Homeಮುಖಪುಟಶಿರೂರು ದುರಂತ : ಲಾರಿ ಮಾಲೀಕನ ವಿರುದ್ದ ದೂರು ದಾಖಲಿಸಿದ ಅರ್ಜುನ್ ಕುಟುಂಬ

ಶಿರೂರು ದುರಂತ : ಲಾರಿ ಮಾಲೀಕನ ವಿರುದ್ದ ದೂರು ದಾಖಲಿಸಿದ ಅರ್ಜುನ್ ಕುಟುಂಬ

- Advertisement -
- Advertisement -

ಉತ್ತರ ಕನ್ನಡ ಜಿಲ್ಲೆ ಶಿರೂರಿನಲ್ಲಿ ಉಂಟಾದ ಗುಡ್ಡ ಕುಸಿತ ದುರಂತದಲ್ಲಿ ಸಾವನ್ನಪ್ಪಿದ ಕೇರಳದ ಲಾರಿ ಚಾಲಕ ಅರ್ಜುನ್‌ನ ಕುಟುಂಬಸ್ಥರು ಲಾರಿ ಮಾಲೀಕ ಅಬ್ದುಲ್ ಮನಾಫ್ ವಿರುದ್ದ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅರ್ಜುನ್ ಸಹೋದರಿ ಅಂಜು ದೂರು ದಾಖಲಿಸಿದ್ದು, ಮನಾಫ್ ತಮ್ಮ ಕುಟುಂಬದ ಭಾವನಾತ್ಮಕ ಪರಿಸ್ಥಿತಿಯನ್ನು ಬಂಡವಾಳವನ್ನಾಗಿಸಿಕೊಂಡು, ಅರ್ಜುನ್ ಫೋಟೋ ಬಳಸಿ ಪ್ರಚಾರ ಪಡೆಯುತ್ತಿದ್ದಾರೆ, ಯೂಟ್ಯೂಬ್ ಚಾನೆಲ್ ಪ್ರಾರಂಭಿಸಿ ಕುಟುಂಬದ ಹೆಸರಿಗೆ ಕಳಂಕ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕುಟುಂಬದ ವಿರುದ್ದ ಮಾನಹಾನಿ ಪೋಸ್ಟ್ ಹಾಕುವವರ ವಿರುದ್ದವೂ ಅಂಜು ದೂರು ನೀಡಿದ್ದಾರೆ. ಚೆರುವಾಯೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಮನಾಫ್ ಮತ್ತು ಮುಳುಗುತಜ್ಞ ಈಶ್ವರ ಮಲ್ಪೆ ವಿರುದ್ದ ಅರ್ಜುನ್ ಕುಟುಂಬ ಕೆಲ ದಿನಗಳ ಹಿಂದೆ ಹಲವು ಆರೋಪಗಳನ್ನು ಮಾಡಿತ್ತು. ಇವರಿಬ್ಬರೂ ಅರ್ಜುನ್ ಹೆಸರನ್ನು ತಮ್ಮ ಯೂಟ್ಯೂಬ್ ಚಾನೆಲ್ ಚಂದಾದಾರನ್ನು ಹೆಚ್ಚಿಸಲು ಬಳಸಿಕೊಳ್ಳುತ್ತಿದ್ದಾರೆ. ಅಲ್ಲದೆ, ಮನಾಫ್ ಅರ್ಜುನ್ ಹೆಸರಿನಲ್ಲಿ ನಮಗೆ ಗೊತ್ತಿಲ್ಲದಂತೆ ಹಣ ಸಂಗ್ರಹಿಸಿದ್ದಾರೆ. ಅದರಲ್ಲಿ ಸ್ವಲ್ಪ ಮೊತ್ತವನ್ನು ನಮಗೆ ಕೊಟ್ಟಿದ್ದಾರೆ. ಅದೂ ಕೂಡ ಪ್ರಚಾರ ಪಡೆಯಲು ಮಾಡಿರುವುದು ಎಂದು ಹೇಳಿತ್ತು.

ತನ್ನ ವಿರುದ್ದ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಮನಾಫ್, “ನಾನು ಈ ಹಿಂದೆ ಹೇಳಿರುವ ಮಾತುಗಳಿಗೆ ಬದ್ದನಾಗಿದ್ದೇನೆ. ಗೊತ್ತಿಲ್ಲದೆ ಏನಾದರು ತಪ್ಪು ಮಾಡಿದ್ದರೆ ಅದಕ್ಕೆ ನಾನು ಕ್ಷಮೆ ಯಾಚಿಸುತ್ತೇನೆ. ನನ್ನ ವಿರುದ್ದ ದೂರು ದಾಖಲಿಸಿದರೂ, ನಾನು ಅರ್ಜುನ್ ಕುಟುಂಬದ ಪರವಾಗಿಯೇ ನಿಲ್ಲುತ್ತೇನೆ” ಎಂದಿದ್ದಾರೆ.

“ಯೂಟ್ಯೂಬ್ ಚಾನೆಲ್‌ನಲ್ಲಿ ಅರ್ಜುನ್ ಫೋಟೋ ಬಳಸಿ ಪ್ರಚಾರ ಪಡೆಯಲಾಗುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮನಾಫ್, ಮಾಧ್ಯಮಗಳು ಕೊಟ್ಟ ಸಲಹೆಯಂತೆ ಶಿರೂರಿನ ಪರಿಸ್ಥಿತಿಯ ಕುರಿತು ಮಾಹಿತಿ ನೀಡಲು ನಾನು ಯೂಟ್ಯೂಬ್ ಚಾನೆಲ್ ಮಾಡಿದೆ. ಅರ್ಜುನ್ ಶವವನ್ನು ಮನೆಗೆ ತಲುಪಿಸಿದ ಬಳಿಕ ನಾನು ಚಾನೆಲ್ ಬಳಸಿಲ್ಲ. ಪ್ರಸ್ತುತ ಯೂಟ್ಯೂಬ್ ಚಾನೆಲ್‌ನಿಂದ ಅರ್ಜುನ್ ಫೋಟೋವನ್ನು ತೆಗೆದು ಹಾಕಿದ್ದೇನೆ” ಎಂದು ಹೇಳಿದ್ದಾರೆ.

ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಕನ್ನಡಿಕ್ಕಲ್ ನಿವಾಸಿಯಾದ ಲಾರಿ ಚಾಲಕ ಅರ್ಜುನ್ ಜುಲೈ 16ರಂದು ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ದುರಂತದ ಬಳಿಕ ಲಾರಿ ಸಹಿತ ನಾಪತ್ತೆಯಾಗಿದ್ದರು. ಸತತ ಹುಡುಕಾಟದ ಫಲವಾಗಿ 72 ದಿನಗಳ ಬಳಿಕ ಸೆಪ್ಟೆಂಬರ್ 25ರಂದು ಲಾರಿ ಮತ್ತು ಅದರೊಳಗೆ ಅರ್ಜುನ್ ಶವ ಗಂಗಾವಳಿ ನದಿಯಲ್ಲಿ ಪತ್ತೆಯಾಗಿತ್ತು.

ಇದನ್ನೂ ಓದಿ : ‘ಮಗಳು ಸೆಕ್ಸ್ ರಾಕೆಟ್‌ನಲ್ಲಿ ಸಿಲುಕಿದ್ದಾಳೆ’ ಎಂದು ಹಣಕ್ಕೆ ಬೇಡಿಕೆ; ಹೃದಯಾಘಾತದಿಂದ ಪ್ರಾಣಬಿಟ್ಟ ಶಾಲಾ ಶಿಕ್ಷಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...