Homeಮುಖಪುಟ'ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು': ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

‘ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು’: ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

- Advertisement -
- Advertisement -

“ನನ್ನ ತಂದೆಯ ಪಿಎಫ್ ಹಣ ನೀಡಲು ಹೆಚ್ಚುವರಿ ದಾಖಲೆಗಳನ್ನು ಒದಗಿಸುವಂತೆ ಹೇಳಿ 9 ವರ್ಷಗಳ ಕಾಲ ಅಧಿಕಾರಿಗಳು ಸತಾಯಿಸಿದ್ದರು. ಆದರೆ, ತಂದೆ ಮೃತಪಟ್ಟ ಬೆನ್ನಲ್ಲೇ ಯಾವುದೇ ಹೆಚ್ಚುವರಿ ದಾಖಲೆ ಕೇಳದೆ ತಕ್ಷಣ ಹಣ ನೀಡಿದ್ದಾರೆ. ಕನಿಷ್ಠ ಪಕ್ಷ ಅವರು ತಂದೆಯ ಮರಣ ಪ್ರಮಾಣ ಪತ್ರ ಕೂಡ ಕೇಳಿಲ್ಲ” ಈ ಮಾತು ಹೇಳಿರುವುದು ಕಳೆದ ತಿಂಗಳು ಕೇರಳದ ಕೊಚ್ಚಿಯಲ್ಲಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಚೇರಿಯೊಳಗೆ ಆತ್ಮಹತ್ಯೆ ಮಾಡಿಕೊಂಡ 69 ವರ್ಷದ ಕೆಪಿ ಶಿವರಾಮನ್ ಅವರ 39 ವರ್ಷದ ಪುತ್ರ ಪ್ರದೀಶ್.

ಕಳೆದ 9 ವರ್ಷಗಳಿಂದ ಅಧಿಕಾರಿಗಳು ಪಿಎಫ್ ಹಣ ನೀಡದೆ ಶಿವರಾಮನ್ ಅವರನ್ನು ಸತಾಯಿಸಿದ್ದರು. ಆದರೆ, ಅವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಕುಟುಂಬಕ್ಕೆ ಕೊಡಬೇಕಾಗಿದ್ದ ಎಲ್ಲಾ ಬಾಕಿ ಹಣವನ್ನು ನೀಡಿದ್ದಾರೆ. ಕುಟುಂಬದ ಪ್ರಕಾರ, ಶಿವರಾಮನ್ ಅವರ ಪತ್ನಿ ಕಾನೂನುಬದ್ಧ ನಾಮಿನಿ ಎಂಬ ಪತ್ರವನ್ನು ಹೊರತುಪಡಿಸಿ, ಇನ್ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವ್ಯವಸ್ಥೆಯ ವಿರುದ್ಧ ಹೋರಾಡಲು ನಮ್ಮ ಬಳಿ ಆರ್ಥಿಕ ಸಂಪನ್ಮೂಲಗಳಿಲ್ಲದಿದ್ದರೂ, ನನ್ನ ತಂದೆ ಶಿವರಾಮನ್‌ ಅವರಿಗೆ ನ್ಯಾಯ ದೊರಕಿಸಿಕೊಡಲು ಮತ್ತು ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ನಾವು ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ” ಎಂದು ಪ್ರದೀಶ್ ಹೇಳಿದ್ದಾರೆ.

“ನನ್ನ ತಂದೆ ಹೋದರು. ಆದರೆ, ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ಕಾನೂನು ಮೊರೆ ಹೋಗಲು ನಿರ್ಧರಿಸಿದ್ದೇವೆ. ಅಧಿಕಾರಿಗಳಿಗೆ ಹಣ ಬಿಡುಗಡೆ ಮಾಡಬಹುದಿತ್ತು. ಆದರೆ, ಅವರು ನನ್ನ ತಂದೆ ಸಾಯುವವರೆಗೆ ಕಾದು, ಬಳಿಕ ತಕ್ಷಣ ಹಣ ಕೊಟ್ಟಿದ್ದಾರೆ. ಅವರು ನನ್ನ ತಂದೆ ಸಾಯಲು ಕಾಯುತ್ತಿದ್ದರು” ಎಂದು ದಿನಗೂಲಿ ಮಾಡುವ 39 ವರ್ಷದ ಪ್ರದೀಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಪಿಎಫ್‌ಒ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಪಿಎಫ್‌ ಹಣ ಹಿಂಪಡೆಯಲು ಫಾರ್ಮ್‌ 20 ಅನ್ನು ಸಲ್ಲಿಸಬೇಕು. ಕುಟುಂಬ ಸದಸ್ಯರು ಈ ಹಣ ಪಡೆಯುವುದಾದರೆ, ಮೃತ ವ್ಯಕ್ತಿಯ ಮರಣ ಪ್ರಮಾಣ ಪತ್ರ, ರಕ್ಷಕತ್ವ ಪ್ರಮಾಣ ಪತ್ರ ಸೇರಿದಂತೆ ಹಲವು ದಾಖಲೆಗಳನ್ನು ನೀಡಬೇಕು. ಆದರೆ, ಶಿವರಾಮನ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಕುಟುಂಬ ಸದಸ್ಯರಿಂದ ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ. ಇದೇ ಅಧಿಕಾರಿಗಳು ಶಿವರಾಮನ್ ಜೀವಂತ ಇದ್ದಾಗ ಹಣ ನೀಡದೆ ಸತಾಯಿಸಿ ಅವರ ಸಾವಿಗೆ ಕಾರಣರಾಗಿದ್ದರು.

ಏನಿದು ಪ್ರಕರಣ?

ಕೇರಳದ ತ್ರಿಶೂರ್ ಮೂಲದ ಶಿವರಾಮನ್ ಅವರು ಅಪೋಲೋ ಟೈರ್ಸ್‌ನಲ್ಲಿ ನೌಕರರಾಗಿದ್ದರು. 9 ವರ್ಷಗಳ ಹಿಂದೆ ಅವರು ವೃತ್ತಿಯಿಂದ ನಿವೃತ್ತರಾಗಿದ್ದರು. ಅಂದಿನಿಂದಲೂ, ತಮ್ಮ ಪಿಎಫ್‌ ಹಣವನ್ನು ಪಡೆಯಲು ಇಪಿಎಫ್‌ಒ ಕಚೇರಿಗೆ ಅಲೆಯುತ್ತಿದ್ದರು. ಆದರೆ, ದಾಖಲೆಗಳು ಹೋಲಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳ ಅವರ ಹಣವನ್ನು ಪಾವತಿಸಲು ನಿರಾಕರಿಸಿದ್ದರು ಎನ್ನಲಾಗಿದೆ. ಮನನೊಂದಿದ್ದ ಶಿವರಾಮನ್ ಕಳೆದ ತಿಂಗಳು (ಫೆಬ್ರವರಿ) 7ರಂದು ಕೊಚ್ಚಿಯಲ್ಲಿರುವ ಇಪಿಎಫ್‌ಒ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಮ್ಮ ತಂದೆಯ ಸಾವಿಗೆ ಇಪಿಎಫ್‌ಒ ಅಧಿಕಾರಿಗಳೇ ಕಾರಣವೆಂದು ಆರೋಪಿಸಿರುವ ಪ್ರದೀಪ್, ಫೆಬ್ರವರಿ 7ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ. ನಾವು ನಮ್ಮಂತೆ ಇತರ ಕುಟುಂಬಗಳಿಗೆ ನೋವು ಎದುರಾಗಬಾರದು ಎಂಬ ಕಾರಣಕ್ಕೆ ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಪ್ರದೀಪ್ ಹೇಳಿದ್ದಾರೆ.

ವರದಿಯ ಪ್ರಕಾರ, ಶಿವರಾಮನ್ ಅವರ 90,000 ರೂ. ಪಿಎಫ್‌ ಹಣ ಇಪಿಎಫ್‌ಒ ಖಾತೆಯಲ್ಲಿತ್ತು. ಅದನ್ನು ಪಡೆಯಲು ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಗುರುತಿನ ದಾಖಲೆಗಳು ಹೊಂದಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳು ಮರುಪಾವತಿಗೆ ನಿರಾಕರಿಸಿದ್ದರು. ಅಲ್ಲದೆ, ಅವರ ಶಾಲೆಯ ಪ್ರಮಾಣ ಪತ್ರಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಅದನ್ನು ನೀಡಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ : ಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಎಡಿಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...