Homeಮುಖಪುಟ'ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ': 'ದಿ ಕೇರಳ ಸ್ಟೋರಿ 2' ಕುರಿತು...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

- Advertisement -
- Advertisement -

ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್’ ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ barandbench.com ವರದಿ ಮಾಡಿದೆ.

ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಮತ್ತು ಸಿನಿಮಾ ಕೋಮುಗಲಭೆಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿ ಅದರ ಸೆನ್ಸಾರ್ ಸರ್ಟಿಫಿಕೇಟ್ ರದ್ದುಗೊಳಿಸಬೇಕು ಎಂದು ಕೋರಿರುವ ಮೂರು ಅರ್ಜಿಗಳ ಕುರಿತು ನಿರ್ಧರಿಸಲು ಸ್ವತಃ ಸಿನಿಮಾ ವೀಕ್ಷಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕೇರಳದಂತಹ ಜಾತ್ಯತೀತ ರಾಜ್ಯವನ್ನು ಕೋಮು ದೃಷ್ಟಿಕೋನದಿಂದ ತೋರಿಸುವಾಗ ಸಿಬಿಎಫ್‌ಸಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಒತ್ತಿ ಹೇಳಿರುವುದಾಗಿ ವರದಿ ತಿಳಿಸಿದೆ.

“ಕೇರಳ ರಾಜ್ಯವು ಅತ್ಯಂತ ಜಾತ್ಯತೀತವಾಗಿದೆ. ಇಲ್ಲಿ ಜನರು ಬಹಳ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಎಲ್ಲೋ ನಡೆದ ಒಂದು ಘಟನೆಯನ್ನು ಇಡೀ ರಾಜ್ಯದಲ್ಲೇ ನಡೆಯುತ್ತಿದೆ ಎಂಬಂತೆ ತೋರಿಸಿದಾಗ ಅದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತದೆ ಮತ್ತು ಅವರ ಆಕ್ರೋಶಕ್ಕೆ ಕಾರಣವಾಗಬಹುದು. ಇಂತಹ ತಪ್ಪು ಮಾಹಿತಿಗಳು ಹರಡಬಾರದು ಎಂಬ ಕಾರಣಕ್ಕಾಗಿಯೇ ಸೆನ್ಸಾರ್ ಮಂಡಳಿ ಮಧ್ಯಪ್ರವೇಶಿಸಿ ಅಂತಹ ದೃಶ್ಯಗಳನ್ನು ಪರಿಶೀಲಿಸುತ್ತದೆ” ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ವರದಿ ವಿವರಿಸಿದೆ.

“ಸಿನಿಮಾವನ್ನು ನೈಜ ಘಟನೆಗಳ ಆಧಾರದ ಮೇಲೆ ರೂಪಿಸಲಾಗಿದೆ ಎಂದು ಚಿತ್ರತಂಡ ಹೇಳಿಕೊಳ್ಳುತ್ತಿದೆ. ಆದ್ದರಿಂದ, ಈ ಚಿತ್ರವು ಸತ್ಯವನ್ನು ತಪ್ಪಾಗಿ ಬಿಂಬಿಸಬಹುದು ಮತ್ತು ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಅರ್ಜಿದಾರರ ಆತಂಕಗಳು ನ್ಯಾಯಸಮ್ಮತವಾಗಿವೆ” ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

“ಸಿನಿಮಾದ ಶೀರ್ಷಿಕೆಯಲ್ಲಿ ರಾಜ್ಯದ ಹೆಸರನ್ನು (ಕೇರಳ) ಬಳಸಲಾಗಿದೆ ಎಂಬ ಅಂಶವನ್ನು ಗಮನಿಸಿದರೆ, ಕೇರಳದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

“ನೀವು ಈ ಸಿನಿಮಾಗೆ ‘ಕೇರಳ’ ಎಂದು ಹೆಸರಿಟ್ಟಿರುವುದರಿಂದ, ಆ ರಾಜ್ಯದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನಾನು ಸಿನಿಮಾಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಏಕೆಂದರೆ ಅದು ಒಂದು ಕಲಾ ಸೃಷ್ಟಿ. ಆದರೆ, ನೀವು ಈ ಚಿತ್ರವು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತೀರಿ ಮತ್ತು ಅದಕ್ಕೆ ‘ಕೇರಳ’ ಎಂಬ ಹೆಸರನ್ನೇ ನೀಡಿದ್ದೀರಿ; ಇದು ಸಮಾಜದಲ್ಲಿ ಕೋಮು ಸಂಘರ್ಷ ಉಂಟುಮಾಡುವ ಸಾಧ್ಯತೆಯಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಜನಾಂಗೀಯ, ಧಾರ್ಮಿಕ ಮತ್ತು ಇತರ ಸಮುದಾಯಗಳನ್ನು ಅವಮಾನಿಸುವಂತಹ ದೃಶ್ಯಗಳು ಅಥವಾ ಪದಗಳನ್ನು ನಿಷೇಧಿಸುವ ಸೆನ್ಸಾರ್ ಮಂಡಳಿಯ ಸ್ವಂತ ಮಾರ್ಗಸೂಚಿಗಳನ್ನು ಈ ಸಿನಿಮಾ ಪಾಲಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ

“ನೋಡಿ, ಸೃಜನಶೀಲ ಸ್ವಾತಂತ್ರ್ಯ ಎಂಬುದು ಖಂಡಿತ ಇದೆ. ಆದರೆ ಸೆನ್ಸಾರ್ ಮಂಡಳಿಯು ಪಾಲಿಸಲೇಬೇಕಾದ ಕೆಲವು ಷರತ್ತುಗಳನ್ನು ವಿಧಿಸಿದೆ. ನೀವು ಅವುಗಳ ಬಗ್ಗೆ ಅರಿತಿದ್ದೀರಾ ಎಂಬುವುದು ಇಲ್ಲಿನ ಪ್ರಶ್ನೆ. ಸಿನಿಮಾದ ಮೇಲಿರುವ ತಪ್ಪು ಕಲ್ಪನೆಗಳು ಸಿನಿಮಾ ನೋಡಿದ ಮೇಲೆ ಬದಲಾಗಬಹುದು ನಿಜ, ಆದರೆ ಇದು ಕೇವಲ ಕಲ್ಪನೆಯಲ್ಲ; ನೀವು ಇದು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತಿದ್ದೀರಿ. ಅದು ಬಹಳ ಮುಖ್ಯವಾದ ವಿಷಯವಾಗುತ್ತದೆ” ಎಂದು ನ್ಯಾಮೂರ್ತಿ ಥಾಮಸ್ ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಶ್ರೀಕುಮಾರ್ ಅವರು, ನ್ಯಾಯಾಲಯವು ಅಂತಿಮ ತೀರ್ಪು ನೀಡುವವರೆಗೆ ಇದುವರೆಗೆ ಬಿಡುಗಡೆಯಾಗಿರುವ ಎಲ್ಲಾ ಟೀಸರ್‌ಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು barandbench.com ವರದಿಯಲ್ಲಿ ಉಲ್ಲೇಖಿಸಿದೆ.

ನ್ಯಾಯಮೂರ್ತಿ ಥಾಮಸ್ ಅವರು ಈ ಪ್ರಕರಣದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿನಿಮಾ ನೋಡಲು ಅನುಕೂಲವಾಗುವಂತೆ ವಿಶೇಷ ಪ್ರದರ್ಶನವನ್ನು ಏರ್ಪಡಿಸಬಹುದು ಎಂದು ಶ್ರೀಕುಮಾರ್ ತಿಳಿಸಿದ್ದಾರೆ. ನ್ಯಾಯಾಧೀಶರು ತಾನು ನಾಳೆಯೇ ಸಿನಿಮಾ ವೀಕ್ಷಿಸುವುದಾಗಿ ಹೇಳಿದ್ದಾರೆ.

“ಸಾಮಾನ್ಯವಾಗಿ ನ್ಯಾಯಾಲಯವು ಕಲಾತ್ಮಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದರಿಂದ ದೂರವಿರುತ್ತದೆ. ಆದರೆ, ಈ ಚಿತ್ರವು ಧಾರ್ಮಿಕ ವಿಷಯವನ್ನು ಹೊಂದಿರುವುದರಿಂದ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ” ನ್ಯಾಯಮೂರ್ತಿ ತಿಳಿಸಿದ್ದಾರೆ.

ಬೆಳ್ಳಗಿನ ಅವಧಿಯ ವಿಚಾರಣೆಯಲ್ಲಿ ಮೇಲಿನ ವಾದ-ಪ್ರತಿವಾದಗಳು ನಡೆದಿವೆ. ನ್ಯಾಯಾಲಯ ಮಧ್ಯಾಹ್ನ 2 ಗಂಟೆಗೆ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧರಿಸಿದೆ. ಈ ವೇಳೆ ನ್ಯಾಯಾಧೀಶರಿಗಾಗಿ ಸಿನಿಮಾದ ವಿಶೇಷ ಪ್ರದರ್ಶನ ಯಾವಾಗ ಏರ್ಪಡಿಸಬಹುದು ಎಂಬುವುದನ್ನು ಸೆನ್ಸಾರ್ ಮಂಡಳಿ ಮತ್ತು ನಿರ್ಮಾಪಕರು ನ್ಯಾಯಾಲಯಕ್ಕೆ ತಿಳಿಸಲಿದ್ದಾರೆ ಎಂದು barandbench.com ಉಲ್ಲೇಖಿಸಿದೆ.

ಕಣ್ಣೂರಿನ ನಿವಾಸಿಯಾದ ಶ್ರೀದೇವ್ ನಂಬೂದರಿ ಎಂಬುವವರು ಸಿನಿಮಾ ವಿರುದ್ದ ಅರ್ಜಿಯೊಂದನ್ನು ಸಲ್ಲಿಸಿದ್ದು, ಈ ಸಿನಿಮಾ ಕೇರಳವನ್ನು ಅನ್ಯಾಯದ ಮತ್ತು ಕಳಂಕಿತ ರೀತಿಯಲ್ಲಿ ಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಸಿನಿಮಾವನ್ನು ಬಿಡುಗಡೆ ಮಾಡುವುದರಿಂದ ಕೋಮು ಮತ್ತು ಪ್ರಾದೇಶಿಕ ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಮತ್ತು ಇದು ಕಾನೂನು ಸುವ್ಯವಸ್ಥೆಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...