Homeಮುಖಪುಟಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಕೇರಳದ ಇತರ ಮೂವರು ಮಲಯಾಳಂ ನಿರ್ದೇಶಕರು "ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ" ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

- Advertisement -
- Advertisement -

20 ನೇ ಶತಮಾನದ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕೇರಳದ ಮಲಬಾರ್ ಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ”ಯ ಜೀವನಾಧಾರಿತ ಸಿನೆಮಾ ಮಾಡುವುದಾಗಿ ಘೋಷಣೆಯಾಗುತ್ತಿದ್ದಂತೆ, ಬಲಪಂಥೀಯರು ಇದರ ವಿರುದ್ಧ ದ್ವೇಷದ ಅಭಿಯಾನ ಪ್ರಾರಂಭಿಸಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಘೋಷಿತ ಸಿನಿಮಾದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

‘ವಾರಿಯಂಕುನ್ನನ್’ ಎಂದು ಹೆಸರಿಸಲಾಗಿರುವ ಈ ಚಿತ್ರವನ್ನು ಮಲಯಾಳಂ ಚಿತ್ರ ರಂಗದ ಖ್ಯಾತ ನಿರ್ದೇಶಕ ಆಶಿಕ್ ಅಬು ನಿರ್ದೇಶಿಸಲಿದ್ದು, ‘ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ’ ಪಾತ್ರವನ್ನು ಪೃಥ್ವಿರಾಜ್ ಸುಕುಮಾರನ್ ನಿರ್ವಹಿಸಲಿದ್ದಾರೆ. ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ ನೇತೃತ್ವದ ಮಲಬಾರ್ ದಂಗೆಯ 100 ನೇ ವರ್ಷಾಚರಣೆಯಾದ 2021 ರಲ್ಲಿ ಈ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

“ಅವರು ವಿಶ್ವದ ಕಾಲು ಭಾಗವನ್ನು ಆಳಿದ ಸಾಮ್ರಾಜ್ಯದ ವಿರುದ್ಧ ನಿಂತರು. ಬ್ರಿಟಿಷರ ವಿರುದ್ಧ ಹಿಂದೆಂದೂ ಯುದ್ಧ ಮಾಡದ ಸೈನ್ಯದೊಂದಿಗೆ ತನ್ನದೇ ದೇಶವನ್ನು ಕಟ್ಟಿಕೊಂಡರು. ಇತಿಹಾಸವನ್ನು ಸುಟ್ಟು ಹೂಳಲಾಗಿದ್ದರೂ, ದಂತಕಥೆಯು ಜೀವಂತವಾಗಿದೆ! ನಾಯಕ, ಸೈನಿಕ, ದೇಶಭಕ್ತನ ದಂತಕಥೆ. 1921 ರ ಮಲಬಾರ್ ಕ್ರಾಂತಿಯ ಮುಖವಾದ ವ್ಯಕ್ತಿಯ ಚಿತ್ರ ‘ವಾರಿಯಂಕುನ್ನನ್’. ಮಲಬಾರ್ ಕ್ರಾಂತಿಯ 100 ನೇ ವಾರ್ಷಿಕೋತ್ಸವವಾದ 2021 ರಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ.” ನಟ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದು, ಚಿತ್ರದ ವಿರುದ್ದ ಈಗಾಗಲೇ ಧ್ವೇಷಾಭಿಯಾನ ಪ್ರಾರಂಭವಾಗಿದೆ. ಬಲಪಂಥೀಯ ವೆಬ್ಸೈಟ್ ಒಪಿಇಂಡಿಯಾ ಜೂನ್ 23 ರಂದು ಪೋಸ್ಟ್ ಮಾಡಿದ ಲೇಖನವೊಂದರಲ್ಲಿ ವಾರಿಯಂಕುನ್ನತ್ ಅವರನ್ನು ‘ಜಿಹಾದಿ’ ಹಾಗೂ ‘ಭಯೋತ್ಪಾದಕ’ ಎಂದು ಉಲ್ಲೇಖಿಸಿದೆ. ಈ ಸ್ವಾತಂತ್ರ್ಯ ಹೋರಾಟಗಾರ 1921 ರಲ್ಲಿ ಸಾವಿರಾರು ಹಿಂದೂಗಳನ್ನು ಹತ್ಯೆ ಮಾಡಿದ್ದಾರೆಂದು ಮತ್ತು ನೂರಾರು ಹಿಂದೂ ದೇವಾಲಯಗಳ ನಾಶಕ್ಕೆ ಕಾರಣವಾಗಿದ್ದಾರೆಂದು ಅದು ಆರೋಪಿಸಿದೆ.

ಇತ್ತ ಕಡೆ ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಇತರ ಮೂವರು ಮಲಯಾಳಂ ನಿರ್ದೇಶಕರು “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಅಲಿ ಅಕ್ಬರ್ ಎಂಬ ನಿರ್ದೇಶಕ “ತಾನು ‘ಅಹ್ಮದ್ ಹಾಜಿ’ಯನ್ನು ಖಳನಾಯಕನಾಗಿ ತೋರಿಸಲಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಖಿಲಾಫತ್ ಚಳವಳಿಯ ಮುಖಂಡ ಅಲಿ ಮುಸ್ಲಿಯಾರ್ ಅವರನ್ನು ಬಂಧಿಸಿದ ನಂತರ ಖ್ಯಾತ ವಿದ್ವಾಂಸರಾಗಿದ್ದ ಮತ್ತು ಬ್ರಿಟಿಷರ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದ ವಾರಿಯಂಕುನ್ನತ್ ಶಸ್ತ್ರಾಸ್ತ್ರ ಕೈಗೊಳ್ಳಲು ನಿರ್ಧರಿಸಿದ್ದರು. ನಂತರ ಅವರು ಕೆಲವು ಸಿಪಾಯಿಗಳ ಸಹಾಯದಿಂದ ಸೈನ್ಯವನ್ನು ಸಂಘಟಿಸಿ ದಂಗೆಗೆ ಕಾರಣರಾದರು, ಇದು ಕೇರಳದ ಮಲಬಾರ್ ನಾದ್ಯಂತ ಹರಡಿತು.

ಇದರ ನಂತರ ಈ ಸೇನಾನಿಗಳು ಬ್ರಿಟಿಷ್ ಅಧಿಕಾರಿಗಳು ಓಡಿಸಿ ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಅಲ್ಲಿ ”ಮಲಬಾರ್ ರಾಜ್ಯ” ಎಂಬ ಸ್ವತಂತ್ರ ರಾಜ್ಯವನ್ನು ಘೋಷಿಸಿ 1921 ರಲ್ಲಿ “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅದರ ಆಡಳಿತಗಾರನಾದರು.

ಈ ಚಳವಳಿಯೊಳಗೆ ವಿಭಜನೆಗಳನ್ನು ಸೃಷ್ಟಿಸಲು ಬ್ರಿಟಿಷರು ಹಿಂದೂ-ಮುಸ್ಲಿಂ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸಿ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ” ಅವರನ್ನು ‘ಮುಸ್ಲಿಂ ಮತಾಂಧ’ ಎಂದು ಚಿತ್ರಿಸಲು ಪ್ರಯತ್ನಿಸಿದ್ದರು. ಆದರೆ ಈ ಸ್ವಾತಂತ್ರ್ಯ ಹೋರಾಟಗಾರ ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ಪರಿಗಣಿಸಿದ್ದಾರೆಂದು ಇತಿಹಾಸ ತಜ್ಞರು ಉಲ್ಲೇಖಿಸಿದ್ದಾರೆ.

1922 ರಲ್ಲಿ, ಅವರ ಸ್ನೇಹಿತನೊಬ್ಬ ಸ್ವಾತಂತ್ರ ಹೋರಾಟಗಾರರಿಗೆ ದ್ರೋಹವೆಸಗಿ ಬ್ರಿಟಿಷರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಅವರ ಆಳ್ವಿಕೆಯು ಕೊನೆಗೊಂಡಿತು. ನಂತರ ಅವರನ್ನು ಬಂಧಿಸಿ ಮರಣದಂಡನೆ ವಿಧಿಸಲಾಯಿತು.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...