Homeಮುಖಪುಟ31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

- Advertisement -
- Advertisement -

“ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ.” ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ ಅರೇಬಿಯಾದ ಅಬಾದಲ್ಲಿ ಎಡ್ಲ ಲಚ್ಚಣ್ಣ ಎಂಬುವವರು ಇಸ್ಮಾಯಿಲ್ ಗೆ ನೀಡಿದ್ದ 3,000 ರಿಯಾಲ್(ರೂ.25000) ಹಣವನ್ನು, ಬರೋಬ್ಬರಿ 31 ವರ್ಷಗಳ ನಂತರ ಮರಳಿ ನೀಡುವ ಮೂಲಕ ಅವರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಎಐ ಆಪ್‌ನ ಮಾರ್ಗದರ್ಶನದಲ್ಲಿ ಕೇರಳದ ಪಾಲಕ್ಕಾಡ್‌ನಿಂದ ತೆಲಂಗಾಣದ ಧರ್ಮಪುರಿಯವರೆಗೆ ಸುಮಾರು 1,200 ಕಿಲೋಮೀಟರ್ ಪ್ರಯಾಣಿಸಿ, ಕೊನೆಗೂ ಲಚ್ಚಣ್ಣನವರ ಕುಟುಂಬವನ್ನು ಭೇಟಿಯಾದ ಈ ಅಸಾಮಾನ್ಯ ಕಥೆ ನಂಬಿಕೆ ಮತ್ತು ಸ್ನೇಹದ ಮಹತ್ವವನ್ನು ಸಾರುತ್ತಿದೆ.

ಕಳೆದ ಗುರುವಾರ ಬೆಳಿಗ್ಗೆ ತೆಲಂಗಾಣದ ಧರ್ಮಪುರಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಬಾಗಿಲು ಬಡಿದಿದ್ದರು. ಆತ 63 ವರ್ಷದ ಬಡಕಲು ದೇಹದ ವ್ಯಕ್ತಿ. ದಿನಗಟ್ಟಲೆ ರೈಲು ಮತ್ತು ಬಸ್ಸುಗಳಲ್ಲಿ ಪ್ರಯಾಣಿಸಿ ಸುಸ್ತಾಗಿದ್ದರೂ, ಆತನ ಮನಸ್ಸಿನಲ್ಲಿ ಒಂದು ಅಚಲವಾದ ಗುರಿಯಿತ್ತು. ಆತನ ಜೇಬಿನಲ್ಲಿ ಒಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ32 ಸ್ಮಾರ್ಟ್‌ಫೋನ್ ಇತ್ತು. ಆ ಫೋನ್‌ನಲ್ಲಿರುವ ಎಐ ಅಸಿಸ್ಟೆಂಟ್ ಆಪ್, ದಶಕಗಳ ಕಾಲದ ಪತ್ರಗಳು ಮತ್ತು ಪ್ರಯತ್ನಗಳು ಸಾಧ್ಯವಾಗಿಸದ ಕೆಲಸವನ್ನು ಮಾಡಿ ಮುಗಿಸಿತ್ತು. ಪಾಲಕ್ಕಾಡ್‌ನಿಂದ ಧರ್ಮಪುರಿಯ ಈ ಬಾಗಿಲಿನವರೆಗೆ 1,200 ಕಿಲೋಮೀಟರ್‌ಗಳಷ್ಟು ದೂರವನ್ನು ಆ ಆಪ್ ನಿಖರವಾಗಿ ತೋರಿಸಿಕೊಟ್ಟಿತ್ತು.

ಬಾಗಿಲು ತೆರೆದವರು ತನ್ನನ್ನು ಹೇಗೆ ಸ್ವೀಕರಿಸುತ್ತಾರೆ? ತಾವು ಹೇಳುವ ಹೆಸರನ್ನು ಅವರು ಗುರುತಿಸುತ್ತಾರೆಯೇ? ಇಷ್ಟು ವರ್ಷಗಳ ನಂತರ ತಾನೇ ಬಂದು ಹಣ ಕೊಡುತ್ತಿದ್ದೇನೆಂದು ಅವರು ನಂಬುತ್ತಾರೆಯೇ? ಬಾಗಿಲನ್ನು ಸಂಪೂರ್ಣವಾಗಿ ತೆರೆಯುತ್ತಾರೆಯೇ? ಎಂಬಿತ್ಯಾದಿ ಆತಂಕಗಳು ಇಸ್ಮಾಯಿಲ್ ಮನಸ್ಸಿನಲ್ಲಿ ಕಾಡುತ್ತಿದ್ದವು. ಆದರೆ, ತಾನು ಮೈಲುಗಟ್ಟಲೆ ದೂರ ಪ್ರಯಾಣಿಸಿ ಬಂದಿರುವುದು ಕಳೆದ 31 ವರ್ಷಗಳಿಂದ ತನ್ನ ಬಳಿ ಭದ್ರವಾಗಿದ್ದ ಹಣವನ್ನು ಮರಳಿ ಒಪ್ಪಿಸಲು ಎಂಬ ಒಂದೇ ಒಂದು ವಿಷಯ ಆತನಿಗೆ ಸ್ಪಷ್ಟವಾಗಿತ್ತು.

ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ ಮಹಮ್ಮದ್ ಇಸ್ಮಾಯಿಲ್ ಮತ್ತು ಧರ್ಮಪುರಿಯ ಎಡ್ಲ ಲಚ್ಚಣ್ಣ ಎಂಬುವವರು ಸುಮಾರು 25 ವರ್ಷಗಳ ಹಿಂದೆ ಸೌದಿ ಅರೇಬಿಯಾದ ಕಂಪನಿಯೊಂದರಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ತಮ್ಮ ವೈಯಕ್ತಿಕ ತುರ್ತು ಅಗತ್ಯಕ್ಕಾಗಿ ಇಸ್ಮಾಯಿಲ್, ಲಚ್ಚಣ್ಣ ಅವರಿಂದ ಒಂದಷ್ಟು ಹಣವನ್ನು ಸಾಲವಾಗಿ ಪಡೆದಿದ್ದರು. ಭಾರತಕ್ಕೆ ಹಿಂತಿರುಗಿದ ನಂತರ ಖಂಡಿತವಾಗಿಯೂ ಸಾಲ ತೀರಿಸುವುದಾಗಿ ಮಾತು ಸಹ ನೀಡಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಸ್ವದೇಶಕ್ಕೆ ಬಂದ ನಂತರ ಲಚ್ಚಣ್ಣ ಅವರೊಂದಿಗಿನ ಸಂಪರ್ಕ ಕಡಿದುಹೋಯಿತು. ಹೀಗಾಗಿ ಅವರಿಗೆ ಆ ಸಾಲವನ್ನು ತೀರಿಸಲು ಸಾಧ್ಯವಾಗಿರಲಿಲ್ಲ.

ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಮತ್ತು ಪಡೆದ ಸಾಲವನ್ನು ಮರೆಯದೇ ಮರಳಿಸುವುದು ನಿಜವಾದ ಪ್ರಾಮಾಣಿಕತೆಗೆ ನಿದರ್ಶನ ಎನ್ನಲಾಗುತ್ತದೆ. ಬರೋಬ್ಬರಿ 25 ವರ್ಷಗಳ ಹಿಂದೆ ಪಡೆದಿದ್ದ ಸಾಲವನ್ನು ತೀರಿಸಲು ಕೇರಳದಿಂದ ವಿಶೇಷವಾಗಿ ಧರ್ಮಪುರಿಗೆ ಬಂದ ವ್ಯಕ್ತಿಯೊಬ್ಬರು ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿದ್ದಲ್ಲದೆ, ಭಾವುಕರನ್ನಾಗಿಸಿದ್ದಾರೆ.

ವರ್ಷಗಳೇ ಕಳೆದರೂ ತಾವು ಪಡೆದಿದ್ದ ಸಾಲವನ್ನು ಇಸ್ಮಾಯಿಲ್ ಮರೆಯಲಿಲ್ಲ. ಇತ್ತೀಚೆಗೆ ಹೇಗಾದರೂ ಮಾಡಿ ಆ ಸಾಲವನ್ನು ತೀರಿಸಲೇಬೇಕೆಂದು ಅವರು ನಿರ್ಧರಿಸಿದರು. ಲಚ್ಚಣ್ಣ ಅವರ ಪೂರ್ಣ ವಿಳಾಸವಾಗಲಿ ಅಥವಾ ಫೋನ್ ನಂಬರ್ ಆಗಲಿ ಅವರ ಬಳಿ ಇರಲಿಲ್ಲ. ಅವರ ಸ್ವಂತ ಊರು ‘ಧರ್ಮಪುರಿ’ ಎಂಬ ಒಂದೇ ಒಂದು ಸುಳಿವನ್ನು ಇಟ್ಟುಕೊಂಡು ಗೂಗಲ್‌ನಲ್ಲಿ ಹುಡುಕಿ ಜಗತಿಯಾಲ ಜಿಲ್ಲೆಗೆ ತಲುಪಿದರು. ಅಲ್ಲಿ ಸ್ಥಳೀಯರನ್ನು ವಿಚಾರಿಸುತ್ತಾ ಕೊನೆಗೂ ಗುರುವಾರ ಮಧ್ಯಾಹ್ನ ಲಚ್ಚಣ್ಣ ಅವರ ಮನೆ ಪತ್ತೆ ಮಾಡಿದರು.

ಆ ಸಮಯದಲ್ಲಿ ಲಚ್ಚಣ್ಣ ಉದ್ಯೋಗಕ್ಕಾಗಿ ಗಲ್ಫ್ ದೇಶದಲ್ಲಿದ್ದ ಕಾರಣ, ಇಸ್ಮಾಯಿಲ್ ಅವರ ಕುಟುಂಬಸ್ಥರನ್ನು ಭೇಟಿಯಾಗಿ ತಮ್ಮ ಪರಿಚಯ ಮಾಡಿಕೊಂಡರು. ನಂತರ ಲಚ್ಚಣ್ಣ ಅವರಿಗೆ ಫೋನ್ ಕರೆ ಮಾಡಿದರು. ತಾವು ಸಾಲ ನೀಡಿದ್ದ ವಿಷಯವನ್ನೇ ಮರೆತುಹೋಗಿದ್ದ ಲಚ್ಚಣ್ಣ, ತಮ್ಮ ಹಳೆಯ ಗೆಳೆಯನ ಧ್ವನಿ ಕೇಳುತ್ತಿದ್ದಂತೆ ತಕ್ಷಣ ಗುರುತಿಸಿ ಅತ್ಯಂತ ಪ್ರೀತಿಯಿಂದ ಮಾತನಾಡಿದರು. ಆ ಬಳಿಕ ಇಸ್ಮಾಯಿಲ್ 25,000 ರೂಪಾಯಿ ನಗದನ್ನು ಲಚ್ಚಣ್ಣ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. “ಇಷ್ಟು ವರ್ಷಗಳಿಂದ ನನ್ನ ಮನಸ್ಸಿನಲ್ಲಿದ್ದ ದೊಡ್ಡ ಸಾಲದ ಹೊರೆ ಈಗ ಇಳಿಯಿತು” ಎಂದು ಇಸ್ಮಾಯಿಲ್ ಭಾವುಕರಾದರು. ಗೆಳೆಯ ಕೊಟ್ಟ ಮಾತನ್ನು ಉಳಿಸಿಕೊಂಡು, ಇಷ್ಟೊಂದು ವರ್ಷಗಳ ನಂತರ ಸಾಲ ತೀರಿಸಲೆಂದೇ ಹುಡುಕಿಕೊಂಡು ಬಂದಿದ್ದನ್ನು ನೋಡಿ ಲಚ್ಚಣ್ಣ ಅವರ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದರು.

ಇಂದಿನ ಕಾಲದಲ್ಲಿ ಸಣ್ಣಪುಟ್ಟ ಸಾಲಗಳನ್ನೂ ಮರಳಿಸದೆ ತಪ್ಪಿಸಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿರುವಾಗ 30 ವರ್ಷಗಳ ನಂತರ ಸಾವಿರಾರು ಕಿಲೋಮೀಟರ್ ಪ್ರಯಾಣಿಸಿ ಸಾಲ ತೀರಿಸಿದ ಮಹಮ್ಮದ್ ಇಸ್ಮಾಯಿಲ್ ಅವರ ಈ ನಡೆ ಪ್ರಾಮಾಣಿಕತೆ, ಕೃತಜ್ಞತೆ ಮತ್ತು ಸ್ನೇಹಬಂಧಕ್ಕೆ ಅತ್ಯುತ್ತಮ ನಿದರ್ಶನವಾಗಿದೆ ಎಂದು ಸ್ಥಳೀಯರು ಶ್ಲಾಘಿಸಿದ್ದಾರೆ. ಈ ಘಟನೆ ಪ್ರಸ್ತುತ ಧರ್ಮಪುರಿಯಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...