Homeಮುಖಪುಟಕೇರಳ: LDFನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; UDF ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ

ಕೇರಳ: LDFನಿಂದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; UDF ಸೀಟು ಹಂಚಿಕೆ ಪ್ರಕ್ರಿಯೆ ಅಂತಿಮ

- Advertisement -
- Advertisement -

ಕೇರಳದಲ್ಲಿ ಎಲ್‌ಡಿಎಫ್‌ ನಿನ್ನೆಯಷ್ಟೇ ಲೋಕಸಭೆಗೆ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇಂದು ಲೋಕಸಭೆ ಚುನಾವಣೆಯಲ್ಲಿ ಕೇರಳದಲ್ಲಿ ಪಕ್ಷವು 16 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಕಾಂಗ್ರೆಸ್ ಘೋಷಿಸಿದೆ. ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸೀಟುಗಳ ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿದೆ ಎಂದು ಹೇಳಿದೆ.

ಪಕ್ಷವು ತನ್ನ ಅಭ್ಯರ್ಥಿಗಳ ಬಗ್ಗೆ ಈಗಾಗಲೇ ಸ್ಪಷ್ಟವಾದ ಚಿತ್ರಣವನ್ನು ಹೊಂದಿದ್ದು, ಶೀಘ್ರದಲ್ಲೇ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿದೆ.

ಬುಧವಾರ ಈ ಬಗ್ಗೆ ಮಾತನಾಡಿದ ವಿರೋಧ ಪಕ್ಷದ ನಾಯಕ ಹಾಗೂ ಯುಡಿಎಫ್‌ ಅಧ್ಯಕ್ಷ  ವಿ.ಡಿ ಸತೀಶನ್‌ ಕಾಂಗ್ರೆಸ್‌ 16 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದ್ದು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) 2 ಸ್ಥಾನ, ಕೇರಳ ಕಾಂಗ್ರೆಸ್‌ ಜೆ(ಕೆಸಿಜೆ) ಹಾಗೂ ಆರ್‌ಎಸ್‌ಪಿ ತಲಾ ಒಂದು ಸ್ಥಾನದಲ್ಲಿ ಸ್ಪರ್ಧೆ ಮಾಡಲಿದೆ ಎಂದು ಹೇಳಿದ್ದಾರೆ.

ಯುಡಿಎಫ್‌ನ ಎರಡನೇ ಅತಿದೊಡ್ಡ ಸಮ್ಮಿಶ್ರ ಪಾಲುದಾರರಾಗಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಈ ಬಾರಿ ಇನ್ನೂ ಒಂದು ಹೆಚ್ಚುವರಿ ಲೋಕಸಭಾ ಸ್ಥಾನವನ್ನು ಹಂಚಿಕೆ ಮಾಡುವ ಪ್ರಾಯೋಗಿಕ ತೊಂದರೆಯ ಬಗ್ಗೆ ಐಯುಎಂಎಲ್‌ಗೆ ಮನವರಿಕೆ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಹೇಳಲಾಗಿದೆ.

ಕೆಪಿಸಿಸಿ ಮುಖ್ಯಸ್ಥ ಕೆ.ಸುಧಾಕರನ್‌ ಸಹ ಭಾಗವಹಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಯುಡಿಎಫ್‌ ಅಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ವಿ ಡಿ ಸತೀಶನ್‌ ಅವರು ಈ ಘೋಷಣೆ ಮಾಡಿದ್ದಾರೆ. ಹಿಂದಿನ ಚುನಾವಣೆಗಳಂತೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಐಯುಎಂಎಲ್ ಮಲಪ್ಪುರಂ ಮತ್ತು ಪೊನ್ನಾನಿ ಎಂಬ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಅವರು ಹೇಳಿದರು.

ಯುಡಿಎಫ್‌ನಲ್ಲಿ ನಡೆದ ಚರ್ಚೆಗಳ ಪ್ರಕಾರ, ಕಾಂಗ್ರೆಸ್ 16 ಸ್ಥಾನಗಳಲ್ಲಿ, ಮಲಪ್ಪುರಂ ಮತ್ತು ಪೊನ್ನಾನಿಯಲ್ಲಿ ಐಯುಎಂಎಲ್, ಕೊಲ್ಲಂನಲ್ಲಿ ಆರ್‌ಎಸ್‌ಪಿ ಮತ್ತು ಕೊಟ್ಟಾಯಂನಲ್ಲಿ ಕೇರಳ ಕಾಂಗ್ರೆಸ್ (ಜೆ) ಸ್ಪರ್ಧಿಸಲಿದೆ.

IUML ನಾಯಕತ್ವವು ಇತ್ತೀಚೆಗೆ  ಮೂರು ಕ್ಷೇತ್ರಗಳಿಗೆ ಬೇಡಿಕೆಯನ್ನು ಇಟ್ಟಿತ್ತು. ಆದರೆ ಚರ್ಚೆಯ ಸಮಯದಲ್ಲಿ  ಪ್ರಸ್ತುತ ಪರಿಸ್ಥಿತಿಯಲ್ಲಿ ಹೆಚ್ಚಿನ ಸ್ಥಾನಗಳನ್ನು ಹಂಚಿಕೆ ಮಾಡುವ ತೊಂದರೆಯ ಬಗ್ಗೆ ಐಯುಎಂಎಲ್ ನಾಯಕತ್ವಕ್ಕೆ ಮನವರಿಕೆ ಮಾಡಿಕೊಡಲಾಗಿದೆ ಮತ್ತು ಖಾಲಿಯಾಗುವ ಮುಂದಿನ ರಾಜ್ಯಸಭಾ ಸ್ಥಾನವನ್ನು ಐಯುಎಂಎಲ್‌ಗೆ ನೀಡಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಘಟಕದ ಪಕ್ಷಗಳೊಂದಿಗಿನ ಚರ್ಚೆಯ ಸಮಯದಲ್ಲಿ, ಕೇರಳದ ಎಲ್ಲಾ 20 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಚಟುವಟಿಕೆಗಳೊಂದಿಗೆ ಮುಂದುವರಿಯುವ ಮೂಲಕ ಇಂಡಿಯಾ ಮೈತ್ರಿಯನ್ನು ಬಲಪಡಿಸಲು ಯುಡಿಎಫ್ ನಿರ್ಧರಿಸಿದೆ. ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಪ್ರತಿಪಕ್ಷದ ನಾಯಕರು ಮತ್ತು ಕೆಪಿಸಿಸಿ ಮುಖ್ಯಸ್ಥರು ಶೀಘ್ರದಲ್ಲೇ ನವದೆಹಲಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಅಭ್ಯರ್ಥಿಗಳ ಘೋಷಣೆಯನ್ನು ರಾಷ್ಟ್ರ ರಾಜಧಾನಿಯಲ್ಲಿ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಎಡರಂಗ

ಕೇರಳದ ಆಡಳಿತಾರೂಢ ಎಡರಂಗದ ಪ್ರಮುಖ ಪಾಲುದಾರ ಸಿಪಿಎಂ ನಿನ್ನ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿತ್ತು.

ಸಿಪಿಎಂ ಅಭ್ಯರ್ಥಿಗಳ ಪಟ್ಟಿ

1.ದೇವಸ್ವಂ ಸಚಿವ ಕೆ ರಾಧಾಕೃಷ್ಣನ್ (ಆಲತ್ತೂರು)

2. ಕೆ.ಕೆ.ಶೈಲಜಾ (ವಡಕರ)

3. ಎಂ ಮುಖೇಶ್ (ಕೊಲ್ಲಂ)

4. ಟಿಎಂ ಥಾಮಸ್ ಐಸಾಕ್ (ಪತ್ತನಂತಿಟ್ಟ)

5. ಎ ವಿಜಯರಾಘವನ್ (ಪಾಲಕ್ಕಾಡ್)

6. ಎಂವಿ ಜಯರಾಜನ್ (ಕಣ್ಣೂರು)

7. ಎಳಮರಮ್ ಕರೀಂ (ಕೋಝಿಕೋಡ್)

8. ಸಿ ರವೀಂದ್ರನಾಥ್ (ಚಾಲಕುಡಿ)

9. ಜಾಯ್ಸ್ ಜಾರ್ಜ್ (ಇಡುಕ್ಕಿ)

10. ಎಂವಿ ಬಾಲಕೃಷ್ಣನ್ (ಕಾಸರಗೋಡು)

11. ಎಎಮ್ ಆರಿಫ್, ಹಾಲಿ ಸಂಸದ, (ಆಲಪ್ಪುಝ)

12. ಕೆ ಎಸ್ ಹಂಸ (ಪೊನ್ನಾನಿ)

13. ವಿ ವಸೀಫ್(ಮಲಪ್ಪುರಂ)

14. ಕೆಜೆ ಶೈನ್ (ಎರ್ನಾಕುಲಂ)

15. ವಿ ಜಾಯ್ (ಅಟ್ಟಿಂಗಲ್)

ಎಲ್‌ಡಿಎಫ್‌ನ ಎರಡನೇ ಅತಿದೊಡ್ಡ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಅಭ್ಯರ್ಥಿಗಳ ಪಟ್ಟಿಯನ್ನು ಫೆಬ್ರವರಿ 26ರಂದು ಬಿಡುಗಡೆ ಮಾಡಿತ್ತು.

1. ವಿಎಸ್ ಸುನಿಲ್ ಕುಮಾರ್ (ತ್ರಿಶೂರ್)

2. ಪನ್ನಯನ್ ರವೀಂದ್ರನ್ (ತಿರುವನಂತಪುರಂ)

3. ಅನ್ನಿ ರಾಜಾ (ವಯನಾಡ್)

4. ಸಿಎ ಅರುಣ್ ಕುಮಾರ್ (ಮಾವೆಲಿಕ್ಕರ)

ಇದನ್ನು ಓದಿ: ಗುಜರಾತ್ ಗಲಭೆ ಕೇಸ್‌ ಸೇರಿ ಪ್ರಮುಖ ಕೇಸ್‌ಗಳಲ್ಲಿ ತೀರ್ಪು ನೀಡಿದ್ದ ನೂತನ ಲೋಕಪಾಲ್ ಖಾನ್ವಿಲ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...