Homeಮುಖಪುಟಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವಿನತ್ತ ಎಡಪಕ್ಷಗಳ ಒಕ್ಕೂಟ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಧನ್ಯವಾದಗಳು ಕೇರಳ, ಎಲ್‌ಡಿಎಫ್‌ನಲ್ಲಿ ಮತ್ತೆ ನಂಬಿಕೆ ಇರಿಸಿದಕ್ಕಾಗಿ ಧನ್ಯವಾದ ಎಂದಿದ್ದಾರೆ.

- Advertisement -
- Advertisement -

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಆಡಳಿತರೂಢ ಸಿಪಿಐ (ಎಂ) ನೇತೃತ್ವದ ಎಡಪಕ್ಷಗಳ ಒಕ್ಕೂಟ ಮತ ಎಣಿಕೆ ಆರಂಭವಾದಾಗಿನಿಂದ ಇಲ್ಲಿಯವರೆಗೂ‌ ಮುನ್ನಡೆ ಕಾಯ್ದುಕೊಂಡಿದೆ.

ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳಿಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಪೂರ್ವಭಾವಿ ಪರೀಕ್ಷೆಯ ಫಲಿತಾಂಶವೆಂದೆ ಪರಿಗಣಿಸಲಾಗಿದೆ.

ಕಾಂಗ್ರೆಸ್‌ ನೇತೃತ್ವದ ಯುನೈಟೆಡ್‌ ಡೆಮಾಕ್ರಟಿಕ್‌ ಫ್ರಂಟ್‌ (ಯುಡಿಎಫ್‌) ಎರಡನೇ ಸ್ಥಾನದಲ್ಲಿದ್ದರೆ, ಬಿಜೆಪಿ ನೇತೃತ್ವದ ಎನ್‌ಡಿಎ ಎರಡು ಮುನ್ಸಿಪಲ್‌ಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ.

ಕೇರಳದ 941 ಗ್ರಾಮ ಪಂಚಾಯಿತಿಗಳು, 152 ಬ್ಲಾಕ್ ಪಂಚಾಯಿತಿಗಳು, 14 ಜಿಲ್ಲಾ ಪಂಚಾಯಿತಿಗಳು, 86 ಪುರಸಭೆಗಳು ಮತ್ತು 6 ನಿಗಮಗಳ ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ: ಎಡಪಕ್ಷಗಳ ಒಕ್ಕೂಟಕ್ಕೆ ಮುನ್ನಡೆ

941 ಗ್ರಾಮಪಂಚಾಯಿತಿಗಳು
LDF – ‌ 514
UDF ‌- 377  
NDA –  22
ಇತರರು – 28

86 ಮುನ್ಸಿಪಲ್‌ಗಳಲ್ಲಿ ಎಲ್‌ಡಿಎಫ್‌ 45, ಯುಡಿಎಫ್‌ 35, ಇತರರು 4 ಹಾಗೂ ಬಿಜೆಪಿ 2ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

152 ಬ್ಲಾಕ್‌ಗಳು
LDF- ‌109
UDF- 43
NAD- 00
ಇತರರು – 00

ಕೇರಳದ 152 ಬ್ಲಾಕ್‌ಗಳಲ್ಲಿ ಎಲ್‌ಡಿಎಫ್‌ 109, ಯುಡಿಎಫ್‌ 43 ರಲ್ಲಿ ಮುನ್ನಡೆಯಲಿದ್ದು ಬಿಜೆಪಿ ಯಾವುದೇ ಸ್ಥಾನದಲ್ಲೂ ಮುನ್ನಡೆ ಸಾಧಿಸಿಲ್ಲ.

14 ಜಿಲ್ಲಾ ಪಂಚಾಯಿತಿಗಳು
LDF- ‌10
UDF- 04
NAD- 00
ಇತರರು -00 

14 ಜಿಲ್ಲಾ ಪಂಚಾಯಿತಿಗಳಲ್ಲಿ ಎಲ್‌ಡಿಎಫ್‌ 10, ಯುಡಿಎಫ್‌ 4 ರಲ್ಲಿ ಮುನ್ನಡೆಯಲಿದ್ದು ಬಿಜೆಪಿ ಯಾವುದೇ ಸ್ಥಾನದಲ್ಲೂ ಮುನ್ನಡೆ ಸಾಧಿಸಿಲ್ಲ.

86 ಪುರಸಭೆಗಳು
LDF- ‌ 35
UDF- 45
NAD- 02
ಇತರರು- 04

86 ಪುರಸಭೆಗಳಲ್ಲಿ ಯು‌ಡಿಎಫ್‌ 45 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇಲ್ಲಿ ಆಡಳಿತರೂಢ ಎಲ್‌ಡಿಎಫ್‌ 35, ಇತರರು 4 ಹಾಗೂ ಬಿಜೆಪಿ 2ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇದನ್ನೂ ಓದಿ: ರಜನಿಯ ಹೊಸ ರಾಜಕೀಯ ಪಕ್ಷದ ಹೆಸರು ಮಕ್ಕಳ್ ಸೇವೈ ಕಚ್ಚಿ? ಚಿಹ್ನೆ ಆಟೋ ರಿಕ್ಷಾ?

6 ಕಾರ್ಪೊರೇಶನ್‌ಗಳು
LDF- ‌ 04
UDF- 02
NAD- 00

6 ಕಾರ್ಪೊರೇಶನ್‌ಗಳ ಪೈಕಿ ಎಲ್‌ಡಿಎಫ್‌ 4, ಯುಡಿಎಫ್‌ 2ರಲ್ಲಿ ಮುನ್ನಡೆಯಲ್ಲಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಶೂನ್ಯ ಸಂಪಾದನೆ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಧನ್ಯವಾದಗಳು ಕೇರಳ, ಎಲ್‌ಡಿಎಫ್‌ನಲ್ಲಿ ನಂಬಿಕೆ ಇರಿಸಿದಕ್ಕಾಗಿ ಧನ್ಯವಾದ ಎಂದಿದ್ದಾರೆ.

” ಧನ್ಯವಾದಗಳು ಕೇರಳ. ಎಲ್‌ಡಿಎಫ್‌ನಲ್ಲಿ ನಂಬಿಕೆಯನ್ನು ಮತ್ತೆ ಇರಿಸಿದ್ದಕ್ಕಾಗಿ ಧನ್ಯವಾದಗಳು. ಕೇರಳದ ಜನರ ನಂಬಿಕೆ ಮತ್ತು ವಿಶ್ವಾಸಕ್ಕೆ ನಾವು ವಿನಮ್ರರಾಗಿದ್ದೇವೆ. ಇದು ಜಾತ್ಯತೀತತೆ ಮತ್ತು ಅಂತರ್ಗತ ಅಭಿವೃದ್ಧಿಯ ವಿಜಯವಾಗಿದೆ. ಚುನಾಯಿತ ಎಲ್ಲ ಪ್ರತಿನಿಧಿಗಳಿಗೆ ನನ್ನ ಆತ್ಮೀಯ ಶುಭಾಶಯಗಳು” ಎಂದು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಬಿಜೆಪಿ ಕಳ್ಳರ ಪಕ್ಷ, ಅವರಿಗಿಂತ ದೊಡ್ಡ ಕಳ್ಳರು ಎಲ್ಲೂ ಇಲ್ಲ- ಮಮತಾ ಬ್ಯಾನರ್ಜಿ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...