Homeಮುಖಪುಟಶಿರೂರು ದುರಂತ : ಲಾರಿ ಮಾಲೀಕನ ವಿರುದ್ದ ದೂರು ದಾಖಲಿಸಿದ ಅರ್ಜುನ್ ಕುಟುಂಬ

ಶಿರೂರು ದುರಂತ : ಲಾರಿ ಮಾಲೀಕನ ವಿರುದ್ದ ದೂರು ದಾಖಲಿಸಿದ ಅರ್ಜುನ್ ಕುಟುಂಬ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದ ಕೇರಳದ ಲಾರಿ ಚಾಲಕ ಅರ್ಜುನ್‌ನ ಕುಟುಂಬಸ್ಥರು ಲಾರಿ ಮಾಲೀಕ ಅಬ್ದುಲ್ ಮನಾಫ್ ವಿರುದ್ದ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅರ್ಜುನ್ ಸಹೋದರಿ ಅಂಜು ದೂರು ದಾಖಲಿಸಿದ್ದು, ಮನಾಫ್ ತಮ್ಮ ಕುಟುಂಬದ ಭಾವನಾತ್ಮಕ ಪರಿಸ್ಥಿತಿಯನ್ನು ಬಂಡವಾಳವನ್ನಾಗಿಸಿಕೊಂಡು, ಅರ್ಜುನ್ ಫೋಟೋ ಬಳಸಿ ಪ್ರಚಾರ ಪಡೆಯುತ್ತಿದ್ದಾರೆ, ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿ ಕುಟುಂಬದ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕುಟುಂಬದ ವಿರುದ್ದ ಮಾನಹಾನಿ ಪೋಸ್ಟ್ ಹಾಕುವವರ ವಿರುದ್ದವೂ ಅಂಜು ದೂರು ನೀಡಿದ್ದಾರೆ. ಚೆರುವಾಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮನಾಫ್ ಮತ್ತು ಮುಳುಗುತಜ್ಞ ಈಶ್ವರ ಮಲ್ಪೆ ವಿರುದ್ದ ಅರ್ಜುನ್ ಕುಟುಂಬ ಕೆಲ ದಿನಗಳ ಹಿಂದೆ ಹಲವು ಆರೋಪಗಳನ್ನು ಮಾಡಿತ್ತು. ಇವರಿಬ್ಬರೂ ಅರ್ಜುನ್ ಹೆಸರನ್ನು ತಮ್ಮ ಯೂಟ್ಯೂಬ್ ಚಾನೆಲ್ ಚಂದಾದಾರನ್ನು ಹೆಚ್ಚಿಸಲು ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಮನಾಫ್ ಅರ್ಜುನ್ ಹೆಸರಿನಲ್ಲಿ ನಮಗೆ ಗೊತ್ತಿಲ್ಲದಂತೆ ಹಣ ಸಂಗ್ರಹಿಸಿದ್ದಾರೆ. ಅದರಲ್ಲಿ ಸ್ವಲ್ಪ ಮೊತ್ತವನ್ನು ನಮಗೆ ಕೊಟ್ಟಿದ್ದಾರೆ. ಅದೂ ಕೂಡ ಪ್ರಚಾರ ಪಡೆಯಲು ಮಾಡಿರುವುದು ಎಂದು ಹೇಳಿತ್ತು.

ತನ್ನ ವಿರುದ್ದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಮನಾಫ್, “ನಾನು ಈ ಹಿಂದೆ ಹೇಳಿರುವ ಮಾತುಗಳಿಗೆ ಬದ್ದನಾಗಿದ್ದೇನೆ. ಗೊತ್ತಿಲ್ಲದೆ ಏನಾದರು ತಪ್ಪು ಮಾಡಿದ್ದರೆ ಅದಕ್ಕೆ ನಾನು ಕ್ಷಮೆ ಯಾಚಿಸುತ್ತೇನೆ. ನನ್ನ ವಿರುದ್ದ ದೂರು ದಾಖಲಿಸಿದರೂ, ನಾನು ಅರ್ಜುನ್ ಕುಟುಂಬದ ಪರವಾಗಿಯೇ ನಿಲ್ಲುತ್ತೇನೆ” ಎಂದಿದ್ದಾರೆ.

“ಯೂಟ್ಯೂಬ್ ಚಾನೆಲ್‌ನಲ್ಲಿ ಅರ್ಜುನ್ ಫೋಟೋ ಬಳಸಿ ಪ್ರಚಾರ ಪಡೆಯಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮನಾಫ್, ಮಾಧ್ಯಮಗಳು ಕೊಟ್ಟ ಸಲಹೆಯಂತೆ ಶಿರೂರಿನ ಪರಿಸ್ಥಿತಿಯ ಕುರಿತು ಮಾಹಿತಿ ನೀಡಲು ನಾನು ಯೂಟ್ಯೂಬ್ ಚಾನೆಲ್ ಮಾಡಿದೆ. ಅರ್ಜುನ್ ಶವವನ್ನು ಮನೆಗೆ ತಲುಪಿಸಿದ ಬಳಿಕ ನಾನು ಚಾನೆಲ್ ಬಳಸಿಲ್ಲ. ಪ್ರಸ್ತುತ ಯೂಟ್ಯೂಬ್ ಚಾನೆಲ್‌ನಿಂದ ಅರ್ಜುನ್ ಫೋಟೋವನ್ನು ತೆಗೆದು ಹಾಕಿದ್ದೇನೆ” ಎಂದು ಹೇಳಿದ್ದಾರೆ.

ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಕನ್ನಡಿಕ್ಕಲ್ ನಿವಾಸಿಯಾದ ಲಾರಿ ಚಾಲಕ ಅರ್ಜುನ್ ಜುಲೈ 16ರಂದು ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ದುರಂತದ ಬಳಿಕ ಲಾರಿ ಸಹಿತ ನಾಪತ್ತೆಯಾಗಿದ್ದರು. ಸತತ ಹುಡುಕಾಟದ ಫಲವಾಗಿ 72 ದಿನಗಳ ಬಳಿಕ ಸೆಪ್ಟೆಂಬರ್ 25ರಂದು ಲಾರಿ ಮತ್ತು ಅದರೊಳಗೆ ಅರ್ಜುನ್ ಶವ ಗಂಗಾವಳಿ ನದಿಯಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ : ‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...