Homeಮುಖಪುಟಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದ ಕೇರಳ ಶಾಸಕ ಪಿ.ವಿ ಅನ್ವರ್

ಟಿಎಂಸಿ ಪಕ್ಷಕ್ಕೆ ಸೇರ್ಪಡೆಯಾದ ಕೇರಳ ಶಾಸಕ ಪಿ.ವಿ ಅನ್ವರ್

- Advertisement -
- Advertisement -

ಕೇರಳದ ನಿಲಂಬೂರಿನ ಸ್ವತಂತ್ರ ಶಾಸಕ ಪಿ.ವಿ. ಅನ್ವರ್ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್‌ ) ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ತೊರೆದು ಜನವರಿ 10 ರಂದು ಶುಕ್ರವಾರ ಅಧಿಕೃತವಾಗಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರ್ಪಡೆಯಾಗಿದ್ದಾರೆ.

ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರು ಸದಸ್ಯತ್ವ ನೀಡುವ ಮೂಲಕ ಅನ್ವರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.

ಟಿಎಂಸಿ ಎಕ್ಸ್‌ ಪೋಸ್ಟ್ ಮೂಲಕ ಅನ್ವರ್ ಅವರು ಪಕ್ಷ ಸೇರ್ಪಡೆಯಾಗಿರುವುದನ್ನು ದೃಢಪಡಿಸಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕೂಡ ಅನ್ವರ್ ಅವರನ್ನು ಪಕ್ಷಕ್ಕೆ ಸ್ವಾಗತಿಸುವ ಸಂದೇಶ ಹಂಚಿಕೊಂಡಿದ್ದಾರೆ.

“ಕೇರಳದ ನಿಲಂಬೂರಿನ ಗೌರವಾನ್ವಿತ ಶಾಸಕರಾದ ಶ್ರೀ ಪಿ.ವಿ. ಅನ್ವರ್ ಅವರು ಎಐಟಿಸಿ ಕುಟುಂಬಕ್ಕೆ ಸೇರ್ಪಡೆಗೊಂಡಿದ್ದು, ಅವರಿಗೆ ಆತ್ಮೀಯ ಸ್ವಾಗತ. ಸಾರ್ವಜನಿಕ ಸೇವೆಗೆ ಅವರ ಸಮರ್ಪಣೆ ಮತ್ತು ಕೇರಳದ ಜನರ ಹಕ್ಕುಗಳಿಗಾಗಿ ಅವರ ವಕಾಲತ್ತು ನಮ್ಮ ಸಮಗ್ರ ಬೆಳವಣಿಗೆಯ ಧ್ಯೇಯವನ್ನು ಶ್ರೀಮಂತಗೊಳಿಸುತ್ತದೆ. ಒಟ್ಟಾಗಿ, ಪ್ರತಿಯೊಂದು ಧ್ವನಿಯೂ ಮುಖ್ಯವಾಗುವ ಮತ್ತು ಪ್ರತಿಯೊಂದು ಕನಸು ನನಸಾಗುವ ಪ್ರಗತಿಪರ ಭಾರತಕ್ಕಾಗಿ ನಾವು ಶ್ರಮಿಸುತ್ತೇವೆ!” ಎಂದು ಮಮತಾ ಬ್ಯಾನರ್ಜಿ ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದಾರೆ.

ಎಲ್‌ಡಿಎಫ್ ಜೊತೆಗಿನ ಭಿನ್ನಾಭಿಪ್ರಾಯದ ಮೂರು ತಿಂಗಳ ನಂತರ ಅನ್ವರ್ ಅವರು ಟಿಎಂಸಿ ಸೇರ್ಪಡೆಯಾಗಿದ್ದಾರೆ.

ನಿಲಂಬೂರಿನ ವಿಭಾಗೀಯ ಅರಣ್ಯ ಕಚೇರಿ (ಉತ್ತರ) ಮೇಲೆ ದಾಳಿ ಮಾಡಿದ್ದಕ್ಕಾಗಿ ಡಿಸೆಂಬರ್ 5ರಂದು ಅನ್ವರ್ ಅವರನ್ನು ಬಂಧಿಸಲಾಗಿತ್ತು. ಡಿಸೆಂಬರ್ 6 ರಂದು ಮರುದಿನ ಜಾಮೀನಿನ ಮೇಲೆ ಬಿಡುಗಡೆಯಾದ ಅವರು, ಎಲ್‌ಡಿಎಫ್ ವಿರುದ್ಧ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ನೊಂದಿಗೆ ಸಹಕರಿಸಲು ಸಿದ್ಧರಿರುವುದಾಗಿ ಹೇಳಿದ್ದರು. ಅನ್ವರ್ ಅವರು ಎಂಟು ವರ್ಷಗಳಿಗೂ ಹೆಚ್ಚು ಕಾಲ ಎಲ್‌ಡಿಎಫ್‌ ಜೊತೆಗಿದ್ದರು.

ಅನ್ವರ್ 2016ರಲ್ಲಿ ಎಲ್‌ಡಿಎಫ್‌ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿ ಶಾಸಕರಾದರು. ಭೂ ಅತಿಕ್ರಮಣ ಮತ್ತು ಅಕ್ರಮ ನಿರ್ಮಾಣಗಳಿಗೆ ಸಂಬಂಧಿಸಿದ ವಿವಾದಗಳ ಹೊರತಾಗಿಯೂ, ಸಿಪಿಐ(ಎಂ) ಅವರನ್ನು 2021ರಲ್ಲಿ ಮತ್ತೆ ಕಣಕ್ಕಿಳಿಸಿತ್ತು ಮತ್ತು ಅವರು ಮರು ಆಯ್ಕೆಯಾಗಿದ್ದರು.

ಸೆಪ್ಟೆಂಬರ್ 2024ರಲ್ಲಿ, ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ರಾಜಕೀಯ ಕಾರ್ಯದರ್ಶಿ ಪಿ. ಶಶಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಅವರು ಕಳ್ಳಸಾಗಣೆ ಮಾಡಿದ ಚಿನ್ನವನ್ನು ತಡೆಹಿಡಿಯಲು ಮತ್ತು ವಶಪಡಿಸಿಕೊಂಡ ಅಕ್ರಮ ವಸ್ತುಗಳನ್ನು ದುರುಪಯೋಗಪಡಿಸಿಕೊಳ್ಳಲು ಕಾನೂನು ಜಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ ನಂತರ ಅನ್ವರ್ ಮತ್ತು ಸಿಪಿಐ(ಎಂ) ನಡುವೆ ತಿಕ್ಕಾಟ ಶುರುವಾಗಿತ್ತು. ಇದು ಅನ್ವರ್ ಅವರು ಎಡರಂಗದ ಸಖ್ಯ ತೊರೆಯಲು ಕಾರಣವಾಯಿತು. ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಎಂ.ವಿ. ಗೋವಿಂದನ್ ಅವರು ಅನ್ವರ್ ಅವರೊಂದಿಗಿನ ಎಲ್ಲಾ ಸಂಬಂಧಗಳನ್ನು ಪಕ್ಷ ಕಡಿದುಕೊಂಡಿದೆ ಎಂದು ಘೋಷಿಸಿದ್ದರು.

ಸಿಪಿಐ(ಎಂ) ತೊರೆದ ನಂತರ, ಡಿಎಂಕೆ ಮತ್ತು ಕಾಂಗ್ರೆಸ್ ಸೇರಲು ಅನ್ವರ್ ಮಾಡಿದ ಪ್ರಯತ್ನಗಳು ವಿಫಲವಾದವು, ಟಿಎಂಸಿಗೆ ಸೇರ್ಪಡೆಗೊಳ್ಳುವವರೆಗೂ ಅವರನ್ನು ರಾಜಕೀಯವಾಗಿ ಅಲೆದಾಡುವಂತೆ ಮಾಡಿತು.

ಇದನ್ನೂ ಓದಿ : ಪಂಜಾಬ್ : ಎಎಪಿ ಶಾಸಕ ಗುಂಡೇಟಿಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...