Homeಮುಖಪುಟ'ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು': ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

‘ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು’: ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

- Advertisement -
- Advertisement -

“ನನ್ನ ತಂದೆಯ ಪಿಎಫ್ ಹಣ ನೀಡಲು ಹೆಚ್ಚುವರಿ ದಾಖಲೆಗಳನ್ನು ಒದಗಿಸುವಂತೆ ಹೇಳಿ 9 ವರ್ಷಗಳ ಕಾಲ ಅಧಿಕಾರಿಗಳು ಸತಾಯಿಸಿದ್ದರು. ಆದರೆ, ತಂದೆ ಮೃತಪಟ್ಟ ಬೆನ್ನಲ್ಲೇ ಯಾವುದೇ ಹೆಚ್ಚುವರಿ ದಾಖಲೆ ಕೇಳದೆ ತಕ್ಷಣ ಹಣ ನೀಡಿದ್ದಾರೆ. ಕನಿಷ್ಠ ಪಕ್ಷ ಅವರು ತಂದೆಯ ಮರಣ ಪ್ರಮಾಣ ಪತ್ರ ಕೂಡ ಕೇಳಿಲ್ಲ” ಈ ಮಾತು ಹೇಳಿರುವುದು ಕಳೆದ ತಿಂಗಳು ಕೇರಳದ ಕೊಚ್ಚಿಯಲ್ಲಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಚೇರಿಯೊಳಗೆ ಆತ್ಮಹತ್ಯೆ ಮಾಡಿಕೊಂಡ 69 ವರ್ಷದ ಕೆಪಿ ಶಿವರಾಮನ್ ಅವರ 39 ವರ್ಷದ ಪುತ್ರ ಪ್ರದೀಶ್.

ಕಳೆದ 9 ವರ್ಷಗಳಿಂದ ಅಧಿಕಾರಿಗಳು ಪಿಎಫ್ ಹಣ ನೀಡದೆ ಶಿವರಾಮನ್ ಅವರನ್ನು ಸತಾಯಿಸಿದ್ದರು. ಆದರೆ, ಅವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಕುಟುಂಬಕ್ಕೆ ಕೊಡಬೇಕಾಗಿದ್ದ ಎಲ್ಲಾ ಬಾಕಿ ಹಣವನ್ನು ನೀಡಿದ್ದಾರೆ. ಕುಟುಂಬದ ಪ್ರಕಾರ, ಶಿವರಾಮನ್ ಅವರ ಪತ್ನಿ ಕಾನೂನುಬದ್ಧ ನಾಮಿನಿ ಎಂಬ ಪತ್ರವನ್ನು ಹೊರತುಪಡಿಸಿ, ಇನ್ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವ್ಯವಸ್ಥೆಯ ವಿರುದ್ಧ ಹೋರಾಡಲು ನಮ್ಮ ಬಳಿ ಆರ್ಥಿಕ ಸಂಪನ್ಮೂಲಗಳಿಲ್ಲದಿದ್ದರೂ, ನನ್ನ ತಂದೆ ಶಿವರಾಮನ್‌ ಅವರಿಗೆ ನ್ಯಾಯ ದೊರಕಿಸಿಕೊಡಲು ಮತ್ತು ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ನಾವು ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ” ಎಂದು ಪ್ರದೀಶ್ ಹೇಳಿದ್ದಾರೆ.

“ನನ್ನ ತಂದೆ ಹೋದರು. ಆದರೆ, ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ಕಾನೂನು ಮೊರೆ ಹೋಗಲು ನಿರ್ಧರಿಸಿದ್ದೇವೆ. ಅಧಿಕಾರಿಗಳಿಗೆ ಹಣ ಬಿಡುಗಡೆ ಮಾಡಬಹುದಿತ್ತು. ಆದರೆ, ಅವರು ನನ್ನ ತಂದೆ ಸಾಯುವವರೆಗೆ ಕಾದು, ಬಳಿಕ ತಕ್ಷಣ ಹಣ ಕೊಟ್ಟಿದ್ದಾರೆ. ಅವರು ನನ್ನ ತಂದೆ ಸಾಯಲು ಕಾಯುತ್ತಿದ್ದರು” ಎಂದು ದಿನಗೂಲಿ ಮಾಡುವ 39 ವರ್ಷದ ಪ್ರದೀಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಪಿಎಫ್‌ಒ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಪಿಎಫ್‌ ಹಣ ಹಿಂಪಡೆಯಲು ಫಾರ್ಮ್‌ 20 ಅನ್ನು ಸಲ್ಲಿಸಬೇಕು. ಕುಟುಂಬ ಸದಸ್ಯರು ಈ ಹಣ ಪಡೆಯುವುದಾದರೆ, ಮೃತ ವ್ಯಕ್ತಿಯ ಮರಣ ಪ್ರಮಾಣ ಪತ್ರ, ರಕ್ಷಕತ್ವ ಪ್ರಮಾಣ ಪತ್ರ ಸೇರಿದಂತೆ ಹಲವು ದಾಖಲೆಗಳನ್ನು ನೀಡಬೇಕು. ಆದರೆ, ಶಿವರಾಮನ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಕುಟುಂಬ ಸದಸ್ಯರಿಂದ ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ. ಇದೇ ಅಧಿಕಾರಿಗಳು ಶಿವರಾಮನ್ ಜೀವಂತ ಇದ್ದಾಗ ಹಣ ನೀಡದೆ ಸತಾಯಿಸಿ ಅವರ ಸಾವಿಗೆ ಕಾರಣರಾಗಿದ್ದರು.

ಏನಿದು ಪ್ರಕರಣ?

ಕೇರಳದ ತ್ರಿಶೂರ್ ಮೂಲದ ಶಿವರಾಮನ್ ಅವರು ಅಪೋಲೋ ಟೈರ್ಸ್‌ನಲ್ಲಿ ನೌಕರರಾಗಿದ್ದರು. 9 ವರ್ಷಗಳ ಹಿಂದೆ ಅವರು ವೃತ್ತಿಯಿಂದ ನಿವೃತ್ತರಾಗಿದ್ದರು. ಅಂದಿನಿಂದಲೂ, ತಮ್ಮ ಪಿಎಫ್‌ ಹಣವನ್ನು ಪಡೆಯಲು ಇಪಿಎಫ್‌ಒ ಕಚೇರಿಗೆ ಅಲೆಯುತ್ತಿದ್ದರು. ಆದರೆ, ದಾಖಲೆಗಳು ಹೋಲಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳ ಅವರ ಹಣವನ್ನು ಪಾವತಿಸಲು ನಿರಾಕರಿಸಿದ್ದರು ಎನ್ನಲಾಗಿದೆ. ಮನನೊಂದಿದ್ದ ಶಿವರಾಮನ್ ಕಳೆದ ತಿಂಗಳು (ಫೆಬ್ರವರಿ) 7ರಂದು ಕೊಚ್ಚಿಯಲ್ಲಿರುವ ಇಪಿಎಫ್‌ಒ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಮ್ಮ ತಂದೆಯ ಸಾವಿಗೆ ಇಪಿಎಫ್‌ಒ ಅಧಿಕಾರಿಗಳೇ ಕಾರಣವೆಂದು ಆರೋಪಿಸಿರುವ ಪ್ರದೀಪ್, ಫೆಬ್ರವರಿ 7ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ. ನಾವು ನಮ್ಮಂತೆ ಇತರ ಕುಟುಂಬಗಳಿಗೆ ನೋವು ಎದುರಾಗಬಾರದು ಎಂಬ ಕಾರಣಕ್ಕೆ ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಪ್ರದೀಪ್ ಹೇಳಿದ್ದಾರೆ.

ವರದಿಯ ಪ್ರಕಾರ, ಶಿವರಾಮನ್ ಅವರ 90,000 ರೂ. ಪಿಎಫ್‌ ಹಣ ಇಪಿಎಫ್‌ಒ ಖಾತೆಯಲ್ಲಿತ್ತು. ಅದನ್ನು ಪಡೆಯಲು ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಗುರುತಿನ ದಾಖಲೆಗಳು ಹೊಂದಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳು ಮರುಪಾವತಿಗೆ ನಿರಾಕರಿಸಿದ್ದರು. ಅಲ್ಲದೆ, ಅವರ ಶಾಲೆಯ ಪ್ರಮಾಣ ಪತ್ರಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಅದನ್ನು ನೀಡಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ : ಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಎಡಿಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...