Homeಮುಖಪುಟ'ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ': 'ದಿ ಕೇರಳ ಸ್ಟೋರಿ 2' ಕುರಿತು...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

- Advertisement -
- Advertisement -

ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್’ ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ barandbench.com ವರದಿ ಮಾಡಿದೆ.

ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಮತ್ತು ಸಿನಿಮಾ ಕೋಮುಗಲಭೆಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿ ಅದರ ಸೆನ್ಸಾರ್ ಸರ್ಟಿಫಿಕೇಟ್ ರದ್ದುಗೊಳಿಸಬೇಕು ಎಂದು ಕೋರಿರುವ ಮೂರು ಅರ್ಜಿಗಳ ಕುರಿತು ನಿರ್ಧರಿಸಲು ಸ್ವತಃ ಸಿನಿಮಾ ವೀಕ್ಷಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕೇರಳದಂತಹ ಜಾತ್ಯತೀತ ರಾಜ್ಯವನ್ನು ಕೋಮು ದೃಷ್ಟಿಕೋನದಿಂದ ತೋರಿಸುವಾಗ ಸಿಬಿಎಫ್‌ಸಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಒತ್ತಿ ಹೇಳಿರುವುದಾಗಿ ವರದಿ ತಿಳಿಸಿದೆ.

“ಕೇರಳ ರಾಜ್ಯವು ಅತ್ಯಂತ ಜಾತ್ಯತೀತವಾಗಿದೆ. ಇಲ್ಲಿ ಜನರು ಬಹಳ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಎಲ್ಲೋ ನಡೆದ ಒಂದು ಘಟನೆಯನ್ನು ಇಡೀ ರಾಜ್ಯದಲ್ಲೇ ನಡೆಯುತ್ತಿದೆ ಎಂಬಂತೆ ತೋರಿಸಿದಾಗ ಅದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತದೆ ಮತ್ತು ಅವರ ಆಕ್ರೋಶಕ್ಕೆ ಕಾರಣವಾಗಬಹುದು. ಇಂತಹ ತಪ್ಪು ಮಾಹಿತಿಗಳು ಹರಡಬಾರದು ಎಂಬ ಕಾರಣಕ್ಕಾಗಿಯೇ ಸೆನ್ಸಾರ್ ಮಂಡಳಿ ಮಧ್ಯಪ್ರವೇಶಿಸಿ ಅಂತಹ ದೃಶ್ಯಗಳನ್ನು ಪರಿಶೀಲಿಸುತ್ತದೆ” ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ವರದಿ ವಿವರಿಸಿದೆ.

“ಸಿನಿಮಾವನ್ನು ನೈಜ ಘಟನೆಗಳ ಆಧಾರದ ಮೇಲೆ ರೂಪಿಸಲಾಗಿದೆ ಎಂದು ಚಿತ್ರತಂಡ ಹೇಳಿಕೊಳ್ಳುತ್ತಿದೆ. ಆದ್ದರಿಂದ, ಈ ಚಿತ್ರವು ಸತ್ಯವನ್ನು ತಪ್ಪಾಗಿ ಬಿಂಬಿಸಬಹುದು ಮತ್ತು ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಅರ್ಜಿದಾರರ ಆತಂಕಗಳು ನ್ಯಾಯಸಮ್ಮತವಾಗಿವೆ” ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

“ಸಿನಿಮಾದ ಶೀರ್ಷಿಕೆಯಲ್ಲಿ ರಾಜ್ಯದ ಹೆಸರನ್ನು (ಕೇರಳ) ಬಳಸಲಾಗಿದೆ ಎಂಬ ಅಂಶವನ್ನು ಗಮನಿಸಿದರೆ, ಕೇರಳದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

“ನೀವು ಈ ಸಿನಿಮಾಗೆ ‘ಕೇರಳ’ ಎಂದು ಹೆಸರಿಟ್ಟಿರುವುದರಿಂದ, ಆ ರಾಜ್ಯದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನಾನು ಸಿನಿಮಾಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಏಕೆಂದರೆ ಅದು ಒಂದು ಕಲಾ ಸೃಷ್ಟಿ. ಆದರೆ, ನೀವು ಈ ಚಿತ್ರವು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತೀರಿ ಮತ್ತು ಅದಕ್ಕೆ ‘ಕೇರಳ’ ಎಂಬ ಹೆಸರನ್ನೇ ನೀಡಿದ್ದೀರಿ; ಇದು ಸಮಾಜದಲ್ಲಿ ಕೋಮು ಸಂಘರ್ಷ ಉಂಟುಮಾಡುವ ಸಾಧ್ಯತೆಯಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಜನಾಂಗೀಯ, ಧಾರ್ಮಿಕ ಮತ್ತು ಇತರ ಸಮುದಾಯಗಳನ್ನು ಅವಮಾನಿಸುವಂತಹ ದೃಶ್ಯಗಳು ಅಥವಾ ಪದಗಳನ್ನು ನಿಷೇಧಿಸುವ ಸೆನ್ಸಾರ್ ಮಂಡಳಿಯ ಸ್ವಂತ ಮಾರ್ಗಸೂಚಿಗಳನ್ನು ಈ ಸಿನಿಮಾ ಪಾಲಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ

“ನೋಡಿ, ಸೃಜನಶೀಲ ಸ್ವಾತಂತ್ರ್ಯ ಎಂಬುದು ಖಂಡಿತ ಇದೆ. ಆದರೆ ಸೆನ್ಸಾರ್ ಮಂಡಳಿಯು ಪಾಲಿಸಲೇಬೇಕಾದ ಕೆಲವು ಷರತ್ತುಗಳನ್ನು ವಿಧಿಸಿದೆ. ನೀವು ಅವುಗಳ ಬಗ್ಗೆ ಅರಿತಿದ್ದೀರಾ ಎಂಬುವುದು ಇಲ್ಲಿನ ಪ್ರಶ್ನೆ. ಸಿನಿಮಾದ ಮೇಲಿರುವ ತಪ್ಪು ಕಲ್ಪನೆಗಳು ಸಿನಿಮಾ ನೋಡಿದ ಮೇಲೆ ಬದಲಾಗಬಹುದು ನಿಜ, ಆದರೆ ಇದು ಕೇವಲ ಕಲ್ಪನೆಯಲ್ಲ; ನೀವು ಇದು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತಿದ್ದೀರಿ. ಅದು ಬಹಳ ಮುಖ್ಯವಾದ ವಿಷಯವಾಗುತ್ತದೆ” ಎಂದು ನ್ಯಾಮೂರ್ತಿ ಥಾಮಸ್ ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಶ್ರೀಕುಮಾರ್ ಅವರು, ನ್ಯಾಯಾಲಯವು ಅಂತಿಮ ತೀರ್ಪು ನೀಡುವವರೆಗೆ ಇದುವರೆಗೆ ಬಿಡುಗಡೆಯಾಗಿರುವ ಎಲ್ಲಾ ಟೀಸರ್‌ಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು barandbench.com ವರದಿಯಲ್ಲಿ ಉಲ್ಲೇಖಿಸಿದೆ.

ನ್ಯಾಯಮೂರ್ತಿ ಥಾಮಸ್ ಅವರು ಈ ಪ್ರಕರಣದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿನಿಮಾ ನೋಡಲು ಅನುಕೂಲವಾಗುವಂತೆ ವಿಶೇಷ ಪ್ರದರ್ಶನವನ್ನು ಏರ್ಪಡಿಸಬಹುದು ಎಂದು ಶ್ರೀಕುಮಾರ್ ತಿಳಿಸಿದ್ದಾರೆ. ನ್ಯಾಯಾಧೀಶರು ತಾನು ನಾಳೆಯೇ ಸಿನಿಮಾ ವೀಕ್ಷಿಸುವುದಾಗಿ ಹೇಳಿದ್ದಾರೆ.

“ಸಾಮಾನ್ಯವಾಗಿ ನ್ಯಾಯಾಲಯವು ಕಲಾತ್ಮಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದರಿಂದ ದೂರವಿರುತ್ತದೆ. ಆದರೆ, ಈ ಚಿತ್ರವು ಧಾರ್ಮಿಕ ವಿಷಯವನ್ನು ಹೊಂದಿರುವುದರಿಂದ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ” ನ್ಯಾಯಮೂರ್ತಿ ತಿಳಿಸಿದ್ದಾರೆ.

ಬೆಳ್ಳಗಿನ ಅವಧಿಯ ವಿಚಾರಣೆಯಲ್ಲಿ ಮೇಲಿನ ವಾದ-ಪ್ರತಿವಾದಗಳು ನಡೆದಿವೆ. ನ್ಯಾಯಾಲಯ ಮಧ್ಯಾಹ್ನ 2 ಗಂಟೆಗೆ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧರಿಸಿದೆ. ಈ ವೇಳೆ ನ್ಯಾಯಾಧೀಶರಿಗಾಗಿ ಸಿನಿಮಾದ ವಿಶೇಷ ಪ್ರದರ್ಶನ ಯಾವಾಗ ಏರ್ಪಡಿಸಬಹುದು ಎಂಬುವುದನ್ನು ಸೆನ್ಸಾರ್ ಮಂಡಳಿ ಮತ್ತು ನಿರ್ಮಾಪಕರು ನ್ಯಾಯಾಲಯಕ್ಕೆ ತಿಳಿಸಲಿದ್ದಾರೆ ಎಂದು barandbench.com ಉಲ್ಲೇಖಿಸಿದೆ.

ಕಣ್ಣೂರಿನ ನಿವಾಸಿಯಾದ ಶ್ರೀದೇವ್ ನಂಬೂದರಿ ಎಂಬುವವರು ಸಿನಿಮಾ ವಿರುದ್ದ ಅರ್ಜಿಯೊಂದನ್ನು ಸಲ್ಲಿಸಿದ್ದು, ಈ ಸಿನಿಮಾ ಕೇರಳವನ್ನು ಅನ್ಯಾಯದ ಮತ್ತು ಕಳಂಕಿತ ರೀತಿಯಲ್ಲಿ ಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಸಿನಿಮಾವನ್ನು ಬಿಡುಗಡೆ ಮಾಡುವುದರಿಂದ ಕೋಮು ಮತ್ತು ಪ್ರಾದೇಶಿಕ ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಮತ್ತು ಇದು ಕಾನೂನು ಸುವ್ಯವಸ್ಥೆಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...