Homeಮುಖಪುಟ'ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು': ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

‘ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು’: ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

- Advertisement -
- Advertisement -

“ನನ್ನ ತಂದೆಯ ಪಿಎಫ್ ಹಣ ನೀಡಲು ಹೆಚ್ಚುವರಿ ದಾಖಲೆಗಳನ್ನು ಒದಗಿಸುವಂತೆ ಹೇಳಿ 9 ವರ್ಷಗಳ ಕಾಲ ಅಧಿಕಾರಿಗಳು ಸತಾಯಿಸಿದ್ದರು. ಆದರೆ, ತಂದೆ ಮೃತಪಟ್ಟ ಬೆನ್ನಲ್ಲೇ ಯಾವುದೇ ಹೆಚ್ಚುವರಿ ದಾಖಲೆ ಕೇಳದೆ ತಕ್ಷಣ ಹಣ ನೀಡಿದ್ದಾರೆ. ಕನಿಷ್ಠ ಪಕ್ಷ ಅವರು ತಂದೆಯ ಮರಣ ಪ್ರಮಾಣ ಪತ್ರ ಕೂಡ ಕೇಳಿಲ್ಲ” ಈ ಮಾತು ಹೇಳಿರುವುದು ಕಳೆದ ತಿಂಗಳು ಕೇರಳದ ಕೊಚ್ಚಿಯಲ್ಲಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಚೇರಿಯೊಳಗೆ ಆತ್ಮಹತ್ಯೆ ಮಾಡಿಕೊಂಡ 69 ವರ್ಷದ ಕೆಪಿ ಶಿವರಾಮನ್ ಅವರ 39 ವರ್ಷದ ಪುತ್ರ ಪ್ರದೀಶ್.

ಕಳೆದ 9 ವರ್ಷಗಳಿಂದ ಅಧಿಕಾರಿಗಳು ಪಿಎಫ್ ಹಣ ನೀಡದೆ ಶಿವರಾಮನ್ ಅವರನ್ನು ಸತಾಯಿಸಿದ್ದರು. ಆದರೆ, ಅವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಕುಟುಂಬಕ್ಕೆ ಕೊಡಬೇಕಾಗಿದ್ದ ಎಲ್ಲಾ ಬಾಕಿ ಹಣವನ್ನು ನೀಡಿದ್ದಾರೆ. ಕುಟುಂಬದ ಪ್ರಕಾರ, ಶಿವರಾಮನ್ ಅವರ ಪತ್ನಿ ಕಾನೂನುಬದ್ಧ ನಾಮಿನಿ ಎಂಬ ಪತ್ರವನ್ನು ಹೊರತುಪಡಿಸಿ, ಇನ್ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವ್ಯವಸ್ಥೆಯ ವಿರುದ್ಧ ಹೋರಾಡಲು ನಮ್ಮ ಬಳಿ ಆರ್ಥಿಕ ಸಂಪನ್ಮೂಲಗಳಿಲ್ಲದಿದ್ದರೂ, ನನ್ನ ತಂದೆ ಶಿವರಾಮನ್‌ ಅವರಿಗೆ ನ್ಯಾಯ ದೊರಕಿಸಿಕೊಡಲು ಮತ್ತು ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ನಾವು ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ” ಎಂದು ಪ್ರದೀಶ್ ಹೇಳಿದ್ದಾರೆ.

“ನನ್ನ ತಂದೆ ಹೋದರು. ಆದರೆ, ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ಕಾನೂನು ಮೊರೆ ಹೋಗಲು ನಿರ್ಧರಿಸಿದ್ದೇವೆ. ಅಧಿಕಾರಿಗಳಿಗೆ ಹಣ ಬಿಡುಗಡೆ ಮಾಡಬಹುದಿತ್ತು. ಆದರೆ, ಅವರು ನನ್ನ ತಂದೆ ಸಾಯುವವರೆಗೆ ಕಾದು, ಬಳಿಕ ತಕ್ಷಣ ಹಣ ಕೊಟ್ಟಿದ್ದಾರೆ. ಅವರು ನನ್ನ ತಂದೆ ಸಾಯಲು ಕಾಯುತ್ತಿದ್ದರು” ಎಂದು ದಿನಗೂಲಿ ಮಾಡುವ 39 ವರ್ಷದ ಪ್ರದೀಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಪಿಎಫ್‌ಒ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಪಿಎಫ್‌ ಹಣ ಹಿಂಪಡೆಯಲು ಫಾರ್ಮ್‌ 20 ಅನ್ನು ಸಲ್ಲಿಸಬೇಕು. ಕುಟುಂಬ ಸದಸ್ಯರು ಈ ಹಣ ಪಡೆಯುವುದಾದರೆ, ಮೃತ ವ್ಯಕ್ತಿಯ ಮರಣ ಪ್ರಮಾಣ ಪತ್ರ, ರಕ್ಷಕತ್ವ ಪ್ರಮಾಣ ಪತ್ರ ಸೇರಿದಂತೆ ಹಲವು ದಾಖಲೆಗಳನ್ನು ನೀಡಬೇಕು. ಆದರೆ, ಶಿವರಾಮನ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಕುಟುಂಬ ಸದಸ್ಯರಿಂದ ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ. ಇದೇ ಅಧಿಕಾರಿಗಳು ಶಿವರಾಮನ್ ಜೀವಂತ ಇದ್ದಾಗ ಹಣ ನೀಡದೆ ಸತಾಯಿಸಿ ಅವರ ಸಾವಿಗೆ ಕಾರಣರಾಗಿದ್ದರು.

ಏನಿದು ಪ್ರಕರಣ?

ಕೇರಳದ ತ್ರಿಶೂರ್ ಮೂಲದ ಶಿವರಾಮನ್ ಅವರು ಅಪೋಲೋ ಟೈರ್ಸ್‌ನಲ್ಲಿ ನೌಕರರಾಗಿದ್ದರು. 9 ವರ್ಷಗಳ ಹಿಂದೆ ಅವರು ವೃತ್ತಿಯಿಂದ ನಿವೃತ್ತರಾಗಿದ್ದರು. ಅಂದಿನಿಂದಲೂ, ತಮ್ಮ ಪಿಎಫ್‌ ಹಣವನ್ನು ಪಡೆಯಲು ಇಪಿಎಫ್‌ಒ ಕಚೇರಿಗೆ ಅಲೆಯುತ್ತಿದ್ದರು. ಆದರೆ, ದಾಖಲೆಗಳು ಹೋಲಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳ ಅವರ ಹಣವನ್ನು ಪಾವತಿಸಲು ನಿರಾಕರಿಸಿದ್ದರು ಎನ್ನಲಾಗಿದೆ. ಮನನೊಂದಿದ್ದ ಶಿವರಾಮನ್ ಕಳೆದ ತಿಂಗಳು (ಫೆಬ್ರವರಿ) 7ರಂದು ಕೊಚ್ಚಿಯಲ್ಲಿರುವ ಇಪಿಎಫ್‌ಒ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಮ್ಮ ತಂದೆಯ ಸಾವಿಗೆ ಇಪಿಎಫ್‌ಒ ಅಧಿಕಾರಿಗಳೇ ಕಾರಣವೆಂದು ಆರೋಪಿಸಿರುವ ಪ್ರದೀಪ್, ಫೆಬ್ರವರಿ 7ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ. ನಾವು ನಮ್ಮಂತೆ ಇತರ ಕುಟುಂಬಗಳಿಗೆ ನೋವು ಎದುರಾಗಬಾರದು ಎಂಬ ಕಾರಣಕ್ಕೆ ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಪ್ರದೀಪ್ ಹೇಳಿದ್ದಾರೆ.

ವರದಿಯ ಪ್ರಕಾರ, ಶಿವರಾಮನ್ ಅವರ 90,000 ರೂ. ಪಿಎಫ್‌ ಹಣ ಇಪಿಎಫ್‌ಒ ಖಾತೆಯಲ್ಲಿತ್ತು. ಅದನ್ನು ಪಡೆಯಲು ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಗುರುತಿನ ದಾಖಲೆಗಳು ಹೊಂದಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳು ಮರುಪಾವತಿಗೆ ನಿರಾಕರಿಸಿದ್ದರು. ಅಲ್ಲದೆ, ಅವರ ಶಾಲೆಯ ಪ್ರಮಾಣ ಪತ್ರಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಅದನ್ನು ನೀಡಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ : ಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಎಡಿಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...