Homeಮುಖಪುಟಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ.

- Advertisement -
- Advertisement -

ಇತಿಹಾಸದಲ್ಲಿ ಯಾವುದೇ ಜನಾಂಗ, ಯಾವುದೇ ಧರ್ಮವನ್ನು ನಿರಾಕರಿಸಿ ಅಭಿವೃದ್ದಿಹೊಂದಿದ ದೇಶಗಳು ಕಾಣುವುದಿಲ್ಲ. ಅದೇ ರೀತಿ ಭಾರತವು ಸಹ ಯಾವುದೇ ಧರ್ಮ ನಿರಾಕರಿಸಿ ಮುನ್ನಡೆಯಲು ಸಾಧ್ಯವಿಲ್ಲ ಎಂದು ಕೇರಳದ ಶಾಸಕ ಕೆ.ಟಿ. ಜಲೀಲ್ ಅಭಿಪ್ರಾಯಪಟ್ಟರು.

ಮಂಗಳೂರಿನಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿರುವ ಮುಸ್ಲಿಂ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಯಾವುದನ್ನೂ ಭಾರತ ನಿರಾಕರಿಸುವುದಿಲ್ಲ ಎಂಬ ನಿಟ್ಟಿನಲ್ಲಿ ವಿಶ್ವದಾದ್ಯಂತ ಹೆಸರು ಹೊಂದಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯಾತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು. ನಮ್ಮ ದೇಶವು ಯಾವುದೇ ಧರ್ಮವನ್ನು ಯಾವುದೇ ಕಾಲದಲ್ಲಿ ನಿರಾಕರಿಸಿಲ್ಲ” ಎಂದರು.

“ಹಿಂದೂ ಧರ್ಮದ ಅಶೋಕ ಚಕ್ರವರ್ತಿ ಕಳಿಂಗ ಯುದ್ದದ ನಂತರ ಬೌಧ್ಧ ಧರ್ಮ ಪಾಲಿಸಿದರು. ಅವರು ಬೌದ್ಧ ಧರ್ಮ ಸ್ವೀಕರಿಸಿದ ನಂತರ ಅವರನ್ನು ಯಾರೂ ಪ್ರಶ್ನಿಸಿಲ್ಲ. ಅದೇ ರೀತಿ ಮುಸ್ಲಿಂ ರಾಜರು 900 ವರ್ಷಗಳ ಕಾಲ ಆಡಳಿತ ನಡೆಸಿದರು. ಒಂದು ವೇಳೆ ಅವರು ಧರ್ಮವನ್ನು ಆಡಳಿತದಲ್ಲಿ ಜೊತೆಯಾಗಿಸಿದ್ದರೆ ಇಷ್ಟೊಂದು ಧೀರ್ಘ ಕಾಲ ಆಡಳಿತ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭಯಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಬಹದ್ದೂರೂ ಶಾ ಜಫಾರ್‌ರನ್ನು ದೇಶದ ಬಹಸಂಖ್ಯಾತ ಹಿಂದೂಗಳು ತಮ್ಮ ನಾಯಕರಾಗಿ ಆಯ್ಕೆ ಮಾಡಿದ್ದರು” ಎಂಬದನ್ನು ಅವರು ಸ್ಮರಿಸಿದರು.

ಮೊಘಲರ ಆಡಳಿತ ಕೊನೆಗೊಂಡಿದ್ದು ಧರ್ಮದ ಕಾರಣಕ್ಕೆ ಅಲ್ಲ. ಬದಲಾಗಿ ಬ್ರಿಟೀಷರ ಕಾರಣದಿಂದಾಗಿದೆ. ಯಾವುದೇ ಧರ್ಮ ಆಚರಿಸದ ಜವಾಹರಲಾಲ್ ನೆಹರೂ ದೇಶವನ್ನು 16 ವರ್ಷ ಆಡಳಿತ ನಡೆಸಿದ್ದಾರೆ. ಅವರನ್ನು ಯಾರೂ ಪ್ರಶ್ನಿಸಲಿಲ್ಲ. ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ ಎಂದರು.

ಅಟಲ್ ಬಿಹಾರಿ ವಾಜಪೇಯಿಯವರು ಆಡಳಿತ ಮಾಡಬೇಕಾದರೆ ಭಾರತ ಇಷ್ಟು ಕೋಮು ದ್ರುವೀಕರಣಗೊಂಡಿರಲಿಲ್ಲ. ವಾಜಪೇಯಿ ನಂತರ ಬಂದ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಒಂದು ಸಮುದಾಯವನ್ನು ತಿರಸ್ಕಾರ ಮಾಡುತ್ತಾ ಬಂದಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

“ಅಲ್ಪಸಂಖ್ಯಾತರನ್ನು ತಮ್ಮ ದೇಶದಿಂದ ದೂರ ಮಾಡಿದ ಎಲ್ಲಾ ದೇಶಗಳು ಕೂಡಾ ನಾಶವಾಗಿದೆ. ಇದಕ್ಕೆ ಜರ್ಮನ್ ಒಂದು ಉದಾಹರಣೆ. ಜರ್ಮನ್‌ನಲ್ಲಿ ಯಹೂದಿಗಳನ್ನು ಓಡಿಸದಿದ್ದರೆ ಜರ್ಮನ್ ಇಂದು ವಿಶ್ವದ ಶಕ್ತಿಶಾಲಿ ದೇಶವಾಗಿರುತ್ತಿತ್ತು. ಪ್ರಾನ್ಸ್, ಸ್ಪೇನ್‌ನಲ್ಲಿ ಕೂಡಾ ಇದೆ ನಡೆದಿದೆ. ಈ ದೇಶ ತೊರೆದುಹೋದ ಜನರು ತಾವು ನೆಲೆ ನಿಂತ ದೇಶಗಳನ್ನು ಅಭಿವೃದ್ಧಿ ಮಾಡಿದರು. ಹಾಗೆಯೇ ಭಾರತವು ಯಾವುದೇ ಜನಾಂಗ, ಧರ್ಮವನ್ನು ನಿರಾಕರಿಸಿ ದೇಶ ಮುನ್ನಡೆಸಲು ಸಾಧ್ಯವಿಲ್ಲ. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಉದ್ಯಾನದಲ್ಲಿ ಹಲವು ಬಗೆಯ ಹೂವುಗಳಿದ್ದರೆ ಅದು ನೋಡಲು ಸುಂದರ. ಹಾಗೆಯೇ ಭಾರತದಲ್ಲಿ ಹಲವಾರು ಸಂಸ್ಕೃತಿ ಇದ್ದರೆ ಅದು ನೋಡಲು ಸುಂದರ” ಎಂದು ಜಲೀಲ್ ಅಭಿಪ್ರಾಯಪಟ್ಟರು.

ವಿಭಜನೆ ನಂತರ ಧರ್ಮದ ಆಧಾರದಲ್ಲಿ ನಿರ್ಮಾಣವಾದ ಪಾಕಿಸ್ತಾನ ರಾಷ್ಟ್ರವು ಎಂದಿಗೂ ನೆಮ್ಮದಿಯಿಂದ ಇರುವ ದೇಶವಾಗಿಲ್ಲ. ಅಲ್ಲಿ ಹಿಂಸೆ, ದಾಳಿ ತೀವ್ರ ಮಟ್ಟಕ್ಕೆ ಏರಿದೆ. ಇದನ್ನು ಭಾರತ ಪಾಠವನ್ನಾಗಿ ತೆಗೆದುಕೊಳ್ಳಬೇಕು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು. ಜಾತ್ಯಾತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ. ಆದರೆ ಜಾತ್ಯಾತೀತತೆ ಮೇಲೆ ದಾಳಿ ನಡೆಯುತ್ತಿದೆ. ಆ ದಾಳಿಯನ್ನು ಹಿಮ್ಮೆಟ್ಟಿಸುವ ಮೂಲಕ ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು ಎಂದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಯವರ “ನೇತ್ರಾವತಿಯಲ್ಲಿ ನೆತ್ತರು” ಕರಾವಳಿಯ ಕೋಮು ಹಿಂಸೆಯ ನೈಜ ಪ್ರಕರಣಗಳು ಪುಸ್ತಕವನ್ನು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಬಿಡುಗಡೆ ಮಾಡಿದರು. ಬಿ.ಎಂ.ಹನೀಫ್ ರವರ ಸೆಕ್ಯುಲರ್ ಸೇನಾನಿ ಸುಭಾಷ್ ಚಂದ್ರ ಬೋಸ್ ಪುಸ್ತಕವನ್ನು ಸಾಹಿತಿಗಳಾದ ಕೆ.ಶರೀಫಾರವರು ಬಿಡುಗಡೆ ಮಾಡಿದರು.

ಸಿಪಿಐಎಂ ಪಕ್ಷವು `ಜಾತ್ಯಾತೀತತೆ, ಸಬಲೀಕರಣ ಮತ್ತು ಮುನ್ನಡೆ’ ಎಂಬ ಘೋಷಣೆಯಡಿ ಕರ್ನಾಟಕದ ಮುಸ್ಲಿಮರ ನೋವು ನಲಿವುಗಳ ಅನಾವರಣ ಎಂಬ ವಿಷಯದ ಕುರಿತು ಎರಡು ದಿನಗಳ ರಾಜ್ಯ ಮಟ್ಟದ ಎರಡು ದಿನಗಳ ಸಮಾವೇಶದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಡಾ.ಚಂದ್ರಪೂಜಾರಿ, ಡಾ.ಕೆ.ಪ್ರಕಾಶ್, ಮುನೀರ್ ಕಾಟಿಪಳ್ಳ, ಸುನೀಲ್ ಕುಮಾರ್ ಬಜಾಲ್ ಮುಂತಾದವರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...