Homeಮುಖಪುಟಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!

ಕೊರೊನಾ ವಿರುದ್ದ ಕೇರಳದ ಹೋರಾಟ: ಅಮೆರಿಕಾದಿಂದ ನೈಜೀರಿಯಾವರೆಗಿನ ಮಾಧ್ಯಮಗಳಲ್ಲಿ ಮೆಚ್ಚುಗೆ!

- Advertisement -
- Advertisement -

ಕೊರೊನಾ ವಿರುದ್ದದ ಹೋರಾಟದಲ್ಲಿ ಕೇರಳ ಎಂಬ ಭಾರತದ ಪುಟ್ಟ ರಾಜ್ಯ ಕೇವಲ ಭಾರತಕ್ಕೆ ಮಾತ್ರ ಮಾದರಿಯಾಗಿ ನಿಂತಿಲ್ಲ. ಈ ಸೋಂಕಿನ ವಿರುದ್ದ ಕೇರಳ ನಡೆಸುತ್ತಿರುವ ಮಾದರಿಯೋಗ್ಯ ಹೋರಾಟದ ವರದಿಗಳು ಬಿಬಿಸಿಯಿಂದ ಹಿಡಿದು ನೈಜೀರಿಯಾ ಡೈಲಿಯವರೆಗಿನ ವಿಶ್ವದಾದ್ಯಂತ ಸುಮಾರು 30 ಕ್ಕಿಂತಲೂ ಹೆಚ್ಚು ಪತ್ರಿಕೆಗಳಲ್ಲಿ ವಿಶೇಷ ವರದಿಯಾಗಿವೆ.

ಭಾರತದ ಮೊದಲ ಕೊರೊನಾ ವೈರಸ್  ಪ್ರಕರಣದಲ್ಲಿ ಕೇರಳದಲ್ಲಿ ವರದಿಯಾದಾಗ ಬಿಬಿಸಿ ಮತ್ತು ಇತರ ಕೆಲವು ಮುಖ್ಯ ಸುದ್ದಿ ವಾಹಿನಿಗಳು ಸುದ್ದಿ ಮಾಡಿದ್ದವು. ಆದರೆ ಅಲ್ಲಿನ ಮಾದರಿಯೋಗ್ಯ ಆರೋಗ್ಯ ವ್ಯವಸ್ಥೆ ಸೋಂಕು ಹರಡುವುದನ್ನು ತಡೆಯಿತು. ನಂತರ ದೇಶದಾದ್ಯಂತದ ಇತರ ರಾಜ್ಯಗಳಲ್ಲಿ ಸೋಂಕು ಹೆಚ್ಚುತ್ತಿದ್ದಂತೆ, ಕೇರಳವು ಸೋಂಕಿನ ಪರೀಕ್ಷೆ, ಪತ್ತೆಹಚ್ಚುವಿಕೆ ಮತ್ತು ಚಿಕಿತ್ಸೆಯ ಕಾರ್ಯವಿಧಾನದಲ್ಲಿನ ವಿಷಯಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಂಡ ಪರಿಣಾಮ ಸೋಂಕು ರಾಜ್ಯದಲ್ಲಿ ಹತೋಟಿಗೆ ಬಂದಿದೆ. ಭಾರತಕ್ಕೆ ಕೊರೊನಾ ಕಾಲಿಟ್ಟ ನಂತರ ಅತೀ ಹೆಚ್ಚು ಕೊರೊನಾ ಪ್ರಕರಣಗಳಿದ್ದ ಕೇರಳದಲ್ಲಿ ಪ್ರಸ್ತುತ ಸಕ್ರಿಯ ಸೋಂಕು ಪ್ರಕರಣಗಳು ಕೇವಲ 32.

ದೇಶ ಹಾಗೂ ವಿಶ್ವದಾದ್ಯಂತದ  ಕೊರೊನಾ ಹರಡಲು ಪ್ರಾರಂಭಿಸಿದಾಗ, ಜಗತ್ತಿನಾದ್ಯಂತ ಮಾಧ್ಯಮಗಳ ಕಣ್ಣುಗಳು ಕೇರಳದತ್ತ ನೆಟ್ಟಿತ್ತು. ಭಾರತದಲ್ಲೇ ಅತೀ ಹೆಚ್ಚು ಅನಿವಾಸಿಗಳಿರುವ ರಾಜ್ಯಗಳಲ್ಲಿ ಒಂದಾದ ಕೇರಳದಲ್ಲಿ ಕೊರೊನಾ ಸಾವಿನ ಪ್ರಕರಣಗಳು ನಾಲ್ಕು. ಕೊರೊನಾ ವಿರುದ್ದದ ಕೇರಳ ಮಾದರಿಯ ಹೋರಾಟವನ್ನು ವಿಶ್ವದ ಮುಂದುವರೆದ ದೇಶಗಳಾದ ಬ್ರಿಟನ್, ಅಮೆರಿಕಾ, ಕೆನಡಾ, ಇಟಲಿ, ಫ್ರಾನ್ಸ್ ಮತ್ತು ಅರಬ್ ರಾಷ್ಟ್ರಗಳ ಹಲವಾರು ಪತ್ರಿಕೆಗಳು ವರದಿಗಳನ್ನು ಮಾಡಿವೆ. ಅವುಗಳಲ್ಲಿ ಕೆಲವು ಇಲ್ಲಿವೆ…

ಬಿಬಿಸಿ (ಲಂಡನ್)

ಕೇರಳ ತನ್ನ ಕೊರೊನಾ ರೇಖೆಯನ್ನು ಹೇಗೆ ಚಪ್ಪಟೆಗೊಳಿಸಿದೆ ಎಂಬ ಬಗ್ಗೆ ಬಿಬಿಸಿ ವರದಿ ಸಿದ್ಧಪಡಿಸಿದೆ. ಲಿಂಕ್  ಗೆ ಇಲ್ಲಿ ಕ್ಲಿಕ್ ಮಾಡಿ. “ವರ್ಕ್ ಲೈಕ್ ಕೇರಳ” ಎಂಬ ಶೀರ್ಷಿಕೆಯ ತನ್ನ ದೂರದರ್ಶನ ಕಾರ್ಯಕ್ರಮದಲ್ಲಿ, ನಿಫಾ ಸೋಂಕಿನಿಂದ ಹಿಡಿದು ಕೊರೊನಾ ಮೊದಲನೇ ಪ್ರಕರಣ ವರದಿ ಮಾಡಿದವರೆಗಿನ ಕೇರಳದ ಹೋರಾಟವನ್ನು ಬಿಬಿಸಿ ತೋರಿಸಿತು.

ಟ್ರಿಬ್ಯೂನ್ ಮ್ಯಾಗಝಿನ್

ಗಾರ್ಡಿಯನ್ ತನ್ನ ಸುದ್ದಿಯಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರವು ಕೊರೊನಾ ವೈರಸ್ ತಗ್ಗಿಸುವ ಗುರಿಗಳನ್ನು ಹೇಗೆ ಸಾಧಿಸಿದೆ ಎಂಬುದನ್ನು ಹೇಳಿದೆ. ಸಾಂಕ್ರಾಮಿಕ ಸಮಯದಲ್ಲಿ ತನ್ನ ಜನರ ಯೋಗಕ್ಷೇಮವನ್ನು ನೋಡಿಕೊಳ್ಳುವುದರ ಜೊತೆಗೆ ರಾಜ್ಯದ ಆರ್ಥಿಕತೆ ಹೇಗೆ ನಿರ್ವಹಿಸಿತು ಎಂದು ಕೂಡಾ ವರದಿ ಮಾಡಿದೆ. ಲಿಂಕ್  ಗೆ ಇಲ್ಲಿ ಕ್ಲಿಕ್ ಮಾಡಿ.

ಆರ್ ಟಿ ಅಮೇರಿಕಾ ನ್ಯೂಸ್ (ಅಮೇರಿಕಾ)

ಕೇರಳ ಮಾದರಿಯನ್ನು ಕೇಂದ್ರೀಕರಿಸಿದ ಮಾತುಕತೆ ಕಾರ್ಯಕ್ರಮದಲ್ಲಿ, ಆರೋಗ್ಯ ತಜ್ಞರು ಕೇರಳದ ವೈದ್ಯಕೀಯ ವಿಧಾನ ಹೇಗೆ ವೈರಸ್ ಹರಡುವುದನ್ನು ತಡೆದಿದೆ ಎಂಬ ಬಗ್ಗೆ ಹೇಳಲಾಗಿದೆ. ಲಿಂಕ್  ಗೆ ಇಲ್ಲಿ ಕ್ಲಿಕ್ ಮಾಡಿ.

ದಿ ಎಕನಾಮಿಸ್ಟ್ (ಲಂಡನ್)

ಸಾಂಕ್ರಾಮಿಕ ರೋಗವನ್ನು ಅಸಾಧಾರಣ ಯಶಸ್ಸಿನೊಂದಿಗೆ ನಿಭಾಯಿಸಲು ತಮ್ಮ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ದೃಡತೆ ಹೇಗೆ ಕಲಸ ಮಾಡಿದೆ ಎಂದು ತೋರಿಸಲು ವಿಯೆಟ್ನಾಂ ಮತ್ತು ಕೇರಳದಲ್ಲಿ ಅಳವಡಿಸಲಾಗಿರುವ ವೈರಸ್ ತಡೆ ಕ್ರಮಗಳನ್ನು ಲೇಖನವೊಂದು ತಿಳಿಸುತ್ತದೆ. ಲಿಂಕ್  ಗೆ ಇಲ್ಲಿ ಕ್ಲಿಕ್ ಮಾಡಿ.

ದಿ ವೋಗ್ (ಅಮೆರಿಕಾ)

ಕೇರಳದ ಆರೋಗ್ಯ ಮಂತ್ರಿ ಕೆ.ಕೆ.ಶೈಲಜಾ ಅವರು ಅಮೆರಿಕದ ಪ್ರಮುಖ ಫ್ಯಾಷನ್ ಮತ್ತು ಜೀವನಶೈಲಿ ನಿಯತಕಾಲಿಕ ದಿ ವೋಗ್ ಏಪ್ರಿಲ್ ಸಂಚಿಕೆಯಲ್ಲಿ ಕಾಣಿಸಿಕೊಂಡು, ಅವರು ಕೇರಳದಲ್ಲಿ ಸಾಂಕ್ರಮಿಕ ರೋಗದಿಂದ ಹೇಗೆ ಕೇರಳವನ್ನು ಹೊರತಂದರು ಎಂದು ಬರೆಯಲಾಗಿದೆ. ಲಿಂಕ್  ಗೆ ಇಲ್ಲಿ ಕ್ಲಿಕ್ ಮಾಡಿ.

Vogue Warriors: Meet Kerala’s health minister who is taking the state out of the pandemic

ಅರಬ್ ನ್ಯೂಸ್ (ಸೌದಿ ಅರೇಬಿಯಾ)

ಈ ವರದಿಯು ಕೇರಳದಲ್ಲಿ  ಕೊರೊನಾ ನಿರ್ವಹಣಾ ಚಿತ್ರಣವನ್ನು ಪರಿಶೀಲಿದಲ್ಲದೆ, ಕೇರಳವು ರಾಷ್ಟ್ರೀಯ 11 ಪ್ರತಿಶತದ ವಿರುದ್ಧ 50 ಪ್ರತಿಶತದಷ್ಟು ಚೇತರಿಕೆ ದರವನ್ನು ಹೇಗೆ ದಾಖಲಿಸಿದೆ ಎಂಬುದನ್ನು ತೋರಿಸುತ್ತದೆ. ಲಿಂಕ್  ಗೆ ಇಲ್ಲಿ ಕ್ಲಿಕ್ ಮಾಡಿ.

ಇಷ್ಟೇ ಅಲ್ಲದೆ ಕೇರಳ ಕೊರೊನಾ ವಿರುದ್ದ ಮಾದರಿ ಹೋರಾಟವನ್ನು ಹೇಗೆ ನಿಭಾಯಿಸಿತು ಎನ್ನುವುದು, ಇತರ ಜಾಗತಿಕ ಮಾಧ್ಯಮಗಳಲ್ಲಿ ಸುದ್ದಿಯಾದ ಲಿಂಕುಗಳು ಇಲ್ಲಿವೆ :

 Voice of America(ಅಮೆರಿಕಾ)

MIT Technology Review (ಕೇಂಬ್ರಿಡ್ಜ್)

National Post (ಕೆನಡ)

The Diplomat (ಜಪಾನ್)

The National Middle East (ಅಬುದಾಬಿ, ದುಬೈ)

Gulf News(ದುಬೈ)

Khaleej Times(ದುಬೈ)

France Le Munde (ಫ್ರಾನ್ಸ್)

France Courier International (ಫ್ರಾನ್ಸ್)

France Science Souvenir (ಫ್ರಾನ್ಸ್)

Italy La Stump(ಇಟೆಲಿ)

Italy Republic (ಇಟೆಲಿ)

Germany Jungle Wealth(ಜರ್ಮನಿ)

South China Morning Post ‌(ಚೀನಾ)

Strait Times (ಸಿಂಗಾಪುರ್)

Nigeria Pungence (ನೈಜೀರಿಯಾ)

New Prime South Africa(ದಕ್ಷಿಣ ಆಫ್ರಿಕಾ)

Turkey Evergreen (ತುರ್ಕಿ)

Europe  Solidaire

Daka Tribunal(ಬಾಂಗ್ಲಾದೇಶ)

Path (Org)

Alternate (ಯು.ಎ.ಇ)

Presence(ಬ್ರಿಟನ್)

France Humanite (ಫ್ರಾನ್ಸ್)

Poland Strjk (ಪೋಲಾಂಡ್)

Brasildefato (ಬ್ರೆಜಿಲ್)


ಇದನ್ನೂ ಓದಿ: ಭಾರತವೆಂಬ ಗಣರಾಜ್ಯ ಅನುಸರಿಸಬೇಕಾದ ದಾರಿ ಕೇರಳ ರಾಜ್ಯದಲ್ಲಿದೆ


ವಿಡಿಯೋ ನೋಡಿ: ಸದ್ದು…ಈ ಸುದ್ದಿ ಏನಾಗಿದೆ 8ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೇರಳದ ಮಾದರಿಯನ್ನು ನಮ್ಮ ದೇಶದ ಎಲ್ಲ ರಾಜ್ಯಗಳು ಅನುಸರಿಸಬೇಕು.

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...