Homeಮುಖಪುಟ'ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ': 'ದಿ ಕೇರಳ ಸ್ಟೋರಿ 2' ಕುರಿತು...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

- Advertisement -
- Advertisement -

ವಿವಾದಾತ್ಮಕ ‘ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್’ ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ barandbench.com ವರದಿ ಮಾಡಿದೆ.

ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕು ಮತ್ತು ಸಿನಿಮಾ ಕೋಮುಗಲಭೆಗೆ ಕಾರಣವಾಗಬಹುದು ಎಂದು ಕಳವಳ ವ್ಯಕ್ತಪಡಿಸಿ ಅದರ ಸೆನ್ಸಾರ್ ಸರ್ಟಿಫಿಕೇಟ್ ರದ್ದುಗೊಳಿಸಬೇಕು ಎಂದು ಕೋರಿರುವ ಮೂರು ಅರ್ಜಿಗಳ ಕುರಿತು ನಿರ್ಧರಿಸಲು ಸ್ವತಃ ಸಿನಿಮಾ ವೀಕ್ಷಿಸುವುದಾಗಿ ನ್ಯಾಯಾಧೀಶರು ಹೇಳಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.

ಕೇರಳದಂತಹ ಜಾತ್ಯತೀತ ರಾಜ್ಯವನ್ನು ಕೋಮು ದೃಷ್ಟಿಕೋನದಿಂದ ತೋರಿಸುವಾಗ ಸಿಬಿಎಫ್‌ಸಿ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಒತ್ತಿ ಹೇಳಿರುವುದಾಗಿ ವರದಿ ತಿಳಿಸಿದೆ.

“ಕೇರಳ ರಾಜ್ಯವು ಅತ್ಯಂತ ಜಾತ್ಯತೀತವಾಗಿದೆ. ಇಲ್ಲಿ ಜನರು ಬಹಳ ಸಾಮರಸ್ಯದಿಂದ ಬದುಕುತ್ತಿದ್ದಾರೆ. ಎಲ್ಲೋ ನಡೆದ ಒಂದು ಘಟನೆಯನ್ನು ಇಡೀ ರಾಜ್ಯದಲ್ಲೇ ನಡೆಯುತ್ತಿದೆ ಎಂಬಂತೆ ತೋರಿಸಿದಾಗ ಅದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿಸುತ್ತದೆ ಮತ್ತು ಅವರ ಆಕ್ರೋಶಕ್ಕೆ ಕಾರಣವಾಗಬಹುದು. ಇಂತಹ ತಪ್ಪು ಮಾಹಿತಿಗಳು ಹರಡಬಾರದು ಎಂಬ ಕಾರಣಕ್ಕಾಗಿಯೇ ಸೆನ್ಸಾರ್ ಮಂಡಳಿ ಮಧ್ಯಪ್ರವೇಶಿಸಿ ಅಂತಹ ದೃಶ್ಯಗಳನ್ನು ಪರಿಶೀಲಿಸುತ್ತದೆ” ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ವರದಿ ವಿವರಿಸಿದೆ.

“ಸಿನಿಮಾವನ್ನು ನೈಜ ಘಟನೆಗಳ ಆಧಾರದ ಮೇಲೆ ರೂಪಿಸಲಾಗಿದೆ ಎಂದು ಚಿತ್ರತಂಡ ಹೇಳಿಕೊಳ್ಳುತ್ತಿದೆ. ಆದ್ದರಿಂದ, ಈ ಚಿತ್ರವು ಸತ್ಯವನ್ನು ತಪ್ಪಾಗಿ ಬಿಂಬಿಸಬಹುದು ಮತ್ತು ಸಮಾಜದಲ್ಲಿ ಕೋಮು ಸಂಘರ್ಷಕ್ಕೆ ಕಾರಣವಾಗಬಹುದು ಎಂಬ ಅರ್ಜಿದಾರರ ಆತಂಕಗಳು ನ್ಯಾಯಸಮ್ಮತವಾಗಿವೆ” ಎಂದು ನ್ಯಾಯಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

“ಸಿನಿಮಾದ ಶೀರ್ಷಿಕೆಯಲ್ಲಿ ರಾಜ್ಯದ ಹೆಸರನ್ನು (ಕೇರಳ) ಬಳಸಲಾಗಿದೆ ಎಂಬ ಅಂಶವನ್ನು ಗಮನಿಸಿದರೆ, ಕೇರಳದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ” ಎಂದು ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

“ನೀವು ಈ ಸಿನಿಮಾಗೆ ‘ಕೇರಳ’ ಎಂದು ಹೆಸರಿಟ್ಟಿರುವುದರಿಂದ, ಆ ರಾಜ್ಯದ ಜನರ ಆತಂಕಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನಾನು ಸಿನಿಮಾಗಳ ವಿಷಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ, ಏಕೆಂದರೆ ಅದು ಒಂದು ಕಲಾ ಸೃಷ್ಟಿ. ಆದರೆ, ನೀವು ಈ ಚಿತ್ರವು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತೀರಿ ಮತ್ತು ಅದಕ್ಕೆ ‘ಕೇರಳ’ ಎಂಬ ಹೆಸರನ್ನೇ ನೀಡಿದ್ದೀರಿ; ಇದು ಸಮಾಜದಲ್ಲಿ ಕೋಮು ಸಂಘರ್ಷ ಉಂಟುಮಾಡುವ ಸಾಧ್ಯತೆಯಿದೆ” ಎಂದು ನ್ಯಾಯಮೂರ್ತಿ ಹೇಳಿದ್ದಾರೆ.

“ಜನಾಂಗೀಯ, ಧಾರ್ಮಿಕ ಮತ್ತು ಇತರ ಸಮುದಾಯಗಳನ್ನು ಅವಮಾನಿಸುವಂತಹ ದೃಶ್ಯಗಳು ಅಥವಾ ಪದಗಳನ್ನು ನಿಷೇಧಿಸುವ ಸೆನ್ಸಾರ್ ಮಂಡಳಿಯ ಸ್ವಂತ ಮಾರ್ಗಸೂಚಿಗಳನ್ನು ಈ ಸಿನಿಮಾ ಪಾಲಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ

“ನೋಡಿ, ಸೃಜನಶೀಲ ಸ್ವಾತಂತ್ರ್ಯ ಎಂಬುದು ಖಂಡಿತ ಇದೆ. ಆದರೆ ಸೆನ್ಸಾರ್ ಮಂಡಳಿಯು ಪಾಲಿಸಲೇಬೇಕಾದ ಕೆಲವು ಷರತ್ತುಗಳನ್ನು ವಿಧಿಸಿದೆ. ನೀವು ಅವುಗಳ ಬಗ್ಗೆ ಅರಿತಿದ್ದೀರಾ ಎಂಬುವುದು ಇಲ್ಲಿನ ಪ್ರಶ್ನೆ. ಸಿನಿಮಾದ ಮೇಲಿರುವ ತಪ್ಪು ಕಲ್ಪನೆಗಳು ಸಿನಿಮಾ ನೋಡಿದ ಮೇಲೆ ಬದಲಾಗಬಹುದು ನಿಜ, ಆದರೆ ಇದು ಕೇವಲ ಕಲ್ಪನೆಯಲ್ಲ; ನೀವು ಇದು ನೈಜ ಘಟನೆಗಳಿಂದ ಪ್ರೇರಿತವಾಗಿದೆ ಎಂದು ಹೇಳುತ್ತಿದ್ದೀರಿ. ಅದು ಬಹಳ ಮುಖ್ಯವಾದ ವಿಷಯವಾಗುತ್ತದೆ” ಎಂದು ನ್ಯಾಮೂರ್ತಿ ಥಾಮಸ್ ಅವರು ಮೌಖಿಕವಾಗಿ ಅಭಿಪ್ರಾಯಪಟ್ಟಿದ್ದಾರೆ.

ನಿರ್ಮಾಪಕರ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಶ್ರೀಕುಮಾರ್ ಅವರು, ನ್ಯಾಯಾಲಯವು ಅಂತಿಮ ತೀರ್ಪು ನೀಡುವವರೆಗೆ ಇದುವರೆಗೆ ಬಿಡುಗಡೆಯಾಗಿರುವ ಎಲ್ಲಾ ಟೀಸರ್‌ಗಳನ್ನು ತೆಗೆದುಹಾಕಲು ಒಪ್ಪಿಕೊಂಡಿದ್ದಾರೆ ಎಂದು barandbench.com ವರದಿಯಲ್ಲಿ ಉಲ್ಲೇಖಿಸಿದೆ.

ನ್ಯಾಯಮೂರ್ತಿ ಥಾಮಸ್ ಅವರು ಈ ಪ್ರಕರಣದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಮೊದಲು ಸಿನಿಮಾ ನೋಡಲು ಅನುಕೂಲವಾಗುವಂತೆ ವಿಶೇಷ ಪ್ರದರ್ಶನವನ್ನು ಏರ್ಪಡಿಸಬಹುದು ಎಂದು ಶ್ರೀಕುಮಾರ್ ತಿಳಿಸಿದ್ದಾರೆ. ನ್ಯಾಯಾಧೀಶರು ತಾನು ನಾಳೆಯೇ ಸಿನಿಮಾ ವೀಕ್ಷಿಸುವುದಾಗಿ ಹೇಳಿದ್ದಾರೆ.

“ಸಾಮಾನ್ಯವಾಗಿ ನ್ಯಾಯಾಲಯವು ಕಲಾತ್ಮಕ ಸ್ವಾತಂತ್ರ್ಯವನ್ನು ಉಲ್ಲಂಘಿಸುವುದರಿಂದ ದೂರವಿರುತ್ತದೆ. ಆದರೆ, ಈ ಚಿತ್ರವು ಧಾರ್ಮಿಕ ವಿಷಯವನ್ನು ಹೊಂದಿರುವುದರಿಂದ, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ” ನ್ಯಾಯಮೂರ್ತಿ ತಿಳಿಸಿದ್ದಾರೆ.

ಬೆಳ್ಳಗಿನ ಅವಧಿಯ ವಿಚಾರಣೆಯಲ್ಲಿ ಮೇಲಿನ ವಾದ-ಪ್ರತಿವಾದಗಳು ನಡೆದಿವೆ. ನ್ಯಾಯಾಲಯ ಮಧ್ಯಾಹ್ನ 2 ಗಂಟೆಗೆ ಹೆಚ್ಚಿನ ವಿಚಾರಣೆ ನಡೆಸಲು ನಿರ್ಧರಿಸಿದೆ. ಈ ವೇಳೆ ನ್ಯಾಯಾಧೀಶರಿಗಾಗಿ ಸಿನಿಮಾದ ವಿಶೇಷ ಪ್ರದರ್ಶನ ಯಾವಾಗ ಏರ್ಪಡಿಸಬಹುದು ಎಂಬುವುದನ್ನು ಸೆನ್ಸಾರ್ ಮಂಡಳಿ ಮತ್ತು ನಿರ್ಮಾಪಕರು ನ್ಯಾಯಾಲಯಕ್ಕೆ ತಿಳಿಸಲಿದ್ದಾರೆ ಎಂದು barandbench.com ಉಲ್ಲೇಖಿಸಿದೆ.

ಕಣ್ಣೂರಿನ ನಿವಾಸಿಯಾದ ಶ್ರೀದೇವ್ ನಂಬೂದರಿ ಎಂಬುವವರು ಸಿನಿಮಾ ವಿರುದ್ದ ಅರ್ಜಿಯೊಂದನ್ನು ಸಲ್ಲಿಸಿದ್ದು, ಈ ಸಿನಿಮಾ ಕೇರಳವನ್ನು ಅನ್ಯಾಯದ ಮತ್ತು ಕಳಂಕಿತ ರೀತಿಯಲ್ಲಿ ಬಿಂಬಿಸುತ್ತದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಸಿನಿಮಾವನ್ನು ಬಿಡುಗಡೆ ಮಾಡುವುದರಿಂದ ಕೋಮು ಮತ್ತು ಪ್ರಾದೇಶಿಕ ಸಾಮರಸ್ಯಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ ಮತ್ತು ಇದು ಕಾನೂನು ಸುವ್ಯವಸ್ಥೆಯ ಸಮಸ್ಯೆಗಳಿಗೆ ದಾರಿ ಮಾಡಿಕೊಡಬಹುದು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...