Homeಮುಖಪುಟಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಏಕರೂಪ ನಾಗರಿಕ ಸಂಹಿತೆ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

- Advertisement -
- Advertisement -

ದೇಶದಲ್ಲಿ ಏಕರೂಪ ನಾಗರಿಕತೆ (ಯುಸಿಸಿ) ಹೇರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಿರ್ಧಾರವನ್ನು ವಿರೋಧಿಸುವ ನಿರ್ಣಯವನ್ನು ಕೇರಳ ವಿಧಾನಸಭೆ ಸರ್ವಾನುಮತದಿಂದ ಅಂಗೀಕರಿಸಿದೆ.

ಫೆಬ್ರವರಿಯಲ್ಲಿ, ಮಿಜೋರಾಂ ವಿಧಾನಸಭೆಯು ದೇಶದಲ್ಲಿ ಯುಸಿಸಿಯನ್ನು ಜಾರಿಗೊಳಿಸುವ ಯಾವುದೇ ಕ್ರಮವನ್ನು ವಿರೋಧಿಸುವ ಅಧಿಕೃತ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತ್ತು.

ಇದೀಗ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಕರೂಪ ನಾಗರಿಕ ಸಂಹಿತೆ ವಿರುದ್ಧ ಸದನದಲ್ಲಿ ನಿರ್ಣಯವನ್ನು ಮಂಡಿಸಿದರು, ”ಇದು ಕೇಂದ್ರ ಸರ್ಕಾರದ ಕಡೆಯಿಂದ ಏಕಪಕ್ಷೀಯ ಮತ್ತು ಆತುರದ ಕ್ರಮ. ಸಂಘಪರಿವಾರದಿಂದ ಪ್ರೇರಿಸಲ್ಪಟ್ಟ ಏಕರೂಪ ನಾಗರಿಕ ಸಂಹಿತೆ ಸಂವಿಧಾನಿಕವಾಗಿಲ್ಲ, ಬದಲಿಗೆ ಅದು ಹಿಂದೂ ಕಾನೂನು ಪಠ್ಯ ಮನುಸ್ಮೃತಿ ಅನ್ನು ಆಧರಿಸಿದೆ” ಎಂದು ಅವರು ವಾದಿಸಿದರು.

”ಈ ಏಕರೂಪ ನಾಗರಿಕ ಸಂಹಿತೆ ಬಗ್ಗೆ ಸಂಘ ಪರಿವಾರದವರು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ. ಸಂವಿಧಾನದಲ್ಲಿ ಇರುವುದನ್ನು ಅವರು ಜಾರಿಗೆ ತರಲು ಪ್ರಯತ್ನಿಸುತ್ತಿಲ್ಲ, ಅದನ್ನು ತಪ್ಪಾಗಿ ಅರ್ಥೈಸುವ ಅಗತ್ಯವಿಲ್ಲ. ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ವಿಚ್ಛೇದನ ಕಾನೂನುಗಳನ್ನು ಅಪರಾಧೀಕರಿಸಿದೆ, ಆದರೆ ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಅಥವಾ ಶೋಷಿತರ ಕಲ್ಯಾಣಕ್ಕಾಗಿ ಕ್ರಮಗಳನ್ನು ಕೈಗೊಳ್ಳಲು ಏನನ್ನೂ ಮಾಡಿಲ್ಲ” ಎಂದು ವಿಜಯನ್ ಪ್ರತಿಪಾದಿಸಿದರು.

ನಿರ್ಣಯವನ್ನು ಮುಖ್ಯಮಂತ್ರಿ ಮಂಡಿಸಿದ ನಂತರ ಎಡ ಸರ್ಕಾರದ ಕ್ರಮವನ್ನು ಸ್ವಾಗತಿಸಿದ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಯುಡಿಎಫ್ ಹಲವಾರು ತಿದ್ದುಪಡಿಗಳು ಮತ್ತು ಮಾರ್ಪಾಡುಗಳನ್ನು ಸೂಚಿಸಿತು. ಸೂಚಿಸಿದ ಮಾರ್ಪಾಡುಗಳನ್ನು ಗಣನೆಗೆ ತೆಗೆದುಕೊಂಡ ನಂತರ, ಮುಖ್ಯಮಂತ್ರಿಗಳು ಅಂತಿಮಗೊಳಿಸಿದ ನಿರ್ಣಯವನ್ನು ಓದಿದರು.

ಯುಸಿಸಿ ವಿಧಿಸುವ ಕೇಂದ್ರದ ಕ್ರಮದಿಂದ ಕೇರಳ ವಿಧಾನಸಭೆ ದಿಗ್ಭ್ರಮೆಗೊಂಡಿದೆ. ಇದು ದೇಶದ ಜಾತ್ಯತೀತ ಸ್ವರೂಪವನ್ನು ಕಸಿದುಕೊಳ್ಳುವ ಏಕಪಕ್ಷೀಯ ಮತ್ತು ಆತುರದ ನಿರ್ಧಾರವಾಗಿದೆ ಎಂದು ಹೇಳಿದರು. ಸಂವಿಧಾನವು ಸಾಮಾನ್ಯ ನಾಗರಿಕ ಕಾನೂನನ್ನು ನಿರ್ದೇಶನ ತತ್ವವಾಗಿ ಮಾತ್ರ ಉಲ್ಲೇಖಿಸುತ್ತದೆ ಮತ್ತು ಅದು ಕಡ್ಡಾಯವಲ್ಲ. ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಧಾರ್ಮಿಕ ಸ್ವಾತಂತ್ರ್ಯವನ್ನು ಖಾತರಿಪಡಿಸಿದಾಗ ಮತ್ತು ಧಾರ್ಮಿಕ ವೈಯಕ್ತಿಕ ನಿಯಮಗಳನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕನ್ನು ಒಳಗೊಂಡಿರುವಾಗ, ಅದನ್ನು ನಿಷೇಧಿಸುವ ಯಾವುದೇ ಕಾನೂನು ಸಂವಿಧಾನದ ಹಕ್ಕಿನ ಉಲ್ಲಂಘನೆಯಾಗುತ್ತದೆ ಎಂದು ಅವರು ಹೇಳಿದರು. ಸಂವಿಧಾನದ 44ನೇ ವಿಧಿಯು ರಾಜ್ಯವು ಸಾಮಾನ್ಯ ನಾಗರಿಕ ಸಂಹಿತೆಯನ್ನು ಸ್ಥಾಪಿಸಲು ಪ್ರಯತ್ನಿಸುತ್ತದೆ ಎಂದು ಹೇಳುತ್ತದೆ. ಜನರಲ್ಲಿ ಒಮ್ಮತ ಮೂಡಿಸಲು ಇಂತಹ ಯಾವುದೇ ಕ್ರಮವನ್ನು ಚರ್ಚೆಗಳ ಮೂಲಕ ಮೊದಲು ಮಾಡಬೇಕು ಮತ್ತು ಹಾಗೆ ಮಾಡದಿರುವುದು ಸಂವಿಧಾನದ ಉಲ್ಲಂಘನೆ ಎಂದು ಅವರು ಹೇಳಿದರು.

ಕೇರಳ ಅಸೆಂಬ್ಲಿ ಕೂಡ ಕೇಂದ್ರ ನಿರ್ಧಾರದ ಬಗ್ಗೆ ಕಳವಳವನ್ನು ಹಂಚಿಕೊಳ್ಳುತ್ತದೆ. ಯುಸಿಸಿ ಹೇರುವಿಕೆಯು ಜನರ ಮತ್ತು ಒಟ್ಟಾರೆ ರಾಷ್ಟ್ರದ ಏಕತೆಯ ಮೇಲೆ ದಾಳಿ ಮಾಡುವ ಜಾತ್ಯತೀತವಲ್ಲದ ಕ್ರಮ ಎಂದು ನಂಬುತ್ತದೆ. ಸಂವಿಧಾನ ರಚನಾ ಸಭೆಯ ಚರ್ಚೆಗಳಲ್ಲಿಯೂ ಸಹ ಯುಸಿಸಿಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳಿದ್ದವು. ಬಿಆರ್ ಅಂಬೇಡ್ಕರ್ ಅವರ ಅಂದಿನ ನಿಲುವು ಸಂಸತ್ತು ಸಾಮಾನ್ಯ ನಾಗರಿಕ ಕಾನೂನನ್ನು ತರಲು ಪ್ರಯತ್ನಿಸಬಹುದು ಎಂದು ಹೇಳಿದ್ದರು. ಆದರೆ ಅದನ್ನು ಕಡ್ಡಾಯಗೊಳಿಸಬೇಕೆಂದು ಅವರು ಒತ್ತಾಯಿಸಲಿಲ್ಲ. ಅವರು ಕೇವಲ ಒಂದು ಸಾಧ್ಯತೆಯನ್ನು ಮಾತ್ರ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ವಾದಿಸಿದರು.

ಸಿಪಿಐ(ಎಂ) ನೇತೃತ್ವದ ಸರ್ಕಾರವು ಯುಸಿಸಿ ವಿರುದ್ಧ ರಾಜ್ಯದಲ್ಲಿ ಆಡಳಿತಾರೂಢ ಎಡಪಕ್ಷಗಳು ಮತ್ತು ವಿರೋಧ ಪಕ್ಷವಾದ ಯುಡಿಎಫ್ ಹಾಗೂ ರಾಜ್ಯದ ವಿವಿಧ ಧಾರ್ಮಿಕ ಸಂಘಟನೆಗಳು ನಡೆಸುತ್ತಿರುವ ಅಭಿಯಾನದ ನಡುವೆಯೇ ನಿರ್ಣಯವನ್ನು ಮಂಡಿಸಲು ನಿರ್ಧರಿಸಿತ್ತು.

2019ರ ಡಿಸೆಂಬರ್‌ನಲ್ಲಿ ಕೇರಳ ವಿಧಾನಸಭೆಯು ಪೌರತ್ವ ತಿದ್ದುಪಡೆ ಕಾಯ್ದೆ (ಸಿಎಎ) ವಿರುದ್ಧದ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಿತ್ತು.

ಇದನ್ನೂ ಓದಿ: ಈಗ ಅಗತ್ಯ ಇರುವುದು ಲಿಂಗ ನ್ಯಾಯ ಸಂಹಿತೆ, ಏಕರೂಪ ನಾಗರಿಕ ಸಂಹಿತೆಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...