Homeಮುಖಪುಟಕೇರಳ: ರಾಜ್ಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

ಕೇರಳ: ರಾಜ್ಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

ಹೆಣ್ಣುಮಕ್ಕಳು ತಮ್ಮ ಋತುಚಕ್ರದ ಕಷ್ಟದ ದಿನಗಳಲ್ಲಿ ವಿಶ್ರಾಂತಿ ಪಡೆಯಲಿ ಎಂದು ಉನ್ನತ ಶಿಕ್ಷಣ ಸಚಿವೆ ಆರ್‌. ಬಿಂದು ಹೇಳಿದ್ದಾರೆ

- Advertisement -
- Advertisement -

ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆಯನ್ನು ನೀಡುವ ಮಹತ್ವದ ನಿರ್ಧಾರವನ್ನು ಕೇರಳ ಸರ್ಕಾರ ಸೋಮವಾರ ಪ್ರಕಟಿಸಿದೆ. ಇಂತಹ ನಿರ್ಧಾರವನ್ನು ಪ್ರಕಟಿಸಿದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ.

ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯ(CUSAT)ವು ತನ್ನ ವಿದ್ಯಾರ್ಥಿಗಳಿಗೆ ಮುಟ್ಟಿನ ರಜೆಯನ್ನು ಒದಗಿಸುವ ನಿರ್ಧಾರವನ್ನು ತೆಗೆದುಕೊಂಡ ಬೆನ್ನಿಗೆ, ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು, ‘‘ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಕೂಡಾ ಇದೇ ಮಾದರಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಋತುಸ್ರಾವದ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಪರಿಗಣಿಸಿ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಋತುಚಕ್ರದ ರಜೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕೊಚ್ಚಿನ್ ವಿಶ್ವವಿದ್ಯಾನಿಲಯ ಇತ್ತೀಚೆಗೆ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಅವರು, ಕೇರಳದಲ್ಲಿ ಮೊದಲ ಬಾರಿಗೆ ಶಿಕ್ಷಣ ಕೇಂದ್ರವೊಂದು ವಿದ್ಯಾರ್ಥಿಗಳಿಗೆ ಋತುಚಕ್ರದ ರಜೆ ನೀಡಿದೆ ಎಂದು ಹೇಳಿದ್ದಾರೆ.

ಎಸ್‌ಎಫ್‌ಐ ನೇತೃತ್ವದ ವಿದ್ಯಾರ್ಥಿಗಳ ಒಕ್ಕೂಟ ಸಲ್ಲಿಸಿದ್ದ ಪ್ರಾತಿನಿದ್ಯವನ್ನು ಪರಿಗಣಿಸಿದ ವಿಶ್ವವಿದ್ಯಾನಿಲಯ ಈ ನಿರ್ಧಾರವನ್ನು ತೆಗೆದುಕೊಂಡಿತ್ತು. ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ, ಜನವರಿ 11 ರಂದು ಯುನಿವರ್ಸಿಟಿಯು ಪ್ರತಿ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿನಿಯರಿಗೆ ಹಾಜರಾತಿ ಕೊರತೆಯ ಹೆಚ್ಚುವರಿ ಶೇಕಡಾ ಎರಡರಷ್ಟು ರಿಯಾಯಿತಿಯನ್ನು ಮಂಜೂರು ಮಾಡಿತ್ತು.

ಇಂತಹ ಉಪಕ್ರಮವನ್ನು ಕೈಗೊಂಡಿದ್ದಕ್ಕಾಗಿ ವಿದ್ಯಾರ್ಥಿ ಸಂಘವನ್ನು ಶ್ಲಾಘಿಸಿದ ಸಚಿವೆ, “ಮುಟ್ಟಿನ ರಜೆಯ ಮಾದರಿಯನ್ನು ರಾಜ್ಯದಾದ್ಯಂತ ವಿಶ್ವವಿದ್ಯಾಲಯಗಳಲ್ಲಿ ಜಾರಿಗೆ ತರಲಾಗುವುದು” ಎಂದು ಹೇಳಿದ್ದಾರೆ.

ಮುಟ್ಟಿನ ಅವಧಿಗಳು ಅನೇಕರಿಗೆ ಭಾವನಾತ್ಮವಾಗಿ ‘ರೋಲರ್ ಕೋಸ್ಟರ್’ ದಿನಗಳಾಗಿವೆ ಎಂದು ಬಿಂದು ಹೇಳಿದ್ದು, “ಹೆಣ್ಣುಮಕ್ಕಳು ತಮ್ಮ ಋತುಚಕ್ರದ ಕಷ್ಟದ ದಿನಗಳಲ್ಲಿ ವಿಶ್ರಾಂತಿ ಪಡೆಯಲಿ’’ ಎಂದು ಅವರು ತಿಳಿಸಿದ್ದಾರೆ.

ಸ್ವಾಯತ್ತ ವಿಶ್ವವಿದ್ಯಾನಿಲಯ ಮತ್ತು CUSAT ಗಳಲ್ಲಿ ಸುಮಾರು 8,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದು, ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಹುಡುಗಿಯರಾಗಿದ್ದಾರೆ.

“ವಿದ್ಯಾರ್ಥಿನಿಯರಿಗೆ ಋತುಸ್ರಾವದ ಪ್ರಯೋಜನಗಳ ಕೋರಿಕೆಗಳನ್ನು ಪರಿಗಣಿಸಿದ ಉಪಕುಲಪತಿಗಳು, ಪ್ರತಿ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿನಿಯರಿಗೆ ಹಾಜರಾತಿ ಕೊರತೆಯ ಕ್ಷಮಾದಾನದ ಹೆಚ್ಚುವರಿ ಶೇಕಡಾ 2 ರಷ್ಟು ಮಂಜೂರು ಮಾಡಲು ಆದೇಶಿಸಿದ್ದಾರೆ” ಎಂದು ಕುಸಾಟ್‌ನ ರಿಜಿಸ್ಟ್ರಾರ್‌ ಆದೇಶ ಹೊರಡಿಸಿದ್ದರು.

ಈ ಆದೇಶವು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವವರು ಸೇರಿದಂತೆ ಎಲ್ಲಾ ವಿದ್ಯಾರ್ಥಿನಿಯರಿಗೆ ಅನ್ವಯಿಸುತ್ತದೆ ಮತ್ತು ತಕ್ಷಣದಿಂದಲೇ ಜಾರಿಗೆ ಬರುವ ನಿರೀಕ್ಷೆಯಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ: ಮಾರ್ಚ್‌ನಲ್ಲಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...