Homeಮುಖಪುಟ31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

- Advertisement -
- Advertisement -

“ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ.” ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ ಅರೇಬಿಯಾದ ಅಬಾದಲ್ಲಿ ಎಡ್ಲ ಲಚ್ಚಣ್ಣ ಎಂಬುವವರು ಇಸ್ಮಾಯಿಲ್ ಗೆ ನೀಡಿದ್ದ 3,000 ರಿಯಾಲ್(ರೂ.25000) ಹಣವನ್ನು, ಬರೋಬ್ಬರಿ 31 ವರ್ಷಗಳ ನಂತರ ಮರಳಿ ನೀಡುವ ಮೂಲಕ ಅವರು ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ. ಎಐ ಆಪ್‌ನ ಮಾರ್ಗದರ್ಶನದಲ್ಲಿ ಕೇರಳದ ಪಾಲಕ್ಕಾಡ್‌ನಿಂದ ತೆಲಂಗಾಣದ ಧರ್ಮಪುರಿಯವರೆಗೆ ಸುಮಾರು 1,200 ಕಿಲೋಮೀಟರ್ ಪ್ರಯಾಣಿಸಿ, ಕೊನೆಗೂ ಲಚ್ಚಣ್ಣನವರ ಕುಟುಂಬವನ್ನು ಭೇಟಿಯಾದ ಈ ಅಸಾಮಾನ್ಯ ಕಥೆ ನಂಬಿಕೆ ಮತ್ತು ಸ್ನೇಹದ ಮಹತ್ವವನ್ನು ಸಾರುತ್ತಿದೆ.

ಕಳೆದ ಗುರುವಾರ ಬೆಳಿಗ್ಗೆ ತೆಲಂಗಾಣದ ಧರ್ಮಪುರಿಯಲ್ಲಿ ಒಬ್ಬ ಅಪರಿಚಿತ ವ್ಯಕ್ತಿ ಬಾಗಿಲು ಬಡಿದಿದ್ದರು. ಆತ 63 ವರ್ಷದ ಬಡಕಲು ದೇಹದ ವ್ಯಕ್ತಿ. ದಿನಗಟ್ಟಲೆ ರೈಲು ಮತ್ತು ಬಸ್ಸುಗಳಲ್ಲಿ ಪ್ರಯಾಣಿಸಿ ಸುಸ್ತಾಗಿದ್ದರೂ, ಆತನ ಮನಸ್ಸಿನಲ್ಲಿ ಒಂದು ಅಚಲವಾದ ಗುರಿಯಿತ್ತು. ಆತನ ಜೇಬಿನಲ್ಲಿ ಒಂದು ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ32 ಸ್ಮಾರ್ಟ್‌ಫೋನ್ ಇತ್ತು. ಆ ಫೋನ್‌ನಲ್ಲಿರುವ ಎಐ ಅಸಿಸ್ಟೆಂಟ್ ಆಪ್, ದಶಕಗಳ ಕಾಲದ ಪತ್ರಗಳು ಮತ್ತು ಪ್ರಯತ್ನಗಳು ಸಾಧ್ಯವಾಗಿಸದ ಕೆಲಸವನ್ನು ಮಾಡಿ ಮುಗಿಸಿತ್ತು. ಪಾಲಕ್ಕಾಡ್‌ನಿಂದ ಧರ್ಮಪುರಿಯ ಈ ಬಾಗಿಲಿನವರೆಗೆ 1,200 ಕಿಲೋಮೀಟರ್‌ಗಳಷ್ಟು ದೂರವನ್ನು ಆ ಆಪ್ ನಿಖರವಾಗಿ ತೋರಿಸಿಕೊಟ್ಟಿತ್ತು.

ಬಾಗಿಲು ತೆರೆದವರು ತನ್ನನ್ನು ಹೇಗೆ ಸ್ವೀಕರಿಸುತ್ತಾರೆ? ತಾವು ಹೇಳುವ ಹೆಸರನ್ನು ಅವರು ಗುರುತಿಸುತ್ತಾರೆಯೇ? ಇಷ್ಟು ವರ್ಷಗಳ ನಂತರ ತಾನೇ ಬಂದು ಹಣ ಕೊಡುತ್ತಿದ್ದೇನೆಂದು ಅವರು ನಂಬುತ್ತಾರೆಯೇ? ಬಾಗಿಲನ್ನು ಸಂಪೂರ್ಣವಾಗಿ ತೆರೆಯುತ್ತಾರೆಯೇ? ಎಂಬಿತ್ಯಾದಿ ಆತಂಕಗಳು ಇಸ್ಮಾಯಿಲ್ ಮನಸ್ಸಿನಲ್ಲಿ ಕಾಡುತ್ತಿದ್ದವು. ಆದರೆ, ತಾನು ಮೈಲುಗಟ್ಟಲೆ ದೂರ ಪ್ರಯಾಣಿಸಿ ಬಂದಿರುವುದು ಕಳೆದ 31 ವರ್ಷಗಳಿಂದ ತನ್ನ ಬಳಿ ಭದ್ರವಾಗಿದ್ದ ಹಣವನ್ನು ಮರಳಿ ಒಪ್ಪಿಸಲು ಎಂಬ ಒಂದೇ ಒಂದು ವಿಷಯ ಆತನಿಗೆ ಸ್ಪಷ್ಟವಾಗಿತ್ತು.

ಕೇರಳ ರಾಜ್ಯದ ಪಾಲಕ್ಕಾಡ್ ಮೂಲದ ಮಹಮ್ಮದ್ ಇಸ್ಮಾಯಿಲ್ ಮತ್ತು ಧರ್ಮಪುರಿಯ ಎಡ್ಲ ಲಚ್ಚಣ್ಣ ಎಂಬುವವರು ಸುಮಾರು 25 ವರ್ಷಗಳ ಹಿಂದೆ ಸೌದಿ ಅರೇಬಿಯಾದ ಕಂಪನಿಯೊಂದರಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ತಮ್ಮ ವೈಯಕ್ತಿಕ ತುರ್ತು ಅಗತ್ಯಕ್ಕಾಗಿ ಇಸ್ಮಾಯಿಲ್, ಲಚ್ಚಣ್ಣ ಅವರಿಂದ ಒಂದಷ್ಟು ಹಣವನ್ನು ಸಾಲವಾಗಿ ಪಡೆದಿದ್ದರು. ಭಾರತಕ್ಕೆ ಹಿಂತಿರುಗಿದ ನಂತರ ಖಂಡಿತವಾಗಿಯೂ ಸಾಲ ತೀರಿಸುವುದಾಗಿ ಮಾತು ಸಹ ನೀಡಿದ್ದರು. ಆದರೆ ಅನಿವಾರ್ಯ ಕಾರಣಗಳಿಂದ ಸ್ವದೇಶಕ್ಕೆ ಬಂದ ನಂತರ ಲಚ್ಚಣ್ಣ ಅವರೊಂದಿಗಿನ ಸಂಪರ್ಕ ಕಡಿದುಹೋಯಿತು. ಹೀಗಾಗಿ ಅವರಿಗೆ ಆ ಸಾಲವನ್ನು ತೀರಿಸಲು ಸಾಧ್ಯವಾಗಿರಲಿಲ್ಲ.

ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಮತ್ತು ಪಡೆದ ಸಾಲವನ್ನು ಮರೆಯದೇ ಮರಳಿಸುವುದು ನಿಜವಾದ ಪ್ರಾಮಾಣಿಕತೆಗೆ ನಿದರ್ಶನ ಎನ್ನಲಾಗುತ್ತದೆ. ಬರೋಬ್ಬರಿ 25 ವರ್ಷಗಳ ಹಿಂದೆ ಪಡೆದಿದ್ದ ಸಾಲವನ್ನು ತೀರಿಸಲು ಕೇರಳದಿಂದ ವಿಶೇಷವಾಗಿ ಧರ್ಮಪುರಿಗೆ ಬಂದ ವ್ಯಕ್ತಿಯೊಬ್ಬರು ಎಲ್ಲರನ್ನೂ ಆಶ್ಚರ್ಯಚಕಿತರನ್ನಾಗಿಸಿದ್ದಲ್ಲದೆ, ಭಾವುಕರನ್ನಾಗಿಸಿದ್ದಾರೆ.

ವರ್ಷಗಳೇ ಕಳೆದರೂ ತಾವು ಪಡೆದಿದ್ದ ಸಾಲವನ್ನು ಇಸ್ಮಾಯಿಲ್ ಮರೆಯಲಿಲ್ಲ. ಇತ್ತೀಚೆಗೆ ಹೇಗಾದರೂ ಮಾಡಿ ಆ ಸಾಲವನ್ನು ತೀರಿಸಲೇಬೇಕೆಂದು ಅವರು ನಿರ್ಧರಿಸಿದರು. ಲಚ್ಚಣ್ಣ ಅವರ ಪೂರ್ಣ ವಿಳಾಸವಾಗಲಿ ಅಥವಾ ಫೋನ್ ನಂಬರ್ ಆಗಲಿ ಅವರ ಬಳಿ ಇರಲಿಲ್ಲ. ಅವರ ಸ್ವಂತ ಊರು ‘ಧರ್ಮಪುರಿ’ ಎಂಬ ಒಂದೇ ಒಂದು ಸುಳಿವನ್ನು ಇಟ್ಟುಕೊಂಡು ಗೂಗಲ್‌ನಲ್ಲಿ ಹುಡುಕಿ ಜಗತಿಯಾಲ ಜಿಲ್ಲೆಗೆ ತಲುಪಿದರು. ಅಲ್ಲಿ ಸ್ಥಳೀಯರನ್ನು ವಿಚಾರಿಸುತ್ತಾ ಕೊನೆಗೂ ಗುರುವಾರ ಮಧ್ಯಾಹ್ನ ಲಚ್ಚಣ್ಣ ಅವರ ಮನೆ ಪತ್ತೆ ಮಾಡಿದರು.

ಆ ಸಮಯದಲ್ಲಿ ಲಚ್ಚಣ್ಣ ಉದ್ಯೋಗಕ್ಕಾಗಿ ಗಲ್ಫ್ ದೇಶದಲ್ಲಿದ್ದ ಕಾರಣ, ಇಸ್ಮಾಯಿಲ್ ಅವರ ಕುಟುಂಬಸ್ಥರನ್ನು ಭೇಟಿಯಾಗಿ ತಮ್ಮ ಪರಿಚಯ ಮಾಡಿಕೊಂಡರು. ನಂತರ ಲಚ್ಚಣ್ಣ ಅವರಿಗೆ ಫೋನ್ ಕರೆ ಮಾಡಿದರು. ತಾವು ಸಾಲ ನೀಡಿದ್ದ ವಿಷಯವನ್ನೇ ಮರೆತುಹೋಗಿದ್ದ ಲಚ್ಚಣ್ಣ, ತಮ್ಮ ಹಳೆಯ ಗೆಳೆಯನ ಧ್ವನಿ ಕೇಳುತ್ತಿದ್ದಂತೆ ತಕ್ಷಣ ಗುರುತಿಸಿ ಅತ್ಯಂತ ಪ್ರೀತಿಯಿಂದ ಮಾತನಾಡಿದರು. ಆ ಬಳಿಕ ಇಸ್ಮಾಯಿಲ್ 25,000 ರೂಪಾಯಿ ನಗದನ್ನು ಲಚ್ಚಣ್ಣ ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. “ಇಷ್ಟು ವರ್ಷಗಳಿಂದ ನನ್ನ ಮನಸ್ಸಿನಲ್ಲಿದ್ದ ದೊಡ್ಡ ಸಾಲದ ಹೊರೆ ಈಗ ಇಳಿಯಿತು” ಎಂದು ಇಸ್ಮಾಯಿಲ್ ಭಾವುಕರಾದರು. ಗೆಳೆಯ ಕೊಟ್ಟ ಮಾತನ್ನು ಉಳಿಸಿಕೊಂಡು, ಇಷ್ಟೊಂದು ವರ್ಷಗಳ ನಂತರ ಸಾಲ ತೀರಿಸಲೆಂದೇ ಹುಡುಕಿಕೊಂಡು ಬಂದಿದ್ದನ್ನು ನೋಡಿ ಲಚ್ಚಣ್ಣ ಅವರ ಕುಟುಂಬಸ್ಥರು ಹರ್ಷ ವ್ಯಕ್ತಪಡಿಸಿದರು.

ಇಂದಿನ ಕಾಲದಲ್ಲಿ ಸಣ್ಣಪುಟ್ಟ ಸಾಲಗಳನ್ನೂ ಮರಳಿಸದೆ ತಪ್ಪಿಸಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿರುವಾಗ 30 ವರ್ಷಗಳ ನಂತರ ಸಾವಿರಾರು ಕಿಲೋಮೀಟರ್ ಪ್ರಯಾಣಿಸಿ ಸಾಲ ತೀರಿಸಿದ ಮಹಮ್ಮದ್ ಇಸ್ಮಾಯಿಲ್ ಅವರ ಈ ನಡೆ ಪ್ರಾಮಾಣಿಕತೆ, ಕೃತಜ್ಞತೆ ಮತ್ತು ಸ್ನೇಹಬಂಧಕ್ಕೆ ಅತ್ಯುತ್ತಮ ನಿದರ್ಶನವಾಗಿದೆ ಎಂದು ಸ್ಥಳೀಯರು ಶ್ಲಾಘಿಸಿದ್ದಾರೆ. ಈ ಘಟನೆ ಪ್ರಸ್ತುತ ಧರ್ಮಪುರಿಯಲ್ಲಿ ಭಾರೀ ಚರ್ಚೆಯ ವಿಷಯವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...