Homeಮುಖಪುಟಕೇರಳ | ಕೊಲೆ ಪ್ರಕರಣ - 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ

ಕೇರಳ | ಕೊಲೆ ಪ್ರಕರಣ – 10 ಮಂದಿ ಸಿಪಿಐ(ಎಂ) ಕಾರ್ಯಕರ್ತರಿಗೆ ಡಬಲ್ ಜೀವಾವಧಿ ಶಿಕ್ಷೆ

- Advertisement -
- Advertisement -

ಸುಮಾರು ಆರು ವರ್ಷಗಳ ಹಿಂದೆ ಯೂತ್ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ (21) ಮತ್ತು ಶರತ್ಲಾಲ್ ಪಿಕೆ (24) ಹತ್ಯೆಗೆ ಸಂಚು ರೂಪಿಸಿದ್ದಕ್ಕಾಗಿ 10 ಸಿಪಿಎಂ ಕಾರ್ಯಕರ್ತರಿಗೆ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶೇಷಾದ್ರಿನಾಥನ್ ಶುಕ್ರವಾರ ಎರಡು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಫೆಬ್ರವರಿ 17, 2019 ರಂದು ಕೃಪೇಶ್ ಮತ್ತು ಶರತ್ಲಾಲ್ ದೇವಸ್ಥಾನದ ಸ್ವಾಗತ ಸಮಿತಿಯ ಸಭೆಯಿಂದ ಹಿಂದಿರುಗುತ್ತಿದ್ದಾಗ ಆರೋಪಿಗಳು ಅವರ ಕೊಲೆಗೆ ಸಂಚು ರೂಪಿಸಿದ್ದರು. ಕೇರಳ

ಎರಡನೇ ಆರೋಪಿ ಸಾಜಿ ಸಿ ಜಾರ್ಜ್‌ನನ್ನು ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಸಹಾಯ ಮಾಡಿದ್ದಕ್ಕಾಗಿ ಸಿಪಿಐ(ಎಂ)ನ ಮಾಜಿ ಶಾಸಕ ಕೆ.ವಿ. ಕುಂಞಿರಾಮನ್, ಕಾಂಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ. ಮಣಿಕಂಠನ್ ಮತ್ತು ಇತರ ಇಬ್ಬರಿಗೆ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಎರಡು ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ 10 ಅಪರಾಧಿಗಳು ತಲಾ 2 ಲಕ್ಷ ರೂ. ದಂಡ ಹಾಗೂ 14, 20, 21 ಮತ್ತು 22 ಆರೋಪಿಗಳಿಗೆ ತಲಾ 10,000 ರೂ.ಗಳ ದಂಡದೊಂದಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಜನವರಿ 5,2019 ರಂದು ನಡೆದ ವಿಚಾರಣೆಯ ಪ್ರಕಾರ, ಕಳ್ಳಿಯೋಟ್‌ನಲ್ಲಿ ಎಸ್‌ಎಫ್‌ಐ ಮತ್ತು ಯೂತ್ ಕಾಂಗ್ರೆಸ್ ನಡುವಿನ ಘರ್ಷಣೆಯ ನಂತರ, ಶರತ್ ಲಾಲ್ ಮತ್ತು ಇತರರು ಮೊದಲ ಪ್ರಕರಣದ ಅಪರಾಧಿ ಪೀತಾಂಬರನ್ ಮತ್ತು ಇನ್ನೋರ್ವ ಅಪರಾಧಿ ಸುರೇಂದ್ರನ್ ಅಲಿಯಾಸ್ ವಿಷ್ಣು ಸುರ ಮೇಲೆ ಹಲ್ಲೆ ನಡೆಸಿದ್ದರು. ಫೆಬ್ರವರಿ 17, 2019ರಂದು, ಕೃಪೇಶ್ ಮತ್ತು ಶರತ್ ಲಾಲ್ ಅವರು ಪೆರುಮ್ಕಾಲಿಯಾಟ್ಟಂ ದೇವಸ್ಥಾನದ ಉತ್ಸವದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಕಳ್ಳಿಯೋಟ್-ತನ್ನಿತೋಡ್ ರಸ್ತೆಯಲ್ಲಿ ಅವರ ಮೇಲೆ ದಾಳಿ ನಡೆದಿತ್ತು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಸಾವನ್ನಪ್ಪಿದ್ದರು.

ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದ ಕೃಪೇಶ್ ಅವರ ತಂದೆ ಪಿವಿ ಕೃಷ್ಣನ್ ಮತ್ತು ಸಹೋದರಿ ಕೃಷ್ಣಪ್ರಿಯಾ ಮತ್ತು ಶರತ್‌ಲಾಲ್ ಅವರ ತಾಯಿ ಲತಾ ಮತ್ತು ಸಹೋದರಿ ಅಮೃತಾ ಅವರು ಶಿಕ್ಷೆಯ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದಾರೆ ಎಂದು ಆನ್‌ಮನೋರಮ ವರದಿ ಮಾಡಿದೆ. ಕೇರಳ

ಕೊಲೆ ಮತ್ತು ಪಿತೂರಿಗಾಗಿ ಜೀವಾವಧಿ ಶಿಕ್ಷೆಗೆ ಗುರಿಯಾದವರಲ್ಲಿ ಸಿಪಿಎಂನ ಪೆರಿಯ ಸ್ಥಳೀಯ ಸಮಿತಿಯ ಮಾಜಿ ಸದಸ್ಯ ಪೀತಾಂಬರನ್ ಎ, ಸಾಜಿ ಸಿ ಜಾರ್ಜ್, ಸುರೇಶ್ ಕೆ ಎಂ, ಅನಿಲ್ ಕುಮಾರ್ ಅಲಿಯಾಸ್ ಅಬು, ಗಿಜಿನ್, ಶ್ರೀರಾಗ್ ಆರ್, ಅಶ್ವಿನ್ ಎ ಅಲಿಯಾಸ್ ಅಪ್ಪು ಮತ್ತು ಸಿಐಟಿಯು ಕಾರ್ಯಕರ್ತ ಸುಬೀಶ್ ಸೇರಿದ್ದಾರೆ. ರಂಜಿತ್ ಟಿ ಮತ್ತು ಎ ಸುರೇಂದ್ರನ್ ಅಲಿಯಾಸ್ ವಿಷ್ಣು ಸೂರಾ ಅವರಿಗೆ ನ್ಯಾಯಾಲಯವು ಶರತ್‌ಲಾಲ್ ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ಉದ್ಮಾ ಕ್ಷೇತ್ರದ ಮಾಜಿ ಶಾಸಕ ಮತ್ತು ಸಿಪಿಎಂನ ಜಿಲ್ಲಾ ಕಾರ್ಯದರ್ಶಿ ಸಮಿತಿ ಸದಸ್ಯ ಕೆ.ವಿ. ಕುಂಞಿರಾಮನ್, ಸಿಪಿಎಂ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯ, ಕಾಞಂಗಾಡು ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ ಮಣಿಕಂಠನ್, ರಾಘವನ್ ವೆಲುತೋಳಿ (ಮಾಜಿ ಪಕ್ಕಂ ಸ್ಥಳೀಯ ಕಾರ್ಯದರ್ಶಿ ಮತ್ತು ಸಿಪಿಎಂನ ವರ್ತಕರ ವಿಭಾಗ, ಕೇರಳ ವ್ಯಾಪಾರಿ ವ್ಯವಸಾಯಿ ಸಮಿತಿಯ ಮಾಜಿ ಜಿಲ್ಲಾ ಅಧ್ಯಕ್ಷ), ಮತ್ತು ಕೆ ವಿ ಭಾಸ್ಕರನ್ (ಸಿಪಿಎಂ-ನಿಯಂತ್ರಿತ ಪನಾಯಲ್ ಸೇವಾ ಸಹಕಾರಿ ಬ್ಯಾಂಕ್‌ನ ನಿವೃತ್ತ ಕಾರ್ಯದರ್ಶಿ) ಇದೀಗ ಅಪರಾಧಿ ಎಂದು ಸಾಬೀತಾಗಿರುವ ಎರಡನೇ ಆರೋಪಿಯನ್ನು ಪೊಲೀಸ್ ಕಸ್ಟಡಿಯಿಂದ ಬಲವಂತವಾಗಿ ಕರೆದೊಯ್ದಿದ್ದಕ್ಕಾಗಿ ಐಪಿಸಿಯ ಸೆಕ್ಷನ್ 225 ರ ಅಡಿಯಲ್ಲಿ ಐದು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಗಿದೆ.

ಇದನ್ನೂ ಓದಿ: ರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ

ರಿಯಾಝ್ ಮೌಲವಿ ಕೊಲೆ ಪ್ರಕರಣ: ಮೂವರು RSS ಕಾರ್ಯಕರ್ತರು ಖುಲಾಸೆ, ನಿರಾಸೆ ವ್ಯಕ್ತಪಡಿಸಿದ ಕುಟುಂಬ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...