ್ ರಚನೆ ಬಗ್ಗೆ ಯೋಚನೆ ಮಾಡುತ್ತಿದೆ ಎಂದು ಹೇಳಿದ್ದರು.

ಇದು ಕೇವಲ ಮಲಯಾಳಂ ಧಾರಾವಾಹಿಗಳ ಕಥೆಯಲ್ಲ ಹೆಚ್ಚಿನ ಭಾಷೆಗಳಲ್ಲಿ ಧಾರಾವಾಹಿಗಳು ಇಂತಹ ಕಥೆಯನ್ನೆ ಹೊಂದಿವೆ. ಮಹಿಳೆಯರು, ಅವರ ಸಂಬಂಧಗಳು, ಮಹಿಳೆಯರ ತ್ಯಾಗವನ್ನು ವೈಭವೀಕರಿಸುವುದು, ಅತ್ತೆ ಸೋಸೆ ಜಗಳ, ಅಕ್ಕ-ತಂಗಿ ಜಗಳ, ಒಬ್ಬ ಗಂಡಸಿಗಾಗಿ ಹೊಡೆದಾಡುವ ಮಹಿಳೆಯರು…..ಇಂತಹ ಕಥೆಗಳೇ ಧಾರವಾಹಿಗಳಾಗುತ್ತಿವೆ. ಧಾರವಾಹಿಗಳು ಬದಲಾಗಬೇಕಾದ ಅನಿರ್ವಾಯತೆ ಸೃಷ್ಠಿಯಾಗುವ ನಿಟ್ಟಿನಲ್ಲಿ ಕೇರಳ ಸರ್ಕಾರ ಮತ್ತು ತೀರ್ಪುಗಾರರ ಈ ನಿರ್ಧಾರವನ್ನು ಸ್ವಾಗತಿಸಬೇಕಾಗಿದೆ.


ಇದನ್ನೂ ಓದಿ: ‘ಮನಿ ಹೀಸ್ಟ್‌-5’ ವೀಕ್ಷಿಸಲು ರಜೆ ಘೋಷಿಸಿದ ಕಂಪೆನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...