Homeಮುಖಪುಟಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ.

- Advertisement -
- Advertisement -

ಇತಿಹಾಸದಲ್ಲಿ ಯಾವುದೇ ಜನಾಂಗ, ಯಾವುದೇ ಧರ್ಮವನ್ನು ನಿರಾಕರಿಸಿ ಅಭಿವೃದ್ದಿಹೊಂದಿದ ದೇಶಗಳು ಕಾಣುವುದಿಲ್ಲ. ಅದೇ ರೀತಿ ಭಾರತವು ಸಹ ಯಾವುದೇ ಧರ್ಮ ನಿರಾಕರಿಸಿ ಮುನ್ನಡೆಯಲು ಸಾಧ್ಯವಿಲ್ಲ ಎಂದು ಕೇರಳದ ಶಾಸಕ ಕೆ.ಟಿ. ಜಲೀಲ್ ಅಭಿಪ್ರಾಯಪಟ್ಟರು.

ಮಂಗಳೂರಿನಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿರುವ ಮುಸ್ಲಿಂ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಯಾವುದನ್ನೂ ಭಾರತ ನಿರಾಕರಿಸುವುದಿಲ್ಲ ಎಂಬ ನಿಟ್ಟಿನಲ್ಲಿ ವಿಶ್ವದಾದ್ಯಂತ ಹೆಸರು ಹೊಂದಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯಾತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು. ನಮ್ಮ ದೇಶವು ಯಾವುದೇ ಧರ್ಮವನ್ನು ಯಾವುದೇ ಕಾಲದಲ್ಲಿ ನಿರಾಕರಿಸಿಲ್ಲ” ಎಂದರು.

“ಹಿಂದೂ ಧರ್ಮದ ಅಶೋಕ ಚಕ್ರವರ್ತಿ ಕಳಿಂಗ ಯುದ್ದದ ನಂತರ ಬೌಧ್ಧ ಧರ್ಮ ಪಾಲಿಸಿದರು. ಅವರು ಬೌದ್ಧ ಧರ್ಮ ಸ್ವೀಕರಿಸಿದ ನಂತರ ಅವರನ್ನು ಯಾರೂ ಪ್ರಶ್ನಿಸಿಲ್ಲ. ಅದೇ ರೀತಿ ಮುಸ್ಲಿಂ ರಾಜರು 900 ವರ್ಷಗಳ ಕಾಲ ಆಡಳಿತ ನಡೆಸಿದರು. ಒಂದು ವೇಳೆ ಅವರು ಧರ್ಮವನ್ನು ಆಡಳಿತದಲ್ಲಿ ಜೊತೆಯಾಗಿಸಿದ್ದರೆ ಇಷ್ಟೊಂದು ಧೀರ್ಘ ಕಾಲ ಆಡಳಿತ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭಯಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಬಹದ್ದೂರೂ ಶಾ ಜಫಾರ್‌ರನ್ನು ದೇಶದ ಬಹಸಂಖ್ಯಾತ ಹಿಂದೂಗಳು ತಮ್ಮ ನಾಯಕರಾಗಿ ಆಯ್ಕೆ ಮಾಡಿದ್ದರು” ಎಂಬದನ್ನು ಅವರು ಸ್ಮರಿಸಿದರು.

ಮೊಘಲರ ಆಡಳಿತ ಕೊನೆಗೊಂಡಿದ್ದು ಧರ್ಮದ ಕಾರಣಕ್ಕೆ ಅಲ್ಲ. ಬದಲಾಗಿ ಬ್ರಿಟೀಷರ ಕಾರಣದಿಂದಾಗಿದೆ. ಯಾವುದೇ ಧರ್ಮ ಆಚರಿಸದ ಜವಾಹರಲಾಲ್ ನೆಹರೂ ದೇಶವನ್ನು 16 ವರ್ಷ ಆಡಳಿತ ನಡೆಸಿದ್ದಾರೆ. ಅವರನ್ನು ಯಾರೂ ಪ್ರಶ್ನಿಸಲಿಲ್ಲ. ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ ಎಂದರು.

ಅಟಲ್ ಬಿಹಾರಿ ವಾಜಪೇಯಿಯವರು ಆಡಳಿತ ಮಾಡಬೇಕಾದರೆ ಭಾರತ ಇಷ್ಟು ಕೋಮು ದ್ರುವೀಕರಣಗೊಂಡಿರಲಿಲ್ಲ. ವಾಜಪೇಯಿ ನಂತರ ಬಂದ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಒಂದು ಸಮುದಾಯವನ್ನು ತಿರಸ್ಕಾರ ಮಾಡುತ್ತಾ ಬಂದಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

“ಅಲ್ಪಸಂಖ್ಯಾತರನ್ನು ತಮ್ಮ ದೇಶದಿಂದ ದೂರ ಮಾಡಿದ ಎಲ್ಲಾ ದೇಶಗಳು ಕೂಡಾ ನಾಶವಾಗಿದೆ. ಇದಕ್ಕೆ ಜರ್ಮನ್ ಒಂದು ಉದಾಹರಣೆ. ಜರ್ಮನ್‌ನಲ್ಲಿ ಯಹೂದಿಗಳನ್ನು ಓಡಿಸದಿದ್ದರೆ ಜರ್ಮನ್ ಇಂದು ವಿಶ್ವದ ಶಕ್ತಿಶಾಲಿ ದೇಶವಾಗಿರುತ್ತಿತ್ತು. ಪ್ರಾನ್ಸ್, ಸ್ಪೇನ್‌ನಲ್ಲಿ ಕೂಡಾ ಇದೆ ನಡೆದಿದೆ. ಈ ದೇಶ ತೊರೆದುಹೋದ ಜನರು ತಾವು ನೆಲೆ ನಿಂತ ದೇಶಗಳನ್ನು ಅಭಿವೃದ್ಧಿ ಮಾಡಿದರು. ಹಾಗೆಯೇ ಭಾರತವು ಯಾವುದೇ ಜನಾಂಗ, ಧರ್ಮವನ್ನು ನಿರಾಕರಿಸಿ ದೇಶ ಮುನ್ನಡೆಸಲು ಸಾಧ್ಯವಿಲ್ಲ. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಉದ್ಯಾನದಲ್ಲಿ ಹಲವು ಬಗೆಯ ಹೂವುಗಳಿದ್ದರೆ ಅದು ನೋಡಲು ಸುಂದರ. ಹಾಗೆಯೇ ಭಾರತದಲ್ಲಿ ಹಲವಾರು ಸಂಸ್ಕೃತಿ ಇದ್ದರೆ ಅದು ನೋಡಲು ಸುಂದರ” ಎಂದು ಜಲೀಲ್ ಅಭಿಪ್ರಾಯಪಟ್ಟರು.

ವಿಭಜನೆ ನಂತರ ಧರ್ಮದ ಆಧಾರದಲ್ಲಿ ನಿರ್ಮಾಣವಾದ ಪಾಕಿಸ್ತಾನ ರಾಷ್ಟ್ರವು ಎಂದಿಗೂ ನೆಮ್ಮದಿಯಿಂದ ಇರುವ ದೇಶವಾಗಿಲ್ಲ. ಅಲ್ಲಿ ಹಿಂಸೆ, ದಾಳಿ ತೀವ್ರ ಮಟ್ಟಕ್ಕೆ ಏರಿದೆ. ಇದನ್ನು ಭಾರತ ಪಾಠವನ್ನಾಗಿ ತೆಗೆದುಕೊಳ್ಳಬೇಕು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು. ಜಾತ್ಯಾತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ. ಆದರೆ ಜಾತ್ಯಾತೀತತೆ ಮೇಲೆ ದಾಳಿ ನಡೆಯುತ್ತಿದೆ. ಆ ದಾಳಿಯನ್ನು ಹಿಮ್ಮೆಟ್ಟಿಸುವ ಮೂಲಕ ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು ಎಂದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಯವರ “ನೇತ್ರಾವತಿಯಲ್ಲಿ ನೆತ್ತರು” ಕರಾವಳಿಯ ಕೋಮು ಹಿಂಸೆಯ ನೈಜ ಪ್ರಕರಣಗಳು ಪುಸ್ತಕವನ್ನು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಬಿಡುಗಡೆ ಮಾಡಿದರು. ಬಿ.ಎಂ.ಹನೀಫ್ ರವರ ಸೆಕ್ಯುಲರ್ ಸೇನಾನಿ ಸುಭಾಷ್ ಚಂದ್ರ ಬೋಸ್ ಪುಸ್ತಕವನ್ನು ಸಾಹಿತಿಗಳಾದ ಕೆ.ಶರೀಫಾರವರು ಬಿಡುಗಡೆ ಮಾಡಿದರು.

ಸಿಪಿಐಎಂ ಪಕ್ಷವು `ಜಾತ್ಯಾತೀತತೆ, ಸಬಲೀಕರಣ ಮತ್ತು ಮುನ್ನಡೆ’ ಎಂಬ ಘೋಷಣೆಯಡಿ ಕರ್ನಾಟಕದ ಮುಸ್ಲಿಮರ ನೋವು ನಲಿವುಗಳ ಅನಾವರಣ ಎಂಬ ವಿಷಯದ ಕುರಿತು ಎರಡು ದಿನಗಳ ರಾಜ್ಯ ಮಟ್ಟದ ಎರಡು ದಿನಗಳ ಸಮಾವೇಶದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಡಾ.ಚಂದ್ರಪೂಜಾರಿ, ಡಾ.ಕೆ.ಪ್ರಕಾಶ್, ಮುನೀರ್ ಕಾಟಿಪಳ್ಳ, ಸುನೀಲ್ ಕುಮಾರ್ ಬಜಾಲ್ ಮುಂತಾದವರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....