Homeಮುಖಪುಟ'ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು': ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

‘ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು’: ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

- Advertisement -
- Advertisement -

“ನನ್ನ ತಂದೆಯ ಪಿಎಫ್ ಹಣ ನೀಡಲು ಹೆಚ್ಚುವರಿ ದಾಖಲೆಗಳನ್ನು ಒದಗಿಸುವಂತೆ ಹೇಳಿ 9 ವರ್ಷಗಳ ಕಾಲ ಅಧಿಕಾರಿಗಳು ಸತಾಯಿಸಿದ್ದರು. ಆದರೆ, ತಂದೆ ಮೃತಪಟ್ಟ ಬೆನ್ನಲ್ಲೇ ಯಾವುದೇ ಹೆಚ್ಚುವರಿ ದಾಖಲೆ ಕೇಳದೆ ತಕ್ಷಣ ಹಣ ನೀಡಿದ್ದಾರೆ. ಕನಿಷ್ಠ ಪಕ್ಷ ಅವರು ತಂದೆಯ ಮರಣ ಪ್ರಮಾಣ ಪತ್ರ ಕೂಡ ಕೇಳಿಲ್ಲ” ಈ ಮಾತು ಹೇಳಿರುವುದು ಕಳೆದ ತಿಂಗಳು ಕೇರಳದ ಕೊಚ್ಚಿಯಲ್ಲಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಚೇರಿಯೊಳಗೆ ಆತ್ಮಹತ್ಯೆ ಮಾಡಿಕೊಂಡ 69 ವರ್ಷದ ಕೆಪಿ ಶಿವರಾಮನ್ ಅವರ 39 ವರ್ಷದ ಪುತ್ರ ಪ್ರದೀಶ್.

ಕಳೆದ 9 ವರ್ಷಗಳಿಂದ ಅಧಿಕಾರಿಗಳು ಪಿಎಫ್ ಹಣ ನೀಡದೆ ಶಿವರಾಮನ್ ಅವರನ್ನು ಸತಾಯಿಸಿದ್ದರು. ಆದರೆ, ಅವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಕುಟುಂಬಕ್ಕೆ ಕೊಡಬೇಕಾಗಿದ್ದ ಎಲ್ಲಾ ಬಾಕಿ ಹಣವನ್ನು ನೀಡಿದ್ದಾರೆ. ಕುಟುಂಬದ ಪ್ರಕಾರ, ಶಿವರಾಮನ್ ಅವರ ಪತ್ನಿ ಕಾನೂನುಬದ್ಧ ನಾಮಿನಿ ಎಂಬ ಪತ್ರವನ್ನು ಹೊರತುಪಡಿಸಿ, ಇನ್ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವ್ಯವಸ್ಥೆಯ ವಿರುದ್ಧ ಹೋರಾಡಲು ನಮ್ಮ ಬಳಿ ಆರ್ಥಿಕ ಸಂಪನ್ಮೂಲಗಳಿಲ್ಲದಿದ್ದರೂ, ನನ್ನ ತಂದೆ ಶಿವರಾಮನ್‌ ಅವರಿಗೆ ನ್ಯಾಯ ದೊರಕಿಸಿಕೊಡಲು ಮತ್ತು ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ನಾವು ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ” ಎಂದು ಪ್ರದೀಶ್ ಹೇಳಿದ್ದಾರೆ.

“ನನ್ನ ತಂದೆ ಹೋದರು. ಆದರೆ, ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ಕಾನೂನು ಮೊರೆ ಹೋಗಲು ನಿರ್ಧರಿಸಿದ್ದೇವೆ. ಅಧಿಕಾರಿಗಳಿಗೆ ಹಣ ಬಿಡುಗಡೆ ಮಾಡಬಹುದಿತ್ತು. ಆದರೆ, ಅವರು ನನ್ನ ತಂದೆ ಸಾಯುವವರೆಗೆ ಕಾದು, ಬಳಿಕ ತಕ್ಷಣ ಹಣ ಕೊಟ್ಟಿದ್ದಾರೆ. ಅವರು ನನ್ನ ತಂದೆ ಸಾಯಲು ಕಾಯುತ್ತಿದ್ದರು” ಎಂದು ದಿನಗೂಲಿ ಮಾಡುವ 39 ವರ್ಷದ ಪ್ರದೀಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಪಿಎಫ್‌ಒ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಪಿಎಫ್‌ ಹಣ ಹಿಂಪಡೆಯಲು ಫಾರ್ಮ್‌ 20 ಅನ್ನು ಸಲ್ಲಿಸಬೇಕು. ಕುಟುಂಬ ಸದಸ್ಯರು ಈ ಹಣ ಪಡೆಯುವುದಾದರೆ, ಮೃತ ವ್ಯಕ್ತಿಯ ಮರಣ ಪ್ರಮಾಣ ಪತ್ರ, ರಕ್ಷಕತ್ವ ಪ್ರಮಾಣ ಪತ್ರ ಸೇರಿದಂತೆ ಹಲವು ದಾಖಲೆಗಳನ್ನು ನೀಡಬೇಕು. ಆದರೆ, ಶಿವರಾಮನ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಕುಟುಂಬ ಸದಸ್ಯರಿಂದ ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ. ಇದೇ ಅಧಿಕಾರಿಗಳು ಶಿವರಾಮನ್ ಜೀವಂತ ಇದ್ದಾಗ ಹಣ ನೀಡದೆ ಸತಾಯಿಸಿ ಅವರ ಸಾವಿಗೆ ಕಾರಣರಾಗಿದ್ದರು.

ಏನಿದು ಪ್ರಕರಣ?

ಕೇರಳದ ತ್ರಿಶೂರ್ ಮೂಲದ ಶಿವರಾಮನ್ ಅವರು ಅಪೋಲೋ ಟೈರ್ಸ್‌ನಲ್ಲಿ ನೌಕರರಾಗಿದ್ದರು. 9 ವರ್ಷಗಳ ಹಿಂದೆ ಅವರು ವೃತ್ತಿಯಿಂದ ನಿವೃತ್ತರಾಗಿದ್ದರು. ಅಂದಿನಿಂದಲೂ, ತಮ್ಮ ಪಿಎಫ್‌ ಹಣವನ್ನು ಪಡೆಯಲು ಇಪಿಎಫ್‌ಒ ಕಚೇರಿಗೆ ಅಲೆಯುತ್ತಿದ್ದರು. ಆದರೆ, ದಾಖಲೆಗಳು ಹೋಲಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳ ಅವರ ಹಣವನ್ನು ಪಾವತಿಸಲು ನಿರಾಕರಿಸಿದ್ದರು ಎನ್ನಲಾಗಿದೆ. ಮನನೊಂದಿದ್ದ ಶಿವರಾಮನ್ ಕಳೆದ ತಿಂಗಳು (ಫೆಬ್ರವರಿ) 7ರಂದು ಕೊಚ್ಚಿಯಲ್ಲಿರುವ ಇಪಿಎಫ್‌ಒ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಮ್ಮ ತಂದೆಯ ಸಾವಿಗೆ ಇಪಿಎಫ್‌ಒ ಅಧಿಕಾರಿಗಳೇ ಕಾರಣವೆಂದು ಆರೋಪಿಸಿರುವ ಪ್ರದೀಪ್, ಫೆಬ್ರವರಿ 7ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ. ನಾವು ನಮ್ಮಂತೆ ಇತರ ಕುಟುಂಬಗಳಿಗೆ ನೋವು ಎದುರಾಗಬಾರದು ಎಂಬ ಕಾರಣಕ್ಕೆ ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಪ್ರದೀಪ್ ಹೇಳಿದ್ದಾರೆ.

ವರದಿಯ ಪ್ರಕಾರ, ಶಿವರಾಮನ್ ಅವರ 90,000 ರೂ. ಪಿಎಫ್‌ ಹಣ ಇಪಿಎಫ್‌ಒ ಖಾತೆಯಲ್ಲಿತ್ತು. ಅದನ್ನು ಪಡೆಯಲು ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಗುರುತಿನ ದಾಖಲೆಗಳು ಹೊಂದಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳು ಮರುಪಾವತಿಗೆ ನಿರಾಕರಿಸಿದ್ದರು. ಅಲ್ಲದೆ, ಅವರ ಶಾಲೆಯ ಪ್ರಮಾಣ ಪತ್ರಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಅದನ್ನು ನೀಡಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ : ಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಎಡಿಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...