Homeಮುಖಪುಟಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಧನ್ಯವಾದಗಳು ಕೇರಳ, ಎಲ್‌ಡಿಎಫ್‌ನಲ್ಲಿ ಮತ್ತೆ ನಂಬಿಕೆ ಇರಿಸಿದಕ್ಕಾಗಿ ಧನ್ಯವಾದ ಎಂದಿದ್ದಾರೆ.

- Advertisement -
- Advertisement -

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಸಿಪಿಐ (ಎಂ) ನೇತೃತ್ವದ ಎಡಪಕ್ಷಗಳ ಒಕ್ಕೂಟ ಮತ ಎಣಿಕೆ ಆರಂಭವಾದಾಗಿನಿಂದ ಇಲ್ಲಿಯವರೆಗೂ‌ ಮುನ್ನಡೆ ಕಾಯ್ದುಕೊಂಡಿದೆ.

ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವೆಂದೆ ಪರಿಗಣಿಸಲಾಗಿದೆ.

ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಎರಡನೇ ಸ್ಥಾನದಲ್ಲಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಎರಡು ಮುನ್ಸಿಪಲ್‌ಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಕೇರಳದ 941 ಗ್ರಾಮ ಪಂಚಾಯಿತಿಗಳು, 152 ಬ್ಲಾಕ್ ಪಂಚಾಯಿತಿಗಳು, 14 ಜಿಲ್ಲಾ ಪಂಚಾಯಿತಿಗಳು, 86 ಪುರಸಭೆಗಳು ಮತ್ತು 6 ನಿಗಮಗಳ ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ: ಎಡಪಕ್ಷಗಳ ಒಕ್ಕೂಟಕ್ಕೆ ಮುನ್ನಡೆ

941 ಗ್ರಾಮಪಂಚಾಯಿತಿಗಳು
LDF – ‌ 514
UDF ‌- 377  
NDA –  22
ಇತರರು – 28

86 ಮುನ್ಸಿಪಲ್‌ಗಳಲ್ಲಿ ಎಲ್‌ಡಿಎಫ್‌ 45, ಯುಡಿಎಫ್‌ 35, ಇತರರು 4 ಹಾಗೂ ಬಿಜೆಪಿ 2ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

152 ಬ್ಲಾಕ್‌ಗಳು
LDF- ‌109
UDF- 43
NAD- 00
ಇತರರು – 00

ಕೇರಳದ 152 ಬ್ಲಾಕ್‌ಗಳಲ್ಲಿ ಎಲ್‌ಡಿಎಫ್‌ 109, ಯುಡಿಎಫ್‌ 43 ರಲ್ಲಿ ಮುನ್ನಡೆಯಲಿದ್ದು ಬಿಜೆಪಿ ಯಾವುದೇ ಸ್ಥಾನದಲ್ಲೂ ಮುನ್ನಡೆ ಸಾಧಿಸಿಲ್ಲ.

14 ಜಿಲ್ಲಾ ಪಂಚಾಯಿತಿಗಳು
LDF- ‌10
UDF- 04
NAD- 00
ಇತರರು -00 

14 ಜಿಲ್ಲಾ ಪಂಚಾಯಿತಿಗಳಲ್ಲಿ ಎಲ್‌ಡಿಎಫ್‌ 10, ಯುಡಿಎಫ್‌ 4 ರಲ್ಲಿ ಮುನ್ನಡೆಯಲಿದ್ದು ಬಿಜೆಪಿ ಯಾವುದೇ ಸ್ಥಾನದಲ್ಲೂ ಮುನ್ನಡೆ ಸಾಧಿಸಿಲ್ಲ.

86 ಪುರಸಭೆಗಳು
LDF- ‌ 35
UDF- 45
NAD- 02
ಇತರರು- 04

86 ಪುರಸಭೆಗಳಲ್ಲಿ ಯು‌ಡಿಎಫ್‌ 45 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಆಡಳಿತರೂಢ ಎಲ್‌ಡಿಎಫ್‌ 35, ಇತರರು 4 ಹಾಗೂ ಬಿಜೆಪಿ 2ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

6 ಕಾರ್ಪೊರೇಶನ್‌ಗಳು
LDF- ‌ 04
UDF- 02
NAD- 00

6 ಕಾರ್ಪೊರೇಶನ್‌ಗಳ ಪೈಕಿ ಎಲ್‌ಡಿಎಫ್‌ 4, ಯುಡಿಎಫ್‌ 2ರಲ್ಲಿ ಮುನ್ನಡೆಯಲ್ಲಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಶೂನ್ಯ ಸಂಪಾದನೆ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಧನ್ಯವಾದಗಳು ಕೇರಳ, ಎಲ್‌ಡಿಎಫ್‌ನಲ್ಲಿ ನಂಬಿಕೆ ಇರಿಸಿದಕ್ಕಾಗಿ ಧನ್ಯವಾದ ಎಂದಿದ್ದಾರೆ.

” ಧನ್ಯವಾದಗಳು ಕೇರಳ. ಎಲ್‌ಡಿಎಫ್‌ನಲ್ಲಿ ನಂಬಿಕೆಯನ್ನು ಮತ್ತೆ ಇರಿಸಿದ್ದಕ್ಕಾಗಿ ಧನ್ಯವಾದಗಳು. ಕೇರಳದ ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ನಾವು ವಿನಮ್ರರಾಗಿದ್ದೇವೆ. ಇದು ಜಾತ್ಯತೀತತೆ ಮತ್ತು ಅಂತರ್ಗತ ಅಭಿವೃದ್ಧಿಯ ವಿಜಯವಾಗಿದೆ. ಚುನಾಯಿತ ಎಲ್ಲ ಪ್ರತಿನಿಧಿಗಳಿಗೆ ನನ್ನ ಆತ್ಮೀಯ ಶುಭಾಶಯಗಳು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....