Homeಮುಖಪುಟಕೇರಳ: ರಾಜ್ಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

ಕೇರಳ: ರಾಜ್ಯ ವಿಶ್ವವಿದ್ಯಾಲಯಗಳ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

ಹೆಣ್ಣುಮಕ್ಕಳು ತಮ್ಮ ಋತುಚಕ್ರದ ಕಷ್ಟದ ದಿನಗಳಲ್ಲಿ ವಿಶ್ರಾಂತಿ ಪಡೆಯಲಿ ಎಂದು ಉನ್ನತ ಶಿಕ್ಷಣ ಸಚಿವೆ ಆರ್‌. ಬಿಂದು ಹೇಳಿದ್ದಾರೆ

- Advertisement -
- Advertisement -

ಉನ್ನತ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆಯನ್ನು ನೀಡುವ ಮಹತ್ವದ ನಿರ್ಧಾರವನ್ನು ಕೇರಳ ಸರ್ಕಾರ ಸೋಮವಾರ ಪ್ರಕಟಿಸಿದೆ. ಇಂತಹ ನಿರ್ಧಾರವನ್ನು ಪ್ರಕಟಿಸಿದ ಮೊದಲ ರಾಜ್ಯವಾಗಿ ಕೇರಳ ಹೊರಹೊಮ್ಮಿದೆ.

ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯ(CUSAT)ವು ತನ್ನ ವಿದ್ಯಾರ್ಥಿಗಳಿಗೆ ಮುಟ್ಟಿನ ರಜೆಯನ್ನು ಒದಗಿಸುವ ನಿರ್ಧಾರವನ್ನು ತೆಗೆದುಕೊಂಡ ಬೆನ್ನಿಗೆ, ಕೇರಳದ ಉನ್ನತ ಶಿಕ್ಷಣ ಸಚಿವೆ ಆರ್. ಬಿಂದು ಅವರು, ‘‘ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ರಾಜ್ಯ ವಿಶ್ವವಿದ್ಯಾಲಯಗಳಲ್ಲಿ ಕೂಡಾ ಇದೇ ಮಾದರಿಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಋತುಸ್ರಾವದ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಪರಿಗಣಿಸಿ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಋತುಚಕ್ರದ ರಜೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಫೇಸ್‌ಬುಕ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕೊಚ್ಚಿನ್ ವಿಶ್ವವಿದ್ಯಾನಿಲಯ ಇತ್ತೀಚೆಗೆ ತೆಗೆದುಕೊಂಡ ನಿರ್ಧಾರವನ್ನು ಶ್ಲಾಘಿಸಿದ ಅವರು, ಕೇರಳದಲ್ಲಿ ಮೊದಲ ಬಾರಿಗೆ ಶಿಕ್ಷಣ ಕೇಂದ್ರವೊಂದು ವಿದ್ಯಾರ್ಥಿಗಳಿಗೆ ಋತುಚಕ್ರದ ರಜೆ ನೀಡಿದೆ ಎಂದು ಹೇಳಿದ್ದಾರೆ.

ಎಸ್‌ಎಫ್‌ಐ ನೇತೃತ್ವದ ವಿದ್ಯಾರ್ಥಿಗಳ ಒಕ್ಕೂಟ ಸಲ್ಲಿಸಿದ್ದ ಪ್ರಾತಿನಿದ್ಯವನ್ನು ಪರಿಗಣಿಸಿದ ವಿಶ್ವವಿದ್ಯಾನಿಲಯ ಈ ನಿರ್ಧಾರವನ್ನು ತೆಗೆದುಕೊಂಡಿತ್ತು. ವಿದ್ಯಾರ್ಥಿಗಳ ಬಹುಕಾಲದ ಬೇಡಿಕೆಯನ್ನು ಪರಿಗಣಿಸಿ, ಜನವರಿ 11 ರಂದು ಯುನಿವರ್ಸಿಟಿಯು ಪ್ರತಿ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿನಿಯರಿಗೆ ಹಾಜರಾತಿ ಕೊರತೆಯ ಹೆಚ್ಚುವರಿ ಶೇಕಡಾ ಎರಡರಷ್ಟು ರಿಯಾಯಿತಿಯನ್ನು ಮಂಜೂರು ಮಾಡಿತ್ತು.

ಇಂತಹ ಉಪಕ್ರಮವನ್ನು ಕೈಗೊಂಡಿದ್ದಕ್ಕಾಗಿ ವಿದ್ಯಾರ್ಥಿ ಸಂಘವನ್ನು ಶ್ಲಾಘಿಸಿದ ಸಚಿವೆ, “ಮುಟ್ಟಿನ ರಜೆಯ ಮಾದರಿಯನ್ನು ರಾಜ್ಯದಾದ್ಯಂತ ವಿಶ್ವವಿದ್ಯಾಲಯಗಳಲ್ಲಿ ಜಾರಿಗೆ ತರಲಾಗುವುದು” ಎಂದು ಹೇಳಿದ್ದಾರೆ.

ಮುಟ್ಟಿನ ಅವಧಿಗಳು ಅನೇಕರಿಗೆ ಭಾವನಾತ್ಮವಾಗಿ ‘ರೋಲರ್ ಕೋಸ್ಟರ್’ ದಿನಗಳಾಗಿವೆ ಎಂದು ಬಿಂದು ಹೇಳಿದ್ದು, “ಹೆಣ್ಣುಮಕ್ಕಳು ತಮ್ಮ ಋತುಚಕ್ರದ ಕಷ್ಟದ ದಿನಗಳಲ್ಲಿ ವಿಶ್ರಾಂತಿ ಪಡೆಯಲಿ’’ ಎಂದು ಅವರು ತಿಳಿಸಿದ್ದಾರೆ.

ಸ್ವಾಯತ್ತ ವಿಶ್ವವಿದ್ಯಾನಿಲಯ ಮತ್ತು CUSAT ಗಳಲ್ಲಿ ಸುಮಾರು 8,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದು, ಅವರಲ್ಲಿ ಅರ್ಧಕ್ಕಿಂತ ಹೆಚ್ಚು ಹುಡುಗಿಯರಾಗಿದ್ದಾರೆ.

“ವಿದ್ಯಾರ್ಥಿನಿಯರಿಗೆ ಋತುಸ್ರಾವದ ಪ್ರಯೋಜನಗಳ ಕೋರಿಕೆಗಳನ್ನು ಪರಿಗಣಿಸಿದ ಉಪಕುಲಪತಿಗಳು, ಪ್ರತಿ ಸೆಮಿಸ್ಟರ್‌ನಲ್ಲಿ ವಿದ್ಯಾರ್ಥಿನಿಯರಿಗೆ ಹಾಜರಾತಿ ಕೊರತೆಯ ಕ್ಷಮಾದಾನದ ಹೆಚ್ಚುವರಿ ಶೇಕಡಾ 2 ರಷ್ಟು ಮಂಜೂರು ಮಾಡಲು ಆದೇಶಿಸಿದ್ದಾರೆ” ಎಂದು ಕುಸಾಟ್‌ನ ರಿಜಿಸ್ಟ್ರಾರ್‌ ಆದೇಶ ಹೊರಡಿಸಿದ್ದರು.

ಈ ಆದೇಶವು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವವರು ಸೇರಿದಂತೆ ಎಲ್ಲಾ ವಿದ್ಯಾರ್ಥಿನಿಯರಿಗೆ ಅನ್ವಯಿಸುತ್ತದೆ ಮತ್ತು ತಕ್ಷಣದಿಂದಲೇ ಜಾರಿಗೆ ಬರುವ ನಿರೀಕ್ಷೆಯಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ: ಮಾರ್ಚ್‌ನಲ್ಲಿ ವಿಚಾರಣೆ ನಡೆಸಲಿರುವ ಸುಪ್ರೀಂಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...