Homeಮುಖಪುಟಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಕೇರಳದ ಇತರ ಮೂವರು ಮಲಯಾಳಂ ನಿರ್ದೇಶಕರು "ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ" ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

- Advertisement -
- Advertisement -

20 ನೇ ಶತಮಾನದ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕೇರಳದ ಮಲಬಾರ್ ಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ”ಯ ಜೀವನಾಧಾರಿತ ಸಿನೆಮಾ ಮಾಡುವುದಾಗಿ ಘೋಷಣೆಯಾಗುತ್ತಿದ್ದಂತೆ, ಬಲಪಂಥೀಯರು ಇದರ ವಿರುದ್ಧ ದ್ವೇಷದ ಅಭಿಯಾನ ಪ್ರಾರಂಭಿಸಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಘೋಷಿತ ಸಿನಿಮಾದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

‘ವಾರಿಯಂಕುನ್ನನ್’ ಎಂದು ಹೆಸರಿಸಲಾಗಿರುವ ಈ ಚಿತ್ರವನ್ನು ಮಲಯಾಳಂ ಚಿತ್ರ ರಂಗದ ಖ್ಯಾತ ನಿರ್ದೇಶಕ ಆಶಿಕ್ ಅಬು ನಿರ್ದೇಶಿಸಲಿದ್ದು, ‘ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ’ ಪಾತ್ರವನ್ನು ಪೃಥ್ವಿರಾಜ್ ಸುಕುಮಾರನ್ ನಿರ್ವಹಿಸಲಿದ್ದಾರೆ. ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ ನೇತೃತ್ವದ ಮಲಬಾರ್ ದಂಗೆಯ 100 ನೇ ವರ್ಷಾಚರಣೆಯಾದ 2021 ರಲ್ಲಿ ಈ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

“ಅವರು ವಿಶ್ವದ ಕಾಲು ಭಾಗವನ್ನು ಆಳಿದ ಸಾಮ್ರಾಜ್ಯದ ವಿರುದ್ಧ ನಿಂತರು. ಬ್ರಿಟಿಷರ ವಿರುದ್ಧ ಹಿಂದೆಂದೂ ಯುದ್ಧ ಮಾಡದ ಸೈನ್ಯದೊಂದಿಗೆ ತನ್ನದೇ ದೇಶವನ್ನು ಕಟ್ಟಿಕೊಂಡರು. ಇತಿಹಾಸವನ್ನು ಸುಟ್ಟು ಹೂಳಲಾಗಿದ್ದರೂ, ದಂತಕಥೆಯು ಜೀವಂತವಾಗಿದೆ! ನಾಯಕ, ಸೈನಿಕ, ದೇಶಭಕ್ತನ ದಂತಕಥೆ. 1921 ರ ಮಲಬಾರ್ ಕ್ರಾಂತಿಯ ಮುಖವಾದ ವ್ಯಕ್ತಿಯ ಚಿತ್ರ ‘ವಾರಿಯಂಕುನ್ನನ್’. ಮಲಬಾರ್ ಕ್ರಾಂತಿಯ 100 ನೇ ವಾರ್ಷಿಕೋತ್ಸವವಾದ 2021 ರಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ.” ನಟ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದು, ಚಿತ್ರದ ವಿರುದ್ದ ಈಗಾಗಲೇ ಧ್ವೇಷಾಭಿಯಾನ ಪ್ರಾರಂಭವಾಗಿದೆ. ಬಲಪಂಥೀಯ ವೆಬ್ಸೈಟ್ ಒಪಿಇಂಡಿಯಾ ಜೂನ್ 23 ರಂದು ಪೋಸ್ಟ್ ಮಾಡಿದ ಲೇಖನವೊಂದರಲ್ಲಿ ವಾರಿಯಂಕುನ್ನತ್ ಅವರನ್ನು ‘ಜಿಹಾದಿ’ ಹಾಗೂ ‘ಭಯೋತ್ಪಾದಕ’ ಎಂದು ಉಲ್ಲೇಖಿಸಿದೆ. ಈ ಸ್ವಾತಂತ್ರ್ಯ ಹೋರಾಟಗಾರ 1921 ರಲ್ಲಿ ಸಾವಿರಾರು ಹಿಂದೂಗಳನ್ನು ಹತ್ಯೆ ಮಾಡಿದ್ದಾರೆಂದು ಮತ್ತು ನೂರಾರು ಹಿಂದೂ ದೇವಾಲಯಗಳ ನಾಶಕ್ಕೆ ಕಾರಣವಾಗಿದ್ದಾರೆಂದು ಅದು ಆರೋಪಿಸಿದೆ.

ಇತ್ತ ಕಡೆ ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಇತರ ಮೂವರು ಮಲಯಾಳಂ ನಿರ್ದೇಶಕರು “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಅಲಿ ಅಕ್ಬರ್ ಎಂಬ ನಿರ್ದೇಶಕ “ತಾನು ‘ಅಹ್ಮದ್ ಹಾಜಿ’ಯನ್ನು ಖಳನಾಯಕನಾಗಿ ತೋರಿಸಲಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಖಿಲಾಫತ್ ಚಳವಳಿಯ ಮುಖಂಡ ಅಲಿ ಮುಸ್ಲಿಯಾರ್ ಅವರನ್ನು ಬಂಧಿಸಿದ ನಂತರ ಖ್ಯಾತ ವಿದ್ವಾಂಸರಾಗಿದ್ದ ಮತ್ತು ಬ್ರಿಟಿಷರ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದ ವಾರಿಯಂಕುನ್ನತ್ ಶಸ್ತ್ರಾಸ್ತ್ರ ಕೈಗೊಳ್ಳಲು ನಿರ್ಧರಿಸಿದ್ದರು. ನಂತರ ಅವರು ಕೆಲವು ಸಿಪಾಯಿಗಳ ಸಹಾಯದಿಂದ ಸೈನ್ಯವನ್ನು ಸಂಘಟಿಸಿ ದಂಗೆಗೆ ಕಾರಣರಾದರು, ಇದು ಕೇರಳದ ಮಲಬಾರ್ ನಾದ್ಯಂತ ಹರಡಿತು.

ಇದರ ನಂತರ ಈ ಸೇನಾನಿಗಳು ಬ್ರಿಟಿಷ್ ಅಧಿಕಾರಿಗಳು ಓಡಿಸಿ ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಅಲ್ಲಿ ”ಮಲಬಾರ್ ರಾಜ್ಯ” ಎಂಬ ಸ್ವತಂತ್ರ ರಾಜ್ಯವನ್ನು ಘೋಷಿಸಿ 1921 ರಲ್ಲಿ “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅದರ ಆಡಳಿತಗಾರನಾದರು.

ಈ ಚಳವಳಿಯೊಳಗೆ ವಿಭಜನೆಗಳನ್ನು ಸೃಷ್ಟಿಸಲು ಬ್ರಿಟಿಷರು ಹಿಂದೂ-ಮುಸ್ಲಿಂ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸಿ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ” ಅವರನ್ನು ‘ಮುಸ್ಲಿಂ ಮತಾಂಧ’ ಎಂದು ಚಿತ್ರಿಸಲು ಪ್ರಯತ್ನಿಸಿದ್ದರು. ಆದರೆ ಈ ಸ್ವಾತಂತ್ರ್ಯ ಹೋರಾಟಗಾರ ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ಪರಿಗಣಿಸಿದ್ದಾರೆಂದು ಇತಿಹಾಸ ತಜ್ಞರು ಉಲ್ಲೇಖಿಸಿದ್ದಾರೆ.

1922 ರಲ್ಲಿ, ಅವರ ಸ್ನೇಹಿತನೊಬ್ಬ ಸ್ವಾತಂತ್ರ ಹೋರಾಟಗಾರರಿಗೆ ದ್ರೋಹವೆಸಗಿ ಬ್ರಿಟಿಷರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಅವರ ಆಳ್ವಿಕೆಯು ಕೊನೆಗೊಂಡಿತು. ನಂತರ ಅವರನ್ನು ಬಂಧಿಸಿ ಮರಣದಂಡನೆ ವಿಧಿಸಲಾಯಿತು.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...