Homeಮುಖಪುಟಕೇರಳ | ತಿಂಗಳುಗಟ್ಟಲೆ ಹಲ್ಲೆ ನಡೆಸಿ, ಖಾಸಗಿ ಭಾಗಗಳಿಗೆ ಡಂಬ್ಬೆಲ್ಸ್ ನೇತಾಕಿ ರ‍್ಯಾಗಿಂಗ್; ಐವರ ಬಂಧನ

ಕೇರಳ | ತಿಂಗಳುಗಟ್ಟಲೆ ಹಲ್ಲೆ ನಡೆಸಿ, ಖಾಸಗಿ ಭಾಗಗಳಿಗೆ ಡಂಬ್ಬೆಲ್ಸ್ ನೇತಾಕಿ ರ‍್ಯಾಗಿಂಗ್; ಐವರ ಬಂಧನ

- Advertisement -
- Advertisement -

ಕೇರಳದ ಕೊಟ್ಟಾಯಂ ಜಿಲ್ಲೆಯ ನರ್ಸಿಂಗ್ ಕಾಲೇಜಿನ ಐವರು ವಿದ್ಯಾರ್ಥಿಗಳನ್ನು ತಮ್ಮ ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ರ‍್ಯಾಗ್ ಮಾಡಿದ್ದಕ್ಕಾಗಿ ಬಂಧಿಸಲಾಗಿರುವ ಘಟನೆ ನಡೆದಿದೆ. ಸಂತ್ರಸ್ತ ವಿದ್ಯಾರ್ಥಿಗಳು ಪೊಲೀಸರಿಗೆ ದೂರು ನೀಡಿದ ನಂತರ ಪೊಲೀಸರು ದುಷ್ಕರ್ಮಿಗಳನ್ನು ಬಂಧಿಸಿದ್ದಾರೆ. ಕೇರಳ

ಬಂಧನಕ್ಕೆ ಒಳಗಾದದವರನ್ನು ಕೊಟ್ಟಾಯಂನ ಸರ್ಕಾರಿ ನರ್ಸಿಂಗ್ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿಗಳಾದ ಸ್ಯಾಮ್ಯುಯೆಲ್ ಜಾನ್ಸನ್, ಎನ್.ಎಸ್. ಜೀವಾ, ಕೆ.ಪಿ. ರಾಹುಲ್ ರಾಜ್, ಸಿ. ರಿಜಿಲ್ ಜಿತ್ ಮತ್ತು ವಿವೇಕ್ ಎನ್.ಪಿ. ಎಂದು ಗುರುತಿಸಲಾಗಿದೆ. ಇವರ ಬಂಧನದ ನಂತರ, ಇವರು ನಡೆಸುತ್ತಿರುವ ನಿರಂತರ ರ‍್ಯಾಗ್‌ ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಗುಂಪು ನವೆಂಬರ್ 2024 ರಿಂದ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ರ‍್ಯಾಗ್ ಹೆಸರಿನಲ್ಲಿ ಕಿರುಕುಳ ನೀಡುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಕಿರುಕುಳವನ್ನು ಸಹಿಸಲಾಗದೆ, ಮೂವರು ಪ್ರಥಮ ವರ್ಷದ ವಿದ್ಯಾರ್ಥಿಗಳು ಹತ್ತಿರದ ಗಾಂಧಿನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.

ವಿದ್ಯಾರ್ಥಿಗಳು ನೀಡಿದ ದೂರು ದುಷ್ಕರ್ಮಿಗಳು ನೀಡುತ್ತಿದ್ದ ಕಿರುಕುಳದ ಹಿಂಸಾತ್ಮಕ ಕೃತ್ಯಗಳನ್ನು ವಿವರಿಸುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇರಳ

ಆರೋಪಿಗಳು, ಜೂನಿಯರ್ ವಿದ್ಯಾರ್ಥಿನಿಯರ ದೇಹದ ಮೇಲೆ ಇರಿದು ಗಾಯ ಮಾಡಿ, ಈ ಗಾಯಗಳಿಗೆ ಲೋಷನ್ ಸುರಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಸಂತ್ರಸ್ತರು ನೋವಿನಿಂದ ಕೂಗಿದಾಗ, ಆರೋಪಿಗಳು ಅವರ ಬಾಯಿ ಮತ್ತು ದೇಹದ ಭಾಗಗಳಿಗೆ ಕ್ರೀಮ್ ಹಚ್ಚುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಜೂನಿಯರ್ ವಿದ್ಯಾರ್ಥಿಗಳನ್ನು ನಗ್ನಗೊಳಿಸಿ, ಅವರ ಖಾಸಗಿ ಭಾಗಗಳಿಗೆ ಡಂಬ್ಬೆಲ್‌ಗಳನ್ನು ನೇತುಹಾಕುತ್ತಿದ್ದರು ಎಂದು ಎಂದು ದೂರಿನಲ್ಲಿ ಹೇಳಲಾಗಿದೆ. ಆರೋಪಿಗಳು ಜಾಮೆಟ್ರಿ ಬಾಕ್ಸ್‌ನಲ್ಲಿ ಇರುವ ಉಪಕರಣಗಳನ್ನು ಬಳಸಿ ಗಾಯಗೊಳಿಸುತ್ತಿದ್ದರು ಎಂದು ವರದಿಯಾಗಿದೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರ‍್ಯಾಗಿಂಗ್‌ಗೆ ಸಂಬಂಧಿಸಿದ ಎಲ್ಲಾ ಐದು ವಿದ್ಯಾರ್ಥಿಗಳನ್ನು ಅವರ ಕಾಲೇಜು ಸಹ ಅಮಾನತುಗೊಳಿಸಿದೆ. ರ‍್ಯಾಗಿಂಗ್ ವಿರೋಧಿ ಕಾಯ್ದೆಯಡಿ ತನಿಖೆ ನಡೆಸಿದ ನಂತರ ಕಾಲೇಜು ಪ್ರಾಂಶುಪಾಲರು ಈ ಕ್ರಮ ಕೈಗೊಂಡಿದ್ದಾರೆ.

ರ‍್ಯಾಗಿಂಗ್ ಬಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಮಾಹಿತಿ ನೀಡಿರಲಿಲ್ಲ ಎಂದು ಉಸ್ತುವಾರಿ ಪ್ರಾಂಶುಪಾಲರಾದ ಡಾ. ಲಿನಿ ಜೋಸೆಫ್ ಹೇಳಿದ್ದಾರೆ.

“ಪೋಷಕರು ತರಗತಿ ಶಿಕ್ಷಕರಿಗೆ ಈ ಬಗ್ಗೆ ತಿಳಿಸಲು ಕರೆ ಮಾಡಿದರು. ದೂರು ಸ್ವೀಕರಿಸಿದ ನಂತರ, ಪ್ರಾಥಮಿಕ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಯಿತು. ವಿವರವಾದ ತನಿಖೆಗಾಗಿ ಇಂದು (ಫೆಬ್ರವರಿ 12) ಸಮಿತಿಯನ್ನು ನೇಮಿಸಲಾಗುವುದು. ವಿದ್ಯಾರ್ಥಿಗಳ ವಿರುದ್ಧ ಮುಂದಿನ ಕ್ರಮದ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

“ತನಿಖೆಯ ಭಾಗವಾಗಿ ನಾವು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದೇವೆ. ನಾವು ದೂರನ್ನು ಗಾಂಧಿನಗರ SHO (ಸ್ಟೇಷನ್ ಹೌಸ್ ಆಫೀಸರ್) ಮತ್ತು ಕೊಟ್ಟಾಯಂ ಪೊಲೀಸ್ ವರಿಷ್ಠಾಧಿಕಾರಿಗೆ ರವಾನಿಸಿದ್ದೇವೆ. ನಿನ್ನೆ, ಪೊಲೀಸರು ಸಂತ್ರಸ್ತ ವಿದ್ಯಾರ್ಥಿಗಳು ಮತ್ತು ಆರೋಪಿಗಳನ್ನು ಭೇಟಿಯಾದರು. ಈ ವೇಳೆ ಇಬ್ಬರು ಸಂತ್ರಸ್ತರನ್ನು ಪೊಲೀಸ್ ಠಾಣೆಗೆ ಬರಲು ಕೇಳಲಾಯಿತು. ನಾವು ಅವರನ್ನು ನಮ್ಮ ಸಹಾಯಕ ವಾರ್ಡನ್ ಮತ್ತು ಪುರುಷ ಅಧ್ಯಾಪಕರೊಂದಿಗೆ ಕಳುಹಿಸಿದ್ದೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ಒಳ ಮೀಸಲಾತಿ | ಜಸ್ಟೀಸ್ ನಾಗಮೋಹನ್ ದಾಸ್ ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟ ಪ.ಜಾತಿಗಳ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...