Homeಮುಖಪುಟಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಧನ್ಯವಾದಗಳು ಕೇರಳ, ಎಲ್‌ಡಿಎಫ್‌ನಲ್ಲಿ ಮತ್ತೆ ನಂಬಿಕೆ ಇರಿಸಿದಕ್ಕಾಗಿ ಧನ್ಯವಾದ ಎಂದಿದ್ದಾರೆ.

- Advertisement -
- Advertisement -

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಸಿಪಿಐ (ಎಂ) ನೇತೃತ್ವದ ಎಡಪಕ್ಷಗಳ ಒಕ್ಕೂಟ ಮತ ಎಣಿಕೆ ಆರಂಭವಾದಾಗಿನಿಂದ ಇಲ್ಲಿಯವರೆಗೂ‌ ಮುನ್ನಡೆ ಕಾಯ್ದುಕೊಂಡಿದೆ.

ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವೆಂದೆ ಪರಿಗಣಿಸಲಾಗಿದೆ.

ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಎರಡನೇ ಸ್ಥಾನದಲ್ಲಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಎರಡು ಮುನ್ಸಿಪಲ್‌ಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಕೇರಳದ 941 ಗ್ರಾಮ ಪಂಚಾಯಿತಿಗಳು, 152 ಬ್ಲಾಕ್ ಪಂಚಾಯಿತಿಗಳು, 14 ಜಿಲ್ಲಾ ಪಂಚಾಯಿತಿಗಳು, 86 ಪುರಸಭೆಗಳು ಮತ್ತು 6 ನಿಗಮಗಳ ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ: ಎಡಪಕ್ಷಗಳ ಒಕ್ಕೂಟಕ್ಕೆ ಮುನ್ನಡೆ

941 ಗ್ರಾಮಪಂಚಾಯಿತಿಗಳು
LDF – ‌ 514
UDF ‌- 377  
NDA –  22
ಇತರರು – 28

86 ಮುನ್ಸಿಪಲ್‌ಗಳಲ್ಲಿ ಎಲ್‌ಡಿಎಫ್‌ 45, ಯುಡಿಎಫ್‌ 35, ಇತರರು 4 ಹಾಗೂ ಬಿಜೆಪಿ 2ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

152 ಬ್ಲಾಕ್‌ಗಳು
LDF- ‌109
UDF- 43
NAD- 00
ಇತರರು – 00

ಕೇರಳದ 152 ಬ್ಲಾಕ್‌ಗಳಲ್ಲಿ ಎಲ್‌ಡಿಎಫ್‌ 109, ಯುಡಿಎಫ್‌ 43 ರಲ್ಲಿ ಮುನ್ನಡೆಯಲಿದ್ದು ಬಿಜೆಪಿ ಯಾವುದೇ ಸ್ಥಾನದಲ್ಲೂ ಮುನ್ನಡೆ ಸಾಧಿಸಿಲ್ಲ.

14 ಜಿಲ್ಲಾ ಪಂಚಾಯಿತಿಗಳು
LDF- ‌10
UDF- 04
NAD- 00
ಇತರರು -00 

14 ಜಿಲ್ಲಾ ಪಂಚಾಯಿತಿಗಳಲ್ಲಿ ಎಲ್‌ಡಿಎಫ್‌ 10, ಯುಡಿಎಫ್‌ 4 ರಲ್ಲಿ ಮುನ್ನಡೆಯಲಿದ್ದು ಬಿಜೆಪಿ ಯಾವುದೇ ಸ್ಥಾನದಲ್ಲೂ ಮುನ್ನಡೆ ಸಾಧಿಸಿಲ್ಲ.

86 ಪುರಸಭೆಗಳು
LDF- ‌ 35
UDF- 45
NAD- 02
ಇತರರು- 04

86 ಪುರಸಭೆಗಳಲ್ಲಿ ಯು‌ಡಿಎಫ್‌ 45 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಆಡಳಿತರೂಢ ಎಲ್‌ಡಿಎಫ್‌ 35, ಇತರರು 4 ಹಾಗೂ ಬಿಜೆಪಿ 2ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

6 ಕಾರ್ಪೊರೇಶನ್‌ಗಳು
LDF- ‌ 04
UDF- 02
NAD- 00

6 ಕಾರ್ಪೊರೇಶನ್‌ಗಳ ಪೈಕಿ ಎಲ್‌ಡಿಎಫ್‌ 4, ಯುಡಿಎಫ್‌ 2ರಲ್ಲಿ ಮುನ್ನಡೆಯಲ್ಲಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಶೂನ್ಯ ಸಂಪಾದನೆ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಧನ್ಯವಾದಗಳು ಕೇರಳ, ಎಲ್‌ಡಿಎಫ್‌ನಲ್ಲಿ ನಂಬಿಕೆ ಇರಿಸಿದಕ್ಕಾಗಿ ಧನ್ಯವಾದ ಎಂದಿದ್ದಾರೆ.

” ಧನ್ಯವಾದಗಳು ಕೇರಳ. ಎಲ್‌ಡಿಎಫ್‌ನಲ್ಲಿ ನಂಬಿಕೆಯನ್ನು ಮತ್ತೆ ಇರಿಸಿದ್ದಕ್ಕಾಗಿ ಧನ್ಯವಾದಗಳು. ಕೇರಳದ ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ನಾವು ವಿನಮ್ರರಾಗಿದ್ದೇವೆ. ಇದು ಜಾತ್ಯತೀತತೆ ಮತ್ತು ಅಂತರ್ಗತ ಅಭಿವೃದ್ಧಿಯ ವಿಜಯವಾಗಿದೆ. ಚುನಾಯಿತ ಎಲ್ಲ ಪ್ರತಿನಿಧಿಗಳಿಗೆ ನನ್ನ ಆತ್ಮೀಯ ಶುಭಾಶಯಗಳು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...