Homeಮುಖಪುಟಕುವೈತ್‌ ಅಗ್ನಿ ದುರಂತದ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಕೇರಳದ ಸಚಿವೆ ವೀಣಾ ಜಾರ್ಜ್‌ಗೆ ಕೇಂದ್ರದಿಂದ ಅಡ್ಡಿ?

ಕುವೈತ್‌ ಅಗ್ನಿ ದುರಂತದ ಸ್ಥಳಕ್ಕೆ ತೆರಳಲು ಮುಂದಾಗಿದ್ದ ಕೇರಳದ ಸಚಿವೆ ವೀಣಾ ಜಾರ್ಜ್‌ಗೆ ಕೇಂದ್ರದಿಂದ ಅಡ್ಡಿ?

- Advertisement -
- Advertisement -

ಕುವೈತ್‌ ರಾಷ್ಟ್ರದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದ ಸಂತ್ರಸ್ತರಾಗಿರುವ ಕೇರಳ ರಾಜ್ಯದ ಜನರಿಗೆ ನೆರವು ನೀಡಲು ಕೇಂದ್ರ ಸರ್ಕಾರ ಕುವೈತ್‌ಗೆ ತೆರಳಲು ನನಗೆ ಅನುಮತಿ ನೀಡದಿರುವುದು ದುರದೃಷ್ಟಕರ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.

ನನಗೆ ಕುವೈತ್‌ಗೆ ಪ್ರಯಾಣಿಸಲು ಕೇಂದ್ರ ಸರಕಾರ ಅವಕಾಶ ನೀಡದಿರುವುದು ತುಂಬಾ ದುರದೃಷ್ಟಕರ. ಅಗ್ನಿ ದುರಂತದಲ್ಲಿ ಸಾವನ್ನಪ್ಪಿದವರಲ್ಲಿ ಅರ್ಧಕ್ಕಿಂತ ಹೆಚ್ಚು ಜನರು ಕೇರಳಿಗರು ಮತ್ತು ಗಾಯಗೊಂಡವರಲ್ಲಿ ಹೆಚ್ಚಿನವರು ಕೇರಳಿಗರು ಎಂದು ವೀಣಾ ಜಾರ್ಜ್ ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.

ಕೇರಳ ರಾಜ್ಯ ಸರ್ಕಾರವು ಗುರುವಾರ ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದು, ಗಾಯಾಳುಗಳ ಚಿಕಿತ್ಸೆಗೆ ಸಂಬಂಧಿಸಿದ ಪ್ರಯತ್ನಗಳಿಗೆ ಮತ್ತು ಮೃತದೇಹವನ್ನು ಭಾರತಕ್ಕೆ ತರಲು ವ್ಯವಸ್ಥೆ ಮಾಡಲು ಆರೋಗ್ಯ ಸಚಿವರಾದ ವೀಣಾ ಜಾರ್ಜ್ ಕುವೈತ್‌ಗೆ ಪ್ರಯಾಣಿಸಲಿದ್ದಾರೆ ಎಂದು ಹೇಳಿತ್ತು.

ಕುವೈತ್‌ನ ಮಂಗಾಫ್ ನಗರದಲ್ಲಿ ಬುಧವಾರ ಆರು ಅಂತಸ್ತಿನ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 48 ಜನರು ಸಾವನ್ನಪ್ಪಿದ್ದಾರೆ. ವಸತಿ ಕಟ್ಟಡದಲ್ಲಿದ್ದ 176 ಭಾರತೀಯ ಕಾರ್ಮಿಕರಲ್ಲಿ 45 ಮಂದಿ ಸಾವನ್ನಪ್ಪಿದ್ದಾರೆ ಮತ್ತು 33 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಮೃತರಲ್ಲಿ ಕೇರಳದ 23, ತಮಿಳುನಾಡಿನ 7, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದ ತಲಾ ಓರ್ವರು ಸೇರಿದ್ದಾರೆ.

ಗಂಭೀರವಾಗಿ ಗಾಯಗೊಂಡವರ ಸಂಖ್ಯೆಯ ಬಗ್ಗೆ ರಾಯಭಾರ ಕಚೇರಿ ನಮಗೆ ನಿಖರವಾದ ಡೇಟಾವನ್ನು ನೀಡಿಲ್ಲ. ನಾವು ಅಲ್ಲಿಂದ ಸಂಗ್ರಹಿಸಿದ ಮಾಹಿತಿಯೆಂದರೆ ಒಟ್ಟು 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಅವರಲ್ಲಿ 4 ಜನರು ಕೇರಳದವರು, ಆದರೆ ನನ್ನ ಭೇಟಿ ಬಗ್ಗೆ ಅಧಿಕೃತವಾಗಿ ಘೋಷಿಸಲ್ಪಟ್ಟಿಲ್ಲ, ನಾನು ಗಾಯಾಳುಗಳೊಂದಿಗೆ ಇರಲು ಬಯಸುತ್ತೇನೆ ಮತ್ತು ಅವರ ಅಗತ್ಯಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಬಯಸುತ್ತೇನೆ ಎಂದು ವೀಣಾ ಜಾರ್ಜ್ ಹೇಳಿದ್ದಾರೆ.

ಕುವೈತ್‌ನಿಂದ ಟೇಕ್ ಆಫ್ ಆಗಿರುವ 45 ಭಾರತೀಯ ಸಂತ್ರಸ್ತರ ಅವಶೇಷಗಳನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನವು ಶುಕ್ರವಾರ ಬೆಳಿಗ್ಗೆ ಭಾರತಕ್ಕೆ ಬರಲಿದೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಧಾನಿ ಮೋದಿ ಘಟನೆ ಬಗ್ಗೆ ಆಳವಾದ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ದುರಂತದಿಂದ ಹಾನಿಗೊಳಗಾದವರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ಗುರುವಾರ ಕುವೈತ್‌ಗೆ ತೆರಳಿದ್ದ ಭಾರತದ ವಿದೇಶಾಂಗ ವ್ಯವಹಾರಗಳ ರಾಜ್ಯ ಖಾತೆ ಸಚಿವ ಕೀರ್ತಿ ವರ್ಧನ್ ಸಿಂಗ್, ಮಂಗಾಫ್‌ ದುರಂತದ ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ಭಾರತೀಯ ಪ್ರಜೆಗಳೊಂದಿಗೆ ಸಂವಾದ ನಡೆಸಿದ್ದಾರೆ.

ಇದನ್ನು ಓದಿ: ‘ಮಹಾರಾಜ್’ ಸಿನಿಮಾ ಬಿಡುಗಡೆಗೆ ಮಧ್ಯಂತರ ತಡೆ ನೀಡಿದ ಗುಜರಾತ್ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...