Homeಮುಖಪುಟಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ದೇಶದಲ್ಲಿ ಏಕರೂಪ ನಾಗರಿಕತೆ (ಯುಸಿಸಿ) ಹೇರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.

ಫೆಬ್ರವರಿಯಲ್ಲಿ, ಮಿಜೋರಾಂ ವಿಧಾನಸಭೆಯು ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸುವ ಯಾವುದೇ ಕ್ರಮವನ್ನು ವಿರೋಧಿಸುವ ಅಧಿಕೃತ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು.

ಇದೀಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಸದನದಲ್ಲಿ ನಿರ್ಣಯವನ್ನು ಮಂಡಿಸಿದರು, ”ಇದು ಕೇಂದ್ರ ಸರ್ಕಾರದ ಕಡೆಯಿಂದ ಏಕಪಕ್ಷೀಯ ಮತ್ತು ಆತುರದ ಕ್ರಮ. ಸಂಘಪರಿವಾರದಿಂದ ಪ್ರೇರಿಸಲ್ಪಟ್ಟ ಏಕರೂಪ ನಾಗರಿಕ ಸಂಹಿತೆ ಸಂವಿಧಾನಿಕವಾಗಿಲ್ಲ, ಬದಲಿಗೆ ಅದು ಹಿಂದೂ ಕಾನೂನು ಪಠ್ಯ ಮನುಸ್ಮೃತಿ ಅನ್ನು ಆಧರಿಸಿದೆ” ಎಂದು ಅವರು ವಾದಿಸಿದರು.

”ಈ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಂಘ ಪರಿವಾರದವರು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ. ಸಂವಿಧಾನದಲ್ಲಿ ಇರುವುದನ್ನು ಅವರು ಜಾರಿಗೆ ತರಲು ಪ್ರಯತ್ನಿಸುತ್ತಿಲ್ಲ, ಅದನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನ ಕಾನೂನುಗಳನ್ನು ಅಪರಾಧೀಕರಿಸಿದೆ, ಆದರೆ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಥವಾ ಶೋಷಿತರ ಕಲ್ಯಾಣಕ್ಕಾಗಿ ಕ್ರಮಗಳನ್ನು ಕೈಗೊಳ್ಳಲು ಏನನ್ನೂ ಮಾಡಿಲ್ಲ” ಎಂದು ವಿಜಯನ್ ಪ್ರತಿಪಾದಿಸಿದರು.

ನಿರ್ಣಯವನ್ನು ಮುಖ್ಯಮಂತ್ರಿ ಮಂಡಿಸಿದ ನಂತರ ಎಡ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಯುಡಿಎಫ್ ಹಲವಾರು ತಿದ್ದುಪಡಿಗಳು ಮತ್ತು ಮಾರ್ಪಾಡುಗಳನ್ನು ಸೂಚಿಸಿತು. ಸೂಚಿಸಿದ ಮಾರ್ಪಾಡುಗಳನ್ನು ಗಣನೆಗೆ ತೆಗೆದುಕೊಂಡ ನಂತರ, ಮುಖ್ಯಮಂತ್ರಿಗಳು ಅಂತಿಮಗೊಳಿಸಿದ ನಿರ್ಣಯವನ್ನು ಓದಿದರು.

ಯುಸಿಸಿ ವಿಧಿಸುವ ಕೇಂದ್ರದ ಕ್ರಮದಿಂದ ಕೇರಳ ವಿಧಾನಸಭೆ ದಿಗ್ಭ್ರಮೆಗೊಂಡಿದೆ. ಇದು ದೇಶದ ಜಾತ್ಯತೀತ ಸ್ವರೂಪವನ್ನು ಕಸಿದುಕೊಳ್ಳುವ ಏಕಪಕ್ಷೀಯ ಮತ್ತು ಆತುರದ ನಿರ್ಧಾರವಾಗಿದೆ ಎಂದು ಹೇಳಿದರು. ಸಂವಿಧಾನವು ಸಾಮಾನ್ಯ ನಾಗರಿಕ ಕಾನೂನನ್ನು ನಿರ್ದೇಶನ ತತ್ವವಾಗಿ ಮಾತ್ರ ಉಲ್ಲೇಖಿಸುತ್ತದೆ ಮತ್ತು ಅದು ಕಡ್ಡಾಯವಲ್ಲ. ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸಿದಾಗ ಮತ್ತು ಧಾರ್ಮಿಕ ವೈಯಕ್ತಿಕ ನಿಯಮಗಳನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕನ್ನು ಒಳಗೊಂಡಿರುವಾಗ, ಅದನ್ನು ನಿಷೇಧಿಸುವ ಯಾವುದೇ ಕಾನೂನು ಸಂವಿಧಾನದ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದರು. ಸಂವಿಧಾನದ 44ನೇ ವಿಧಿಯು ರಾಜ್ಯವು ಸಾಮಾನ್ಯ ನಾಗರಿಕ ಸಂಹಿತೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ ಎಂದು ಹೇಳುತ್ತದೆ. ಜನರಲ್ಲಿ ಒಮ್ಮತ ಮೂಡಿಸಲು ಇಂತಹ ಯಾವುದೇ ಕ್ರಮವನ್ನು ಚರ್ಚೆಗಳ ಮೂಲಕ ಮೊದಲು ಮಾಡಬೇಕು ಮತ್ತು ಹಾಗೆ ಮಾಡದಿರುವುದು ಸಂವಿಧಾನದ ಉಲ್ಲಂಘನೆ ಎಂದು ಅವರು ಹೇಳಿದರು.

ಕೇರಳ ಅಸೆಂಬ್ಲಿ ಕೂಡ ಕೇಂದ್ರ ನಿರ್ಧಾರದ ಬಗ್ಗೆ ಕಳವಳವನ್ನು ಹಂಚಿಕೊಳ್ಳುತ್ತದೆ. ಯುಸಿಸಿ ಹೇರುವಿಕೆಯು ಜನರ ಮತ್ತು ಒಟ್ಟಾರೆ ರಾಷ್ಟ್ರದ ಏಕತೆಯ ಮೇಲೆ ದಾಳಿ ಮಾಡುವ ಜಾತ್ಯತೀತವಲ್ಲದ ಕ್ರಮ ಎಂದು ನಂಬುತ್ತದೆ. ಸಂವಿಧಾನ ರಚನಾ ಸಭೆಯ ಚರ್ಚೆಗಳಲ್ಲಿಯೂ ಸಹ ಯುಸಿಸಿಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದವು. ಬಿಆರ್ ಅಂಬೇಡ್ಕರ್ ಅವರ ಅಂದಿನ ನಿಲುವು ಸಂಸತ್ತು ಸಾಮಾನ್ಯ ನಾಗರಿಕ ಕಾನೂನನ್ನು ತರಲು ಪ್ರಯತ್ನಿಸಬಹುದು ಎಂದು ಹೇಳಿದ್ದರು. ಆದರೆ ಅದನ್ನು ಕಡ್ಡಾಯಗೊಳಿಸಬೇಕೆಂದು ಅವರು ಒತ್ತಾಯಿಸಲಿಲ್ಲ. ಅವರು ಕೇವಲ ಒಂದು ಸಾಧ್ಯತೆಯನ್ನು ಮಾತ್ರ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ವಾದಿಸಿದರು.

ಸಿಪಿಐ(ಎಂ) ನೇತೃತ್ವದ ಸರ್ಕಾರವು ಯುಸಿಸಿ ವಿರುದ್ಧ ರಾಜ್ಯದಲ್ಲಿ ಆಡಳಿತಾರೂಢ ಎಡಪಕ್ಷಗಳು ಮತ್ತು ವಿರೋಧ ಪಕ್ಷವಾದ ಯುಡಿಎಫ್ ಹಾಗೂ ರಾಜ್ಯದ ವಿವಿಧ ಧಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಅಭಿಯಾನದ ನಡುವೆಯೇ ನಿರ್ಣಯವನ್ನು ಮಂಡಿಸಲು ನಿರ್ಧರಿಸಿತ್ತು.

2019ರ ಡಿಸೆಂಬರ್‌ನಲ್ಲಿ ಕೇರಳ ವಿಧಾನಸಭೆಯು ಪೌರತ್ವ ತಿದ್ದುಪಡೆ ಕಾಯ್ದೆ (ಸಿಎಎ) ವಿರುದ್ಧದ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಿತ್ತು.

ಇದನ್ನೂ ಓದಿ: ಈಗ ಅಗತ್ಯ ಇರುವುದು ಲಿಂಗ ನ್ಯಾಯ ಸಂಹಿತೆ, ಏಕರೂಪ ನಾಗರಿಕ ಸಂಹಿತೆಯಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...