Homeಮುಖಪುಟಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ: ಎಡಪಕ್ಷಗಳ ಒಕ್ಕೂಟಕ್ಕೆ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ: ಎಡಪಕ್ಷಗಳ ಒಕ್ಕೂಟಕ್ಕೆ ಮುನ್ನಡೆ

941 ಗ್ರಾಮ ಪಂಚಾಯಿತಿಗಳಲ್ಲಿ 493 ರಲ್ಲಿ ಎಲ್‌ಡಿಎಫ್ ಮತ್ತು 380 ರಲ್ಲಿ ಯುಡಿಎಫ್ ಮುನ್ನಡೆ ಸಾಧಿಸುತ್ತಿವೆ.

- Advertisement -
- Advertisement -

ಮುಂದಿನ ವರ್ಷ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳಿಗೆ ಪೂರ್ವಭಾವಿ ಪರೀಕ್ಷೆಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಮತಎಣಿಕೆ ನಡೆಯುತ್ತಿದ್ದು, ಕೇರಳದ ಆಡಳಿತಾರೂಢ ಎಡ ಪಂಥೀಯ ಒಕ್ಕೂಟ(LDF) ಮುನ್ನಡೆ ಸಾಧಿಸುತ್ತಿದೆ.

ಕೇರಳದ 941 ಗ್ರಾಮ ಪಂಚಾಯಿತಿಗಳು, 152 ಬ್ಲಾಕ್ ಪಂಚಾಯಿತಿಗಳು, 14 ಜಿಲ್ಲಾ ಪಂಚಾಯಿತಿಗಳು, 86 ಪುರಸಭೆಗಳು ಮತ್ತು ಆರು ನಿಗಮಗಳ ಸ್ಥಾನಗಳಿಗೆ ನಿನ್ನೆ ಚುನಾವಣೆ ನಡೆದಿದ್ದು, ಇಂದು ಮತ ಎಣಿಕೆ ನಡೆಸಲಾಗುತ್ತಿದೆ.

941 ಗ್ರಾಮ ಪಂಚಾಯಿತಿಗಳಲ್ಲಿ 493 ರಲ್ಲಿ ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ಒಕ್ಕೂಟ (ಎಲ್‌ಡಿಎಫ್) ಮತ್ತು 380 ರಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮುನ್ನಡೆ ಸಾಧಿಸುತ್ತಿವೆ. ಎನ್‌ಡಿಎ 23 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಉಚಿತವೆಂದ ಕೇರಳ ಸಿಎಂ: ಚುನಾವಣಾ ಆಯೋಗದ ಮೆಟ್ಟಿಲೇರಿದ ವಿಪಕ್ಷಗಳು!

152 ಬ್ಲಾಕ್ ಪಂಚಾಯಿತಿಗಳ ಈವರೆಗಿನ ಎಣಿಕೆಯಲ್ಲಿ LDF 106 ಸ್ಥಾನಗಳಲ್ಲಿ ಮುನ್ನೆಡೆ ಸಾಧಿಸಿದ್ದರೆ, ಯುಡಿಎಫ್ 45 ಸ್ಥಾನಗಳಲ್ಲಿ ಮುನ್ನಡೆಯಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಇನ್ನೂ ಒಂದು ಖಾತೆ ತೆರೆದಿಲ್ಲ.

86 ಪುರಸಭೆಗಳಲ್ಲಿ ಎಲ್‌ಡಿಎಫ್ 39, ಯುಡಿಎಫ್ 41 ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿವೆ.

ಈ ಬಾರಿ, ಚುನಾವಣೆಯ ಪ್ರಚಾರದಲ್ಲಿ ಆಡಳಿತಾರೂಢ ಎಲ್‌ಡಿಎಫ್ ಮತ್ತು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಚೇರಿಯ ಹಲವರ ಮೇಲೆ ಯುಡಿಎಫ್ ಭ್ರಷ್ಟಾಚಾರದ ಆರೋಪಗಳನ್ನು ಮಾಡಿತ್ತು. ಎಲ್ಲ ಆರೋಪಗಳನ್ನು ನಿರಾಕರಿಸಿದ್ದ ಎಲ್‌ಡಿಎಫ್ ತನ್ನ ಅಭಿವೃದ್ಧಿ ಯೋಜನೆಗಳ ಸುತ್ತ ಪ್ರಚಾರ ಮಾಡಿತು.

2015 ರಲ್ಲಿ, ಎಲ್‌ಡಿಎಫ್ ಹೆಚ್ಚಿನ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿತ್ತು.14 ಜಿಲ್ಲಾ ಪಂಚಾಯಿತಿಗಳಲ್ಲಿ ವಿಪಕ್ಷ ಯುಡಿಎಫ್ ಮತ್ತು ಎಲ್‌ಡಿಎಫ್ ತಲಾ ಏಳು ಸ್ಥಾನಗಳನ್ನು ಹೊಂದಿದ್ದವು.


ಇದನ್ನೂ ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...