Homeಮುಖಪುಟಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಧನ್ಯವಾದಗಳು ಕೇರಳ, ಎಲ್‌ಡಿಎಫ್‌ನಲ್ಲಿ ಮತ್ತೆ ನಂಬಿಕೆ ಇರಿಸಿದಕ್ಕಾಗಿ ಧನ್ಯವಾದ ಎಂದಿದ್ದಾರೆ.

- Advertisement -
- Advertisement -

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಸಿಪಿಐ (ಎಂ) ನೇತೃತ್ವದ ಎಡಪಕ್ಷಗಳ ಒಕ್ಕೂಟ ಮತ ಎಣಿಕೆ ಆರಂಭವಾದಾಗಿನಿಂದ ಇಲ್ಲಿಯವರೆಗೂ‌ ಮುನ್ನಡೆ ಕಾಯ್ದುಕೊಂಡಿದೆ.

ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವೆಂದೆ ಪರಿಗಣಿಸಲಾಗಿದೆ.

ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಎರಡನೇ ಸ್ಥಾನದಲ್ಲಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಎರಡು ಮುನ್ಸಿಪಲ್‌ಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಕೇರಳದ 941 ಗ್ರಾಮ ಪಂಚಾಯಿತಿಗಳು, 152 ಬ್ಲಾಕ್ ಪಂಚಾಯಿತಿಗಳು, 14 ಜಿಲ್ಲಾ ಪಂಚಾಯಿತಿಗಳು, 86 ಪುರಸಭೆಗಳು ಮತ್ತು 6 ನಿಗಮಗಳ ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ: ಎಡಪಕ್ಷಗಳ ಒಕ್ಕೂಟಕ್ಕೆ ಮುನ್ನಡೆ

941 ಗ್ರಾಮಪಂಚಾಯಿತಿಗಳು
LDF – ‌ 514
UDF ‌- 377  
NDA –  22
ಇತರರು – 28

86 ಮುನ್ಸಿಪಲ್‌ಗಳಲ್ಲಿ ಎಲ್‌ಡಿಎಫ್‌ 45, ಯುಡಿಎಫ್‌ 35, ಇತರರು 4 ಹಾಗೂ ಬಿಜೆಪಿ 2ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

152 ಬ್ಲಾಕ್‌ಗಳು
LDF- ‌109
UDF- 43
NAD- 00
ಇತರರು – 00

ಕೇರಳದ 152 ಬ್ಲಾಕ್‌ಗಳಲ್ಲಿ ಎಲ್‌ಡಿಎಫ್‌ 109, ಯುಡಿಎಫ್‌ 43 ರಲ್ಲಿ ಮುನ್ನಡೆಯಲಿದ್ದು ಬಿಜೆಪಿ ಯಾವುದೇ ಸ್ಥಾನದಲ್ಲೂ ಮುನ್ನಡೆ ಸಾಧಿಸಿಲ್ಲ.

14 ಜಿಲ್ಲಾ ಪಂಚಾಯಿತಿಗಳು
LDF- ‌10
UDF- 04
NAD- 00
ಇತರರು -00 

14 ಜಿಲ್ಲಾ ಪಂಚಾಯಿತಿಗಳಲ್ಲಿ ಎಲ್‌ಡಿಎಫ್‌ 10, ಯುಡಿಎಫ್‌ 4 ರಲ್ಲಿ ಮುನ್ನಡೆಯಲಿದ್ದು ಬಿಜೆಪಿ ಯಾವುದೇ ಸ್ಥಾನದಲ್ಲೂ ಮುನ್ನಡೆ ಸಾಧಿಸಿಲ್ಲ.

86 ಪುರಸಭೆಗಳು
LDF- ‌ 35
UDF- 45
NAD- 02
ಇತರರು- 04

86 ಪುರಸಭೆಗಳಲ್ಲಿ ಯು‌ಡಿಎಫ್‌ 45 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಆಡಳಿತರೂಢ ಎಲ್‌ಡಿಎಫ್‌ 35, ಇತರರು 4 ಹಾಗೂ ಬಿಜೆಪಿ 2ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

6 ಕಾರ್ಪೊರೇಶನ್‌ಗಳು
LDF- ‌ 04
UDF- 02
NAD- 00

6 ಕಾರ್ಪೊರೇಶನ್‌ಗಳ ಪೈಕಿ ಎಲ್‌ಡಿಎಫ್‌ 4, ಯುಡಿಎಫ್‌ 2ರಲ್ಲಿ ಮುನ್ನಡೆಯಲ್ಲಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಶೂನ್ಯ ಸಂಪಾದನೆ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಧನ್ಯವಾದಗಳು ಕೇರಳ, ಎಲ್‌ಡಿಎಫ್‌ನಲ್ಲಿ ನಂಬಿಕೆ ಇರಿಸಿದಕ್ಕಾಗಿ ಧನ್ಯವಾದ ಎಂದಿದ್ದಾರೆ.

” ಧನ್ಯವಾದಗಳು ಕೇರಳ. ಎಲ್‌ಡಿಎಫ್‌ನಲ್ಲಿ ನಂಬಿಕೆಯನ್ನು ಮತ್ತೆ ಇರಿಸಿದ್ದಕ್ಕಾಗಿ ಧನ್ಯವಾದಗಳು. ಕೇರಳದ ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ನಾವು ವಿನಮ್ರರಾಗಿದ್ದೇವೆ. ಇದು ಜಾತ್ಯತೀತತೆ ಮತ್ತು ಅಂತರ್ಗತ ಅಭಿವೃದ್ಧಿಯ ವಿಜಯವಾಗಿದೆ. ಚುನಾಯಿತ ಎಲ್ಲ ಪ್ರತಿನಿಧಿಗಳಿಗೆ ನನ್ನ ಆತ್ಮೀಯ ಶುಭಾಶಯಗಳು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....