Homeಮುಖಪುಟಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಕೇರಳದಲ್ಲಿ ಮುಸ್ಲಿಂ ಸ್ವಾತಂತ್ರ್ಯ ಹೋರಾಟಗಾರನ ಕುರಿತು ಸಿನೆಮಾ: ದ್ವೇಷಾಭಿಯಾನ ಪ್ರಾರಂಭಿಸಿದ ಹಿಂದುತ್ವವಾದಿಗಳು

ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಕೇರಳದ ಇತರ ಮೂವರು ಮಲಯಾಳಂ ನಿರ್ದೇಶಕರು "ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ" ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ.

- Advertisement -
- Advertisement -

20 ನೇ ಶತಮಾನದ ಆರಂಭದಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿದ ಕೇರಳದ ಮಲಬಾರ್ ಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ”ಯ ಜೀವನಾಧಾರಿತ ಸಿನೆಮಾ ಮಾಡುವುದಾಗಿ ಘೋಷಣೆಯಾಗುತ್ತಿದ್ದಂತೆ, ಬಲಪಂಥೀಯರು ಇದರ ವಿರುದ್ಧ ದ್ವೇಷದ ಅಭಿಯಾನ ಪ್ರಾರಂಭಿಸಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಘೋಷಿತ ಸಿನಿಮಾದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

‘ವಾರಿಯಂಕುನ್ನನ್’ ಎಂದು ಹೆಸರಿಸಲಾಗಿರುವ ಈ ಚಿತ್ರವನ್ನು ಮಲಯಾಳಂ ಚಿತ್ರ ರಂಗದ ಖ್ಯಾತ ನಿರ್ದೇಶಕ ಆಶಿಕ್ ಅಬು ನಿರ್ದೇಶಿಸಲಿದ್ದು, ‘ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ’ ಪಾತ್ರವನ್ನು ಪೃಥ್ವಿರಾಜ್ ಸುಕುಮಾರನ್ ನಿರ್ವಹಿಸಲಿದ್ದಾರೆ. ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ ನೇತೃತ್ವದ ಮಲಬಾರ್ ದಂಗೆಯ 100 ನೇ ವರ್ಷಾಚರಣೆಯಾದ 2021 ರಲ್ಲಿ ಈ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ.

“ಅವರು ವಿಶ್ವದ ಕಾಲು ಭಾಗವನ್ನು ಆಳಿದ ಸಾಮ್ರಾಜ್ಯದ ವಿರುದ್ಧ ನಿಂತರು. ಬ್ರಿಟಿಷರ ವಿರುದ್ಧ ಹಿಂದೆಂದೂ ಯುದ್ಧ ಮಾಡದ ಸೈನ್ಯದೊಂದಿಗೆ ತನ್ನದೇ ದೇಶವನ್ನು ಕಟ್ಟಿಕೊಂಡರು. ಇತಿಹಾಸವನ್ನು ಸುಟ್ಟು ಹೂಳಲಾಗಿದ್ದರೂ, ದಂತಕಥೆಯು ಜೀವಂತವಾಗಿದೆ! ನಾಯಕ, ಸೈನಿಕ, ದೇಶಭಕ್ತನ ದಂತಕಥೆ. 1921 ರ ಮಲಬಾರ್ ಕ್ರಾಂತಿಯ ಮುಖವಾದ ವ್ಯಕ್ತಿಯ ಚಿತ್ರ ‘ವಾರಿಯಂಕುನ್ನನ್’. ಮಲಬಾರ್ ಕ್ರಾಂತಿಯ 100 ನೇ ವಾರ್ಷಿಕೋತ್ಸವವಾದ 2021 ರಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ.” ನಟ ಪೃಥ್ವಿರಾಜ್ ಸುಕುಮಾರನ್ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.

ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳು ಚಿತ್ರದ ಚಿತ್ರೀಕರಣಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದು, ಚಿತ್ರದ ವಿರುದ್ದ ಈಗಾಗಲೇ ಧ್ವೇಷಾಭಿಯಾನ ಪ್ರಾರಂಭವಾಗಿದೆ. ಬಲಪಂಥೀಯ ವೆಬ್ಸೈಟ್ ಒಪಿಇಂಡಿಯಾ ಜೂನ್ 23 ರಂದು ಪೋಸ್ಟ್ ಮಾಡಿದ ಲೇಖನವೊಂದರಲ್ಲಿ ವಾರಿಯಂಕುನ್ನತ್ ಅವರನ್ನು ‘ಜಿಹಾದಿ’ ಹಾಗೂ ‘ಭಯೋತ್ಪಾದಕ’ ಎಂದು ಉಲ್ಲೇಖಿಸಿದೆ. ಈ ಸ್ವಾತಂತ್ರ್ಯ ಹೋರಾಟಗಾರ 1921 ರಲ್ಲಿ ಸಾವಿರಾರು ಹಿಂದೂಗಳನ್ನು ಹತ್ಯೆ ಮಾಡಿದ್ದಾರೆಂದು ಮತ್ತು ನೂರಾರು ಹಿಂದೂ ದೇವಾಲಯಗಳ ನಾಶಕ್ಕೆ ಕಾರಣವಾಗಿದ್ದಾರೆಂದು ಅದು ಆರೋಪಿಸಿದೆ.

ಇತ್ತ ಕಡೆ ಬಲಪಂಥೀಯರ ಧ್ವೇಷಾಭಿಯಾನ ಅಧಿಕವಾಗುತ್ತಿದ್ದಂತೆ ಇತರ ಮೂವರು ಮಲಯಾಳಂ ನಿರ್ದೇಶಕರು “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅವರನ್ನು ಇಟ್ಟುಕೊಂಡು ಚಿತ್ರ ನಿರ್ಮಿಸುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಅಲಿ ಅಕ್ಬರ್ ಎಂಬ ನಿರ್ದೇಶಕ “ತಾನು ‘ಅಹ್ಮದ್ ಹಾಜಿ’ಯನ್ನು ಖಳನಾಯಕನಾಗಿ ತೋರಿಸಲಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಖಿಲಾಫತ್ ಚಳವಳಿಯ ಮುಖಂಡ ಅಲಿ ಮುಸ್ಲಿಯಾರ್ ಅವರನ್ನು ಬಂಧಿಸಿದ ನಂತರ ಖ್ಯಾತ ವಿದ್ವಾಂಸರಾಗಿದ್ದ ಮತ್ತು ಬ್ರಿಟಿಷರ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿದ್ದ ವಾರಿಯಂಕುನ್ನತ್ ಶಸ್ತ್ರಾಸ್ತ್ರ ಕೈಗೊಳ್ಳಲು ನಿರ್ಧರಿಸಿದ್ದರು. ನಂತರ ಅವರು ಕೆಲವು ಸಿಪಾಯಿಗಳ ಸಹಾಯದಿಂದ ಸೈನ್ಯವನ್ನು ಸಂಘಟಿಸಿ ದಂಗೆಗೆ ಕಾರಣರಾದರು, ಇದು ಕೇರಳದ ಮಲಬಾರ್ ನಾದ್ಯಂತ ಹರಡಿತು.

ಇದರ ನಂತರ ಈ ಸೇನಾನಿಗಳು ಬ್ರಿಟಿಷ್ ಅಧಿಕಾರಿಗಳು ಓಡಿಸಿ ಪ್ರದೇಶಗಳನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಅಲ್ಲಿ ”ಮಲಬಾರ್ ರಾಜ್ಯ” ಎಂಬ ಸ್ವತಂತ್ರ ರಾಜ್ಯವನ್ನು ಘೋಷಿಸಿ 1921 ರಲ್ಲಿ “ವಾರಿಯಂಕುನ್ನತ್ ಅಹ್ಮದ್ ಹಾಜಿ” ಅದರ ಆಡಳಿತಗಾರನಾದರು.

ಈ ಚಳವಳಿಯೊಳಗೆ ವಿಭಜನೆಗಳನ್ನು ಸೃಷ್ಟಿಸಲು ಬ್ರಿಟಿಷರು ಹಿಂದೂ-ಮುಸ್ಲಿಂ ದ್ವೇಷವನ್ನು ಹುಟ್ಟುಹಾಕಲು ಪ್ರಯತ್ನಿಸಿ “ವಾರಿಯಂಕುನ್ನತ್ ಕುಂಞ್ಞಹ್ಮದ್ ಹಾಜಿ” ಅವರನ್ನು ‘ಮುಸ್ಲಿಂ ಮತಾಂಧ’ ಎಂದು ಚಿತ್ರಿಸಲು ಪ್ರಯತ್ನಿಸಿದ್ದರು. ಆದರೆ ಈ ಸ್ವಾತಂತ್ರ್ಯ ಹೋರಾಟಗಾರ ಎಲ್ಲಾ ಧರ್ಮದ ಜನರನ್ನು ಸಮಾನವಾಗಿ ಪರಿಗಣಿಸಿದ್ದಾರೆಂದು ಇತಿಹಾಸ ತಜ್ಞರು ಉಲ್ಲೇಖಿಸಿದ್ದಾರೆ.

1922 ರಲ್ಲಿ, ಅವರ ಸ್ನೇಹಿತನೊಬ್ಬ ಸ್ವಾತಂತ್ರ ಹೋರಾಟಗಾರರಿಗೆ ದ್ರೋಹವೆಸಗಿ ಬ್ರಿಟಿಷರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಅವರ ಆಳ್ವಿಕೆಯು ಕೊನೆಗೊಂಡಿತು. ನಂತರ ಅವರನ್ನು ಬಂಧಿಸಿ ಮರಣದಂಡನೆ ವಿಧಿಸಲಾಯಿತು.


ಓದಿ: ಕೊರೊನಾ ವಿರುದ್ದದ ಹೋರಾಟ: ಕೇರಳದ ಆರೋಗ್ಯ ಮಂತ್ರಿಗೆ ವಿಶ್ವಸಂಸ್ಥೆಯಿಂದ ಗೌರವ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...