Homeಮುಖಪುಟಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದ ಕೇರಳ ಶಾಸಕ ಪಿ.ವಿ ಅನ್ವರ್

ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದ ಕೇರಳ ಶಾಸಕ ಪಿ.ವಿ ಅನ್ವರ್

- Advertisement -
- Advertisement -

ಕೇರಳದ ನಿಲಂಬೂರಿನ ಸ್ವತಂತ್ರ ಶಾಸಕ ಪಿ.ವಿ. ಅನ್ವರ್ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್‌ ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ತೊರೆದು ಜನವರಿ 10 ರಂದು ಶುಕ್ರವಾರ ಅಧಿಕೃತವಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರ್ಪಡೆಯಾಗಿದ್ದಾರೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಸದಸ್ಯತ್ವ ನೀಡುವ ಮೂಲಕ ಅನ್ವರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಟಿಎಂಸಿ ಎಕ್ಸ್‌ ಪೋಸ್ಟ್ ಮೂಲಕ ಅನ್ವರ್ ಅವರು ಪಕ್ಷ ಸೇರ್ಪಡೆಯಾಗಿರುವುದನ್ನು ದೃಢಪಡಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕೂಡ ಅನ್ವರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುವ ಸಂದೇಶ ಹಂಚಿಕೊಂಡಿದ್ದಾರೆ.

“ಕೇರಳದ ನಿಲಂಬೂರಿನ ಗೌರವಾನ್ವಿತ ಶಾಸಕರಾದ ಶ್ರೀ ಪಿ.ವಿ. ಅನ್ವರ್ ಅವರು ಎಐಟಿಸಿ ಕುಟುಂಬಕ್ಕೆ ಸೇರ್ಪಡೆಗೊಂಡಿದ್ದು, ಅವರಿಗೆ ಆತ್ಮೀಯ ಸ್ವಾಗತ. ಸಾರ್ವಜನಿಕ ಸೇವೆಗೆ ಅವರ ಸಮರ್ಪಣೆ ಮತ್ತು ಕೇರಳದ ಜನರ ಹಕ್ಕುಗಳಿಗಾಗಿ ಅವರ ವಕಾಲತ್ತು ನಮ್ಮ ಸಮಗ್ರ ಬೆಳವಣಿಗೆಯ ಧ್ಯೇಯವನ್ನು ಶ್ರೀಮಂತಗೊಳಿಸುತ್ತದೆ. ಒಟ್ಟಾಗಿ, ಪ್ರತಿಯೊಂದು ಧ್ವನಿಯೂ ಮುಖ್ಯವಾಗುವ ಮತ್ತು ಪ್ರತಿಯೊಂದು ಕನಸು ನನಸಾಗುವ ಪ್ರಗತಿಪರ ಭಾರತಕ್ಕಾಗಿ ನಾವು ಶ್ರಮಿಸುತ್ತೇವೆ!” ಎಂದು ಮಮತಾ ಬ್ಯಾನರ್ಜಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಎಲ್‌ಡಿಎಫ್ ಜೊತೆಗಿನ ಭಿನ್ನಾಭಿಪ್ರಾಯದ ಮೂರು ತಿಂಗಳ ನಂತರ ಅನ್ವರ್ ಅವರು ಟಿಎಂಸಿ ಸೇರ್ಪಡೆಯಾಗಿದ್ದಾರೆ.

ನಿಲಂಬೂರಿನ ವಿಭಾಗೀಯ ಅರಣ್ಯ ಕಚೇರಿ (ಉತ್ತರ) ಮೇಲೆ ದಾಳಿ ಮಾಡಿದ್ದಕ್ಕಾಗಿ ಡಿಸೆಂಬರ್ 5ರಂದು ಅನ್ವರ್ ಅವರನ್ನು ಬಂಧಿಸಲಾಗಿತ್ತು. ಡಿಸೆಂಬರ್ 6 ರಂದು ಮರುದಿನ ಜಾಮೀನಿನ ಮೇಲೆ ಬಿಡುಗಡೆಯಾದ ಅವರು, ಎಲ್‌ಡಿಎಫ್ ವಿರುದ್ಧ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನೊಂದಿಗೆ ಸಹಕರಿಸಲು ಸಿದ್ಧರಿರುವುದಾಗಿ ಹೇಳಿದ್ದರು. ಅನ್ವರ್ ಅವರು ಎಂಟು ವರ್ಷಗಳಿಗೂ ಹೆಚ್ಚು ಕಾಲ ಎಲ್‌ಡಿಎಫ್‌ ಜೊತೆಗಿದ್ದರು.

ಅನ್ವರ್ 2016ರಲ್ಲಿ ಎಲ್‌ಡಿಎಫ್‌ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಶಾಸಕರಾದರು. ಭೂ ಅತಿಕ್ರಮಣ ಮತ್ತು ಅಕ್ರಮ ನಿರ್ಮಾಣಗಳಿಗೆ ಸಂಬಂಧಿಸಿದ ವಿವಾದಗಳ ಹೊರತಾಗಿಯೂ, ಸಿಪಿಐ(ಎಂ) ಅವರನ್ನು 2021ರಲ್ಲಿ ಮತ್ತೆ ಕಣಕ್ಕಿಳಿಸಿತ್ತು ಮತ್ತು ಅವರು ಮರು ಆಯ್ಕೆಯಾಗಿದ್ದರು.

ಸೆಪ್ಟೆಂಬರ್ 2024ರಲ್ಲಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ರಾಜಕೀಯ ಕಾರ್ಯದರ್ಶಿ ಪಿ. ಶಶಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಅವರು ಕಳ್ಳಸಾಗಣೆ ಮಾಡಿದ ಚಿನ್ನವನ್ನು ತಡೆಹಿಡಿಯಲು ಮತ್ತು ವಶಪಡಿಸಿಕೊಂಡ ಅಕ್ರಮ ವಸ್ತುಗಳನ್ನು ದುರುಪಯೋಗಪಡಿಸಿಕೊಳ್ಳಲು ಕಾನೂನು ಜಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ ನಂತರ ಅನ್ವರ್ ಮತ್ತು ಸಿಪಿಐ(ಎಂ) ನಡುವೆ ತಿಕ್ಕಾಟ ಶುರುವಾಗಿತ್ತು. ಇದು ಅನ್ವರ್ ಅವರು ಎಡರಂಗದ ಸಖ್ಯ ತೊರೆಯಲು ಕಾರಣವಾಯಿತು. ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಅನ್ವರ್ ಅವರೊಂದಿಗಿನ ಎಲ್ಲಾ ಸಂಬಂಧಗಳನ್ನು ಪಕ್ಷ ಕಡಿದುಕೊಂಡಿದೆ ಎಂದು ಘೋಷಿಸಿದ್ದರು.

ಸಿಪಿಐ(ಎಂ) ತೊರೆದ ನಂತರ, ಡಿಎಂಕೆ ಮತ್ತು ಕಾಂಗ್ರೆಸ್ ಸೇರಲು ಅನ್ವರ್ ಮಾಡಿದ ಪ್ರಯತ್ನಗಳು ವಿಫಲವಾದವು, ಟಿಎಂಸಿಗೆ ಸೇರ್ಪಡೆಗೊಳ್ಳುವವರೆಗೂ ಅವರನ್ನು ರಾಜಕೀಯವಾಗಿ ಅಲೆದಾಡುವಂತೆ ಮಾಡಿತು.

ಇದನ್ನೂ ಓದಿ : ಪಂಜಾಬ್ : ಎಎಪಿ ಶಾಸಕ ಗುಂಡೇಟಿಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...