Homeಮುಖಪುಟಕೇರಳ: LDFನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; UDF ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ

ಕೇರಳ: LDFನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; UDF ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ

- Advertisement -
- Advertisement -

ಕೇರಳದಲ್ಲಿ ಎಲ್‌ಡಿಎಫ್‌ ನಿನ್ನೆಯಷ್ಟೇ ಲೋಕಸಭೆಗೆ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇಂದು ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ ಪಕ್ಷವು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ಘೋಷಿಸಿದೆ. ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸೀಟುಗಳ ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿದೆ ಎಂದು ಹೇಳಿದೆ.

ಪಕ್ಷವು ತನ್ನ ಅಭ್ಯರ್ಥಿಗಳ ಬಗ್ಗೆ ಈಗಾಗಲೇ ಸ್ಪಷ್ಟವಾದ ಚಿತ್ರಣವನ್ನು ಹೊಂದಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.

ಬುಧವಾರ ಈ ಬಗ್ಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಹಾಗೂ ಯುಡಿಎಫ್‌ ಅಧ್ಯಕ್ಷ  ವಿ.ಡಿ ಸತೀಶನ್‌ ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದ್ದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) 2 ಸ್ಥಾನ, ಕೇರಳ ಕಾಂಗ್ರೆಸ್‌ ಜೆ(ಕೆಸಿಜೆ) ಹಾಗೂ ಆರ್‌ಎಸ್‌ಪಿ ತಲಾ ಒಂದು ಸ್ಥಾನದಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೇಳಿದ್ದಾರೆ.

ಯುಡಿಎಫ್‌ನ ಎರಡನೇ ಅತಿದೊಡ್ಡ ಸಮ್ಮಿಶ್ರ ಪಾಲುದಾರರಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಈ ಬಾರಿ ಇನ್ನೂ ಒಂದು ಹೆಚ್ಚುವರಿ ಲೋಕಸಭಾ ಸ್ಥಾನವನ್ನು ಹಂಚಿಕೆ ಮಾಡುವ ಪ್ರಾಯೋಗಿಕ ತೊಂದರೆಯ ಬಗ್ಗೆ ಐಯುಎಂಎಲ್‌ಗೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ.

ಕೆಪಿಸಿಸಿ ಮುಖ್ಯಸ್ಥ ಕೆ.ಸುಧಾಕರನ್‌ ಸಹ ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಯುಡಿಎಫ್‌ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್‌ ಅವರು ಈ ಘೋಷಣೆ ಮಾಡಿದ್ದಾರೆ. ಹಿಂದಿನ ಚುನಾವಣೆಗಳಂತೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಐಯುಎಂಎಲ್ ಮಲಪ್ಪುರಂ ಮತ್ತು ಪೊನ್ನಾನಿ ಎಂಬ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಅವರು ಹೇಳಿದರು.

ಯುಡಿಎಫ್‌ನಲ್ಲಿ ನಡೆದ ಚರ್ಚೆಗಳ ಪ್ರಕಾರ, ಕಾಂಗ್ರೆಸ್ 16 ಸ್ಥಾನಗಳಲ್ಲಿ, ಮಲಪ್ಪುರಂ ಮತ್ತು ಪೊನ್ನಾನಿಯಲ್ಲಿ ಐಯುಎಂಎಲ್, ಕೊಲ್ಲಂನಲ್ಲಿ ಆರ್‌ಎಸ್‌ಪಿ ಮತ್ತು ಕೊಟ್ಟಾಯಂನಲ್ಲಿ ಕೇರಳ ಕಾಂಗ್ರೆಸ್ (ಜೆ) ಸ್ಪರ್ಧಿಸಲಿದೆ.

IUML ನಾಯಕತ್ವವು ಇತ್ತೀಚೆಗೆ  ಮೂರು ಕ್ಷೇತ್ರಗಳಿಗೆ ಬೇಡಿಕೆಯನ್ನು ಇಟ್ಟಿತ್ತು. ಆದರೆ ಚರ್ಚೆಯ ಸಮಯದಲ್ಲಿ  ಪ್ರಸ್ತುತ ಪರಿಸ್ಥಿತಿಯಲ್ಲಿ ಹೆಚ್ಚಿನ ಸ್ಥಾನಗಳನ್ನು ಹಂಚಿಕೆ ಮಾಡುವ ತೊಂದರೆಯ ಬಗ್ಗೆ ಐಯುಎಂಎಲ್ ನಾಯಕತ್ವಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಮತ್ತು ಖಾಲಿಯಾಗುವ ಮುಂದಿನ ರಾಜ್ಯಸಭಾ ಸ್ಥಾನವನ್ನು ಐಯುಎಂಎಲ್‌ಗೆ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಘಟಕದ ಪಕ್ಷಗಳೊಂದಿಗಿನ ಚರ್ಚೆಯ ಸಮಯದಲ್ಲಿ, ಕೇರಳದ ಎಲ್ಲಾ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಚಟುವಟಿಕೆಗಳೊಂದಿಗೆ ಮುಂದುವರಿಯುವ ಮೂಲಕ ಇಂಡಿಯಾ ಮೈತ್ರಿಯನ್ನು ಬಲಪಡಿಸಲು ಯುಡಿಎಫ್ ನಿರ್ಧರಿಸಿದೆ. ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪ್ರತಿಪಕ್ಷದ ನಾಯಕರು ಮತ್ತು ಕೆಪಿಸಿಸಿ ಮುಖ್ಯಸ್ಥರು ಶೀಘ್ರದಲ್ಲೇ ನವದೆಹಲಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಅಭ್ಯರ್ಥಿಗಳ ಘೋಷಣೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಎಡರಂಗ

ಕೇರಳದ ಆಡಳಿತಾರೂಢ ಎಡರಂಗದ ಪ್ರಮುಖ ಪಾಲುದಾರ ಸಿಪಿಎಂ ನಿನ್ನ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು.

ಸಿಪಿಎಂ ಅಭ್ಯರ್ಥಿಗಳ ಪಟ್ಟಿ

1.ದೇವಸ್ವಂ ಸಚಿವ ಕೆ ರಾಧಾಕೃಷ್ಣನ್ (ಆಲತ್ತೂರು)

2. ಕೆ.ಕೆ.ಶೈಲಜಾ (ವಡಕರ)

3. ಎಂ ಮುಖೇಶ್ (ಕೊಲ್ಲಂ)

4. ಟಿಎಂ ಥಾಮಸ್ ಐಸಾಕ್ (ಪತ್ತನಂತಿಟ್ಟ)

5. ಎ ವಿಜಯರಾಘವನ್ (ಪಾಲಕ್ಕಾಡ್)

6. ಎಂವಿ ಜಯರಾಜನ್ (ಕಣ್ಣೂರು)

7. ಎಳಮರಮ್ ಕರೀಂ (ಕೋಝಿಕೋಡ್)

8. ಸಿ ರವೀಂದ್ರನಾಥ್ (ಚಾಲಕುಡಿ)

9. ಜಾಯ್ಸ್ ಜಾರ್ಜ್ (ಇಡುಕ್ಕಿ)

10. ಎಂವಿ ಬಾಲಕೃಷ್ಣನ್ (ಕಾಸರಗೋಡು)

11. ಎಎಮ್ ಆರಿಫ್, ಹಾಲಿ ಸಂಸದ, (ಆಲಪ್ಪುಝ)

12. ಕೆ ಎಸ್ ಹಂಸ (ಪೊನ್ನಾನಿ)

13. ವಿ ವಸೀಫ್(ಮಲಪ್ಪುರಂ)

14. ಕೆಜೆ ಶೈನ್ (ಎರ್ನಾಕುಲಂ)

15. ವಿ ಜಾಯ್ (ಅಟ್ಟಿಂಗಲ್)

ಎಲ್‌ಡಿಎಫ್‌ನ ಎರಡನೇ ಅತಿದೊಡ್ಡ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಅಭ್ಯರ್ಥಿಗಳ ಪಟ್ಟಿಯನ್ನು ಫೆಬ್ರವರಿ 26ರಂದು ಬಿಡುಗಡೆ ಮಾಡಿತ್ತು.

1. ವಿಎಸ್ ಸುನಿಲ್ ಕುಮಾರ್ (ತ್ರಿಶೂರ್)

2. ಪನ್ನಯನ್ ರವೀಂದ್ರನ್ (ತಿರುವನಂತಪುರಂ)

3. ಅನ್ನಿ ರಾಜಾ (ವಯನಾಡ್)

4. ಸಿಎ ಅರುಣ್ ಕುಮಾರ್ (ಮಾವೆಲಿಕ್ಕರ)

ಇದನ್ನು ಓದಿ: ಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಲ್ವರು ಬಾಲಕರಿಂದ ಬಾಲಕಿಗೆ ಕಿರುಕುಳ ಆರೋಪ : ‘ಉತ್ತಮ ಸಂಸ್ಕಾರ ಕಲಿಸಿಲ್ಲ’ ಎಂದು ತಾಯಂದಿರನ್ನು ಬಂಧಿಸಿದ ಪೊಲೀಸರು!

ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಾಲ್ವರು ಬಾಲಕರ ವಿರುದ್ಧ ಬಾಲಕಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಪೊಲೀಸರು ಬಾಲಕರ ತಾಯಂದಿರನ್ನು 'ಪ್ರಿವೆಂಟಿವ್ ಅರೆಸ್ಟ್' ಮಾಡಿದ್ದಾರೆ ಎಂದು indianexpress.com ಶನಿವಾರ (ಡಿ.20) ವರದಿ...

ಎಸ್‌ಐಆರ್‌: ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಲ್ಲಿ 1 ಲಕ್ಷ ಮತದಾರ ಹೆಸರು ಕರಡು ಮತದಾರರ ಪಟ್ಟಿಯಲ್ಲಿ ಡಿಲೀಟ್

ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕೊಳತ್ತೂರು ಕ್ಷೇತ್ರದಿಂದ 1,03,812 ಕ್ಕೂ ಹೆಚ್ಚು ಮತದಾರರ ಹೆಸರು ತೆಗೆದುಹಾಕಲಾಗಿದೆ. ಇದು ತಮಿಳುನಾಡಿನಲ್ಲಿ ರಾಜ್ಯಾದ್ಯಂತ ನಡೆದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಮತದಾರರ ಪಟ್ಟಿಯಲ್ಲಿನ ಅತಿದೊಡ್ಡ ಮತದಾರರ...

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...