Homeಮುಖಪುಟ31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

- Advertisement -
- Advertisement -

“ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ.” ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ ಅರೇಬಿಯಾದ ಅಬಾದಲ್ಲಿ ಎಡ್ಲ ಲಚ್ಚಣ್ಣ ಎಂಬುವವರು ಇಸ್ಮಾಯಿಲ್ ಗೆ ನೀಡಿದ್ದ 3,000 ರಿಯಾಲ್(ರೂ.25000) ಹಣವನ್ನು, ಬರೋಬ್ಬರಿ 31 ವರ್ಷಗಳ ನಂತರ ಮರಳಿ ನೀಡುವ ಮೂಲಕ ಅವರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಎಐ ಆಪ್‌ನ ಮಾರ್ಗದರ್ಶನದಲ್ಲಿ ಕೇರಳದ ಪಾಲಕ್ಕಾಡ್‌ನಿಂದ ತೆಲಂಗಾಣದ ಧರ್ಮಪುರಿಯವರೆಗೆ ಸುಮಾರು 1,200 ಕಿಲೋಮೀಟರ್ ಪ್ರಯಾಣಿಸಿ, ಕೊನೆಗೂ ಲಚ್ಚಣ್ಣನವರ ಕುಟುಂಬವನ್ನು ಭೇಟಿಯಾದ ಈ ಅಸಾಮಾನ್ಯ ಕಥೆ ನಂಬಿಕೆ ಮತ್ತು ಸ್ನೇಹದ ಮಹತ್ವವನ್ನು ಸಾರುತ್ತಿದೆ.

ಕಳೆದ ಗುರುವಾರ ಬೆಳಿಗ್ಗೆ ತೆಲಂಗಾಣದ ಧರ್ಮಪುರಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಬಾಗಿಲು ಬಡಿದಿದ್ದರು. ಆತ 63 ವರ್ಷದ ಬಡಕಲು ದೇಹದ ವ್ಯಕ್ತಿ. ದಿನಗಟ್ಟಲೆ ರೈಲು ಮತ್ತು ಬಸ್ಸುಗಳಲ್ಲಿ ಪ್ರಯಾಣಿಸಿ ಸುಸ್ತಾಗಿದ್ದರೂ, ಆತನ ಮನಸ್ಸಿನಲ್ಲಿ ಒಂದು ಅಚಲವಾದ ಗುರಿಯಿತ್ತು. ಆತನ ಜೇಬಿನಲ್ಲಿ ಒಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ32 ಸ್ಮಾರ್ಟ್‌ಫೋನ್ ಇತ್ತು. ಆ ಫೋನ್‌ನಲ್ಲಿರುವ ಎಐ ಅಸಿಸ್ಟೆಂಟ್ ಆಪ್, ದಶಕಗಳ ಕಾಲದ ಪತ್ರಗಳು ಮತ್ತು ಪ್ರಯತ್ನಗಳು ಸಾಧ್ಯವಾಗಿಸದ ಕೆಲಸವನ್ನು ಮಾಡಿ ಮುಗಿಸಿತ್ತು. ಪಾಲಕ್ಕಾಡ್‌ನಿಂದ ಧರ್ಮಪುರಿಯ ಈ ಬಾಗಿಲಿನವರೆಗೆ 1,200 ಕಿಲೋಮೀಟರ್‌ಗಳಷ್ಟು ದೂರವನ್ನು ಆ ಆಪ್ ನಿಖರವಾಗಿ ತೋರಿಸಿಕೊಟ್ಟಿತ್ತು.

ಬಾಗಿಲು ತೆರೆದವರು ತನ್ನನ್ನು ಹೇಗೆ ಸ್ವೀಕರಿಸುತ್ತಾರೆ? ತಾವು ಹೇಳುವ ಹೆಸರನ್ನು ಅವರು ಗುರುತಿಸುತ್ತಾರೆಯೇ? ಇಷ್ಟು ವರ್ಷಗಳ ನಂತರ ತಾನೇ ಬಂದು ಹಣ ಕೊಡುತ್ತಿದ್ದೇನೆಂದು ಅವರು ನಂಬುತ್ತಾರೆಯೇ? ಬಾಗಿಲನ್ನು ಸಂಪೂರ್ಣವಾಗಿ ತೆರೆಯುತ್ತಾರೆಯೇ? ಎಂಬಿತ್ಯಾದಿ ಆತಂಕಗಳು ಇಸ್ಮಾಯಿಲ್ ಮನಸ್ಸಿನಲ್ಲಿ ಕಾಡುತ್ತಿದ್ದವು. ಆದರೆ, ತಾನು ಮೈಲುಗಟ್ಟಲೆ ದೂರ ಪ್ರಯಾಣಿಸಿ ಬಂದಿರುವುದು ಕಳೆದ 31 ವರ್ಷಗಳಿಂದ ತನ್ನ ಬಳಿ ಭದ್ರವಾಗಿದ್ದ ಹಣವನ್ನು ಮರಳಿ ಒಪ್ಪಿಸಲು ಎಂಬ ಒಂದೇ ಒಂದು ವಿಷಯ ಆತನಿಗೆ ಸ್ಪಷ್ಟವಾಗಿತ್ತು.

ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ ಮಹಮ್ಮದ್ ಇಸ್ಮಾಯಿಲ್ ಮತ್ತು ಧರ್ಮಪುರಿಯ ಎಡ್ಲ ಲಚ್ಚಣ್ಣ ಎಂಬುವವರು ಸುಮಾರು 25 ವರ್ಷಗಳ ಹಿಂದೆ ಸೌದಿ ಅರೇಬಿಯಾದ ಕಂಪನಿಯೊಂದರಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ತಮ್ಮ ವೈಯಕ್ತಿಕ ತುರ್ತು ಅಗತ್ಯಕ್ಕಾಗಿ ಇಸ್ಮಾಯಿಲ್, ಲಚ್ಚಣ್ಣ ಅವರಿಂದ ಒಂದಷ್ಟು ಹಣವನ್ನು ಸಾಲವಾಗಿ ಪಡೆದಿದ್ದರು. ಭಾರತಕ್ಕೆ ಹಿಂತಿರುಗಿದ ನಂತರ ಖಂಡಿತವಾಗಿಯೂ ಸಾಲ ತೀರಿಸುವುದಾಗಿ ಮಾತು ಸಹ ನೀಡಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಸ್ವದೇಶಕ್ಕೆ ಬಂದ ನಂತರ ಲಚ್ಚಣ್ಣ ಅವರೊಂದಿಗಿನ ಸಂಪರ್ಕ ಕಡಿದುಹೋಯಿತು. ಹೀಗಾಗಿ ಅವರಿಗೆ ಆ ಸಾಲವನ್ನು ತೀರಿಸಲು ಸಾಧ್ಯವಾಗಿರಲಿಲ್ಲ.

ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಮತ್ತು ಪಡೆದ ಸಾಲವನ್ನು ಮರೆಯದೇ ಮರಳಿಸುವುದು ನಿಜವಾದ ಪ್ರಾಮಾಣಿಕತೆಗೆ ನಿದರ್ಶನ ಎನ್ನಲಾಗುತ್ತದೆ. ಬರೋಬ್ಬರಿ 25 ವರ್ಷಗಳ ಹಿಂದೆ ಪಡೆದಿದ್ದ ಸಾಲವನ್ನು ತೀರಿಸಲು ಕೇರಳದಿಂದ ವಿಶೇಷವಾಗಿ ಧರ್ಮಪುರಿಗೆ ಬಂದ ವ್ಯಕ್ತಿಯೊಬ್ಬರು ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿದ್ದಲ್ಲದೆ, ಭಾವುಕರನ್ನಾಗಿಸಿದ್ದಾರೆ.

ವರ್ಷಗಳೇ ಕಳೆದರೂ ತಾವು ಪಡೆದಿದ್ದ ಸಾಲವನ್ನು ಇಸ್ಮಾಯಿಲ್ ಮರೆಯಲಿಲ್ಲ. ಇತ್ತೀಚೆಗೆ ಹೇಗಾದರೂ ಮಾಡಿ ಆ ಸಾಲವನ್ನು ತೀರಿಸಲೇಬೇಕೆಂದು ಅವರು ನಿರ್ಧರಿಸಿದರು. ಲಚ್ಚಣ್ಣ ಅವರ ಪೂರ್ಣ ವಿಳಾಸವಾಗಲಿ ಅಥವಾ ಫೋನ್ ನಂಬರ್ ಆಗಲಿ ಅವರ ಬಳಿ ಇರಲಿಲ್ಲ. ಅವರ ಸ್ವಂತ ಊರು ‘ಧರ್ಮಪುರಿ’ ಎಂಬ ಒಂದೇ ಒಂದು ಸುಳಿವನ್ನು ಇಟ್ಟುಕೊಂಡು ಗೂಗಲ್‌ನಲ್ಲಿ ಹುಡುಕಿ ಜಗತಿಯಾಲ ಜಿಲ್ಲೆಗೆ ತಲುಪಿದರು. ಅಲ್ಲಿ ಸ್ಥಳೀಯರನ್ನು ವಿಚಾರಿಸುತ್ತಾ ಕೊನೆಗೂ ಗುರುವಾರ ಮಧ್ಯಾಹ್ನ ಲಚ್ಚಣ್ಣ ಅವರ ಮನೆ ಪತ್ತೆ ಮಾಡಿದರು.

ಆ ಸಮಯದಲ್ಲಿ ಲಚ್ಚಣ್ಣ ಉದ್ಯೋಗಕ್ಕಾಗಿ ಗಲ್ಫ್ ದೇಶದಲ್ಲಿದ್ದ ಕಾರಣ, ಇಸ್ಮಾಯಿಲ್ ಅವರ ಕುಟುಂಬಸ್ಥರನ್ನು ಭೇಟಿಯಾಗಿ ತಮ್ಮ ಪರಿಚಯ ಮಾಡಿಕೊಂಡರು. ನಂತರ ಲಚ್ಚಣ್ಣ ಅವರಿಗೆ ಫೋನ್ ಕರೆ ಮಾಡಿದರು. ತಾವು ಸಾಲ ನೀಡಿದ್ದ ವಿಷಯವನ್ನೇ ಮರೆತುಹೋಗಿದ್ದ ಲಚ್ಚಣ್ಣ, ತಮ್ಮ ಹಳೆಯ ಗೆಳೆಯನ ಧ್ವನಿ ಕೇಳುತ್ತಿದ್ದಂತೆ ತಕ್ಷಣ ಗುರುತಿಸಿ ಅತ್ಯಂತ ಪ್ರೀತಿಯಿಂದ ಮಾತನಾಡಿದರು. ಆ ಬಳಿಕ ಇಸ್ಮಾಯಿಲ್ 25,000 ರೂಪಾಯಿ ನಗದನ್ನು ಲಚ್ಚಣ್ಣ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. “ಇಷ್ಟು ವರ್ಷಗಳಿಂದ ನನ್ನ ಮನಸ್ಸಿನಲ್ಲಿದ್ದ ದೊಡ್ಡ ಸಾಲದ ಹೊರೆ ಈಗ ಇಳಿಯಿತು” ಎಂದು ಇಸ್ಮಾಯಿಲ್ ಭಾವುಕರಾದರು. ಗೆಳೆಯ ಕೊಟ್ಟ ಮಾತನ್ನು ಉಳಿಸಿಕೊಂಡು, ಇಷ್ಟೊಂದು ವರ್ಷಗಳ ನಂತರ ಸಾಲ ತೀರಿಸಲೆಂದೇ ಹುಡುಕಿಕೊಂಡು ಬಂದಿದ್ದನ್ನು ನೋಡಿ ಲಚ್ಚಣ್ಣ ಅವರ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದರು.

ಇಂದಿನ ಕಾಲದಲ್ಲಿ ಸಣ್ಣಪುಟ್ಟ ಸಾಲಗಳನ್ನೂ ಮರಳಿಸದೆ ತಪ್ಪಿಸಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿರುವಾಗ 30 ವರ್ಷಗಳ ನಂತರ ಸಾವಿರಾರು ಕಿಲೋಮೀಟರ್ ಪ್ರಯಾಣಿಸಿ ಸಾಲ ತೀರಿಸಿದ ಮಹಮ್ಮದ್ ಇಸ್ಮಾಯಿಲ್ ಅವರ ಈ ನಡೆ ಪ್ರಾಮಾಣಿಕತೆ, ಕೃತಜ್ಞತೆ ಮತ್ತು ಸ್ನೇಹಬಂಧಕ್ಕೆ ಅತ್ಯುತ್ತಮ ನಿದರ್ಶನವಾಗಿದೆ ಎಂದು ಸ್ಥಳೀಯರು ಶ್ಲಾಘಿಸಿದ್ದಾರೆ. ಈ ಘಟನೆ ಪ್ರಸ್ತುತ ಧರ್ಮಪುರಿಯಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...