Homeಮುಖಪುಟಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ.

- Advertisement -
- Advertisement -

ಇತಿಹಾಸದಲ್ಲಿ ಯಾವುದೇ ಜನಾಂಗ, ಯಾವುದೇ ಧರ್ಮವನ್ನು ನಿರಾಕರಿಸಿ ಅಭಿವೃದ್ದಿಹೊಂದಿದ ದೇಶಗಳು ಕಾಣುವುದಿಲ್ಲ. ಅದೇ ರೀತಿ ಭಾರತವು ಸಹ ಯಾವುದೇ ಧರ್ಮ ನಿರಾಕರಿಸಿ ಮುನ್ನಡೆಯಲು ಸಾಧ್ಯವಿಲ್ಲ ಎಂದು ಕೇರಳದ ಶಾಸಕ ಕೆ.ಟಿ. ಜಲೀಲ್ ಅಭಿಪ್ರಾಯಪಟ್ಟರು.

ಮಂಗಳೂರಿನಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿರುವ ಮುಸ್ಲಿಂ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಯಾವುದನ್ನೂ ಭಾರತ ನಿರಾಕರಿಸುವುದಿಲ್ಲ ಎಂಬ ನಿಟ್ಟಿನಲ್ಲಿ ವಿಶ್ವದಾದ್ಯಂತ ಹೆಸರು ಹೊಂದಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯಾತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು. ನಮ್ಮ ದೇಶವು ಯಾವುದೇ ಧರ್ಮವನ್ನು ಯಾವುದೇ ಕಾಲದಲ್ಲಿ ನಿರಾಕರಿಸಿಲ್ಲ” ಎಂದರು.

“ಹಿಂದೂ ಧರ್ಮದ ಅಶೋಕ ಚಕ್ರವರ್ತಿ ಕಳಿಂಗ ಯುದ್ದದ ನಂತರ ಬೌಧ್ಧ ಧರ್ಮ ಪಾಲಿಸಿದರು. ಅವರು ಬೌದ್ಧ ಧರ್ಮ ಸ್ವೀಕರಿಸಿದ ನಂತರ ಅವರನ್ನು ಯಾರೂ ಪ್ರಶ್ನಿಸಿಲ್ಲ. ಅದೇ ರೀತಿ ಮುಸ್ಲಿಂ ರಾಜರು 900 ವರ್ಷಗಳ ಕಾಲ ಆಡಳಿತ ನಡೆಸಿದರು. ಒಂದು ವೇಳೆ ಅವರು ಧರ್ಮವನ್ನು ಆಡಳಿತದಲ್ಲಿ ಜೊತೆಯಾಗಿಸಿದ್ದರೆ ಇಷ್ಟೊಂದು ಧೀರ್ಘ ಕಾಲ ಆಡಳಿತ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭಯಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಬಹದ್ದೂರೂ ಶಾ ಜಫಾರ್‌ರನ್ನು ದೇಶದ ಬಹಸಂಖ್ಯಾತ ಹಿಂದೂಗಳು ತಮ್ಮ ನಾಯಕರಾಗಿ ಆಯ್ಕೆ ಮಾಡಿದ್ದರು” ಎಂಬದನ್ನು ಅವರು ಸ್ಮರಿಸಿದರು.

ಮೊಘಲರ ಆಡಳಿತ ಕೊನೆಗೊಂಡಿದ್ದು ಧರ್ಮದ ಕಾರಣಕ್ಕೆ ಅಲ್ಲ. ಬದಲಾಗಿ ಬ್ರಿಟೀಷರ ಕಾರಣದಿಂದಾಗಿದೆ. ಯಾವುದೇ ಧರ್ಮ ಆಚರಿಸದ ಜವಾಹರಲಾಲ್ ನೆಹರೂ ದೇಶವನ್ನು 16 ವರ್ಷ ಆಡಳಿತ ನಡೆಸಿದ್ದಾರೆ. ಅವರನ್ನು ಯಾರೂ ಪ್ರಶ್ನಿಸಲಿಲ್ಲ. ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ ಎಂದರು.

ಅಟಲ್ ಬಿಹಾರಿ ವಾಜಪೇಯಿಯವರು ಆಡಳಿತ ಮಾಡಬೇಕಾದರೆ ಭಾರತ ಇಷ್ಟು ಕೋಮು ದ್ರುವೀಕರಣಗೊಂಡಿರಲಿಲ್ಲ. ವಾಜಪೇಯಿ ನಂತರ ಬಂದ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಒಂದು ಸಮುದಾಯವನ್ನು ತಿರಸ್ಕಾರ ಮಾಡುತ್ತಾ ಬಂದಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

“ಅಲ್ಪಸಂಖ್ಯಾತರನ್ನು ತಮ್ಮ ದೇಶದಿಂದ ದೂರ ಮಾಡಿದ ಎಲ್ಲಾ ದೇಶಗಳು ಕೂಡಾ ನಾಶವಾಗಿದೆ. ಇದಕ್ಕೆ ಜರ್ಮನ್ ಒಂದು ಉದಾಹರಣೆ. ಜರ್ಮನ್‌ನಲ್ಲಿ ಯಹೂದಿಗಳನ್ನು ಓಡಿಸದಿದ್ದರೆ ಜರ್ಮನ್ ಇಂದು ವಿಶ್ವದ ಶಕ್ತಿಶಾಲಿ ದೇಶವಾಗಿರುತ್ತಿತ್ತು. ಪ್ರಾನ್ಸ್, ಸ್ಪೇನ್‌ನಲ್ಲಿ ಕೂಡಾ ಇದೆ ನಡೆದಿದೆ. ಈ ದೇಶ ತೊರೆದುಹೋದ ಜನರು ತಾವು ನೆಲೆ ನಿಂತ ದೇಶಗಳನ್ನು ಅಭಿವೃದ್ಧಿ ಮಾಡಿದರು. ಹಾಗೆಯೇ ಭಾರತವು ಯಾವುದೇ ಜನಾಂಗ, ಧರ್ಮವನ್ನು ನಿರಾಕರಿಸಿ ದೇಶ ಮುನ್ನಡೆಸಲು ಸಾಧ್ಯವಿಲ್ಲ. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಉದ್ಯಾನದಲ್ಲಿ ಹಲವು ಬಗೆಯ ಹೂವುಗಳಿದ್ದರೆ ಅದು ನೋಡಲು ಸುಂದರ. ಹಾಗೆಯೇ ಭಾರತದಲ್ಲಿ ಹಲವಾರು ಸಂಸ್ಕೃತಿ ಇದ್ದರೆ ಅದು ನೋಡಲು ಸುಂದರ” ಎಂದು ಜಲೀಲ್ ಅಭಿಪ್ರಾಯಪಟ್ಟರು.

ವಿಭಜನೆ ನಂತರ ಧರ್ಮದ ಆಧಾರದಲ್ಲಿ ನಿರ್ಮಾಣವಾದ ಪಾಕಿಸ್ತಾನ ರಾಷ್ಟ್ರವು ಎಂದಿಗೂ ನೆಮ್ಮದಿಯಿಂದ ಇರುವ ದೇಶವಾಗಿಲ್ಲ. ಅಲ್ಲಿ ಹಿಂಸೆ, ದಾಳಿ ತೀವ್ರ ಮಟ್ಟಕ್ಕೆ ಏರಿದೆ. ಇದನ್ನು ಭಾರತ ಪಾಠವನ್ನಾಗಿ ತೆಗೆದುಕೊಳ್ಳಬೇಕು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು. ಜಾತ್ಯಾತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ. ಆದರೆ ಜಾತ್ಯಾತೀತತೆ ಮೇಲೆ ದಾಳಿ ನಡೆಯುತ್ತಿದೆ. ಆ ದಾಳಿಯನ್ನು ಹಿಮ್ಮೆಟ್ಟಿಸುವ ಮೂಲಕ ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು ಎಂದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಯವರ “ನೇತ್ರಾವತಿಯಲ್ಲಿ ನೆತ್ತರು” ಕರಾವಳಿಯ ಕೋಮು ಹಿಂಸೆಯ ನೈಜ ಪ್ರಕರಣಗಳು ಪುಸ್ತಕವನ್ನು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಬಿಡುಗಡೆ ಮಾಡಿದರು. ಬಿ.ಎಂ.ಹನೀಫ್ ರವರ ಸೆಕ್ಯುಲರ್ ಸೇನಾನಿ ಸುಭಾಷ್ ಚಂದ್ರ ಬೋಸ್ ಪುಸ್ತಕವನ್ನು ಸಾಹಿತಿಗಳಾದ ಕೆ.ಶರೀಫಾರವರು ಬಿಡುಗಡೆ ಮಾಡಿದರು.

ಸಿಪಿಐಎಂ ಪಕ್ಷವು `ಜಾತ್ಯಾತೀತತೆ, ಸಬಲೀಕರಣ ಮತ್ತು ಮುನ್ನಡೆ’ ಎಂಬ ಘೋಷಣೆಯಡಿ ಕರ್ನಾಟಕದ ಮುಸ್ಲಿಮರ ನೋವು ನಲಿವುಗಳ ಅನಾವರಣ ಎಂಬ ವಿಷಯದ ಕುರಿತು ಎರಡು ದಿನಗಳ ರಾಜ್ಯ ಮಟ್ಟದ ಎರಡು ದಿನಗಳ ಸಮಾವೇಶದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಡಾ.ಚಂದ್ರಪೂಜಾರಿ, ಡಾ.ಕೆ.ಪ್ರಕಾಶ್, ಮುನೀರ್ ಕಾಟಿಪಳ್ಳ, ಸುನೀಲ್ ಕುಮಾರ್ ಬಜಾಲ್ ಮುಂತಾದವರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...