Homeಮುಖಪುಟಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

ಕೇರಳ ಮನಿ ಹೈಸ್ಟ್ | ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ; ಒಬ್ಬ ಸಾವು!

- Advertisement -
- Advertisement -

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಮೂರು ಬಾರಿ ಎಟಿಎಂ ಮುರಿದು ಕಂಟೈನರ್ ಟ್ರಕ್‌ನಲ್ಲಿ ಪರಾರಿಯಾಗಿದ್ದ ತಂಡವನ್ನು ಶುಕ್ರವಾರ ಬೆಳಗ್ಗೆ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮತ್ತು ಕೇರಳ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿದ್ದ ಆರು ಜನರಿದ್ದ ಕಳ್ಳರ ಗ್ಯಾಂಗ್ ಕೊನೆಗೂ ಸಿಕ್ಕಿಬಿದ್ದಿವೆ.ಮನಿ ಹೈಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ವೇಗವಾಗಿ ಬಂದ ಕಂಟೈನರ್ ಲಾರಿಯಲ್ಲಿ ಪರಾರಿಯಾಗುತ್ತಿದ್ದ ಕಳ್ಳರನ್ನು ಪೊಲೀಸರು ಬೆನ್ನಟ್ಟಿದ್ದು, ಕೊನೆಗೆ ಶೂಟೌಟ್‌ನಲ್ಲಿ ಅದು ಕೊನೆಗೊಂಡಿದೆ. ಈ ಶೂಟೌಟ್‌ನಲ್ಲಿ ಶಂಕಿತ ಕಳ್ಳನೊಬ್ಬ ಸಾವನ್ನಪ್ಪಿದ್ದು, ಇನ್ನೊಬ್ಬ ಗಾಯಗೊಂಡಿದ್ದಾನೆ. ಇದೇ ವೇಳೆ ದರೋಡೆಕೋರರ ಗುಂಡಿಗೆ ಇಬ್ಬರು ಪೊಲೀಸರು ಗಾಯಗೊಂಡಿದ್ದಾಗಿ ವರದಿಯಾಗಿದೆ.

ನಾಮಕ್ಕಲ್ ಜಿಲ್ಲೆಯ ಕುಮಾರಪಾಳ್ಯಂ ಬಳಿಯ ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿನಿಮಾ ಶೈಲಿಯಲ್ಲಿ ಸುಮಾರು ಐದು ಕಿಲೋಮೀಟರ್ ದೂರ ಬೆನ್ನೆಟ್ಟಲಾಗಿತ್ತು ಎಂದು ವರದಿಯಾಗಿದೆ. ಈ ಸಂದರ್ಭದಲ್ಲಿ ಶಂಕಿತರು ನುಣುಚಿಕೊಳ್ಳಲು ಪ್ರಯತ್ನಿಸಿದ್ದು, ಗುಂಡಿನ ಚಕಮಕಿ ನಡೆದಿದೆ ಎಂದು ವರದಿ ಹೇಳಿದೆ.ಮನಿ ಹೈಸ್ಟ್

ಕಾರ್ಯಾಚರಣೆಯು ಶೂಟೌಟ್‌ನಲ್ಲಿ ಕೊನೆಗೊಂಡಿದ್ದು, ಪರಿಣಾಮವಾಗಿ ಒಬ್ಬ ಶಂಕಿತ ಕಳ್ಳ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಆರೋಪಿ ಮತ್ತು ಇಬ್ಬರು ಪೊಲೀಸರು ಕೂಡಾ ಈ ವೇಳೆ ಗಾಯಗೊಂಡಿದ್ದಾರೆ.

ಇದನ್ನೂಓದಿ: ತೆಲಂಗಾಣ: ಶವ ಸಂಸ್ಕಾರ ಮಾಡದಂತೆ ದಲಿತ ಕುಟುಂಬವನ್ನು ತಡೆದ ರಿಯಲ್ ಎಸ್ಟೇಟ್‌ ಏಜೆಂಟ್‌ಗಳು

“ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಕರಣದ ಬಗ್ಗೆ ವಿಚಾರಣೆಯ ನಂತರ ಮಾತನಾಡುತ್ತೇವೆ” ಎಂದು ಸೇಲಂ ವಲಯದ ಡಿಐಜಿ ಇಎಸ್ ಉಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ದರೋಡೆಕೋರರ ತಂಡವು ಮೂರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂಗಳಿಂದ ಸುಮಾರು 65 ಲಕ್ಷ ರೂ. ದೂಚಿದ್ದಾರೆ ಎಂದು ಪೊಲೀಸ್ ಮೂಲಗಳನ್ನು ಉಲ್ಲೇಖಿಸಿ TNIE ವರದಿ ಹೇಳಿದೆ. ಶುಕ್ರವಾರ ಮುಂಜಾನೆ 2 ರಿಂದ 4 ಗಂಟೆಯ ನಡುವೆ ತ್ರಿಶೂರ್ ನಗರ ವ್ಯಾಪ್ತಿಯ ಸಿಟಿ ಈಸ್ಟ್ ಮತ್ತು ವಿಯ್ಯೂರ್ ಮತ್ತು ತ್ರಿಶೂರ್ ಗ್ರಾಮಾಂತರದ ಇರಿಂಜಲಕುಡದಲ್ಲಿ ಕಳ್ಳತನ ನಡೆದಿದೆ.

ಸೆಕ್ಯುರಿಟಿ ಇಲ್ಲದ ಆಲರಾಂ ವ್ಯವಸ್ಥೆ ಹೊಂದಿರುವ ಎಟಿಎಂಗಳನ್ನು ಗುರಿಯಾಗಿಟ್ಟುಕೊಂಡು ಗ್ಯಾಂಗ್ ದರೋಡೆ ಮಾಡಿದೆ ಎಂದು ವರದಿ ಹೇಳಿದೆ. ಕಳ್ಳರ ಗ್ಯಾಂಗ್ ಸಿಸಿಟಿವಿ ಕ್ಯಾಮೆರಾಗಳಿಗೆ ಬಣ್ಣ ಎರಚಿದ್ದು, ನಂತರ ಎಟಿಎಂನ ನಗದು ಪಡೆಯಲು ಗ್ಯಾಸ್ ಕಟ್ಟರ್‌ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.

ಕಳ್ಳತನದ ನಂತರ, ಕಳ್ಳರ ಗ್ಯಾಂಗ್ ಆರಂಭದಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಮೊದಲಿಗೆ ಕಾರಿನಲ್ಲಿ ಪರಾರಿಯಾಗಿತ್ತು. ನಂತರ ಕಂಟೈನರ್ ಟ್ರಕ್‌ ಮೂಲಕ ಪರಾರಿಯಾಗಿದ್ದಾರೆ. ಈ ವಾಹನವು ನಕಲಿ ನಂಬರ್ ಪ್ಲೇಟ್ ಅನ್ನು ಹೊಂದಿದ್ದರಿಂದ ಅದನ್ನು ಪತ್ತೆಹಚ್ಚಲು ಕೇರಳ ಪೊಲೀಸರು ರಸ್ತೆಯಲ್ಲಿ ಕಂಟೈನರ್ ಟ್ರಕ್‌ಗಳನ್ನು ಮೇಲ್ವಿಚಾರಣೆ ಮಾಡಲು ತಮಿಳುನಾಡು ಪೊಲೀಸರಿಗೆ ಕೇಳಿಕೊಂಡಿದ್ದಾರೆ.

ಇದನ್ನೂಓದಿ: ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ: ಕುಡಿದ ಅಮಲಿನಲ್ಲೆ ಆಸ್ಪತ್ರೆಗೆ ಧಾವಿಸಿದ್ದ ಆರೋಪಿ ಕುಟುಂಬದ ಸದಸ್ಯರು

ಈ ಗುಪ್ತಚರ ಮಾಹಿತಿ ಮೇರೆಗೆ ತಮಿಳುನಾಡು ಪೊಲೀಸರು ಸೇಲಂ-ಕೊಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಪಾಸಣೆಯನ್ನು ತೀವ್ರಗೊಳಿಸಿದ್ದು, ಅಂತಿಮವಾಗಿ ನಾಮಕ್ಕಲ್‌ನಲ್ಲಿ ಶಂಕಿತರ ಬಂಧನ ನಡೆದಿದೆ. ಟ್ರಕ್ ಪಚ್ಚಪಾಳ್ಯಂ ಪ್ರದೇಶವನ್ನು ತಲುಪಿದಾಗ, ಪೊಲೀಸರು ಅದನ್ನು ತಡೆಯಲು ಪ್ರಯತ್ನಿಸಿದರು; ಈ ವೇಳೆ ಕಳ್ಳರ ಗ್ಯಾಂಗ್ ಪ್ರತಿದಾಳಿ ನಡೆಸಿದ್ದು, ಹಾಗಾಗಿ ಗುಂಡಿನ ದಾಳಿ ಮಾಡಲಾಗಿದೆ ಎಂದು ವರದಿ ಹೇಳಿದೆ.

ಇದರ ನಂತರ, ಗ್ಯಾಂಗ್‌ನ ಐದು ಸದಸ್ಯರನ್ನು ಬಂಧಿಸಲಾಗಿದ್ದು, ಮೃತ ಶಂಕಿತ ಕಳ್ಳನ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೇಲಂ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಗ್ಯಾಂಗ್ ರಾಜಸ್ಥಾನ ಮತ್ತು ಹರಿಯಾಣ ಮೂಲದ್ದಾಗಿದೆ ಎಂದು ನಂಬಲಾಗಿದೆ. ಇವರು ಇತರ ರೀತಿಯ ಅಪರಾಧಗಳಿಗೆ ಸಂಬಂಧಿಸಿದಂತೆ ಬೇಕಾಗಿದ್ದರು ಎಂದು ಪೊಲೀಸ್ ಮೂಲಗಳು ಸೂಚಿಸಿವೆ.

2021 ರಲ್ಲಿ, ಕೇರಳ ಪೊಲೀಸರು ಇದೇ ರೀತಿಯ ಕಾರ್ಯಾಚರಣೆ ನಡೆಸಿ ಕಳ್ಳತನ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ್ದರು. ಪ್ರಸ್ತತ ಬಂಧನಕ್ಕೊಳಗಾಗಿರುವ ಗ್ಯಾಂಗ್‌ನ ಚಟುವಟಿಕೆಗಳು ಮತ್ತು ಸಂಪರ್ಕಗಳ ಕುರಿತು ಹೆಚ್ಚಿನ ವಿವರಗಳ ಬಗ್ಗೆ ತನಿಖೆ ನಡೆಯುತ್ತಿದ್ದು, ತಮಿಳುನಾಡಿನ ಪಶ್ಚಿಮ ವಲಯದ ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.

ವಿಡಿಯೊ ನೋಡಿ: ಅಟ್ರಾಸಿಟಿ ಕಾದಂಬರಿ ಚರ್ಚೆಯಲ್ಲಿ ವಿಕಾಸ್ ಮತ್ತು ಗುರುಪ್ರಸಾದ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...