Homeಮುಖಪುಟಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ಯಾವುದೇ ಧರ್ಮ ನಿರಾಕರಿಸಿ ದೇಶ ಮುನ್ನಡೆಯಲು ಸಾಧ್ಯವಿಲ್ಲ: ಮುಸ್ಲಿಂ ಸಮಾವೇಶದಲ್ಲಿ ಶಾಸಕ ಕೆ.ಟಿ. ಜಲೀಲ್ ಅಭಿಮತ

ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ.

- Advertisement -
- Advertisement -

ಇತಿಹಾಸದಲ್ಲಿ ಯಾವುದೇ ಜನಾಂಗ, ಯಾವುದೇ ಧರ್ಮವನ್ನು ನಿರಾಕರಿಸಿ ಅಭಿವೃದ್ದಿಹೊಂದಿದ ದೇಶಗಳು ಕಾಣುವುದಿಲ್ಲ. ಅದೇ ರೀತಿ ಭಾರತವು ಸಹ ಯಾವುದೇ ಧರ್ಮ ನಿರಾಕರಿಸಿ ಮುನ್ನಡೆಯಲು ಸಾಧ್ಯವಿಲ್ಲ ಎಂದು ಕೇರಳದ ಶಾಸಕ ಕೆ.ಟಿ. ಜಲೀಲ್ ಅಭಿಪ್ರಾಯಪಟ್ಟರು.

ಮಂಗಳೂರಿನಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಕರ್ನಾಟಕ ರಾಜ್ಯ ಸಮಿತಿ ಆಯೋಜಿಸಿರುವ ಮುಸ್ಲಿಂ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, “ನಮ್ಮ ದೇಶ ಜಾತ್ಯಾತೀತ ರಾಷ್ಟ್ರವಾಗಿದೆ. ಯಾವುದನ್ನೂ ಭಾರತ ನಿರಾಕರಿಸುವುದಿಲ್ಲ ಎಂಬ ನಿಟ್ಟಿನಲ್ಲಿ ವಿಶ್ವದಾದ್ಯಂತ ಹೆಸರು ಹೊಂದಿದೆ. ಎಲ್ಲವನ್ನು ಭಾರತ ಒಳಗೊಳ್ಳುತ್ತಿದೆ. ಈ ಜಾತ್ಯಾತೀತತೆಯ ಸಂಪ್ರದಾಯವೇ ಪ್ರಜಾಪ್ರಭುತ್ವವನ್ನು ಕಾಯುತ್ತಿರುವುದು. ನಮ್ಮ ದೇಶವು ಯಾವುದೇ ಧರ್ಮವನ್ನು ಯಾವುದೇ ಕಾಲದಲ್ಲಿ ನಿರಾಕರಿಸಿಲ್ಲ” ಎಂದರು.

“ಹಿಂದೂ ಧರ್ಮದ ಅಶೋಕ ಚಕ್ರವರ್ತಿ ಕಳಿಂಗ ಯುದ್ದದ ನಂತರ ಬೌಧ್ಧ ಧರ್ಮ ಪಾಲಿಸಿದರು. ಅವರು ಬೌದ್ಧ ಧರ್ಮ ಸ್ವೀಕರಿಸಿದ ನಂತರ ಅವರನ್ನು ಯಾರೂ ಪ್ರಶ್ನಿಸಿಲ್ಲ. ಅದೇ ರೀತಿ ಮುಸ್ಲಿಂ ರಾಜರು 900 ವರ್ಷಗಳ ಕಾಲ ಆಡಳಿತ ನಡೆಸಿದರು. ಒಂದು ವೇಳೆ ಅವರು ಧರ್ಮವನ್ನು ಆಡಳಿತದಲ್ಲಿ ಜೊತೆಯಾಗಿಸಿದ್ದರೆ ಇಷ್ಟೊಂದು ಧೀರ್ಘ ಕಾಲ ಆಡಳಿತ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ದೇಶದ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭಯಲ್ಲಿ ಮೊಘಲ್ ಸಾಮ್ರಾಜ್ಯದ ಚಕ್ರವರ್ತಿ ಬಹದ್ದೂರೂ ಶಾ ಜಫಾರ್‌ರನ್ನು ದೇಶದ ಬಹಸಂಖ್ಯಾತ ಹಿಂದೂಗಳು ತಮ್ಮ ನಾಯಕರಾಗಿ ಆಯ್ಕೆ ಮಾಡಿದ್ದರು” ಎಂಬದನ್ನು ಅವರು ಸ್ಮರಿಸಿದರು.

ಮೊಘಲರ ಆಡಳಿತ ಕೊನೆಗೊಂಡಿದ್ದು ಧರ್ಮದ ಕಾರಣಕ್ಕೆ ಅಲ್ಲ. ಬದಲಾಗಿ ಬ್ರಿಟೀಷರ ಕಾರಣದಿಂದಾಗಿದೆ. ಯಾವುದೇ ಧರ್ಮ ಆಚರಿಸದ ಜವಾಹರಲಾಲ್ ನೆಹರೂ ದೇಶವನ್ನು 16 ವರ್ಷ ಆಡಳಿತ ನಡೆಸಿದ್ದಾರೆ. ಅವರನ್ನು ಯಾರೂ ಪ್ರಶ್ನಿಸಲಿಲ್ಲ. ವಿಶ್ವದಾದ್ಯಂತ ಭಾರತವು ತನ್ನ ಬಹುತ್ವ ಗುಣದಿಂದ ಗುರುತಿಸಲ್ಪಟ್ಟಿದೆ. ಆದರೆ ಈ ಬಹುತ್ವದ ಬಗ್ಗೆ ಏನೂ ತಿಳಿದಿಲ್ಲದ ಜನರು ಆಡಳಿತ ನಡೆಸುತ್ತಿರುವುದು ವಿಷಾದನೀಯ ಎಂದರು.

ಅಟಲ್ ಬಿಹಾರಿ ವಾಜಪೇಯಿಯವರು ಆಡಳಿತ ಮಾಡಬೇಕಾದರೆ ಭಾರತ ಇಷ್ಟು ಕೋಮು ದ್ರುವೀಕರಣಗೊಂಡಿರಲಿಲ್ಲ. ವಾಜಪೇಯಿ ನಂತರ ಬಂದ ನರೇಂದ್ರ ಮೋದಿ ಸರ್ಕಾರವು ನಿರಂತರವಾಗಿ ಒಂದು ಸಮುದಾಯವನ್ನು ತಿರಸ್ಕಾರ ಮಾಡುತ್ತಾ ಬಂದಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

“ಅಲ್ಪಸಂಖ್ಯಾತರನ್ನು ತಮ್ಮ ದೇಶದಿಂದ ದೂರ ಮಾಡಿದ ಎಲ್ಲಾ ದೇಶಗಳು ಕೂಡಾ ನಾಶವಾಗಿದೆ. ಇದಕ್ಕೆ ಜರ್ಮನ್ ಒಂದು ಉದಾಹರಣೆ. ಜರ್ಮನ್‌ನಲ್ಲಿ ಯಹೂದಿಗಳನ್ನು ಓಡಿಸದಿದ್ದರೆ ಜರ್ಮನ್ ಇಂದು ವಿಶ್ವದ ಶಕ್ತಿಶಾಲಿ ದೇಶವಾಗಿರುತ್ತಿತ್ತು. ಪ್ರಾನ್ಸ್, ಸ್ಪೇನ್‌ನಲ್ಲಿ ಕೂಡಾ ಇದೆ ನಡೆದಿದೆ. ಈ ದೇಶ ತೊರೆದುಹೋದ ಜನರು ತಾವು ನೆಲೆ ನಿಂತ ದೇಶಗಳನ್ನು ಅಭಿವೃದ್ಧಿ ಮಾಡಿದರು. ಹಾಗೆಯೇ ಭಾರತವು ಯಾವುದೇ ಜನಾಂಗ, ಧರ್ಮವನ್ನು ನಿರಾಕರಿಸಿ ದೇಶ ಮುನ್ನಡೆಸಲು ಸಾಧ್ಯವಿಲ್ಲ. ದೇಶದ ಅಭಿವೃದ್ದಿಗೆ ಎಲ್ಲಾ ಜನಾಂಗಗಳೂ ಕೊಡುಗೆ ನೀಡಿದೆ. ಉದ್ಯಾನದಲ್ಲಿ ಹಲವು ಬಗೆಯ ಹೂವುಗಳಿದ್ದರೆ ಅದು ನೋಡಲು ಸುಂದರ. ಹಾಗೆಯೇ ಭಾರತದಲ್ಲಿ ಹಲವಾರು ಸಂಸ್ಕೃತಿ ಇದ್ದರೆ ಅದು ನೋಡಲು ಸುಂದರ” ಎಂದು ಜಲೀಲ್ ಅಭಿಪ್ರಾಯಪಟ್ಟರು.

ವಿಭಜನೆ ನಂತರ ಧರ್ಮದ ಆಧಾರದಲ್ಲಿ ನಿರ್ಮಾಣವಾದ ಪಾಕಿಸ್ತಾನ ರಾಷ್ಟ್ರವು ಎಂದಿಗೂ ನೆಮ್ಮದಿಯಿಂದ ಇರುವ ದೇಶವಾಗಿಲ್ಲ. ಅಲ್ಲಿ ಹಿಂಸೆ, ದಾಳಿ ತೀವ್ರ ಮಟ್ಟಕ್ಕೆ ಏರಿದೆ. ಇದನ್ನು ಭಾರತ ಪಾಠವನ್ನಾಗಿ ತೆಗೆದುಕೊಳ್ಳಬೇಕು. ನಮ್ಮ ದೇಶದಲ್ಲಿ ಜಾತ್ಯಾತೀತಯೇ ನಮ್ಮ ಜೀವವಾಯು. ಜಾತ್ಯಾತೀತತೆ ಇಲ್ಲವಾದರೆ ಭಾರತ ಇಲ್ಲವಾಗುತ್ತದೆ. ಆದರೆ ಜಾತ್ಯಾತೀತತೆ ಮೇಲೆ ದಾಳಿ ನಡೆಯುತ್ತಿದೆ. ಆ ದಾಳಿಯನ್ನು ಹಿಮ್ಮೆಟ್ಟಿಸುವ ಮೂಲಕ ಭಾರತವನ್ನು ಪಾಕಿಸ್ತಾನದಂತಹ ರಾಷ್ಟ್ರವನ್ನಾಗಿಸಲು ನಾವು ಅವಕಾಶ ನೀಡಬಾರದು ಎಂದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ನವೀನ್ ಸೂರಿಂಜೆ ಯವರ “ನೇತ್ರಾವತಿಯಲ್ಲಿ ನೆತ್ತರು” ಕರಾವಳಿಯ ಕೋಮು ಹಿಂಸೆಯ ನೈಜ ಪ್ರಕರಣಗಳು ಪುಸ್ತಕವನ್ನು ದಲಿತ ಮುಖಂಡರಾದ ಮಾವಳ್ಳಿ ಶಂಕರ್ ಬಿಡುಗಡೆ ಮಾಡಿದರು. ಬಿ.ಎಂ.ಹನೀಫ್ ರವರ ಸೆಕ್ಯುಲರ್ ಸೇನಾನಿ ಸುಭಾಷ್ ಚಂದ್ರ ಬೋಸ್ ಪುಸ್ತಕವನ್ನು ಸಾಹಿತಿಗಳಾದ ಕೆ.ಶರೀಫಾರವರು ಬಿಡುಗಡೆ ಮಾಡಿದರು.

ಸಿಪಿಐಎಂ ಪಕ್ಷವು `ಜಾತ್ಯಾತೀತತೆ, ಸಬಲೀಕರಣ ಮತ್ತು ಮುನ್ನಡೆ’ ಎಂಬ ಘೋಷಣೆಯಡಿ ಕರ್ನಾಟಕದ ಮುಸ್ಲಿಮರ ನೋವು ನಲಿವುಗಳ ಅನಾವರಣ ಎಂಬ ವಿಷಯದ ಕುರಿತು ಎರಡು ದಿನಗಳ ರಾಜ್ಯ ಮಟ್ಟದ ಎರಡು ದಿನಗಳ ಸಮಾವೇಶದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಡಾ.ಚಂದ್ರಪೂಜಾರಿ, ಡಾ.ಕೆ.ಪ್ರಕಾಶ್, ಮುನೀರ್ ಕಾಟಿಪಳ್ಳ, ಸುನೀಲ್ ಕುಮಾರ್ ಬಜಾಲ್ ಮುಂತಾದವರು ಭಾಗವಹಿಸಿದ್ದಾರೆ.

ಇದನ್ನೂ ಓದಿ: ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...