Homeಮುಖಪುಟ'ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ': 'ದಿ ಕೇರಳ ಸ್ಟೋರಿ 2' ಕುರಿತು...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

- Advertisement -
- Advertisement -

ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್’ ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ barandbench.com ವರದಿ ಮಾಡಿದೆ.

ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಮತ್ತು ಸಿನಿಮಾ ಕೋಮುಗಲಭೆಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿ ಅದರ ಸೆನ್ಸಾರ್ ಸರ್ಟಿಫಿಕೇಟ್ ರದ್ದುಗೊಳಿಸಬೇಕು ಎಂದು ಕೋರಿರುವ ಮೂರು ಅರ್ಜಿಗಳ ಕುರಿತು ನಿರ್ಧರಿಸಲು ಸ್ವತಃ ಸಿನಿಮಾ ವೀಕ್ಷಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕೇರಳದಂತಹ ಜಾತ್ಯತೀತ ರಾಜ್ಯವನ್ನು ಕೋಮು ದೃಷ್ಟಿಕೋನದಿಂದ ತೋರಿಸುವಾಗ ಸಿಬಿಎಫ್‌ಸಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಒತ್ತಿ ಹೇಳಿರುವುದಾಗಿ ವರದಿ ತಿಳಿಸಿದೆ.

“ಕೇರಳ ರಾಜ್ಯವು ಅತ್ಯಂತ ಜಾತ್ಯತೀತವಾಗಿದೆ. ಇಲ್ಲಿ ಜನರು ಬಹಳ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಎಲ್ಲೋ ನಡೆದ ಒಂದು ಘಟನೆಯನ್ನು ಇಡೀ ರಾಜ್ಯದಲ್ಲೇ ನಡೆಯುತ್ತಿದೆ ಎಂಬಂತೆ ತೋರಿಸಿದಾಗ ಅದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತದೆ ಮತ್ತು ಅವರ ಆಕ್ರೋಶಕ್ಕೆ ಕಾರಣವಾಗಬಹುದು. ಇಂತಹ ತಪ್ಪು ಮಾಹಿತಿಗಳು ಹರಡಬಾರದು ಎಂಬ ಕಾರಣಕ್ಕಾಗಿಯೇ ಸೆನ್ಸಾರ್ ಮಂಡಳಿ ಮಧ್ಯಪ್ರವೇಶಿಸಿ ಅಂತಹ ದೃಶ್ಯಗಳನ್ನು ಪರಿಶೀಲಿಸುತ್ತದೆ” ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ವರದಿ ವಿವರಿಸಿದೆ.

“ಸಿನಿಮಾವನ್ನು ನೈಜ ಘಟನೆಗಳ ಆಧಾರದ ಮೇಲೆ ರೂಪಿಸಲಾಗಿದೆ ಎಂದು ಚಿತ್ರತಂಡ ಹೇಳಿಕೊಳ್ಳುತ್ತಿದೆ. ಆದ್ದರಿಂದ, ಈ ಚಿತ್ರವು ಸತ್ಯವನ್ನು ತಪ್ಪಾಗಿ ಬಿಂಬಿಸಬಹುದು ಮತ್ತು ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಅರ್ಜಿದಾರರ ಆತಂಕಗಳು ನ್ಯಾಯಸಮ್ಮತವಾಗಿವೆ” ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

“ಸಿನಿಮಾದ ಶೀರ್ಷಿಕೆಯಲ್ಲಿ ರಾಜ್ಯದ ಹೆಸರನ್ನು (ಕೇರಳ) ಬಳಸಲಾಗಿದೆ ಎಂಬ ಅಂಶವನ್ನು ಗಮನಿಸಿದರೆ, ಕೇರಳದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

“ನೀವು ಈ ಸಿನಿಮಾಗೆ ‘ಕೇರಳ’ ಎಂದು ಹೆಸರಿಟ್ಟಿರುವುದರಿಂದ, ಆ ರಾಜ್ಯದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನಾನು ಸಿನಿಮಾಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಏಕೆಂದರೆ ಅದು ಒಂದು ಕಲಾ ಸೃಷ್ಟಿ. ಆದರೆ, ನೀವು ಈ ಚಿತ್ರವು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತೀರಿ ಮತ್ತು ಅದಕ್ಕೆ ‘ಕೇರಳ’ ಎಂಬ ಹೆಸರನ್ನೇ ನೀಡಿದ್ದೀರಿ; ಇದು ಸಮಾಜದಲ್ಲಿ ಕೋಮು ಸಂಘರ್ಷ ಉಂಟುಮಾಡುವ ಸಾಧ್ಯತೆಯಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಜನಾಂಗೀಯ, ಧಾರ್ಮಿಕ ಮತ್ತು ಇತರ ಸಮುದಾಯಗಳನ್ನು ಅವಮಾನಿಸುವಂತಹ ದೃಶ್ಯಗಳು ಅಥವಾ ಪದಗಳನ್ನು ನಿಷೇಧಿಸುವ ಸೆನ್ಸಾರ್ ಮಂಡಳಿಯ ಸ್ವಂತ ಮಾರ್ಗಸೂಚಿಗಳನ್ನು ಈ ಸಿನಿಮಾ ಪಾಲಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ

“ನೋಡಿ, ಸೃಜನಶೀಲ ಸ್ವಾತಂತ್ರ್ಯ ಎಂಬುದು ಖಂಡಿತ ಇದೆ. ಆದರೆ ಸೆನ್ಸಾರ್ ಮಂಡಳಿಯು ಪಾಲಿಸಲೇಬೇಕಾದ ಕೆಲವು ಷರತ್ತುಗಳನ್ನು ವಿಧಿಸಿದೆ. ನೀವು ಅವುಗಳ ಬಗ್ಗೆ ಅರಿತಿದ್ದೀರಾ ಎಂಬುವುದು ಇಲ್ಲಿನ ಪ್ರಶ್ನೆ. ಸಿನಿಮಾದ ಮೇಲಿರುವ ತಪ್ಪು ಕಲ್ಪನೆಗಳು ಸಿನಿಮಾ ನೋಡಿದ ಮೇಲೆ ಬದಲಾಗಬಹುದು ನಿಜ, ಆದರೆ ಇದು ಕೇವಲ ಕಲ್ಪನೆಯಲ್ಲ; ನೀವು ಇದು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತಿದ್ದೀರಿ. ಅದು ಬಹಳ ಮುಖ್ಯವಾದ ವಿಷಯವಾಗುತ್ತದೆ” ಎಂದು ನ್ಯಾಮೂರ್ತಿ ಥಾಮಸ್ ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಶ್ರೀಕುಮಾರ್ ಅವರು, ನ್ಯಾಯಾಲಯವು ಅಂತಿಮ ತೀರ್ಪು ನೀಡುವವರೆಗೆ ಇದುವರೆಗೆ ಬಿಡುಗಡೆಯಾಗಿರುವ ಎಲ್ಲಾ ಟೀಸರ್‌ಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು barandbench.com ವರದಿಯಲ್ಲಿ ಉಲ್ಲೇಖಿಸಿದೆ.

ನ್ಯಾಯಮೂರ್ತಿ ಥಾಮಸ್ ಅವರು ಈ ಪ್ರಕರಣದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿನಿಮಾ ನೋಡಲು ಅನುಕೂಲವಾಗುವಂತೆ ವಿಶೇಷ ಪ್ರದರ್ಶನವನ್ನು ಏರ್ಪಡಿಸಬಹುದು ಎಂದು ಶ್ರೀಕುಮಾರ್ ತಿಳಿಸಿದ್ದಾರೆ. ನ್ಯಾಯಾಧೀಶರು ತಾನು ನಾಳೆಯೇ ಸಿನಿಮಾ ವೀಕ್ಷಿಸುವುದಾಗಿ ಹೇಳಿದ್ದಾರೆ.

“ಸಾಮಾನ್ಯವಾಗಿ ನ್ಯಾಯಾಲಯವು ಕಲಾತ್ಮಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದರಿಂದ ದೂರವಿರುತ್ತದೆ. ಆದರೆ, ಈ ಚಿತ್ರವು ಧಾರ್ಮಿಕ ವಿಷಯವನ್ನು ಹೊಂದಿರುವುದರಿಂದ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ” ನ್ಯಾಯಮೂರ್ತಿ ತಿಳಿಸಿದ್ದಾರೆ.

ಬೆಳ್ಳಗಿನ ಅವಧಿಯ ವಿಚಾರಣೆಯಲ್ಲಿ ಮೇಲಿನ ವಾದ-ಪ್ರತಿವಾದಗಳು ನಡೆದಿವೆ. ನ್ಯಾಯಾಲಯ ಮಧ್ಯಾಹ್ನ 2 ಗಂಟೆಗೆ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧರಿಸಿದೆ. ಈ ವೇಳೆ ನ್ಯಾಯಾಧೀಶರಿಗಾಗಿ ಸಿನಿಮಾದ ವಿಶೇಷ ಪ್ರದರ್ಶನ ಯಾವಾಗ ಏರ್ಪಡಿಸಬಹುದು ಎಂಬುವುದನ್ನು ಸೆನ್ಸಾರ್ ಮಂಡಳಿ ಮತ್ತು ನಿರ್ಮಾಪಕರು ನ್ಯಾಯಾಲಯಕ್ಕೆ ತಿಳಿಸಲಿದ್ದಾರೆ ಎಂದು barandbench.com ಉಲ್ಲೇಖಿಸಿದೆ.

ಕಣ್ಣೂರಿನ ನಿವಾಸಿಯಾದ ಶ್ರೀದೇವ್ ನಂಬೂದರಿ ಎಂಬುವವರು ಸಿನಿಮಾ ವಿರುದ್ದ ಅರ್ಜಿಯೊಂದನ್ನು ಸಲ್ಲಿಸಿದ್ದು, ಈ ಸಿನಿಮಾ ಕೇರಳವನ್ನು ಅನ್ಯಾಯದ ಮತ್ತು ಕಳಂಕಿತ ರೀತಿಯಲ್ಲಿ ಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಸಿನಿಮಾವನ್ನು ಬಿಡುಗಡೆ ಮಾಡುವುದರಿಂದ ಕೋಮು ಮತ್ತು ಪ್ರಾದೇಶಿಕ ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಮತ್ತು ಇದು ಕಾನೂನು ಸುವ್ಯವಸ್ಥೆಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...