Homeಮುಖಪುಟ'ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು': ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

‘ಪಿಎಫ್‌ ಪಾವತಿಸಲು ಅವರು ಅಪ್ಪನ ಸಾವಿಗಾಗಿ ಕಾಯುತ್ತಿದ್ದರು’: ಇಪಿಎಫ್‌ಒ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬ

- Advertisement -
- Advertisement -

“ನನ್ನ ತಂದೆಯ ಪಿಎಫ್ ಹಣ ನೀಡಲು ಹೆಚ್ಚುವರಿ ದಾಖಲೆಗಳನ್ನು ಒದಗಿಸುವಂತೆ ಹೇಳಿ 9 ವರ್ಷಗಳ ಕಾಲ ಅಧಿಕಾರಿಗಳು ಸತಾಯಿಸಿದ್ದರು. ಆದರೆ, ತಂದೆ ಮೃತಪಟ್ಟ ಬೆನ್ನಲ್ಲೇ ಯಾವುದೇ ಹೆಚ್ಚುವರಿ ದಾಖಲೆ ಕೇಳದೆ ತಕ್ಷಣ ಹಣ ನೀಡಿದ್ದಾರೆ. ಕನಿಷ್ಠ ಪಕ್ಷ ಅವರು ತಂದೆಯ ಮರಣ ಪ್ರಮಾಣ ಪತ್ರ ಕೂಡ ಕೇಳಿಲ್ಲ” ಈ ಮಾತು ಹೇಳಿರುವುದು ಕಳೆದ ತಿಂಗಳು ಕೇರಳದ ಕೊಚ್ಚಿಯಲ್ಲಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಕಚೇರಿಯೊಳಗೆ ಆತ್ಮಹತ್ಯೆ ಮಾಡಿಕೊಂಡ 69 ವರ್ಷದ ಕೆಪಿ ಶಿವರಾಮನ್ ಅವರ 39 ವರ್ಷದ ಪುತ್ರ ಪ್ರದೀಶ್.

ಕಳೆದ 9 ವರ್ಷಗಳಿಂದ ಅಧಿಕಾರಿಗಳು ಪಿಎಫ್ ಹಣ ನೀಡದೆ ಶಿವರಾಮನ್ ಅವರನ್ನು ಸತಾಯಿಸಿದ್ದರು. ಆದರೆ, ಅವರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಕುಟುಂಬಕ್ಕೆ ಕೊಡಬೇಕಾಗಿದ್ದ ಎಲ್ಲಾ ಬಾಕಿ ಹಣವನ್ನು ನೀಡಿದ್ದಾರೆ. ಕುಟುಂಬದ ಪ್ರಕಾರ, ಶಿವರಾಮನ್ ಅವರ ಪತ್ನಿ ಕಾನೂನುಬದ್ಧ ನಾಮಿನಿ ಎಂಬ ಪತ್ರವನ್ನು ಹೊರತುಪಡಿಸಿ, ಇನ್ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ವ್ಯವಸ್ಥೆಯ ವಿರುದ್ಧ ಹೋರಾಡಲು ನಮ್ಮ ಬಳಿ ಆರ್ಥಿಕ ಸಂಪನ್ಮೂಲಗಳಿಲ್ಲದಿದ್ದರೂ, ನನ್ನ ತಂದೆ ಶಿವರಾಮನ್‌ ಅವರಿಗೆ ನ್ಯಾಯ ದೊರಕಿಸಿಕೊಡಲು ಮತ್ತು ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ನಾವು ಕಾನೂನು ಹೋರಾಟಕ್ಕೆ ಮುಂದಾಗಿದ್ದೇವೆ” ಎಂದು ಪ್ರದೀಶ್ ಹೇಳಿದ್ದಾರೆ.

“ನನ್ನ ತಂದೆ ಹೋದರು. ಆದರೆ, ಬೇರೆಯವರ ತಂದೆಗೆ ಈ ರೀತಿ ಆಗದಂತೆ ನೋಡಿಕೊಳ್ಳಲು ಕಾನೂನು ಮೊರೆ ಹೋಗಲು ನಿರ್ಧರಿಸಿದ್ದೇವೆ. ಅಧಿಕಾರಿಗಳಿಗೆ ಹಣ ಬಿಡುಗಡೆ ಮಾಡಬಹುದಿತ್ತು. ಆದರೆ, ಅವರು ನನ್ನ ತಂದೆ ಸಾಯುವವರೆಗೆ ಕಾದು, ಬಳಿಕ ತಕ್ಷಣ ಹಣ ಕೊಟ್ಟಿದ್ದಾರೆ. ಅವರು ನನ್ನ ತಂದೆ ಸಾಯಲು ಕಾಯುತ್ತಿದ್ದರು” ಎಂದು ದಿನಗೂಲಿ ಮಾಡುವ 39 ವರ್ಷದ ಪ್ರದೀಶ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಪಿಎಫ್‌ಒ ನಿಯಮಗಳ ಪ್ರಕಾರ, ಮೃತ ವ್ಯಕ್ತಿಯ ಪಿಎಫ್‌ ಹಣ ಹಿಂಪಡೆಯಲು ಫಾರ್ಮ್‌ 20 ಅನ್ನು ಸಲ್ಲಿಸಬೇಕು. ಕುಟುಂಬ ಸದಸ್ಯರು ಈ ಹಣ ಪಡೆಯುವುದಾದರೆ, ಮೃತ ವ್ಯಕ್ತಿಯ ಮರಣ ಪ್ರಮಾಣ ಪತ್ರ, ರಕ್ಷಕತ್ವ ಪ್ರಮಾಣ ಪತ್ರ ಸೇರಿದಂತೆ ಹಲವು ದಾಖಲೆಗಳನ್ನು ನೀಡಬೇಕು. ಆದರೆ, ಶಿವರಾಮನ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಅವರ ಕುಟುಂಬ ಸದಸ್ಯರಿಂದ ಯಾವುದೇ ಹೆಚ್ಚುವರಿ ದಾಖಲೆಗಳನ್ನು ಕೇಳದೆ ಹಣ ನೀಡಲಾಗಿದೆ. ಇದೇ ಅಧಿಕಾರಿಗಳು ಶಿವರಾಮನ್ ಜೀವಂತ ಇದ್ದಾಗ ಹಣ ನೀಡದೆ ಸತಾಯಿಸಿ ಅವರ ಸಾವಿಗೆ ಕಾರಣರಾಗಿದ್ದರು.

ಏನಿದು ಪ್ರಕರಣ?

ಕೇರಳದ ತ್ರಿಶೂರ್ ಮೂಲದ ಶಿವರಾಮನ್ ಅವರು ಅಪೋಲೋ ಟೈರ್ಸ್‌ನಲ್ಲಿ ನೌಕರರಾಗಿದ್ದರು. 9 ವರ್ಷಗಳ ಹಿಂದೆ ಅವರು ವೃತ್ತಿಯಿಂದ ನಿವೃತ್ತರಾಗಿದ್ದರು. ಅಂದಿನಿಂದಲೂ, ತಮ್ಮ ಪಿಎಫ್‌ ಹಣವನ್ನು ಪಡೆಯಲು ಇಪಿಎಫ್‌ಒ ಕಚೇರಿಗೆ ಅಲೆಯುತ್ತಿದ್ದರು. ಆದರೆ, ದಾಖಲೆಗಳು ಹೋಲಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳ ಅವರ ಹಣವನ್ನು ಪಾವತಿಸಲು ನಿರಾಕರಿಸಿದ್ದರು ಎನ್ನಲಾಗಿದೆ. ಮನನೊಂದಿದ್ದ ಶಿವರಾಮನ್ ಕಳೆದ ತಿಂಗಳು (ಫೆಬ್ರವರಿ) 7ರಂದು ಕೊಚ್ಚಿಯಲ್ಲಿರುವ ಇಪಿಎಫ್‌ಒ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ತಮ್ಮ ತಂದೆಯ ಸಾವಿಗೆ ಇಪಿಎಫ್‌ಒ ಅಧಿಕಾರಿಗಳೇ ಕಾರಣವೆಂದು ಆರೋಪಿಸಿರುವ ಪ್ರದೀಪ್, ಫೆಬ್ರವರಿ 7ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೀಗ, ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿದೆ. ನಾವು ನಮ್ಮಂತೆ ಇತರ ಕುಟುಂಬಗಳಿಗೆ ನೋವು ಎದುರಾಗಬಾರದು ಎಂಬ ಕಾರಣಕ್ಕೆ ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಪ್ರದೀಪ್ ಹೇಳಿದ್ದಾರೆ.

ವರದಿಯ ಪ್ರಕಾರ, ಶಿವರಾಮನ್ ಅವರ 90,000 ರೂ. ಪಿಎಫ್‌ ಹಣ ಇಪಿಎಫ್‌ಒ ಖಾತೆಯಲ್ಲಿತ್ತು. ಅದನ್ನು ಪಡೆಯಲು ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಅವರ ಗುರುತಿನ ದಾಖಲೆಗಳು ಹೊಂದಿಕೆಯಾಗುತ್ತಿಲ್ಲವೆಂದು ಅಧಿಕಾರಿಗಳು ಮರುಪಾವತಿಗೆ ನಿರಾಕರಿಸಿದ್ದರು. ಅಲ್ಲದೆ, ಅವರ ಶಾಲೆಯ ಪ್ರಮಾಣ ಪತ್ರಕ್ಕಾಗಿ ಬೇಡಿಕೆ ಇಟ್ಟಿದ್ದರು. ಆದರೆ, ಅವರಿಗೆ ಅದನ್ನು ನೀಡಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ : ಚುನಾವಣಾ ಬಾಂಡ್ ಮಾಹಿತಿ ಒದಗಿಸದ ಎಸ್‌ಬಿಐ: ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಎಡಿಆರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...